Homeಕರ್ನಾಟಕಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

"ವಿಜ್ಞಾನ ಮೊದಲು" ಎಂಬುದು ಬಿಎಂಸಿ 92 ತಂಡದ ಘೋಷವಾಕ್ಯ. ವೈಜ್ಞಾನಿಕ ಸಂಗತಿಗಳನ್ನು ಚರ್ಚಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಇವರ ಗುರಿ.

- Advertisement -
- Advertisement -

ತಾವು ಮಾಡುವ ಚಿಕ್ಕ ಚಿಕ್ಕ ಸಹಾಯವನ್ನೂ ಕೂಡ ಪ್ರಚಾರಕ್ಕೆ ಬಳಸಿಕೊಳ್ಳುವ, ಪಿಆರ್‌ಒಗಳನ್ನು ನೇಮಿಸಿಕೊಂಡು ಹೆಸರು ಗಳಿಸುವ ಜನರ ಮಧ್ಯೆ ಸದ್ದಿಲ್ಲದೇ ಕೊರೊನಾ ಸಂಕಷ್ಟದಲ್ಲಿ ಜನರ ಸಹಾಯಕ್ಕೆ ನಿಂತಿದೆ ಬಿಎಂಸಿ-92 ವೈದ್ಯರ ತಂಡ.

ಬೆಂಗಳೂರು ವೈದ್ಯಕೀಯ ಕಾಲೇಜಿನ 1992 ಬ್ಯಾಚ್‌ನ (ಬಿಎಂಸಿ- 92)ನ ಹಲವಾರು ವೈದ್ಯರು ಈಗ ಪ್ರಪಂಚದ ವಿವಿದೆಡೆ ಕೆಲಸ ಮಾಡುತ್ತಿದ್ದಾರೆ. ಆದರೆ ಕೋವಿಡ್‌ ಎರಡನೇ ಅಲೆ ಅವರನ್ನು ಮತ್ತೆ ಒಗ್ಗೂಡುವಂತೆ ಮಾಡಿದೆ. ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲರೂ ಜನರ ಜೀವ ಉಳಿಸಲು ಒಂದು ತಂಡವಾಗಿ ತಮ್ಮ ಶಕ್ತಿ ಮೀರಿ ಕೆಲಸ ಮಾಡಲು ಮುಂದಾಗಿದ್ದಾರೆ.

ಕೋವಿಡ್ ಎರಡನೇ ಅಲೆಗೆ ಅತಿ ಹೆಚ್ಚು ತುತ್ತಾಗಿರುವ ನಮ್ಮ ರಾಜ್ಯದಲ್ಲಿ ಬೆಡ್‌ ಕೊರತೆ, ಆಕ್ಸಿಜನ್, ಔಷಧಿ ಅಲಭ್ಯತೆಯಿಂದ ಜನ ಗೋಳಾಡುತ್ತಿದ್ದಾರೆ. ಅಪಾರ ಸಾವು ನೋವುಗಳು ಸಂಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಕೊರೊನಾ ಉಲ್ಬಣವಾಗದಂತೆ ತಡೆಯಲು ಅಂದರೆ ಜನರಿಗೆ ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದು ಮತ್ತು ಆಸ್ಪತ್ರೆಗಳ ಮೇಲಿನ ಭಾರ ತಗ್ಗಿಸುವುದು ಬಿಎಂಸಿ- 92 ವೈದ್ಯರ ಗುರಿಯಾಗಿದೆ.

