Homeಕರ್ನಾಟಕಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

ಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

- Advertisement -
- Advertisement -

‘ಸಂಗಾತಿಯನ್ನು ಆಯ್ಕೆ ಮಾಡುವಾಗ ಮಗಳು ನಿಮ್ಮ ಮಾತು ಕೇಳದಿದ್ದರೆ ಆಕೆಯ ಕೈಯೋ ಕಾಲನ್ನೋ ಮುರಿದು ಬಿಡಿ’ ಎಂಬ ಮಾತನ್ನು ಕೊರಟಗೆರೆ ತಾಲೂಕು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯವಾದ ಸಲಹೆಯನ್ನು ನೀಡಿದ್ದಾರೆ. ಎಂಥೆಂಥ ಮಹಾಪುರುಷರು ವೀರಶೈವರಲ್ಲಿದ್ದಾರೆ ಎಂಬುದಕ್ಕೆ ಈ ಪುಣ್ಯಾತ್ಮನ ಮಾತು ಸಾಕ್ಷಿಯಾಗಿದೆ. ಸಕಲ ಜೀವಪ್ರೇಮಿಯಾಗಿರಿ ಎಂದು ಬಸವಣ್ಣನವರು ಸಾರುತ್ತ ಬಂದಿದ್ದರೆ , ಹಾರುವರ ಪ್ರಭಾವಕ್ಕೆ ಒಳಗಾದ ವೀರಶೈವವಾದಿಗಳು ಮನುವಾದಿಗಳಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಬಿಟ್ಟಿದ್ದಾರೆ. ‘ಬ್ರಾಹ್ಮಣರಿಗಿಂತಲೂ ಬ್ರಾಹ್ಮಣ್ಯ ಹೊಂದಿದ ವ್ಯಕ್ತಿ ತುಂಬಾ ಅಪಾಯಕಾರಿ’ ಎಂಬ ಮಾತು ಸತ್ಯ.

ವೈದಿಕರಿಗಿಂತಲೂ ವೈದಿಕತ್ವದ ಬಗೆಗೆ ಆಸಕ್ತಿ ಹೊಂದಿದ ನಾನು ಅವರಿಗಿಂತಲೂ ಒಂದು ಕೈ ಮಿಗಿಲು ಎಂಬ ಧೋರಣೆಗಳುಳ್ಳ ವೀರಶೈವ ಮಠಾಧೀಶರು ತಮ್ಮ ತಲೆಯಲ್ಲಿ ವೈದಿಕತ್ವದ ಕಸವನ್ನು ತುಂಬಿಕೊಂಡು ಬಗ್ಗಡಗೊಂಡಿದ್ದಾರೆ. ಹೀಗಾಗಿಯೆ ಈ ವೀರಶೈವವಾದಿ ಮಠಾಧಿಪತಿಗಳು ನಾವೂ ಹಿಂದುಗಳು ಎಂದು ಹೇಳುತ್ತ ನಡೆದಿದ್ದಾರೆ. ಬಹುತೇಕ ವೀರಶೈವ ಪೀಠದಲ್ಲಿ ಪೀಠಾಧಿಕಾರಿಯಾಗಿ ಅಮರಿಕೊಂಡಿರುವ ಮಠಾಧೀಶರಿಗೆ ಯಾವುದೆ ತಿಳುವಳಿಕೆ ಇಲ್ಲ. ಸಂಸ್ಕøತದ ಸುಳ್ಳು ಸೊಟ್ಟುಗಳ ನಾಲ್ಕಾರು ಮಂತ್ರಗಳು ಬಾಯಿಪಾಠ ಮಾಡಿಕೊಂಡು ಕಂಡ ಕಂಡದಲ್ಲಿ ತಮ್ಮ ದಡ್ಡ ಭಕ್ತರ ಮುಂದೆ ಅವನ್ನೇ ಹೇಳಿ ತಮ್ಮ ಪ್ರೌಢಿಮೆ ಮೆರೆಯುತ್ತಾರೆ. ಇಂಥವರಿಗೆ ಸಾಮಾನ್ಯ ಜ್ಞಾನವೂ ಗಗನ ಕುಸುಮ.

ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ
ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ
ಇದಾವಾವ ಪರಿಯಲ್ಲಿ ಕಾಡಿತ್ತು ಮಾಯೆ
ಈ ಮಾಯೆಯ ಕಳೆವಡೆ ಎನ್ನಳವಲ್ಲ
ನೀವೇ ಬಲ್ಲಿರಿ ಕೂಡಲಸಂಗಮದೇವಾ

ಎಂದು ಬಸವಣ್ಣನವರು ತಮ್ಮ ಒಂದು ವಚನದಲ್ಲಿ ಮಹಿಳೆಯನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ. ಪ್ರೀತಿಯನ್ನು ಬಿಟ್ಟು ಜೀವನ ಮಾಡಲು ಯಾರಿಗಾದರೂ ಸಾಧ್ಯವೆ ? ನಮ್ಮೆಲ್ಲರ ಜನನಕ್ಕೆ ಮೂಲ ಕಾರಣ ಮಾಯೆ (ಪ್ರೀತಿ), ನಮ್ಮ ಮಗಳಾಗಿ ಜನಿಸುವವಳು ಹೆಣ್ಣೆ, ನಮ್ಮೊಂದಿಗೆ ಜೀವ ಪಥದಲ್ಲಿ ಹೆಜ್ಜೆ ಹಾಕುವವಳು ಹೆಣ್ಣೆ. ಇವಳನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ ಎಂದು ಹೇಳಿ ಹೆಣ್ಣನ್ನು ಗೌರವಾರ್ಹ ವ್ಯಕ್ತಿಯಾಗಿ ಕಂಡಿದ್ದಾರೆ.

ಹೆಣ್ಣು ಕೇವಲ ಭೋಗದ ವಸ್ತುವಾಗಿ ಕಂಡ ಸನಾತನ ಪರಂಪರೆಯ ಜನ ಆಕೆಯನ್ನು ಸತಿ ಸಹಗಮನಕ್ಕೆ ಹಿಂದೆ ದೂಡಿದ್ದರು. ದೇವರ ಹೆಸರಿನ ಮೇಲೆ ಆಕೆಯನ್ನು ಬಸವಿಗೆ ಬಿಟ್ಟಿದ್ದರು. ಕೆರೆಗೆ ಆಹಾರವಾಗಿಯೂ ಹೆಣ್ಣನ್ನೆ ಬಲಿಕೊಟ್ಟರು. ಹೆಣ್ಣು ಕನಿಷ್ಠ, ಗಂಡು ಶ್ರೇಷ್ಠ ಎಂಬ ಚಿಂತನೆಯೆ ಪ್ರಜಾಪ್ರಭುತ್ವ ವಿರೋಧಿ. ಬ್ರಾಹ್ಮಣಶಾಹಿ ವ್ಯವಸ್ಥೆಯಲ್ಲಿ ಇಂದಿಗೂ ಮಹಿಳೆಗೆ ಪೂಜೆಯ ಹಕ್ಕನ್ನು ನಿರಾಕರಿಸಲಾಗಿದೆ. ಮಹಿಳೆ ಮುಟ್ಟಾಗುತ್ತಾಳಾದ್ದರಿಂದ ಆಕೆ ಕೀಳು ಎಂಬುದು ಪ್ರಚಲಿತದಲ್ಲಿದೆ. ಹಲವಾರು ದೇವಸ್ಥಾನದಲ್ಲೂ ಮಹಿಳೆಯರನ್ನು ನಿರಾಕರಿಸಲಾಗಿದೆ. ಆದ್ದರಿಂದಲೆ ನಮ್ಮ ದೇಶದಲ್ಲಿ ಹೆಣ್ಣು ಭ್ರೂಣದ ಹತ್ಯೆ ನಿರಾಂತಕವಾಗಿ ನಡೆದೆ ಇದೆ.

