Homeಕರ್ನಾಟಕಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

ಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

- Advertisement -
- Advertisement -

‘ಸಂಗಾತಿಯನ್ನು ಆಯ್ಕೆ ಮಾಡುವಾಗ ಮಗಳು ನಿಮ್ಮ ಮಾತು ಕೇಳದಿದ್ದರೆ ಆಕೆಯ ಕೈಯೋ ಕಾಲನ್ನೋ ಮುರಿದು ಬಿಡಿ’ ಎಂಬ ಮಾತನ್ನು ಕೊರಟಗೆರೆ ತಾಲೂಕು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯವಾದ ಸಲಹೆಯನ್ನು ನೀಡಿದ್ದಾರೆ. ಎಂಥೆಂಥ ಮಹಾಪುರುಷರು ವೀರಶೈವರಲ್ಲಿದ್ದಾರೆ ಎಂಬುದಕ್ಕೆ ಈ ಪುಣ್ಯಾತ್ಮನ ಮಾತು ಸಾಕ್ಷಿಯಾಗಿದೆ. ಸಕಲ ಜೀವಪ್ರೇಮಿಯಾಗಿರಿ ಎಂದು ಬಸವಣ್ಣನವರು ಸಾರುತ್ತ ಬಂದಿದ್ದರೆ , ಹಾರುವರ ಪ್ರಭಾವಕ್ಕೆ ಒಳಗಾದ ವೀರಶೈವವಾದಿಗಳು ಮನುವಾದಿಗಳಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಬಿಟ್ಟಿದ್ದಾರೆ. ‘ಬ್ರಾಹ್ಮಣರಿಗಿಂತಲೂ ಬ್ರಾಹ್ಮಣ್ಯ ಹೊಂದಿದ ವ್ಯಕ್ತಿ ತುಂಬಾ ಅಪಾಯಕಾರಿ’ ಎಂಬ ಮಾತು ಸತ್ಯ.

ವೈದಿಕರಿಗಿಂತಲೂ ವೈದಿಕತ್ವದ ಬಗೆಗೆ ಆಸಕ್ತಿ ಹೊಂದಿದ ನಾನು ಅವರಿಗಿಂತಲೂ ಒಂದು ಕೈ ಮಿಗಿಲು ಎಂಬ ಧೋರಣೆಗಳುಳ್ಳ ವೀರಶೈವ ಮಠಾಧೀಶರು ತಮ್ಮ ತಲೆಯಲ್ಲಿ ವೈದಿಕತ್ವದ ಕಸವನ್ನು ತುಂಬಿಕೊಂಡು ಬಗ್ಗಡಗೊಂಡಿದ್ದಾರೆ. ಹೀಗಾಗಿಯೆ ಈ ವೀರಶೈವವಾದಿ ಮಠಾಧಿಪತಿಗಳು ನಾವೂ ಹಿಂದುಗಳು ಎಂದು ಹೇಳುತ್ತ ನಡೆದಿದ್ದಾರೆ. ಬಹುತೇಕ ವೀರಶೈವ ಪೀಠದಲ್ಲಿ ಪೀಠಾಧಿಕಾರಿಯಾಗಿ ಅಮರಿಕೊಂಡಿರುವ ಮಠಾಧೀಶರಿಗೆ ಯಾವುದೆ ತಿಳುವಳಿಕೆ ಇಲ್ಲ. ಸಂಸ್ಕøತದ ಸುಳ್ಳು ಸೊಟ್ಟುಗಳ ನಾಲ್ಕಾರು ಮಂತ್ರಗಳು ಬಾಯಿಪಾಠ ಮಾಡಿಕೊಂಡು ಕಂಡ ಕಂಡದಲ್ಲಿ ತಮ್ಮ ದಡ್ಡ ಭಕ್ತರ ಮುಂದೆ ಅವನ್ನೇ ಹೇಳಿ ತಮ್ಮ ಪ್ರೌಢಿಮೆ ಮೆರೆಯುತ್ತಾರೆ. ಇಂಥವರಿಗೆ ಸಾಮಾನ್ಯ ಜ್ಞಾನವೂ ಗಗನ ಕುಸುಮ.

ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ
ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ
ಇದಾವಾವ ಪರಿಯಲ್ಲಿ ಕಾಡಿತ್ತು ಮಾಯೆ
ಈ ಮಾಯೆಯ ಕಳೆವಡೆ ಎನ್ನಳವಲ್ಲ
ನೀವೇ ಬಲ್ಲಿರಿ ಕೂಡಲಸಂಗಮದೇವಾ

ಎಂದು ಬಸವಣ್ಣನವರು ತಮ್ಮ ಒಂದು ವಚನದಲ್ಲಿ ಮಹಿಳೆಯನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ. ಪ್ರೀತಿಯನ್ನು ಬಿಟ್ಟು ಜೀವನ ಮಾಡಲು ಯಾರಿಗಾದರೂ ಸಾಧ್ಯವೆ ? ನಮ್ಮೆಲ್ಲರ ಜನನಕ್ಕೆ ಮೂಲ ಕಾರಣ ಮಾಯೆ (ಪ್ರೀತಿ), ನಮ್ಮ ಮಗಳಾಗಿ ಜನಿಸುವವಳು ಹೆಣ್ಣೆ, ನಮ್ಮೊಂದಿಗೆ ಜೀವ ಪಥದಲ್ಲಿ ಹೆಜ್ಜೆ ಹಾಕುವವಳು ಹೆಣ್ಣೆ. ಇವಳನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ ಎಂದು ಹೇಳಿ ಹೆಣ್ಣನ್ನು ಗೌರವಾರ್ಹ ವ್ಯಕ್ತಿಯಾಗಿ ಕಂಡಿದ್ದಾರೆ.

ಹೆಣ್ಣು ಕೇವಲ ಭೋಗದ ವಸ್ತುವಾಗಿ ಕಂಡ ಸನಾತನ ಪರಂಪರೆಯ ಜನ ಆಕೆಯನ್ನು ಸತಿ ಸಹಗಮನಕ್ಕೆ ಹಿಂದೆ ದೂಡಿದ್ದರು. ದೇವರ ಹೆಸರಿನ ಮೇಲೆ ಆಕೆಯನ್ನು ಬಸವಿಗೆ ಬಿಟ್ಟಿದ್ದರು. ಕೆರೆಗೆ ಆಹಾರವಾಗಿಯೂ ಹೆಣ್ಣನ್ನೆ ಬಲಿಕೊಟ್ಟರು. ಹೆಣ್ಣು ಕನಿಷ್ಠ, ಗಂಡು ಶ್ರೇಷ್ಠ ಎಂಬ ಚಿಂತನೆಯೆ ಪ್ರಜಾಪ್ರಭುತ್ವ ವಿರೋಧಿ. ಬ್ರಾಹ್ಮಣಶಾಹಿ ವ್ಯವಸ್ಥೆಯಲ್ಲಿ ಇಂದಿಗೂ ಮಹಿಳೆಗೆ ಪೂಜೆಯ ಹಕ್ಕನ್ನು ನಿರಾಕರಿಸಲಾಗಿದೆ. ಮಹಿಳೆ ಮುಟ್ಟಾಗುತ್ತಾಳಾದ್ದರಿಂದ ಆಕೆ ಕೀಳು ಎಂಬುದು ಪ್ರಚಲಿತದಲ್ಲಿದೆ. ಹಲವಾರು ದೇವಸ್ಥಾನದಲ್ಲೂ ಮಹಿಳೆಯರನ್ನು ನಿರಾಕರಿಸಲಾಗಿದೆ. ಆದ್ದರಿಂದಲೆ ನಮ್ಮ ದೇಶದಲ್ಲಿ ಹೆಣ್ಣು ಭ್ರೂಣದ ಹತ್ಯೆ ನಿರಾಂತಕವಾಗಿ ನಡೆದೆ ಇದೆ.

