Homeಕರ್ನಾಟಕಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

ಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

- Advertisement -
- Advertisement -

‘ಸಂಗಾತಿಯನ್ನು ಆಯ್ಕೆ ಮಾಡುವಾಗ ಮಗಳು ನಿಮ್ಮ ಮಾತು ಕೇಳದಿದ್ದರೆ ಆಕೆಯ ಕೈಯೋ ಕಾಲನ್ನೋ ಮುರಿದು ಬಿಡಿ’ ಎಂಬ ಮಾತನ್ನು ಕೊರಟಗೆರೆ ತಾಲೂಕು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯವಾದ ಸಲಹೆಯನ್ನು ನೀಡಿದ್ದಾರೆ. ಎಂಥೆಂಥ ಮಹಾಪುರುಷರು ವೀರಶೈವರಲ್ಲಿದ್ದಾರೆ ಎಂಬುದಕ್ಕೆ ಈ ಪುಣ್ಯಾತ್ಮನ ಮಾತು ಸಾಕ್ಷಿಯಾಗಿದೆ. ಸಕಲ ಜೀವಪ್ರೇಮಿಯಾಗಿರಿ ಎಂದು ಬಸವಣ್ಣನವರು ಸಾರುತ್ತ ಬಂದಿದ್ದರೆ , ಹಾರುವರ ಪ್ರಭಾವಕ್ಕೆ ಒಳಗಾದ ವೀರಶೈವವಾದಿಗಳು ಮನುವಾದಿಗಳಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಬಿಟ್ಟಿದ್ದಾರೆ. ‘ಬ್ರಾಹ್ಮಣರಿಗಿಂತಲೂ ಬ್ರಾಹ್ಮಣ್ಯ ಹೊಂದಿದ ವ್ಯಕ್ತಿ ತುಂಬಾ ಅಪಾಯಕಾರಿ’ ಎಂಬ ಮಾತು ಸತ್ಯ.

ವೈದಿಕರಿಗಿಂತಲೂ ವೈದಿಕತ್ವದ ಬಗೆಗೆ ಆಸಕ್ತಿ ಹೊಂದಿದ ನಾನು ಅವರಿಗಿಂತಲೂ ಒಂದು ಕೈ ಮಿಗಿಲು ಎಂಬ ಧೋರಣೆಗಳುಳ್ಳ ವೀರಶೈವ ಮಠಾಧೀಶರು ತಮ್ಮ ತಲೆಯಲ್ಲಿ ವೈದಿಕತ್ವದ ಕಸವನ್ನು ತುಂಬಿಕೊಂಡು ಬಗ್ಗಡಗೊಂಡಿದ್ದಾರೆ. ಹೀಗಾಗಿಯೆ ಈ ವೀರಶೈವವಾದಿ ಮಠಾಧಿಪತಿಗಳು ನಾವೂ ಹಿಂದುಗಳು ಎಂದು ಹೇಳುತ್ತ ನಡೆದಿದ್ದಾರೆ. ಬಹುತೇಕ ವೀರಶೈವ ಪೀಠದಲ್ಲಿ ಪೀಠಾಧಿಕಾರಿಯಾಗಿ ಅಮರಿಕೊಂಡಿರುವ ಮಠಾಧೀಶರಿಗೆ ಯಾವುದೆ ತಿಳುವಳಿಕೆ ಇಲ್ಲ. ಸಂಸ್ಕøತದ ಸುಳ್ಳು ಸೊಟ್ಟುಗಳ ನಾಲ್ಕಾರು ಮಂತ್ರಗಳು ಬಾಯಿಪಾಠ ಮಾಡಿಕೊಂಡು ಕಂಡ ಕಂಡದಲ್ಲಿ ತಮ್ಮ ದಡ್ಡ ಭಕ್ತರ ಮುಂದೆ ಅವನ್ನೇ ಹೇಳಿ ತಮ್ಮ ಪ್ರೌಢಿಮೆ ಮೆರೆಯುತ್ತಾರೆ. ಇಂಥವರಿಗೆ ಸಾಮಾನ್ಯ ಜ್ಞಾನವೂ ಗಗನ ಕುಸುಮ.

ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ
ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ
ಇದಾವಾವ ಪರಿಯಲ್ಲಿ ಕಾಡಿತ್ತು ಮಾಯೆ
ಈ ಮಾಯೆಯ ಕಳೆವಡೆ ಎನ್ನಳವಲ್ಲ
ನೀವೇ ಬಲ್ಲಿರಿ ಕೂಡಲಸಂಗಮದೇವಾ

ಎಂದು ಬಸವಣ್ಣನವರು ತಮ್ಮ ಒಂದು ವಚನದಲ್ಲಿ ಮಹಿಳೆಯನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ. ಪ್ರೀತಿಯನ್ನು ಬಿಟ್ಟು ಜೀವನ ಮಾಡಲು ಯಾರಿಗಾದರೂ ಸಾಧ್ಯವೆ ? ನಮ್ಮೆಲ್ಲರ ಜನನಕ್ಕೆ ಮೂಲ ಕಾರಣ ಮಾಯೆ (ಪ್ರೀತಿ), ನಮ್ಮ ಮಗಳಾಗಿ ಜನಿಸುವವಳು ಹೆಣ್ಣೆ, ನಮ್ಮೊಂದಿಗೆ ಜೀವ ಪಥದಲ್ಲಿ ಹೆಜ್ಜೆ ಹಾಕುವವಳು ಹೆಣ್ಣೆ. ಇವಳನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ ಎಂದು ಹೇಳಿ ಹೆಣ್ಣನ್ನು ಗೌರವಾರ್ಹ ವ್ಯಕ್ತಿಯಾಗಿ ಕಂಡಿದ್ದಾರೆ.

ಹೆಣ್ಣು ಕೇವಲ ಭೋಗದ ವಸ್ತುವಾಗಿ ಕಂಡ ಸನಾತನ ಪರಂಪರೆಯ ಜನ ಆಕೆಯನ್ನು ಸತಿ ಸಹಗಮನಕ್ಕೆ ಹಿಂದೆ ದೂಡಿದ್ದರು. ದೇವರ ಹೆಸರಿನ ಮೇಲೆ ಆಕೆಯನ್ನು ಬಸವಿಗೆ ಬಿಟ್ಟಿದ್ದರು. ಕೆರೆಗೆ ಆಹಾರವಾಗಿಯೂ ಹೆಣ್ಣನ್ನೆ ಬಲಿಕೊಟ್ಟರು. ಹೆಣ್ಣು ಕನಿಷ್ಠ, ಗಂಡು ಶ್ರೇಷ್ಠ ಎಂಬ ಚಿಂತನೆಯೆ ಪ್ರಜಾಪ್ರಭುತ್ವ ವಿರೋಧಿ. ಬ್ರಾಹ್ಮಣಶಾಹಿ ವ್ಯವಸ್ಥೆಯಲ್ಲಿ ಇಂದಿಗೂ ಮಹಿಳೆಗೆ ಪೂಜೆಯ ಹಕ್ಕನ್ನು ನಿರಾಕರಿಸಲಾಗಿದೆ. ಮಹಿಳೆ ಮುಟ್ಟಾಗುತ್ತಾಳಾದ್ದರಿಂದ ಆಕೆ ಕೀಳು ಎಂಬುದು ಪ್ರಚಲಿತದಲ್ಲಿದೆ. ಹಲವಾರು ದೇವಸ್ಥಾನದಲ್ಲೂ ಮಹಿಳೆಯರನ್ನು ನಿರಾಕರಿಸಲಾಗಿದೆ. ಆದ್ದರಿಂದಲೆ ನಮ್ಮ ದೇಶದಲ್ಲಿ ಹೆಣ್ಣು ಭ್ರೂಣದ ಹತ್ಯೆ ನಿರಾಂತಕವಾಗಿ ನಡೆದೆ ಇದೆ.

