Homeಮುಖಪುಟಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು.

- Advertisement -
- Advertisement -

ಲಾಕ್‌ಡೌನ್‌ ಕಾರಣದಿಂದ ಬೆಂಗಳೂರಿನಲ್ಲಿ ಪಕ್ಷಿ ಮತ್ತು ಪ್ರಾಣಿಗಳಿಗೆ ಸರಿಯಾಗಿ ಕಾಳು ಮತ್ತಿತರ ಆಹಾರ ಸಿಗುತ್ತಿಲ್ಲ. ಲಾಕ್‌ಡೌನ್‌ನ ನಡುವೆಯೂ ಇಲ್ಲೊಂದು ಪರಿಸರ ಪ್ರೇಮಿಗಳ ತಂಡ ಹಕ್ಕಿಗಳಿಗೆ ಕಾಳೂಣಿಸುವ ಕೆಲಸವನ್ನು ಸದ್ದಿಲ್ಲದೇ ಮಾಡುತ್ತಾ, ಪ್ರಾಣಿ- ಪಕ್ಷಿಗಳಿಗೆ ಆಹಾರ ಒದಗಿಸಲು ಶ್ರಮಪಡುತ್ತಿದೆ.

ರೆಸಿಡೆಂಟ್ಸ್‌ ವೆಲ್ಫೇರ್ ಅಸೋಸಿಯೇಶನ್‌ ಸಂಸ್ಥೆಯ ನೆರವಿನೊಂದಿಗೆ ಬೆಂಗಳೂರಿನ ಗ್ರೀನ್‌ ಇಂಡಸ್‌ ವಾಲಂಟೀಯರ್ಸ್‌ ಫಾರ್‌ ಎನ್ವಿರಾನ್ಮೆಂಟ್‌ (GIVE) ತಂಡದ ಸದಸ್ಯರು ಬೆಂಗಳೂರು ನಗರದ ಖಾಲಿ ಇರುವ ಪ್ರದೇಶಗಳಲ್ಲಿ ಹಣ್ಣು ಬಿಡುವ ಗಿಡಗಳನ್ನು ಹಾಗೂ ಕಾಳಿನ ಗಿಡಗಳನ್ನು ನೆಡುತ್ತಿದ್ದಾರೆ. ಆ ಮೂಲಕ ಹಕ್ಕಿ ಪಕ್ಷಿಗಳಿಗೆ ಹಸಿರೊದಗಿಸುವ ಮತ್ತು ಹಸಿವು ನೀಗಿಸುವ ಅಪರೂಪದ ಕೆಲಸವನ್ನು ಈ ಸ್ವಯಂ ಸೇವಕರ ತಂಡ ಮಾಡುತ್ತಿದೆ. ಗ್ರೀನ್‌ ಇಂಡಸ್‌ ತಂಡದ ಪರಿಸರ ಕಾಳಜಿಗೆ ಮತ್ತು ಪಕ್ಷಿಪ್ರಾಣಿಗಳ ಮೇಲಿನ ಪ್ರೇಮ ಕಂಡು ಬೆಂಗಳೂರಿನ ಅನೇಕ ನಾಗರೀಕರು ಈ ತಂಡಕ್ಕೆ ಸಹಾಯ ನೀಡುತ್ತಿದ್ದಾರೆ.

