Homeಮುಖಪುಟಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು.

- Advertisement -
- Advertisement -

ಲಾಕ್‌ಡೌನ್‌ ಕಾರಣದಿಂದ ಬೆಂಗಳೂರಿನಲ್ಲಿ ಪಕ್ಷಿ ಮತ್ತು ಪ್ರಾಣಿಗಳಿಗೆ ಸರಿಯಾಗಿ ಕಾಳು ಮತ್ತಿತರ ಆಹಾರ ಸಿಗುತ್ತಿಲ್ಲ. ಲಾಕ್‌ಡೌನ್‌ನ ನಡುವೆಯೂ ಇಲ್ಲೊಂದು ಪರಿಸರ ಪ್ರೇಮಿಗಳ ತಂಡ ಹಕ್ಕಿಗಳಿಗೆ ಕಾಳೂಣಿಸುವ ಕೆಲಸವನ್ನು ಸದ್ದಿಲ್ಲದೇ ಮಾಡುತ್ತಾ, ಪ್ರಾಣಿ- ಪಕ್ಷಿಗಳಿಗೆ ಆಹಾರ ಒದಗಿಸಲು ಶ್ರಮಪಡುತ್ತಿದೆ.

ರೆಸಿಡೆಂಟ್ಸ್‌ ವೆಲ್ಫೇರ್ ಅಸೋಸಿಯೇಶನ್‌ ಸಂಸ್ಥೆಯ ನೆರವಿನೊಂದಿಗೆ ಬೆಂಗಳೂರಿನ ಗ್ರೀನ್‌ ಇಂಡಸ್‌ ವಾಲಂಟೀಯರ್ಸ್‌ ಫಾರ್‌ ಎನ್ವಿರಾನ್ಮೆಂಟ್‌ (GIVE) ತಂಡದ ಸದಸ್ಯರು ಬೆಂಗಳೂರು ನಗರದ ಖಾಲಿ ಇರುವ ಪ್ರದೇಶಗಳಲ್ಲಿ ಹಣ್ಣು ಬಿಡುವ ಗಿಡಗಳನ್ನು ಹಾಗೂ ಕಾಳಿನ ಗಿಡಗಳನ್ನು ನೆಡುತ್ತಿದ್ದಾರೆ. ಆ ಮೂಲಕ ಹಕ್ಕಿ ಪಕ್ಷಿಗಳಿಗೆ ಹಸಿರೊದಗಿಸುವ ಮತ್ತು ಹಸಿವು ನೀಗಿಸುವ ಅಪರೂಪದ ಕೆಲಸವನ್ನು ಈ ಸ್ವಯಂ ಸೇವಕರ ತಂಡ ಮಾಡುತ್ತಿದೆ. ಗ್ರೀನ್‌ ಇಂಡಸ್‌ ತಂಡದ ಪರಿಸರ ಕಾಳಜಿಗೆ ಮತ್ತು ಪಕ್ಷಿಪ್ರಾಣಿಗಳ ಮೇಲಿನ ಪ್ರೇಮ ಕಂಡು ಬೆಂಗಳೂರಿನ ಅನೇಕ ನಾಗರೀಕರು ಈ ತಂಡಕ್ಕೆ ಸಹಾಯ ನೀಡುತ್ತಿದ್ದಾರೆ.

