Homeಮುಖಪುಟಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು.

- Advertisement -
- Advertisement -

ಲಾಕ್‌ಡೌನ್‌ ಕಾರಣದಿಂದ ಬೆಂಗಳೂರಿನಲ್ಲಿ ಪಕ್ಷಿ ಮತ್ತು ಪ್ರಾಣಿಗಳಿಗೆ ಸರಿಯಾಗಿ ಕಾಳು ಮತ್ತಿತರ ಆಹಾರ ಸಿಗುತ್ತಿಲ್ಲ. ಲಾಕ್‌ಡೌನ್‌ನ ನಡುವೆಯೂ ಇಲ್ಲೊಂದು ಪರಿಸರ ಪ್ರೇಮಿಗಳ ತಂಡ ಹಕ್ಕಿಗಳಿಗೆ ಕಾಳೂಣಿಸುವ ಕೆಲಸವನ್ನು ಸದ್ದಿಲ್ಲದೇ ಮಾಡುತ್ತಾ, ಪ್ರಾಣಿ- ಪಕ್ಷಿಗಳಿಗೆ ಆಹಾರ ಒದಗಿಸಲು ಶ್ರಮಪಡುತ್ತಿದೆ.

ರೆಸಿಡೆಂಟ್ಸ್‌ ವೆಲ್ಫೇರ್ ಅಸೋಸಿಯೇಶನ್‌ ಸಂಸ್ಥೆಯ ನೆರವಿನೊಂದಿಗೆ ಬೆಂಗಳೂರಿನ ಗ್ರೀನ್‌ ಇಂಡಸ್‌ ವಾಲಂಟೀಯರ್ಸ್‌ ಫಾರ್‌ ಎನ್ವಿರಾನ್ಮೆಂಟ್‌ (GIVE) ತಂಡದ ಸದಸ್ಯರು ಬೆಂಗಳೂರು ನಗರದ ಖಾಲಿ ಇರುವ ಪ್ರದೇಶಗಳಲ್ಲಿ ಹಣ್ಣು ಬಿಡುವ ಗಿಡಗಳನ್ನು ಹಾಗೂ ಕಾಳಿನ ಗಿಡಗಳನ್ನು ನೆಡುತ್ತಿದ್ದಾರೆ. ಆ ಮೂಲಕ ಹಕ್ಕಿ ಪಕ್ಷಿಗಳಿಗೆ ಹಸಿರೊದಗಿಸುವ ಮತ್ತು ಹಸಿವು ನೀಗಿಸುವ ಅಪರೂಪದ ಕೆಲಸವನ್ನು ಈ ಸ್ವಯಂ ಸೇವಕರ ತಂಡ ಮಾಡುತ್ತಿದೆ. ಗ್ರೀನ್‌ ಇಂಡಸ್‌ ತಂಡದ ಪರಿಸರ ಕಾಳಜಿಗೆ ಮತ್ತು ಪಕ್ಷಿಪ್ರಾಣಿಗಳ ಮೇಲಿನ ಪ್ರೇಮ ಕಂಡು ಬೆಂಗಳೂರಿನ ಅನೇಕ ನಾಗರೀಕರು ಈ ತಂಡಕ್ಕೆ ಸಹಾಯ ನೀಡುತ್ತಿದ್ದಾರೆ.