ಇದನ್ನೂ ಓದಿ: ರಾಜ್ಯದ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

ಬಹಳಷ್ಟು ಜನರಿಗೆ ಕೊರೊನಾ ಬಂದಾಗ ಏನು ಮಾಡಬೇಕು? ಉಸಿರಾಟದ ಸಮಸ್ಯೆಯುಂಟಾದರೆ ಏನು ಮಾಡಬೇಕು ಎಂಬುದು ತಿಳಿದಿಲ್ಲ. ಆ ಸಂದರ್ಭದಲ್ಲಿ ಬೆಡ್, ಔಷಧಿ ಸಿಗುತ್ತಿಲ್ಲವೆಂಬ ಭಯಕ್ಕೆ ಅವರು ಎದೆಗುಂದಿ ಮತ್ತಷ್ಟು ರೋಗಕ್ಕೆ ತುತ್ತಾಗುತ್ತಾರೆ. ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೆ ಅದನ್ನು ನಿಭಾಯಿಸುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ವೈದ್ಯರು ಆರಂಭದಿಂದಲೇ ಸೋಂಕಿತರಿಗೆ ಫೋನಿನಲ್ಲಿ/ಆಪ್ ಮೂಲಕ ಹೇಳಿದ ಸಲಹೆಗಳನ್ನು ಪಾಲಿಸುವಂತೆ ಮಾಡಿ ಆಕ್ಸಿಜನ್ ಬೆಡ್‌ಗಾಗಿ ಹುಡುಕುವ ಪರಿಸ್ಥಿತಿಗೆ ಹೋಗದಂತೆ ಮಾಡಲು, ಕೊರೊನಾ ಉಲ್ಭಣಿಸಿದಂತೆ ತಡೆಯಲು ಮುಂದಾಗಿದೆ ಇದಕ್ಕೆ ಕರ್ನಾಟಕ ಕೋವಿಡ್ ವಾಲಂಟೀಯರ್ಸ್ ಟೀಮ್‌ (ಕೆಸಿವಿಟಿ) ರಚನೆಯಾಗಿ, ಈಗಾಗಲೇ ರಾಜ್ಯದಲ್ಲಿ ಕಾರ್ಯನಿರತವಾಗಿದೆ. ಅದರಲ್ಲಿ ಈ ತಂಡ ಸಕ್ರಿಯವಾಗಿ ತೊಡಗಿಸಿಕೊಂಡಿದೆ.

“ವಿಜ್ಞಾನ ಮೊದಲು” ಎಂಬುದು ಬಿಎಂಸಿ 92 ತಂಡದ ಘೋಷವಾಕ್ಯ. ಇಂದು ಕೋವಿಡ್ ಕುರಿತು ನೂರಾರು ಜನ ನೂರಾರು ರೀತಿಯ ಅಭಿಪ್ರಾಯ ಹೊಂದಿದ್ದು, ನೂರಾರು ಸಲಹೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ತಪ್ಪು ಗ್ರಹಿಕೆಗಳು, ಮೂಡನಂಬಿಕೆಗಳಿಗೆ ಜನರು ಬಲಿಯಾಗುವುದನ್ನು ತಡೆಯಲು ಈ ತಂಡ ವೈಜ್ಞಾನಿಕ ಸಂಗತಿಗಳನ್ನು ಚರ್ಚಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಲ್ಲಿ ನಿರತವಾಗಿದೆ. ಜನರಿಗೆ ಉಚಿತ ಚಿಕಿತ್ಸೆಯ ಜೊತೆಗೆ ಕೊರೊನಾ ಕುರಿತ ವಿಚಾರ ಸಂಕಿರಣಗಳು, ಮುನ್ನೆಚ್ಚರಿಕೆಗಳು, ಚಿಕಿತ್ಸಾ ವಿಧಾನಗಳ ಮಾಹಿತಿ ಸೇರಿದಂತೆ ವೈದ್ಯಕೀಯ ವಿಜ್ಞಾನದ ಹಲವು ವಿಚಾರಗಳನ್ನು ಸರಳಿಕರಿಸಿ ಅದನ್ನು ಜನರಿಗೆ ತಲುಪಿಸುವ ಕೆಲಸಕ್ಕೆ ಈ ತಂಡ ಕೈ ಹಾಕಿದೆ.

ಈಗಾಗಲೇ ರಾಜ್ಯದಲ್ಲಿಯೂ ಬ್ಲಾಕ್ ಫಂಗಸ್ ಕಾಯಿಲೆ ಸುಮಾರು 100 ಮಂದಿಯಲ್ಲಿ ಕಾಣಿಸಿಕೊಂಡಿದೆ. ಈ ಸೋಂಕಿನ ಬಗ್ಗೆಯೂ ವೈದ್ಯವೃಂದಲ್ಲಿ ಸಮರ್ಪಕ ಅರಿವು ಮೂಡಿಸಲು ಬಿಎಂಸಿ ವೈದ್ಯರು ಮುಂದಾಗಿದ್ದು, ಮೇ 20 ರಂದು “ಕೋವಿಡ್ ನಂತರದ ಬ್ಲಾಕ್ ಫಂಗಸ್: ಹಿನ್ನೆಲೆ ಮತ್ತು ಮುಂದಿರುವ ದಾರಿ” ವಿಚಾರದ ಕುರಿತು ವೆಬಿನಾರ್‌ ಆಯೋಜಿಸಲಾಗಿದೆ.