ಹಕ್ಕಿಗಳಿಗಾಗಿ ನೈಸರ್ಗಿಕ ಆಹಾರೋದ್ಯಾನಗಳನ್ನು ನಿರ್ಮಿಸುವ ಗ್ರೀನ್ ಇಂಡಸ್ ತಂಡದ ಯೋಜನೆಯ ಮೊದಲ ಹಂತ ಈಗಾಗಲೇ ಆರಂಭವಾಗಿದೆ. ಯೋಜನೆಯ ಮೊದಲ ಭಾಗವಾಗಿ ಬೆಂಗಳೂರಿನ ಮುತನಲ್ಲೂರು ಕೆರೆ ಸುತ್ತ ಮುತ್ತ ನೂರಾರು ಹಣ್ಣಿನ ಗಿಡಗಳನ್ನು ನೆಡಲಾಗಿದೆ. ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸಂಸ್ಥೆಯ ಸದಸ್ಯರೂ ಕೂಡ GIVE ತಂಡದ ಈ ಪ್ರಯತ್ನಕ್ಕೆ ಜೊತೆ ನೀಡಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ಹತ್ತಾರು ಕೆರೆಗಳನ್ನು ಅತಿಕ್ರಮವಾಗಿ ಕಬಳಿಸಿರುವ ಘಟನೆಗಳು ನಡೆದಿವೆ. ಕೆರೆ ಸುತ್ತಮುತ್ತದ ಅಕ್ರಮ ಒತ್ತುವರಿ ಪ್ರದೇಶವನ್ನು ಗುರುತಿಸಿ ಅಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕೆಲಸ ನಮ್ಮ ತಂಡ ಮಾಡುತ್ತಿದೆ. 30% ಅಕ್ರಮ ಒತ್ತುವರಿಯಾಗಿರುವ ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸಲು ಸರ್ಕಾರದ ಜೊತೆ ಕೈಜೋಡಿಸಿದ್ದೇವೆ ಎಂದು ಗೀವ್ ಇಂಡಿಯಾದ ಸ್ವಯಂ ಸೇವಕರು ಹೇಳುತ್ತಾರೆ.

GIVE ತಂಡದ ಸದಸ್ಯರು ಹೆಚ್ಚಾಗಿ ಚಿಕ್ಕು, ಜಾಂಬಳೆ, ನೇರಳೆ, ಮಾವು, ಹಲಸು ಮುಂತಾದ ಗಿಡಗಳನ್ನು ರೈತರಿಂದ ಪಡೆದು ಅದನ್ನು‌ ನೆಟ್ಟು ಪೋಷಿಸುವ ಆಸಕ್ತ ನಾಗರಿಕರಿಗೆ ನೀಡುತ್ತಿದ್ದೇವೆ. ಹೆಚ್ಚಿನ ಕಡೆ ತಂಡದ ಸದಸ್ಯರು ಸಸಿಗಳನ್ನು ನೆಟ್ಟು ಸಂರಕ್ಷಿಸುತ್ತಿದ್ದಾರೆ ಎಂದು ತಂಡದ ಸದಸ್ಯರು ತಿಳಿಸಿದ್ದಾರೆ.

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು. ಇದರ ಹೊರತಾಗಿ GIVE ತಂಡ ಯಾವುದೇ ಆರ್ಥಿಕ ಸಹಾಯವನ್ನು ಸ್ವೀಕರಿಸುವುದಿಲ್ಲ‌ ಎಂದು ತಂಡದ ಸ್ವಯಂಸೇವಕರಾದ ಸಂತೋಷ್ ಹೇಳುತ್ತಾರೆ.

ಸದ್ಯ GIVE ತಂಡದ ಸದಸ್ಯರು ಬೆಂಗಳೂರು ನಗರದ ಆನೇಕಲ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಭಾಗದ ಅಪಾರ್ಟ್ ಮೆಂಟ್ ಗಳಲ್ಲಿ ಮತ್ತು ಅಪಾರ್ಟ್ ಮೆಂಟ್ ಸುತ್ತಮುತ್ತ ಹಣ್ಣಿನ ಗಿಡಗಳು ಮತ್ತು ಕಾಳಿನ ಗಿಡಗಳನ್ನು ಬೆಳೆಸುವಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಯಾರೇ ನಾಗರಿಕರು ಗಿಡ ಮರಗಳನ್ನು ಬೆಳೆಸಿ ಪಕ್ಷಿಗಳಿಗೆ ನೈಸರ್ಗಿಕ ಆಹಾರ ಒದಗಿಸಲು ಮುಂದಾದರೆ ಅವರಿಗೆ ಸಹಾಯ ಮಾಡಲು GIVE ತಂಡ ಸಿದ್ಧವಿದೆ ಎಂದು ಸದಸ್ಯರು ಹೇಳುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...