ಕೊರಟಗೆರೆಯ ಈ ಮಠಾಧೀಶನ ತಲೆಯಲ್ಲಿರುವುದು ವೈದಿಕ ಮಿದುಳು. ವೈದಿಕ ಮಿದುಳು ಸಹಜವಾಗಿಯೆ ಅಸಮತೋಲನವಾಗಿರುತ್ತದೆ. ಅದಕ್ಕೆ ಯೋಚಿಸುವ ಶಕ್ತಿ ಇರೋದಿಲ್ಲ. ತಾನಷ್ಟೇ ಶ್ರೇಷ್ಠ ಉಳಿದವರು ಕನಿಷ್ಠ ಎಂಬ ಭ್ರಮೆ ಹೊತ್ತುಕೊಂಡಿರುತ್ತದೆ. ಮಹಿಳೆ ಅಂದರೆ ಅದೊಂದು ಉಪಯೋಗಿಸಿ ಬಿಸಾಡುವ ವಸ್ತು ಮಾತ್ರವಾಗಿರುತ್ತದೆ. ಆದ್ದರಿಂದಲೆ ಹೆಣ್ಣು ನಿಮ್ಮ ಮಾತು ಕೇಳದೆ ಹೋದರೆ ಅವಳ ಕೈಯನ್ನೋ- ಕಾಲನ್ನೋ ಕತ್ತರಿಸಿ ಎಂದು ಈ ಪುಣ್ಯಾತ್ಮ ಗುರು ತನ್ನ ಭಕ್ತರಿಗೆ ಅಪ್ಪಣೆ ಕೊಡಿಸಿದ್ದಾನೆ. ಮೊದಲೆ ತಿಳುವಳಿಕೆಯ ಕೊರತೆಯಿಂದ ಮೂರಾಬಟ್ಟೆಯಾದ ಭಕ್ತರೆಂಬ ತಲೆ ಹಿಡುಕರಿಗೆ ಗುರುವಿನ(?) ಈ ಮಾತುಗಳು ಅತ್ಯಂತ ಪ್ರೇರಕ ಅನಿಸುತ್ತವೆ. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದು ಹಾಡುತ್ತ ಗುರುವಿನ ಮಾತಿನ ಮಾರ್ಗದಲ್ಲಿ ನಡೆಯುತ್ತ ಹೋದರೆ ಒಂದೊಂದು ಕುಟುಂಬವೂ ತಮ್ಮ ಮನೆಯಲ್ಲಿಯೆ ಸ್ಮಶಾನವನ್ನು ನಿರ್ಮಿಸಿಕೊಳ್ಳಬೇಕಾಗುತ್ತದೆ.

ಅರಿವಿಲ್ಲದೆ ನಿಮ್ಮ ಮನೆಯ ಹೆಣ್ಣು ಮಗು ಜಾರುತ್ತಿದ್ದರೆ ಆಕೆಗೆ ವಿವೇಕ ನೀಡಿ, ಸಂಯಮದಿಂದ ವರ್ತಿಸುವಂತೆ ತಿಳಿ ಹೇಳಬೇಕು. ಸಾಂಸಾರಿಕ ಜೀವನವೆಂಬದು ಸಂತಸದ ಮಾರ್ಗವಾಗಬೇಕಾದರೆ ಸತಿಪತಿಗಳೊಂದಾಗಿ ನಡೆದಾಗಲೆ ಹಿತವಾಗಬಲ್ಲುದು ಎಂಬುದನ್ನು ಅವರಿಗೆ ಮನದಷ್ಟು ಮಾಡಿಸಬೇಕು. ತಮ್ಮ ಹಾಗೂ ಆ ಹುಡುಗನ ಕುಟುಂಬದ ರೀತಿ ರಿವಾಜುಗಳು ಹೊಂದಿಕೆಯಾಗಬಲ್ಲವೆ ? ಎಂಬುದನ್ನು ಇಣುಕಿ ನೋಡಲು ಹಚ್ಚಬೇಕು.

ಇಂಥ ಮನ ಬದಲಾವಣೆಯ ಚಿಂತನೆಯನ್ನು ಬಿಟ್ಟು, ಆ ಹೆಣ್ಣು ಮಗುವಿನ ಕಾಲೋ ಕೈಯೋ ತೆಗೆಯಿರಿ. ಅವಳನ್ನು ಶಾಶ್ವತ ಅಂಗವೈಕಲ್ಯಕ್ಕೆ ದೂಡಿ ಎಂಬ ವಿವೇಕರಹಿತ ವೀರಭದ್ರಶಿವಾಚಾರ್ಯನನ್ನು ಯಾವುದೆ ಮುಲಾಜು ಇಲ್ಲದೆ ಜೈಲಿಗೆ ಅಟ್ಟಬೇಕು. ಹಿಂಸೆಯನ್ನು ಪ್ರಚೋದಿಸುವ ಇಂಥ ಮಠಾಧೀಶ ಇದ್ದರೆಷ್ಟು? ಬಿಟ್ಟರೆಷ್ಟು! ಇನ್ನಾದರೂ ವೀರಶೈವ ವಾದಿಗಳು ಇಂಥ ಅಯೋಗ್ಯ ಮಠಾಧೀಶರ ಬೆನ್ನುಬಿದ್ದು ತಮ್ಮನ್ನು ತಾವು ಹಾಳು ಮಾಡಿಕೊಳ್ಳದೆ, ತಮ್ಮ ಬದುಕನ್ನು ಶರಣರ ವಚನಗಳ ಹಿನ್ನೆಲೆಯಲ್ಲಿ ಕಟ್ಟಿಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...