Homeಮುಖಪುಟಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು.

- Advertisement -
- Advertisement -

ಲಾಕ್‌ಡೌನ್‌ ಕಾರಣದಿಂದ ಬೆಂಗಳೂರಿನಲ್ಲಿ ಪಕ್ಷಿ ಮತ್ತು ಪ್ರಾಣಿಗಳಿಗೆ ಸರಿಯಾಗಿ ಕಾಳು ಮತ್ತಿತರ ಆಹಾರ ಸಿಗುತ್ತಿಲ್ಲ. ಲಾಕ್‌ಡೌನ್‌ನ ನಡುವೆಯೂ ಇಲ್ಲೊಂದು ಪರಿಸರ ಪ್ರೇಮಿಗಳ ತಂಡ ಹಕ್ಕಿಗಳಿಗೆ ಕಾಳೂಣಿಸುವ ಕೆಲಸವನ್ನು ಸದ್ದಿಲ್ಲದೇ ಮಾಡುತ್ತಾ, ಪ್ರಾಣಿ- ಪಕ್ಷಿಗಳಿಗೆ ಆಹಾರ ಒದಗಿಸಲು ಶ್ರಮಪಡುತ್ತಿದೆ.

ರೆಸಿಡೆಂಟ್ಸ್‌ ವೆಲ್ಫೇರ್ ಅಸೋಸಿಯೇಶನ್‌ ಸಂಸ್ಥೆಯ ನೆರವಿನೊಂದಿಗೆ ಬೆಂಗಳೂರಿನ ಗ್ರೀನ್‌ ಇಂಡಸ್‌ ವಾಲಂಟೀಯರ್ಸ್‌ ಫಾರ್‌ ಎನ್ವಿರಾನ್ಮೆಂಟ್‌ (GIVE) ತಂಡದ ಸದಸ್ಯರು ಬೆಂಗಳೂರು ನಗರದ ಖಾಲಿ ಇರುವ ಪ್ರದೇಶಗಳಲ್ಲಿ ಹಣ್ಣು ಬಿಡುವ ಗಿಡಗಳನ್ನು ಹಾಗೂ ಕಾಳಿನ ಗಿಡಗಳನ್ನು ನೆಡುತ್ತಿದ್ದಾರೆ. ಆ ಮೂಲಕ ಹಕ್ಕಿ ಪಕ್ಷಿಗಳಿಗೆ ಹಸಿರೊದಗಿಸುವ ಮತ್ತು ಹಸಿವು ನೀಗಿಸುವ ಅಪರೂಪದ ಕೆಲಸವನ್ನು ಈ ಸ್ವಯಂ ಸೇವಕರ ತಂಡ ಮಾಡುತ್ತಿದೆ. ಗ್ರೀನ್‌ ಇಂಡಸ್‌ ತಂಡದ ಪರಿಸರ ಕಾಳಜಿಗೆ ಮತ್ತು ಪಕ್ಷಿಪ್ರಾಣಿಗಳ ಮೇಲಿನ ಪ್ರೇಮ ಕಂಡು ಬೆಂಗಳೂರಿನ ಅನೇಕ ನಾಗರೀಕರು ಈ ತಂಡಕ್ಕೆ ಸಹಾಯ ನೀಡುತ್ತಿದ್ದಾರೆ.