ಇದನ್ನೂ ಓದಿ: ‘ಬ್ಲಾಕ್‌ ಫಂಗಸ್‌‌’ಗೆ ಉಚಿತ ಚಿಕಿತ್ಸೆ ನೀಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಈ ವೆಬಿನಾರ್‌ನಲ್ಲಿ ದೇಶದ ಮತ್ತು ವಿದೇಶದ ವೈದ್ಯರು ಭಾಗವಹಿಸಲಿದ್ದಾರೆ. ಪ್ಯಾನೆಲ್‌ನಲ್ಲಿ ಅಮೆರಿಕಾದ  ಮೆಡಿಕಲ್ ಸಿಟಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಸಾಂಕ್ರಾಮಿಕ ರೋಗಗಳ ತಜ್ಞೆ ಡಾ. ಹರಿಕಾ ಯಲಮಂಚಿಲಿ, ಪಾಂಡಿಚೇರಿಯ ಸರ್ಜನ್ ಡಾ. ಅರುಣ್ ಅಲೆಕ್ಸಾಂಡರ್, ಬೆಂಗಳೂರಿನ ನೇತ್ರತಜ್ಞ ಡಾ. ಕೃಷ್ಣ ಆರ್ ಮೂರ್ತಿ ಮತ್ತು ಬೆಂಗಳೂರಿನ ಆರ್.ವಿ ಆಸ್ಟರ್ ಆಸ್ಪತ್ರೆಯ ನರಶಸ್ತ್ರ ಚಿಕಿತ್ಸಕ ಡಾ.ಧನಂಜಯ್ ಭಟ್ ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಸರಣಿ ವೈಜ್ಞಾನಿಕ ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಈ ತಂಡ ಸದಸ್ಯರಾದ ಪತ್ರಕರ್ತ ಡಾವೆಂಕಿ, “ಜನರಿಗೆ ಸರಳವಾದ ಭಾಷೆಯಲ್ಲಿ ವಿಡಿಯೋಗಳ ಮೂಲಕ ಜನರಿಗೆ ಸೋಂಕಿನ ಬಗ್ಗೆ ಮಾಹಿತಿ ನೀಡುವುದು ಮತ್ತು ಅವರಲ್ಲಿ ಅರಿವು ಮೂಡಿಸುವುದು ನಮ್ಮ ಉದ್ದೇಶ” ಎನ್ನುತ್ತಾರೆ.

“ಜನರಿಗೆ ಕೆಲವೊಂದು ವೈದ್ಯಕೀಯ ವಿಷಯಗಳು ಸರಿಯಾಗಿ ತಿಳಿಯುವುದಿಲ್ಲ. ಅದನ್ನು ಅರ್ಧ ತಿಳಿದು ಸುಮ್ಮನಾಗುತ್ತಾರೆ. ಇದು ತುಂಬಾ ತಪ್ಪು. ಹಾಗಾಗಿ ವಿಡಿಯೊಗಳನ್ನು ಮಾಡಿಸುವ ಕೆಲಸವನ್ನು ನಾನು ಮೆಲ್ವಿಚಾರಣೆ ಮಾಡುತ್ತೇನೆ. ವಿದೇಶಗಳ ವೈದ್ಯರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಇಂಗ್ಲಿಷ್ನಲ್ಲಿರುವ ವಿಷಯಗಳನ್ನು ಭಾಷಾಂತರಿಸಿ ಸರಳವಾಗಿ ತಿಳಿಸಲಾಗುತ್ತದೆ” ಎನ್ನುತ್ತಾರೆ.

ಇದನ್ನೂ ಓದಿ: ಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

“ಉತ್ತಮ ಜೀವನ ನಡೆಸುತ್ತಿರುವ ಇವರೆಲ್ಲರೂ ತಮ್ಮ ಪಾಡಿಗೆ ತಾವು ಆರಾಮಾವಾಗಿ ಇರಬಹುದಿತ್ತು. ಆದರೆ, ಈ ಸಂಕಷ್ಟದ ಸಮಯದಲ್ಲಿ ಜನರ ನೆರವಿಗೆ ನಿಂತಿದ್ದಾರೆ. ಅಂದು ಕಾಲೇಜಿನ ದಿನಗಳಲ್ಲಿ ನಾವು ಒಟ್ಟುಗೂಡಿ ಮಾಡುತ್ತಿದ್ದ ಕೆಲಸಗಳು ಇಂದು ಇಂತಹ ಪ್ರಬುದ್ಧ ಕಾರ್ಯಕ್ಕೆ ಕೈಹಾಕುವಂತೆ ಮಾಡಿದೆ. ಇವರೆಲ್ಲರ ಬಗ್ಗೆ ನನಗೆ ಹೆಮ್ಮೆಯಿದೆ. ಸಣ್ಣ ಸಣ್ಣ ಕೆಲಸಗಳಿಗೆ, ಮಾಡುವ ಪುಟ್ಟ ಕೆಲಸಕ್ಕೆ ಮಾಧ್ಯಮಗಳಲ್ಲಿ ಪ್ರಚಾರ ಪಡೆಯುವ ದಿನಗಳಲ್ಲಿ ಇವರು ಯಾವುದನ್ನೂ ಬಯಸದೇ, ನೇಪತ್ಯದಲ್ಲೇ ಉಳಿದು ಕೆಲಸ ಮಾಡುತ್ತಿದ್ದಾರೆ” ಎಂದು ಡಾವೆಂಕಿ ಹೇಳುತ್ತಾರೆ.