ಕೊರಟಗೆರೆಯ ಈ ಮಠಾಧೀಶನ ತಲೆಯಲ್ಲಿರುವುದು ವೈದಿಕ ಮಿದುಳು. ವೈದಿಕ ಮಿದುಳು ಸಹಜವಾಗಿಯೆ ಅಸಮತೋಲನವಾಗಿರುತ್ತದೆ. ಅದಕ್ಕೆ ಯೋಚಿಸುವ ಶಕ್ತಿ ಇರೋದಿಲ್ಲ. ತಾನಷ್ಟೇ ಶ್ರೇಷ್ಠ ಉಳಿದವರು ಕನಿಷ್ಠ ಎಂಬ ಭ್ರಮೆ ಹೊತ್ತುಕೊಂಡಿರುತ್ತದೆ. ಮಹಿಳೆ ಅಂದರೆ ಅದೊಂದು ಉಪಯೋಗಿಸಿ ಬಿಸಾಡುವ ವಸ್ತು ಮಾತ್ರವಾಗಿರುತ್ತದೆ. ಆದ್ದರಿಂದಲೆ ಹೆಣ್ಣು ನಿಮ್ಮ ಮಾತು ಕೇಳದೆ ಹೋದರೆ ಅವಳ ಕೈಯನ್ನೋ- ಕಾಲನ್ನೋ ಕತ್ತರಿಸಿ ಎಂದು ಈ ಪುಣ್ಯಾತ್ಮ ಗುರು ತನ್ನ ಭಕ್ತರಿಗೆ ಅಪ್ಪಣೆ ಕೊಡಿಸಿದ್ದಾನೆ. ಮೊದಲೆ ತಿಳುವಳಿಕೆಯ ಕೊರತೆಯಿಂದ ಮೂರಾಬಟ್ಟೆಯಾದ ಭಕ್ತರೆಂಬ ತಲೆ ಹಿಡುಕರಿಗೆ ಗುರುವಿನ(?) ಈ ಮಾತುಗಳು ಅತ್ಯಂತ ಪ್ರೇರಕ ಅನಿಸುತ್ತವೆ. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದು ಹಾಡುತ್ತ ಗುರುವಿನ ಮಾತಿನ ಮಾರ್ಗದಲ್ಲಿ ನಡೆಯುತ್ತ ಹೋದರೆ ಒಂದೊಂದು ಕುಟುಂಬವೂ ತಮ್ಮ ಮನೆಯಲ್ಲಿಯೆ ಸ್ಮಶಾನವನ್ನು ನಿರ್ಮಿಸಿಕೊಳ್ಳಬೇಕಾಗುತ್ತದೆ.

ಅರಿವಿಲ್ಲದೆ ನಿಮ್ಮ ಮನೆಯ ಹೆಣ್ಣು ಮಗು ಜಾರುತ್ತಿದ್ದರೆ ಆಕೆಗೆ ವಿವೇಕ ನೀಡಿ, ಸಂಯಮದಿಂದ ವರ್ತಿಸುವಂತೆ ತಿಳಿ ಹೇಳಬೇಕು. ಸಾಂಸಾರಿಕ ಜೀವನವೆಂಬದು ಸಂತಸದ ಮಾರ್ಗವಾಗಬೇಕಾದರೆ ಸತಿಪತಿಗಳೊಂದಾಗಿ ನಡೆದಾಗಲೆ ಹಿತವಾಗಬಲ್ಲುದು ಎಂಬುದನ್ನು ಅವರಿಗೆ ಮನದಷ್ಟು ಮಾಡಿಸಬೇಕು. ತಮ್ಮ ಹಾಗೂ ಆ ಹುಡುಗನ ಕುಟುಂಬದ ರೀತಿ ರಿವಾಜುಗಳು ಹೊಂದಿಕೆಯಾಗಬಲ್ಲವೆ ? ಎಂಬುದನ್ನು ಇಣುಕಿ ನೋಡಲು ಹಚ್ಚಬೇಕು.

ಇಂಥ ಮನ ಬದಲಾವಣೆಯ ಚಿಂತನೆಯನ್ನು ಬಿಟ್ಟು, ಆ ಹೆಣ್ಣು ಮಗುವಿನ ಕಾಲೋ ಕೈಯೋ ತೆಗೆಯಿರಿ. ಅವಳನ್ನು ಶಾಶ್ವತ ಅಂಗವೈಕಲ್ಯಕ್ಕೆ ದೂಡಿ ಎಂಬ ವಿವೇಕರಹಿತ ವೀರಭದ್ರಶಿವಾಚಾರ್ಯನನ್ನು ಯಾವುದೆ ಮುಲಾಜು ಇಲ್ಲದೆ ಜೈಲಿಗೆ ಅಟ್ಟಬೇಕು. ಹಿಂಸೆಯನ್ನು ಪ್ರಚೋದಿಸುವ ಇಂಥ ಮಠಾಧೀಶ ಇದ್ದರೆಷ್ಟು? ಬಿಟ್ಟರೆಷ್ಟು! ಇನ್ನಾದರೂ ವೀರಶೈವ ವಾದಿಗಳು ಇಂಥ ಅಯೋಗ್ಯ ಮಠಾಧೀಶರ ಬೆನ್ನುಬಿದ್ದು ತಮ್ಮನ್ನು ತಾವು ಹಾಳು ಮಾಡಿಕೊಳ್ಳದೆ, ತಮ್ಮ ಬದುಕನ್ನು ಶರಣರ ವಚನಗಳ ಹಿನ್ನೆಲೆಯಲ್ಲಿ ಕಟ್ಟಿಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...