ಕೊರಟಗೆರೆಯ ಈ ಮಠಾಧೀಶನ ತಲೆಯಲ್ಲಿರುವುದು ವೈದಿಕ ಮಿದುಳು. ವೈದಿಕ ಮಿದುಳು ಸಹಜವಾಗಿಯೆ ಅಸಮತೋಲನವಾಗಿರುತ್ತದೆ. ಅದಕ್ಕೆ ಯೋಚಿಸುವ ಶಕ್ತಿ ಇರೋದಿಲ್ಲ. ತಾನಷ್ಟೇ ಶ್ರೇಷ್ಠ ಉಳಿದವರು ಕನಿಷ್ಠ ಎಂಬ ಭ್ರಮೆ ಹೊತ್ತುಕೊಂಡಿರುತ್ತದೆ. ಮಹಿಳೆ ಅಂದರೆ ಅದೊಂದು ಉಪಯೋಗಿಸಿ ಬಿಸಾಡುವ ವಸ್ತು ಮಾತ್ರವಾಗಿರುತ್ತದೆ. ಆದ್ದರಿಂದಲೆ ಹೆಣ್ಣು ನಿಮ್ಮ ಮಾತು ಕೇಳದೆ ಹೋದರೆ ಅವಳ ಕೈಯನ್ನೋ- ಕಾಲನ್ನೋ ಕತ್ತರಿಸಿ ಎಂದು ಈ ಪುಣ್ಯಾತ್ಮ ಗುರು ತನ್ನ ಭಕ್ತರಿಗೆ ಅಪ್ಪಣೆ ಕೊಡಿಸಿದ್ದಾನೆ. ಮೊದಲೆ ತಿಳುವಳಿಕೆಯ ಕೊರತೆಯಿಂದ ಮೂರಾಬಟ್ಟೆಯಾದ ಭಕ್ತರೆಂಬ ತಲೆ ಹಿಡುಕರಿಗೆ ಗುರುವಿನ(?) ಈ ಮಾತುಗಳು ಅತ್ಯಂತ ಪ್ರೇರಕ ಅನಿಸುತ್ತವೆ. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದು ಹಾಡುತ್ತ ಗುರುವಿನ ಮಾತಿನ ಮಾರ್ಗದಲ್ಲಿ ನಡೆಯುತ್ತ ಹೋದರೆ ಒಂದೊಂದು ಕುಟುಂಬವೂ ತಮ್ಮ ಮನೆಯಲ್ಲಿಯೆ ಸ್ಮಶಾನವನ್ನು ನಿರ್ಮಿಸಿಕೊಳ್ಳಬೇಕಾಗುತ್ತದೆ.

ಅರಿವಿಲ್ಲದೆ ನಿಮ್ಮ ಮನೆಯ ಹೆಣ್ಣು ಮಗು ಜಾರುತ್ತಿದ್ದರೆ ಆಕೆಗೆ ವಿವೇಕ ನೀಡಿ, ಸಂಯಮದಿಂದ ವರ್ತಿಸುವಂತೆ ತಿಳಿ ಹೇಳಬೇಕು. ಸಾಂಸಾರಿಕ ಜೀವನವೆಂಬದು ಸಂತಸದ ಮಾರ್ಗವಾಗಬೇಕಾದರೆ ಸತಿಪತಿಗಳೊಂದಾಗಿ ನಡೆದಾಗಲೆ ಹಿತವಾಗಬಲ್ಲುದು ಎಂಬುದನ್ನು ಅವರಿಗೆ ಮನದಷ್ಟು ಮಾಡಿಸಬೇಕು. ತಮ್ಮ ಹಾಗೂ ಆ ಹುಡುಗನ ಕುಟುಂಬದ ರೀತಿ ರಿವಾಜುಗಳು ಹೊಂದಿಕೆಯಾಗಬಲ್ಲವೆ ? ಎಂಬುದನ್ನು ಇಣುಕಿ ನೋಡಲು ಹಚ್ಚಬೇಕು.

ಇಂಥ ಮನ ಬದಲಾವಣೆಯ ಚಿಂತನೆಯನ್ನು ಬಿಟ್ಟು, ಆ ಹೆಣ್ಣು ಮಗುವಿನ ಕಾಲೋ ಕೈಯೋ ತೆಗೆಯಿರಿ. ಅವಳನ್ನು ಶಾಶ್ವತ ಅಂಗವೈಕಲ್ಯಕ್ಕೆ ದೂಡಿ ಎಂಬ ವಿವೇಕರಹಿತ ವೀರಭದ್ರಶಿವಾಚಾರ್ಯನನ್ನು ಯಾವುದೆ ಮುಲಾಜು ಇಲ್ಲದೆ ಜೈಲಿಗೆ ಅಟ್ಟಬೇಕು. ಹಿಂಸೆಯನ್ನು ಪ್ರಚೋದಿಸುವ ಇಂಥ ಮಠಾಧೀಶ ಇದ್ದರೆಷ್ಟು? ಬಿಟ್ಟರೆಷ್ಟು! ಇನ್ನಾದರೂ ವೀರಶೈವ ವಾದಿಗಳು ಇಂಥ ಅಯೋಗ್ಯ ಮಠಾಧೀಶರ ಬೆನ್ನುಬಿದ್ದು ತಮ್ಮನ್ನು ತಾವು ಹಾಳು ಮಾಡಿಕೊಳ್ಳದೆ, ತಮ್ಮ ಬದುಕನ್ನು ಶರಣರ ವಚನಗಳ ಹಿನ್ನೆಲೆಯಲ್ಲಿ ಕಟ್ಟಿಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...