ಹಕ್ಕಿಗಳಿಗಾಗಿ ನೈಸರ್ಗಿಕ ಆಹಾರೋದ್ಯಾನಗಳನ್ನು ನಿರ್ಮಿಸುವ ಗ್ರೀನ್ ಇಂಡಸ್ ತಂಡದ ಯೋಜನೆಯ ಮೊದಲ ಹಂತ ಈಗಾಗಲೇ ಆರಂಭವಾಗಿದೆ. ಯೋಜನೆಯ ಮೊದಲ ಭಾಗವಾಗಿ ಬೆಂಗಳೂರಿನ ಮುತನಲ್ಲೂರು ಕೆರೆ ಸುತ್ತ ಮುತ್ತ ನೂರಾರು ಹಣ್ಣಿನ ಗಿಡಗಳನ್ನು ನೆಡಲಾಗಿದೆ. ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸಂಸ್ಥೆಯ ಸದಸ್ಯರೂ ಕೂಡ GIVE ತಂಡದ ಈ ಪ್ರಯತ್ನಕ್ಕೆ ಜೊತೆ ನೀಡಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ಹತ್ತಾರು ಕೆರೆಗಳನ್ನು ಅತಿಕ್ರಮವಾಗಿ ಕಬಳಿಸಿರುವ ಘಟನೆಗಳು ನಡೆದಿವೆ. ಕೆರೆ ಸುತ್ತಮುತ್ತದ ಅಕ್ರಮ ಒತ್ತುವರಿ ಪ್ರದೇಶವನ್ನು ಗುರುತಿಸಿ ಅಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕೆಲಸ ನಮ್ಮ ತಂಡ ಮಾಡುತ್ತಿದೆ. 30% ಅಕ್ರಮ ಒತ್ತುವರಿಯಾಗಿರುವ ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸಲು ಸರ್ಕಾರದ ಜೊತೆ ಕೈಜೋಡಿಸಿದ್ದೇವೆ ಎಂದು ಗೀವ್ ಇಂಡಿಯಾದ ಸ್ವಯಂ ಸೇವಕರು ಹೇಳುತ್ತಾರೆ.

GIVE ತಂಡದ ಸದಸ್ಯರು ಹೆಚ್ಚಾಗಿ ಚಿಕ್ಕು, ಜಾಂಬಳೆ, ನೇರಳೆ, ಮಾವು, ಹಲಸು ಮುಂತಾದ ಗಿಡಗಳನ್ನು ರೈತರಿಂದ ಪಡೆದು ಅದನ್ನು‌ ನೆಟ್ಟು ಪೋಷಿಸುವ ಆಸಕ್ತ ನಾಗರಿಕರಿಗೆ ನೀಡುತ್ತಿದ್ದೇವೆ. ಹೆಚ್ಚಿನ ಕಡೆ ತಂಡದ ಸದಸ್ಯರು ಸಸಿಗಳನ್ನು ನೆಟ್ಟು ಸಂರಕ್ಷಿಸುತ್ತಿದ್ದಾರೆ ಎಂದು ತಂಡದ ಸದಸ್ಯರು ತಿಳಿಸಿದ್ದಾರೆ.

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು. ಇದರ ಹೊರತಾಗಿ GIVE ತಂಡ ಯಾವುದೇ ಆರ್ಥಿಕ ಸಹಾಯವನ್ನು ಸ್ವೀಕರಿಸುವುದಿಲ್ಲ‌ ಎಂದು ತಂಡದ ಸ್ವಯಂಸೇವಕರಾದ ಸಂತೋಷ್ ಹೇಳುತ್ತಾರೆ.

ಸದ್ಯ GIVE ತಂಡದ ಸದಸ್ಯರು ಬೆಂಗಳೂರು ನಗರದ ಆನೇಕಲ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಭಾಗದ ಅಪಾರ್ಟ್ ಮೆಂಟ್ ಗಳಲ್ಲಿ ಮತ್ತು ಅಪಾರ್ಟ್ ಮೆಂಟ್ ಸುತ್ತಮುತ್ತ ಹಣ್ಣಿನ ಗಿಡಗಳು ಮತ್ತು ಕಾಳಿನ ಗಿಡಗಳನ್ನು ಬೆಳೆಸುವಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಯಾರೇ ನಾಗರಿಕರು ಗಿಡ ಮರಗಳನ್ನು ಬೆಳೆಸಿ ಪಕ್ಷಿಗಳಿಗೆ ನೈಸರ್ಗಿಕ ಆಹಾರ ಒದಗಿಸಲು ಮುಂದಾದರೆ ಅವರಿಗೆ ಸಹಾಯ ಮಾಡಲು GIVE ತಂಡ ಸಿದ್ಧವಿದೆ ಎಂದು ಸದಸ್ಯರು ಹೇಳುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...