“ಜನರ ಜೀವವುಳಿಸುವ ವೈದ್ಯರ ಜೊತೆಗೆ ಪರೋಕ್ಷವಾಗಿ ಲಜೀಶ್, ಸುರೇಂದ್ರ, ಹರ್ಷವರ್ಧನ್ ಸುಳ್ಯ, ಸುಧಾಕರ್‌ ದರ್ಬೆ ಸೇರಿದಂತೆ ಹಲವು ಜನ ಕೆಲಸ ಮಾಡುತ್ತಿದ್ದಾರೆ. ಹಳ್ಳಿಗಳಲ್ಲಿ, ದೂರದ ಗ್ರಾಮಗಳಲ್ಲಿ ಸರ್ಕಾರ ಕೆಲವೊಮ್ಮೆ ಎಡವಬಹುದು ಅಂತಹ ಸಮಯದಲ್ಲಿ ಈ ತಂಡ ಪರ್ಯಾಯವಾಗಿ ಕಾರ್ಯ ನಿರ್ವಹಿಸುತ್ತದೆ” ಎಂಬ ವಿಶ್ವಾಸದ ಮಾತನಾಡುತ್ತಾರೆ ಡಾವೆಂಕಿ.

ಈ ತಂಡದಲ್ಲಿ ಅಮೆರಿಕಾದ ಡಾ.ಸೀಮಾ ಶಂಕರ್‌, ಡಾ.ಆನಂದ್‌ ರೆಡ್ಡಿ, ಇಂಗ್ಲೆಂಡಿನಲ್ಲಿರುವ ಡಾ.ರವಿ, ಡಾ.ನಾಗವೆಂಕಟೇಶ್ ಗುಪ್ತಾ, ಬೆಂಗಳೂರಿನ ವಿಕ್ರಮ್‌ ಆಸ್ಪತ್ರೆಯ ಡಾ.ಉಮೇಶ್‌, ಬೆಂಗಳೂರಿನ ಡಾ.ಭಾಗ್ಯಶ್ರೀ, ಡಾ.ರಾಜೀವ್, ಡಾ.ಪ್ರವೀಣ್, ಡಾ.ಎಚ್.ವಿ ವಾಸು ಹೀಗೆ ಹಲವರು ಆಸಕ್ತಿಯಿಂದ ಕ್ರಿಯಾಶೀಲರಾಗಿದ್ದಾರೆ.

ಈ ಚಿಕಿತ್ಸೆಗಳಿಗೆ ಅನುಕೂಲವಾಗಲೆಂದು ವಿದೇಶಗಳಲ್ಲಿ ನೆಲೆಸಿರುವ ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರೆಲ್ಲರೂ ಸೇರಿ ಕೋಟ್ಯಂತರ ರೂ ವೆಚ್ಚದಲ್ಲಿ 110 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಕಳಿಸಿದ್ದಾರೆ. ಡಾ.ಸುಜಾತ ಮತ್ತು ಡಾ.ಸಾಯಿಪ್ರಕಾಶ್ ಮತ್ತಿತರರು ಇವುಗಳನ್ನು ಕಳಿಸಲು ಶ್ರಮವಹಿಸಿದ್ದಾರೆ. ಇನ್ನೂ 300 5ಲೀ ಮತ್ತು 10 ಲೀ ಸಾಮರ್ಥ್ಯದ ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಇನ್ನು ಕೆಲವೇ ದಿನಗಳಲ್ಲಿ ಕಳಿಸುವುದಾಗಿ ಅವರು ನಿರ್ಧರಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...