Homeಮುಖಪುಟಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು.

- Advertisement -
- Advertisement -

ಲಾಕ್‌ಡೌನ್‌ ಕಾರಣದಿಂದ ಬೆಂಗಳೂರಿನಲ್ಲಿ ಪಕ್ಷಿ ಮತ್ತು ಪ್ರಾಣಿಗಳಿಗೆ ಸರಿಯಾಗಿ ಕಾಳು ಮತ್ತಿತರ ಆಹಾರ ಸಿಗುತ್ತಿಲ್ಲ. ಲಾಕ್‌ಡೌನ್‌ನ ನಡುವೆಯೂ ಇಲ್ಲೊಂದು ಪರಿಸರ ಪ್ರೇಮಿಗಳ ತಂಡ ಹಕ್ಕಿಗಳಿಗೆ ಕಾಳೂಣಿಸುವ ಕೆಲಸವನ್ನು ಸದ್ದಿಲ್ಲದೇ ಮಾಡುತ್ತಾ, ಪ್ರಾಣಿ- ಪಕ್ಷಿಗಳಿಗೆ ಆಹಾರ ಒದಗಿಸಲು ಶ್ರಮಪಡುತ್ತಿದೆ.

ರೆಸಿಡೆಂಟ್ಸ್‌ ವೆಲ್ಫೇರ್ ಅಸೋಸಿಯೇಶನ್‌ ಸಂಸ್ಥೆಯ ನೆರವಿನೊಂದಿಗೆ ಬೆಂಗಳೂರಿನ ಗ್ರೀನ್‌ ಇಂಡಸ್‌ ವಾಲಂಟೀಯರ್ಸ್‌ ಫಾರ್‌ ಎನ್ವಿರಾನ್ಮೆಂಟ್‌ (GIVE) ತಂಡದ ಸದಸ್ಯರು ಬೆಂಗಳೂರು ನಗರದ ಖಾಲಿ ಇರುವ ಪ್ರದೇಶಗಳಲ್ಲಿ ಹಣ್ಣು ಬಿಡುವ ಗಿಡಗಳನ್ನು ಹಾಗೂ ಕಾಳಿನ ಗಿಡಗಳನ್ನು ನೆಡುತ್ತಿದ್ದಾರೆ. ಆ ಮೂಲಕ ಹಕ್ಕಿ ಪಕ್ಷಿಗಳಿಗೆ ಹಸಿರೊದಗಿಸುವ ಮತ್ತು ಹಸಿವು ನೀಗಿಸುವ ಅಪರೂಪದ ಕೆಲಸವನ್ನು ಈ ಸ್ವಯಂ ಸೇವಕರ ತಂಡ ಮಾಡುತ್ತಿದೆ. ಗ್ರೀನ್‌ ಇಂಡಸ್‌ ತಂಡದ ಪರಿಸರ ಕಾಳಜಿಗೆ ಮತ್ತು ಪಕ್ಷಿಪ್ರಾಣಿಗಳ ಮೇಲಿನ ಪ್ರೇಮ ಕಂಡು ಬೆಂಗಳೂರಿನ ಅನೇಕ ನಾಗರೀಕರು ಈ ತಂಡಕ್ಕೆ ಸಹಾಯ ನೀಡುತ್ತಿದ್ದಾರೆ.

