Homeಕರ್ನಾಟಕಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

ಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

- Advertisement -
- Advertisement -

‘ಸಂಗಾತಿಯನ್ನು ಆಯ್ಕೆ ಮಾಡುವಾಗ ಮಗಳು ನಿಮ್ಮ ಮಾತು ಕೇಳದಿದ್ದರೆ ಆಕೆಯ ಕೈಯೋ ಕಾಲನ್ನೋ ಮುರಿದು ಬಿಡಿ’ ಎಂಬ ಮಾತನ್ನು ಕೊರಟಗೆರೆ ತಾಲೂಕು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯವಾದ ಸಲಹೆಯನ್ನು ನೀಡಿದ್ದಾರೆ. ಎಂಥೆಂಥ ಮಹಾಪುರುಷರು ವೀರಶೈವರಲ್ಲಿದ್ದಾರೆ ಎಂಬುದಕ್ಕೆ ಈ ಪುಣ್ಯಾತ್ಮನ ಮಾತು ಸಾಕ್ಷಿಯಾಗಿದೆ. ಸಕಲ ಜೀವಪ್ರೇಮಿಯಾಗಿರಿ ಎಂದು ಬಸವಣ್ಣನವರು ಸಾರುತ್ತ ಬಂದಿದ್ದರೆ , ಹಾರುವರ ಪ್ರಭಾವಕ್ಕೆ ಒಳಗಾದ ವೀರಶೈವವಾದಿಗಳು ಮನುವಾದಿಗಳಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಬಿಟ್ಟಿದ್ದಾರೆ. ‘ಬ್ರಾಹ್ಮಣರಿಗಿಂತಲೂ ಬ್ರಾಹ್ಮಣ್ಯ ಹೊಂದಿದ ವ್ಯಕ್ತಿ ತುಂಬಾ ಅಪಾಯಕಾರಿ’ ಎಂಬ ಮಾತು ಸತ್ಯ.

ವೈದಿಕರಿಗಿಂತಲೂ ವೈದಿಕತ್ವದ ಬಗೆಗೆ ಆಸಕ್ತಿ ಹೊಂದಿದ ನಾನು ಅವರಿಗಿಂತಲೂ ಒಂದು ಕೈ ಮಿಗಿಲು ಎಂಬ ಧೋರಣೆಗಳುಳ್ಳ ವೀರಶೈವ ಮಠಾಧೀಶರು ತಮ್ಮ ತಲೆಯಲ್ಲಿ ವೈದಿಕತ್ವದ ಕಸವನ್ನು ತುಂಬಿಕೊಂಡು ಬಗ್ಗಡಗೊಂಡಿದ್ದಾರೆ. ಹೀಗಾಗಿಯೆ ಈ ವೀರಶೈವವಾದಿ ಮಠಾಧಿಪತಿಗಳು ನಾವೂ ಹಿಂದುಗಳು ಎಂದು ಹೇಳುತ್ತ ನಡೆದಿದ್ದಾರೆ. ಬಹುತೇಕ ವೀರಶೈವ ಪೀಠದಲ್ಲಿ ಪೀಠಾಧಿಕಾರಿಯಾಗಿ ಅಮರಿಕೊಂಡಿರುವ ಮಠಾಧೀಶರಿಗೆ ಯಾವುದೆ ತಿಳುವಳಿಕೆ ಇಲ್ಲ. ಸಂಸ್ಕøತದ ಸುಳ್ಳು ಸೊಟ್ಟುಗಳ ನಾಲ್ಕಾರು ಮಂತ್ರಗಳು ಬಾಯಿಪಾಠ ಮಾಡಿಕೊಂಡು ಕಂಡ ಕಂಡದಲ್ಲಿ ತಮ್ಮ ದಡ್ಡ ಭಕ್ತರ ಮುಂದೆ ಅವನ್ನೇ ಹೇಳಿ ತಮ್ಮ ಪ್ರೌಢಿಮೆ ಮೆರೆಯುತ್ತಾರೆ. ಇಂಥವರಿಗೆ ಸಾಮಾನ್ಯ ಜ್ಞಾನವೂ ಗಗನ ಕುಸುಮ.

ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ
ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ
ಇದಾವಾವ ಪರಿಯಲ್ಲಿ ಕಾಡಿತ್ತು ಮಾಯೆ
ಈ ಮಾಯೆಯ ಕಳೆವಡೆ ಎನ್ನಳವಲ್ಲ
ನೀವೇ ಬಲ್ಲಿರಿ ಕೂಡಲಸಂಗಮದೇವಾ

ಎಂದು ಬಸವಣ್ಣನವರು ತಮ್ಮ ಒಂದು ವಚನದಲ್ಲಿ ಮಹಿಳೆಯನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ. ಪ್ರೀತಿಯನ್ನು ಬಿಟ್ಟು ಜೀವನ ಮಾಡಲು ಯಾರಿಗಾದರೂ ಸಾಧ್ಯವೆ ? ನಮ್ಮೆಲ್ಲರ ಜನನಕ್ಕೆ ಮೂಲ ಕಾರಣ ಮಾಯೆ (ಪ್ರೀತಿ), ನಮ್ಮ ಮಗಳಾಗಿ ಜನಿಸುವವಳು ಹೆಣ್ಣೆ, ನಮ್ಮೊಂದಿಗೆ ಜೀವ ಪಥದಲ್ಲಿ ಹೆಜ್ಜೆ ಹಾಕುವವಳು ಹೆಣ್ಣೆ. ಇವಳನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ ಎಂದು ಹೇಳಿ ಹೆಣ್ಣನ್ನು ಗೌರವಾರ್ಹ ವ್ಯಕ್ತಿಯಾಗಿ ಕಂಡಿದ್ದಾರೆ.

ಹೆಣ್ಣು ಕೇವಲ ಭೋಗದ ವಸ್ತುವಾಗಿ ಕಂಡ ಸನಾತನ ಪರಂಪರೆಯ ಜನ ಆಕೆಯನ್ನು ಸತಿ ಸಹಗಮನಕ್ಕೆ ಹಿಂದೆ ದೂಡಿದ್ದರು. ದೇವರ ಹೆಸರಿನ ಮೇಲೆ ಆಕೆಯನ್ನು ಬಸವಿಗೆ ಬಿಟ್ಟಿದ್ದರು. ಕೆರೆಗೆ ಆಹಾರವಾಗಿಯೂ ಹೆಣ್ಣನ್ನೆ ಬಲಿಕೊಟ್ಟರು. ಹೆಣ್ಣು ಕನಿಷ್ಠ, ಗಂಡು ಶ್ರೇಷ್ಠ ಎಂಬ ಚಿಂತನೆಯೆ ಪ್ರಜಾಪ್ರಭುತ್ವ ವಿರೋಧಿ. ಬ್ರಾಹ್ಮಣಶಾಹಿ ವ್ಯವಸ್ಥೆಯಲ್ಲಿ ಇಂದಿಗೂ ಮಹಿಳೆಗೆ ಪೂಜೆಯ ಹಕ್ಕನ್ನು ನಿರಾಕರಿಸಲಾಗಿದೆ. ಮಹಿಳೆ ಮುಟ್ಟಾಗುತ್ತಾಳಾದ್ದರಿಂದ ಆಕೆ ಕೀಳು ಎಂಬುದು ಪ್ರಚಲಿತದಲ್ಲಿದೆ. ಹಲವಾರು ದೇವಸ್ಥಾನದಲ್ಲೂ ಮಹಿಳೆಯರನ್ನು ನಿರಾಕರಿಸಲಾಗಿದೆ. ಆದ್ದರಿಂದಲೆ ನಮ್ಮ ದೇಶದಲ್ಲಿ ಹೆಣ್ಣು ಭ್ರೂಣದ ಹತ್ಯೆ ನಿರಾಂತಕವಾಗಿ ನಡೆದೆ ಇದೆ.