ಹಕ್ಕಿಗಳಿಗಾಗಿ ನೈಸರ್ಗಿಕ ಆಹಾರೋದ್ಯಾನಗಳನ್ನು ನಿರ್ಮಿಸುವ ಗ್ರೀನ್ ಇಂಡಸ್ ತಂಡದ ಯೋಜನೆಯ ಮೊದಲ ಹಂತ ಈಗಾಗಲೇ ಆರಂಭವಾಗಿದೆ. ಯೋಜನೆಯ ಮೊದಲ ಭಾಗವಾಗಿ ಬೆಂಗಳೂರಿನ ಮುತನಲ್ಲೂರು ಕೆರೆ ಸುತ್ತ ಮುತ್ತ ನೂರಾರು ಹಣ್ಣಿನ ಗಿಡಗಳನ್ನು ನೆಡಲಾಗಿದೆ. ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸಂಸ್ಥೆಯ ಸದಸ್ಯರೂ ಕೂಡ GIVE ತಂಡದ ಈ ಪ್ರಯತ್ನಕ್ಕೆ ಜೊತೆ ನೀಡಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ಹತ್ತಾರು ಕೆರೆಗಳನ್ನು ಅತಿಕ್ರಮವಾಗಿ ಕಬಳಿಸಿರುವ ಘಟನೆಗಳು ನಡೆದಿವೆ. ಕೆರೆ ಸುತ್ತಮುತ್ತದ ಅಕ್ರಮ ಒತ್ತುವರಿ ಪ್ರದೇಶವನ್ನು ಗುರುತಿಸಿ ಅಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕೆಲಸ ನಮ್ಮ ತಂಡ ಮಾಡುತ್ತಿದೆ. 30% ಅಕ್ರಮ ಒತ್ತುವರಿಯಾಗಿರುವ ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸಲು ಸರ್ಕಾರದ ಜೊತೆ ಕೈಜೋಡಿಸಿದ್ದೇವೆ ಎಂದು ಗೀವ್ ಇಂಡಿಯಾದ ಸ್ವಯಂ ಸೇವಕರು ಹೇಳುತ್ತಾರೆ.

GIVE ತಂಡದ ಸದಸ್ಯರು ಹೆಚ್ಚಾಗಿ ಚಿಕ್ಕು, ಜಾಂಬಳೆ, ನೇರಳೆ, ಮಾವು, ಹಲಸು ಮುಂತಾದ ಗಿಡಗಳನ್ನು ರೈತರಿಂದ ಪಡೆದು ಅದನ್ನು‌ ನೆಟ್ಟು ಪೋಷಿಸುವ ಆಸಕ್ತ ನಾಗರಿಕರಿಗೆ ನೀಡುತ್ತಿದ್ದೇವೆ. ಹೆಚ್ಚಿನ ಕಡೆ ತಂಡದ ಸದಸ್ಯರು ಸಸಿಗಳನ್ನು ನೆಟ್ಟು ಸಂರಕ್ಷಿಸುತ್ತಿದ್ದಾರೆ ಎಂದು ತಂಡದ ಸದಸ್ಯರು ತಿಳಿಸಿದ್ದಾರೆ.

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು. ಇದರ ಹೊರತಾಗಿ GIVE ತಂಡ ಯಾವುದೇ ಆರ್ಥಿಕ ಸಹಾಯವನ್ನು ಸ್ವೀಕರಿಸುವುದಿಲ್ಲ‌ ಎಂದು ತಂಡದ ಸ್ವಯಂಸೇವಕರಾದ ಸಂತೋಷ್ ಹೇಳುತ್ತಾರೆ.

ಸದ್ಯ GIVE ತಂಡದ ಸದಸ್ಯರು ಬೆಂಗಳೂರು ನಗರದ ಆನೇಕಲ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಭಾಗದ ಅಪಾರ್ಟ್ ಮೆಂಟ್ ಗಳಲ್ಲಿ ಮತ್ತು ಅಪಾರ್ಟ್ ಮೆಂಟ್ ಸುತ್ತಮುತ್ತ ಹಣ್ಣಿನ ಗಿಡಗಳು ಮತ್ತು ಕಾಳಿನ ಗಿಡಗಳನ್ನು ಬೆಳೆಸುವಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಯಾರೇ ನಾಗರಿಕರು ಗಿಡ ಮರಗಳನ್ನು ಬೆಳೆಸಿ ಪಕ್ಷಿಗಳಿಗೆ ನೈಸರ್ಗಿಕ ಆಹಾರ ಒದಗಿಸಲು ಮುಂದಾದರೆ ಅವರಿಗೆ ಸಹಾಯ ಮಾಡಲು GIVE ತಂಡ ಸಿದ್ಧವಿದೆ ಎಂದು ಸದಸ್ಯರು ಹೇಳುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...