ಹಕ್ಕಿಗಳಿಗಾಗಿ ನೈಸರ್ಗಿಕ ಆಹಾರೋದ್ಯಾನಗಳನ್ನು ನಿರ್ಮಿಸುವ ಗ್ರೀನ್ ಇಂಡಸ್ ತಂಡದ ಯೋಜನೆಯ ಮೊದಲ ಹಂತ ಈಗಾಗಲೇ ಆರಂಭವಾಗಿದೆ. ಯೋಜನೆಯ ಮೊದಲ ಭಾಗವಾಗಿ ಬೆಂಗಳೂರಿನ ಮುತನಲ್ಲೂರು ಕೆರೆ ಸುತ್ತ ಮುತ್ತ ನೂರಾರು ಹಣ್ಣಿನ ಗಿಡಗಳನ್ನು ನೆಡಲಾಗಿದೆ. ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸಂಸ್ಥೆಯ ಸದಸ್ಯರೂ ಕೂಡ GIVE ತಂಡದ ಈ ಪ್ರಯತ್ನಕ್ಕೆ ಜೊತೆ ನೀಡಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ಹತ್ತಾರು ಕೆರೆಗಳನ್ನು ಅತಿಕ್ರಮವಾಗಿ ಕಬಳಿಸಿರುವ ಘಟನೆಗಳು ನಡೆದಿವೆ. ಕೆರೆ ಸುತ್ತಮುತ್ತದ ಅಕ್ರಮ ಒತ್ತುವರಿ ಪ್ರದೇಶವನ್ನು ಗುರುತಿಸಿ ಅಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕೆಲಸ ನಮ್ಮ ತಂಡ ಮಾಡುತ್ತಿದೆ. 30% ಅಕ್ರಮ ಒತ್ತುವರಿಯಾಗಿರುವ ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸಲು ಸರ್ಕಾರದ ಜೊತೆ ಕೈಜೋಡಿಸಿದ್ದೇವೆ ಎಂದು ಗೀವ್ ಇಂಡಿಯಾದ ಸ್ವಯಂ ಸೇವಕರು ಹೇಳುತ್ತಾರೆ.

GIVE ತಂಡದ ಸದಸ್ಯರು ಹೆಚ್ಚಾಗಿ ಚಿಕ್ಕು, ಜಾಂಬಳೆ, ನೇರಳೆ, ಮಾವು, ಹಲಸು ಮುಂತಾದ ಗಿಡಗಳನ್ನು ರೈತರಿಂದ ಪಡೆದು ಅದನ್ನು‌ ನೆಟ್ಟು ಪೋಷಿಸುವ ಆಸಕ್ತ ನಾಗರಿಕರಿಗೆ ನೀಡುತ್ತಿದ್ದೇವೆ. ಹೆಚ್ಚಿನ ಕಡೆ ತಂಡದ ಸದಸ್ಯರು ಸಸಿಗಳನ್ನು ನೆಟ್ಟು ಸಂರಕ್ಷಿಸುತ್ತಿದ್ದಾರೆ ಎಂದು ತಂಡದ ಸದಸ್ಯರು ತಿಳಿಸಿದ್ದಾರೆ.

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು. ಇದರ ಹೊರತಾಗಿ GIVE ತಂಡ ಯಾವುದೇ ಆರ್ಥಿಕ ಸಹಾಯವನ್ನು ಸ್ವೀಕರಿಸುವುದಿಲ್ಲ‌ ಎಂದು ತಂಡದ ಸ್ವಯಂಸೇವಕರಾದ ಸಂತೋಷ್ ಹೇಳುತ್ತಾರೆ.

ಸದ್ಯ GIVE ತಂಡದ ಸದಸ್ಯರು ಬೆಂಗಳೂರು ನಗರದ ಆನೇಕಲ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಭಾಗದ ಅಪಾರ್ಟ್ ಮೆಂಟ್ ಗಳಲ್ಲಿ ಮತ್ತು ಅಪಾರ್ಟ್ ಮೆಂಟ್ ಸುತ್ತಮುತ್ತ ಹಣ್ಣಿನ ಗಿಡಗಳು ಮತ್ತು ಕಾಳಿನ ಗಿಡಗಳನ್ನು ಬೆಳೆಸುವಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಯಾರೇ ನಾಗರಿಕರು ಗಿಡ ಮರಗಳನ್ನು ಬೆಳೆಸಿ ಪಕ್ಷಿಗಳಿಗೆ ನೈಸರ್ಗಿಕ ಆಹಾರ ಒದಗಿಸಲು ಮುಂದಾದರೆ ಅವರಿಗೆ ಸಹಾಯ ಮಾಡಲು GIVE ತಂಡ ಸಿದ್ಧವಿದೆ ಎಂದು ಸದಸ್ಯರು ಹೇಳುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...