ಹಕ್ಕಿಗಳಿಗಾಗಿ ನೈಸರ್ಗಿಕ ಆಹಾರೋದ್ಯಾನಗಳನ್ನು ನಿರ್ಮಿಸುವ ಗ್ರೀನ್ ಇಂಡಸ್ ತಂಡದ ಯೋಜನೆಯ ಮೊದಲ ಹಂತ ಈಗಾಗಲೇ ಆರಂಭವಾಗಿದೆ. ಯೋಜನೆಯ ಮೊದಲ ಭಾಗವಾಗಿ ಬೆಂಗಳೂರಿನ ಮುತನಲ್ಲೂರು ಕೆರೆ ಸುತ್ತ ಮುತ್ತ ನೂರಾರು ಹಣ್ಣಿನ ಗಿಡಗಳನ್ನು ನೆಡಲಾಗಿದೆ. ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸಂಸ್ಥೆಯ ಸದಸ್ಯರೂ ಕೂಡ GIVE ತಂಡದ ಈ ಪ್ರಯತ್ನಕ್ಕೆ ಜೊತೆ ನೀಡಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ಹತ್ತಾರು ಕೆರೆಗಳನ್ನು ಅತಿಕ್ರಮವಾಗಿ ಕಬಳಿಸಿರುವ ಘಟನೆಗಳು ನಡೆದಿವೆ. ಕೆರೆ ಸುತ್ತಮುತ್ತದ ಅಕ್ರಮ ಒತ್ತುವರಿ ಪ್ರದೇಶವನ್ನು ಗುರುತಿಸಿ ಅಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕೆಲಸ ನಮ್ಮ ತಂಡ ಮಾಡುತ್ತಿದೆ. 30% ಅಕ್ರಮ ಒತ್ತುವರಿಯಾಗಿರುವ ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸಲು ಸರ್ಕಾರದ ಜೊತೆ ಕೈಜೋಡಿಸಿದ್ದೇವೆ ಎಂದು ಗೀವ್ ಇಂಡಿಯಾದ ಸ್ವಯಂ ಸೇವಕರು ಹೇಳುತ್ತಾರೆ.

GIVE ತಂಡದ ಸದಸ್ಯರು ಹೆಚ್ಚಾಗಿ ಚಿಕ್ಕು, ಜಾಂಬಳೆ, ನೇರಳೆ, ಮಾವು, ಹಲಸು ಮುಂತಾದ ಗಿಡಗಳನ್ನು ರೈತರಿಂದ ಪಡೆದು ಅದನ್ನು‌ ನೆಟ್ಟು ಪೋಷಿಸುವ ಆಸಕ್ತ ನಾಗರಿಕರಿಗೆ ನೀಡುತ್ತಿದ್ದೇವೆ. ಹೆಚ್ಚಿನ ಕಡೆ ತಂಡದ ಸದಸ್ಯರು ಸಸಿಗಳನ್ನು ನೆಟ್ಟು ಸಂರಕ್ಷಿಸುತ್ತಿದ್ದಾರೆ ಎಂದು ತಂಡದ ಸದಸ್ಯರು ತಿಳಿಸಿದ್ದಾರೆ.

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು. ಇದರ ಹೊರತಾಗಿ GIVE ತಂಡ ಯಾವುದೇ ಆರ್ಥಿಕ ಸಹಾಯವನ್ನು ಸ್ವೀಕರಿಸುವುದಿಲ್ಲ‌ ಎಂದು ತಂಡದ ಸ್ವಯಂಸೇವಕರಾದ ಸಂತೋಷ್ ಹೇಳುತ್ತಾರೆ.

ಸದ್ಯ GIVE ತಂಡದ ಸದಸ್ಯರು ಬೆಂಗಳೂರು ನಗರದ ಆನೇಕಲ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಭಾಗದ ಅಪಾರ್ಟ್ ಮೆಂಟ್ ಗಳಲ್ಲಿ ಮತ್ತು ಅಪಾರ್ಟ್ ಮೆಂಟ್ ಸುತ್ತಮುತ್ತ ಹಣ್ಣಿನ ಗಿಡಗಳು ಮತ್ತು ಕಾಳಿನ ಗಿಡಗಳನ್ನು ಬೆಳೆಸುವಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಯಾರೇ ನಾಗರಿಕರು ಗಿಡ ಮರಗಳನ್ನು ಬೆಳೆಸಿ ಪಕ್ಷಿಗಳಿಗೆ ನೈಸರ್ಗಿಕ ಆಹಾರ ಒದಗಿಸಲು ಮುಂದಾದರೆ ಅವರಿಗೆ ಸಹಾಯ ಮಾಡಲು GIVE ತಂಡ ಸಿದ್ಧವಿದೆ ಎಂದು ಸದಸ್ಯರು ಹೇಳುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...