ಕೊರಟಗೆರೆಯ ಈ ಮಠಾಧೀಶನ ತಲೆಯಲ್ಲಿರುವುದು ವೈದಿಕ ಮಿದುಳು. ವೈದಿಕ ಮಿದುಳು ಸಹಜವಾಗಿಯೆ ಅಸಮತೋಲನವಾಗಿರುತ್ತದೆ. ಅದಕ್ಕೆ ಯೋಚಿಸುವ ಶಕ್ತಿ ಇರೋದಿಲ್ಲ. ತಾನಷ್ಟೇ ಶ್ರೇಷ್ಠ ಉಳಿದವರು ಕನಿಷ್ಠ ಎಂಬ ಭ್ರಮೆ ಹೊತ್ತುಕೊಂಡಿರುತ್ತದೆ. ಮಹಿಳೆ ಅಂದರೆ ಅದೊಂದು ಉಪಯೋಗಿಸಿ ಬಿಸಾಡುವ ವಸ್ತು ಮಾತ್ರವಾಗಿರುತ್ತದೆ. ಆದ್ದರಿಂದಲೆ ಹೆಣ್ಣು ನಿಮ್ಮ ಮಾತು ಕೇಳದೆ ಹೋದರೆ ಅವಳ ಕೈಯನ್ನೋ- ಕಾಲನ್ನೋ ಕತ್ತರಿಸಿ ಎಂದು ಈ ಪುಣ್ಯಾತ್ಮ ಗುರು ತನ್ನ ಭಕ್ತರಿಗೆ ಅಪ್ಪಣೆ ಕೊಡಿಸಿದ್ದಾನೆ. ಮೊದಲೆ ತಿಳುವಳಿಕೆಯ ಕೊರತೆಯಿಂದ ಮೂರಾಬಟ್ಟೆಯಾದ ಭಕ್ತರೆಂಬ ತಲೆ ಹಿಡುಕರಿಗೆ ಗುರುವಿನ(?) ಈ ಮಾತುಗಳು ಅತ್ಯಂತ ಪ್ರೇರಕ ಅನಿಸುತ್ತವೆ. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದು ಹಾಡುತ್ತ ಗುರುವಿನ ಮಾತಿನ ಮಾರ್ಗದಲ್ಲಿ ನಡೆಯುತ್ತ ಹೋದರೆ ಒಂದೊಂದು ಕುಟುಂಬವೂ ತಮ್ಮ ಮನೆಯಲ್ಲಿಯೆ ಸ್ಮಶಾನವನ್ನು ನಿರ್ಮಿಸಿಕೊಳ್ಳಬೇಕಾಗುತ್ತದೆ.

ಅರಿವಿಲ್ಲದೆ ನಿಮ್ಮ ಮನೆಯ ಹೆಣ್ಣು ಮಗು ಜಾರುತ್ತಿದ್ದರೆ ಆಕೆಗೆ ವಿವೇಕ ನೀಡಿ, ಸಂಯಮದಿಂದ ವರ್ತಿಸುವಂತೆ ತಿಳಿ ಹೇಳಬೇಕು. ಸಾಂಸಾರಿಕ ಜೀವನವೆಂಬದು ಸಂತಸದ ಮಾರ್ಗವಾಗಬೇಕಾದರೆ ಸತಿಪತಿಗಳೊಂದಾಗಿ ನಡೆದಾಗಲೆ ಹಿತವಾಗಬಲ್ಲುದು ಎಂಬುದನ್ನು ಅವರಿಗೆ ಮನದಷ್ಟು ಮಾಡಿಸಬೇಕು. ತಮ್ಮ ಹಾಗೂ ಆ ಹುಡುಗನ ಕುಟುಂಬದ ರೀತಿ ರಿವಾಜುಗಳು ಹೊಂದಿಕೆಯಾಗಬಲ್ಲವೆ ? ಎಂಬುದನ್ನು ಇಣುಕಿ ನೋಡಲು ಹಚ್ಚಬೇಕು.

ಇಂಥ ಮನ ಬದಲಾವಣೆಯ ಚಿಂತನೆಯನ್ನು ಬಿಟ್ಟು, ಆ ಹೆಣ್ಣು ಮಗುವಿನ ಕಾಲೋ ಕೈಯೋ ತೆಗೆಯಿರಿ. ಅವಳನ್ನು ಶಾಶ್ವತ ಅಂಗವೈಕಲ್ಯಕ್ಕೆ ದೂಡಿ ಎಂಬ ವಿವೇಕರಹಿತ ವೀರಭದ್ರಶಿವಾಚಾರ್ಯನನ್ನು ಯಾವುದೆ ಮುಲಾಜು ಇಲ್ಲದೆ ಜೈಲಿಗೆ ಅಟ್ಟಬೇಕು. ಹಿಂಸೆಯನ್ನು ಪ್ರಚೋದಿಸುವ ಇಂಥ ಮಠಾಧೀಶ ಇದ್ದರೆಷ್ಟು? ಬಿಟ್ಟರೆಷ್ಟು! ಇನ್ನಾದರೂ ವೀರಶೈವ ವಾದಿಗಳು ಇಂಥ ಅಯೋಗ್ಯ ಮಠಾಧೀಶರ ಬೆನ್ನುಬಿದ್ದು ತಮ್ಮನ್ನು ತಾವು ಹಾಳು ಮಾಡಿಕೊಳ್ಳದೆ, ತಮ್ಮ ಬದುಕನ್ನು ಶರಣರ ವಚನಗಳ ಹಿನ್ನೆಲೆಯಲ್ಲಿ ಕಟ್ಟಿಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...