Homeಮುಖಪುಟಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು.

- Advertisement -
- Advertisement -

ಲಾಕ್‌ಡೌನ್‌ ಕಾರಣದಿಂದ ಬೆಂಗಳೂರಿನಲ್ಲಿ ಪಕ್ಷಿ ಮತ್ತು ಪ್ರಾಣಿಗಳಿಗೆ ಸರಿಯಾಗಿ ಕಾಳು ಮತ್ತಿತರ ಆಹಾರ ಸಿಗುತ್ತಿಲ್ಲ. ಲಾಕ್‌ಡೌನ್‌ನ ನಡುವೆಯೂ ಇಲ್ಲೊಂದು ಪರಿಸರ ಪ್ರೇಮಿಗಳ ತಂಡ ಹಕ್ಕಿಗಳಿಗೆ ಕಾಳೂಣಿಸುವ ಕೆಲಸವನ್ನು ಸದ್ದಿಲ್ಲದೇ ಮಾಡುತ್ತಾ, ಪ್ರಾಣಿ- ಪಕ್ಷಿಗಳಿಗೆ ಆಹಾರ ಒದಗಿಸಲು ಶ್ರಮಪಡುತ್ತಿದೆ.

ರೆಸಿಡೆಂಟ್ಸ್‌ ವೆಲ್ಫೇರ್ ಅಸೋಸಿಯೇಶನ್‌ ಸಂಸ್ಥೆಯ ನೆರವಿನೊಂದಿಗೆ ಬೆಂಗಳೂರಿನ ಗ್ರೀನ್‌ ಇಂಡಸ್‌ ವಾಲಂಟೀಯರ್ಸ್‌ ಫಾರ್‌ ಎನ್ವಿರಾನ್ಮೆಂಟ್‌ (GIVE) ತಂಡದ ಸದಸ್ಯರು ಬೆಂಗಳೂರು ನಗರದ ಖಾಲಿ ಇರುವ ಪ್ರದೇಶಗಳಲ್ಲಿ ಹಣ್ಣು ಬಿಡುವ ಗಿಡಗಳನ್ನು ಹಾಗೂ ಕಾಳಿನ ಗಿಡಗಳನ್ನು ನೆಡುತ್ತಿದ್ದಾರೆ. ಆ ಮೂಲಕ ಹಕ್ಕಿ ಪಕ್ಷಿಗಳಿಗೆ ಹಸಿರೊದಗಿಸುವ ಮತ್ತು ಹಸಿವು ನೀಗಿಸುವ ಅಪರೂಪದ ಕೆಲಸವನ್ನು ಈ ಸ್ವಯಂ ಸೇವಕರ ತಂಡ ಮಾಡುತ್ತಿದೆ. ಗ್ರೀನ್‌ ಇಂಡಸ್‌ ತಂಡದ ಪರಿಸರ ಕಾಳಜಿಗೆ ಮತ್ತು ಪಕ್ಷಿಪ್ರಾಣಿಗಳ ಮೇಲಿನ ಪ್ರೇಮ ಕಂಡು ಬೆಂಗಳೂರಿನ ಅನೇಕ ನಾಗರೀಕರು ಈ ತಂಡಕ್ಕೆ ಸಹಾಯ ನೀಡುತ್ತಿದ್ದಾರೆ.

