Homeಕರ್ನಾಟಕ5 ವರ್ಷದಲ್ಲಿ 14 ಸರ್ಕಾರಿ ಹುದ್ದೆಗೆ ಆಯ್ಕೆಯಾದ ಬಾಗಲಕೋಟೆಯ ಮಹಂತೇಶ್ ಬ್ಯಾಡಗಿ

5 ವರ್ಷದಲ್ಲಿ 14 ಸರ್ಕಾರಿ ಹುದ್ದೆಗೆ ಆಯ್ಕೆಯಾದ ಬಾಗಲಕೋಟೆಯ ಮಹಂತೇಶ್ ಬ್ಯಾಡಗಿ

- Advertisement -
- Advertisement -

ಸರ್ಕಾರಿ ಹುದ್ದೆಯ ಕನಸು ಎಲ್ಲರಿಗೂ ಇರುತ್ತದೆ. ಅನೇಕರು ಸರ್ಕಾರಿ ಕೆಲಸಕ್ಕೆ ಪ್ರಯತ್ನಿಸುತ್ತಲೇ ಹತಾಶರಾಗುತ್ತಾರೆ. ಕೆಲವರು ಛಲ ಬಿಡದೇ ಪರೀಕ್ಷೆಗಳನ್ನು ಬರೆದು ಸರ್ಕಾರಿ ನೌಕರಿಯನ್ನು ಪಡೆಯುತ್ತಾರೆ. ಆದರೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಜಂಬಗಿ ಬಿ.ಕೆ ಗ್ರಾಮದ ಮಹಂತೇಶ್‌ ರಾಮಪ್ಪ ಬಾಡಗಿ ಎಂಬ ಪ್ರತಿಭಾವಂತ ಯುವಕ ಹಲವು ಸರ್ಕಾರಿ ಹುದ್ದೆಗಳನ್ನು ಪಡೆದು ಅಚ್ಚರಿಗೆ ಕಾರಣರಾಗಿದ್ದಾರೆ.

ಮಹಾಂತೇಶ್‌ ಬಾಡಗಿ ಒಂದಲ್ಲ ಎರಡಲ್ಲ ಬರೋಬ್ಬರಿ 14 ಸರ್ಕಾರಿ ಹುದ್ದೆಗೆ ಆಯ್ಕೆಯಾಗಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. 2016 ರಿಂದ 2021 ರ ವರೆಗೆ 5 ವರ್ಷದ ಕಾಲ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿದ್ದಾರೆ. ಸದ್ಯ ಅವರು ತುಮಕೂರು ಜಿಲೆ ಗುಬ್ಬಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಇಂಗ್ಲೀಷ್ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದಾರೆ.

ಅಲ್ಪಸಂಖ್ಯಾತ ಪಿಯು ಕಾಲೇಜ್‌ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಥಮ, BCM ಇಲಾಖೆ FDA ನೇಮಕಾತಿಯಲ್ಲಿ ದ್ವಿತೀಯ, ಗ್ರಾಮಪಂಚಾಯತಿ ಕಾರ್ಯದರ್ಶಿ ನೇಮಕಾತಿಯಲ್ಲಿ 12 ನೇ ರ್ಯಾಂಕ್‌ ಹೀಗೆ ವಿವಿಧ ಹುದ್ದೆಗಳಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಹಂತೇಶ್‌ ಉತ್ತಮ ರ್ಯಾಂಕ್‌ ಪಡೆದು ಕೆಲಸಕ್ಕೆ ಆಯ್ಕೆಯಾಗಿದ್ದರು. ಆದರೆ ಸದ್ಯ ಅವರ ಎಲ್ಲ ಗಮನ ಈಗ ಕೆಎಎಸ್‌ ಪರೀಕ್ಷೆಗಳ ಕಡೆಗೆ ನೆಟ್ಟಿದೆ.

ಮಹಂತೇಶ್‌ ಎಂಎ, ಬಿಎಡ್‌ ಶಿಕ್ಷಣ ವನ್ನು ಪಡೆದಿದ್ದಾರೆ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರು ಜಂಬಗಿಯ ಸರ್ಕಾರಿ ಶಾಲೆಯಲ್ಲಿ ಮುಗಿಸಿದ್ದಾರೆ. ಪ್ರೌಢ ಶಿಕ್ಷಣವನ್ನು ತುಂಬಳದಲ್ಲಿ  ಪ್ರೌಢಶಿಕ್ಷಣವನ್ನು ಪಡೆದಿದ್ದಾರೆ.

ಗ್ರಾಮಸ್ಥರ ಮತ್ತು ನಮ್ಮೆಲ್ಲರ ಆಶೀರ್ವಾದ ಮಹಂತೇಶ್‌ ಮೇಲಿದೆ. ಮಗ ಕೆಎಎಸ್‌ ಮಾಡಬೇಂಕೆಂಬ ಕನಸು ಹೊಂದಿದ್ದಾರೆ. ಅವರು ಕೆಎಎಸ್‌ ಬರೆದು ಉತ್ತೀರ್ಣರಾಗಲಿ ಎಂದು ಆಶಿಸುತ್ತೇವೆ ಎಂದು ಮಹಂತೇಶ್‌ ತಂದೆ ತಿಳಿಸಿದ್ದಾರೆ.

ಎರಡು ವರ್ಷದಿಂದ ಸತತವಾಗಿ ನಾನು KAS ಪರೀಕ್ಷೆಗೆ ತಯಾರಿ ನಡೆಸುತ್ತಿದ್ದೇನೆ. ನನ್ನ ಸಹೋದರ ಸಂತೋಶ್‌ ಬ್ಯಾಡಗಿ ನನಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಬಂಧು ಬಾಂಧವರು ಮತ್ತು ಸ್ನೇಹಿತರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ಮಹಂತೇಶ್‌ ಹೇಳುತ್ತಾರೆ.

ಸರ್ಕಾರಿ ಕೆಲಸವೆಂಬುದು ಇಂದು ಗಗನ ಕುಸುಮವಾಗಿರುವ ಇಂದಿನ ಪರಿಸ್ಥಿತಿಯಲ್ಲಿ ಸತತ ಪರಿಶ್ರಮ ಮತ್ತು ಪ್ರಯತ್ನದಿಂದ  ಅನೇಕ ಸರ್ಕಾರಿ ಹುದ್ದೆಗಳಿಗೆ ನಡೆದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ. ಅವರ KAS ಕನಸು ಕೂಡ ನನಸಾಗಲಿ.


ಇದನ್ನೂ ಓದಿ: ಪ್ರಜಾಪ್ರಭುತ್ವದ ಸಾಕ್ಷಿಪ್ರಜ್ಞೆ ದೇವನೂರು ಮಹಾದೇವರಿಗೆ 74 ತುಂಬಿದ ಸಂದರ್ಭದಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...