ಹಕ್ಕಿಗಳಿಗಾಗಿ ನೈಸರ್ಗಿಕ ಆಹಾರೋದ್ಯಾನಗಳನ್ನು ನಿರ್ಮಿಸುವ ಗ್ರೀನ್ ಇಂಡಸ್ ತಂಡದ ಯೋಜನೆಯ ಮೊದಲ ಹಂತ ಈಗಾಗಲೇ ಆರಂಭವಾಗಿದೆ. ಯೋಜನೆಯ ಮೊದಲ ಭಾಗವಾಗಿ ಬೆಂಗಳೂರಿನ ಮುತನಲ್ಲೂರು ಕೆರೆ ಸುತ್ತ ಮುತ್ತ ನೂರಾರು ಹಣ್ಣಿನ ಗಿಡಗಳನ್ನು ನೆಡಲಾಗಿದೆ. ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸಂಸ್ಥೆಯ ಸದಸ್ಯರೂ ಕೂಡ GIVE ತಂಡದ ಈ ಪ್ರಯತ್ನಕ್ಕೆ ಜೊತೆ ನೀಡಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ಹತ್ತಾರು ಕೆರೆಗಳನ್ನು ಅತಿಕ್ರಮವಾಗಿ ಕಬಳಿಸಿರುವ ಘಟನೆಗಳು ನಡೆದಿವೆ. ಕೆರೆ ಸುತ್ತಮುತ್ತದ ಅಕ್ರಮ ಒತ್ತುವರಿ ಪ್ರದೇಶವನ್ನು ಗುರುತಿಸಿ ಅಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕೆಲಸ ನಮ್ಮ ತಂಡ ಮಾಡುತ್ತಿದೆ. 30% ಅಕ್ರಮ ಒತ್ತುವರಿಯಾಗಿರುವ ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸಲು ಸರ್ಕಾರದ ಜೊತೆ ಕೈಜೋಡಿಸಿದ್ದೇವೆ ಎಂದು ಗೀವ್ ಇಂಡಿಯಾದ ಸ್ವಯಂ ಸೇವಕರು ಹೇಳುತ್ತಾರೆ.

GIVE ತಂಡದ ಸದಸ್ಯರು ಹೆಚ್ಚಾಗಿ ಚಿಕ್ಕು, ಜಾಂಬಳೆ, ನೇರಳೆ, ಮಾವು, ಹಲಸು ಮುಂತಾದ ಗಿಡಗಳನ್ನು ರೈತರಿಂದ ಪಡೆದು ಅದನ್ನು‌ ನೆಟ್ಟು ಪೋಷಿಸುವ ಆಸಕ್ತ ನಾಗರಿಕರಿಗೆ ನೀಡುತ್ತಿದ್ದೇವೆ. ಹೆಚ್ಚಿನ ಕಡೆ ತಂಡದ ಸದಸ್ಯರು ಸಸಿಗಳನ್ನು ನೆಟ್ಟು ಸಂರಕ್ಷಿಸುತ್ತಿದ್ದಾರೆ ಎಂದು ತಂಡದ ಸದಸ್ಯರು ತಿಳಿಸಿದ್ದಾರೆ.

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು. ಇದರ ಹೊರತಾಗಿ GIVE ತಂಡ ಯಾವುದೇ ಆರ್ಥಿಕ ಸಹಾಯವನ್ನು ಸ್ವೀಕರಿಸುವುದಿಲ್ಲ‌ ಎಂದು ತಂಡದ ಸ್ವಯಂಸೇವಕರಾದ ಸಂತೋಷ್ ಹೇಳುತ್ತಾರೆ.

ಸದ್ಯ GIVE ತಂಡದ ಸದಸ್ಯರು ಬೆಂಗಳೂರು ನಗರದ ಆನೇಕಲ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಭಾಗದ ಅಪಾರ್ಟ್ ಮೆಂಟ್ ಗಳಲ್ಲಿ ಮತ್ತು ಅಪಾರ್ಟ್ ಮೆಂಟ್ ಸುತ್ತಮುತ್ತ ಹಣ್ಣಿನ ಗಿಡಗಳು ಮತ್ತು ಕಾಳಿನ ಗಿಡಗಳನ್ನು ಬೆಳೆಸುವಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಯಾರೇ ನಾಗರಿಕರು ಗಿಡ ಮರಗಳನ್ನು ಬೆಳೆಸಿ ಪಕ್ಷಿಗಳಿಗೆ ನೈಸರ್ಗಿಕ ಆಹಾರ ಒದಗಿಸಲು ಮುಂದಾದರೆ ಅವರಿಗೆ ಸಹಾಯ ಮಾಡಲು GIVE ತಂಡ ಸಿದ್ಧವಿದೆ ಎಂದು ಸದಸ್ಯರು ಹೇಳುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...