Homeಮುಖಪುಟಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು.

- Advertisement -
- Advertisement -

ಲಾಕ್‌ಡೌನ್‌ ಕಾರಣದಿಂದ ಬೆಂಗಳೂರಿನಲ್ಲಿ ಪಕ್ಷಿ ಮತ್ತು ಪ್ರಾಣಿಗಳಿಗೆ ಸರಿಯಾಗಿ ಕಾಳು ಮತ್ತಿತರ ಆಹಾರ ಸಿಗುತ್ತಿಲ್ಲ. ಲಾಕ್‌ಡೌನ್‌ನ ನಡುವೆಯೂ ಇಲ್ಲೊಂದು ಪರಿಸರ ಪ್ರೇಮಿಗಳ ತಂಡ ಹಕ್ಕಿಗಳಿಗೆ ಕಾಳೂಣಿಸುವ ಕೆಲಸವನ್ನು ಸದ್ದಿಲ್ಲದೇ ಮಾಡುತ್ತಾ, ಪ್ರಾಣಿ- ಪಕ್ಷಿಗಳಿಗೆ ಆಹಾರ ಒದಗಿಸಲು ಶ್ರಮಪಡುತ್ತಿದೆ.

ರೆಸಿಡೆಂಟ್ಸ್‌ ವೆಲ್ಫೇರ್ ಅಸೋಸಿಯೇಶನ್‌ ಸಂಸ್ಥೆಯ ನೆರವಿನೊಂದಿಗೆ ಬೆಂಗಳೂರಿನ ಗ್ರೀನ್‌ ಇಂಡಸ್‌ ವಾಲಂಟೀಯರ್ಸ್‌ ಫಾರ್‌ ಎನ್ವಿರಾನ್ಮೆಂಟ್‌ (GIVE) ತಂಡದ ಸದಸ್ಯರು ಬೆಂಗಳೂರು ನಗರದ ಖಾಲಿ ಇರುವ ಪ್ರದೇಶಗಳಲ್ಲಿ ಹಣ್ಣು ಬಿಡುವ ಗಿಡಗಳನ್ನು ಹಾಗೂ ಕಾಳಿನ ಗಿಡಗಳನ್ನು ನೆಡುತ್ತಿದ್ದಾರೆ. ಆ ಮೂಲಕ ಹಕ್ಕಿ ಪಕ್ಷಿಗಳಿಗೆ ಹಸಿರೊದಗಿಸುವ ಮತ್ತು ಹಸಿವು ನೀಗಿಸುವ ಅಪರೂಪದ ಕೆಲಸವನ್ನು ಈ ಸ್ವಯಂ ಸೇವಕರ ತಂಡ ಮಾಡುತ್ತಿದೆ. ಗ್ರೀನ್‌ ಇಂಡಸ್‌ ತಂಡದ ಪರಿಸರ ಕಾಳಜಿಗೆ ಮತ್ತು ಪಕ್ಷಿಪ್ರಾಣಿಗಳ ಮೇಲಿನ ಪ್ರೇಮ ಕಂಡು ಬೆಂಗಳೂರಿನ ಅನೇಕ ನಾಗರೀಕರು ಈ ತಂಡಕ್ಕೆ ಸಹಾಯ ನೀಡುತ್ತಿದ್ದಾರೆ.

ಹಕ್ಕಿಗಳಿಗಾಗಿ ನೈಸರ್ಗಿಕ ಆಹಾರೋದ್ಯಾನಗಳನ್ನು ನಿರ್ಮಿಸುವ ಗ್ರೀನ್ ಇಂಡಸ್ ತಂಡದ ಯೋಜನೆಯ ಮೊದಲ ಹಂತ ಈಗಾಗಲೇ ಆರಂಭವಾಗಿದೆ. ಯೋಜನೆಯ ಮೊದಲ ಭಾಗವಾಗಿ ಬೆಂಗಳೂರಿನ ಮುತನಲ್ಲೂರು ಕೆರೆ ಸುತ್ತ ಮುತ್ತ ನೂರಾರು ಹಣ್ಣಿನ ಗಿಡಗಳನ್ನು ನೆಡಲಾಗಿದೆ. ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸಂಸ್ಥೆಯ ಸದಸ್ಯರೂ ಕೂಡ GIVE ತಂಡದ ಈ ಪ್ರಯತ್ನಕ್ಕೆ ಜೊತೆ ನೀಡಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ಹತ್ತಾರು ಕೆರೆಗಳನ್ನು ಅತಿಕ್ರಮವಾಗಿ ಕಬಳಿಸಿರುವ ಘಟನೆಗಳು ನಡೆದಿವೆ. ಕೆರೆ ಸುತ್ತಮುತ್ತದ ಅಕ್ರಮ ಒತ್ತುವರಿ ಪ್ರದೇಶವನ್ನು ಗುರುತಿಸಿ ಅಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕೆಲಸ ನಮ್ಮ ತಂಡ ಮಾಡುತ್ತಿದೆ. 30% ಅಕ್ರಮ ಒತ್ತುವರಿಯಾಗಿರುವ ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸಲು ಸರ್ಕಾರದ ಜೊತೆ ಕೈಜೋಡಿಸಿದ್ದೇವೆ ಎಂದು ಗೀವ್ ಇಂಡಿಯಾದ ಸ್ವಯಂ ಸೇವಕರು ಹೇಳುತ್ತಾರೆ.

GIVE ತಂಡದ ಸದಸ್ಯರು ಹೆಚ್ಚಾಗಿ ಚಿಕ್ಕು, ಜಾಂಬಳೆ, ನೇರಳೆ, ಮಾವು, ಹಲಸು ಮುಂತಾದ ಗಿಡಗಳನ್ನು ರೈತರಿಂದ ಪಡೆದು ಅದನ್ನು‌ ನೆಟ್ಟು ಪೋಷಿಸುವ ಆಸಕ್ತ ನಾಗರಿಕರಿಗೆ ನೀಡುತ್ತಿದ್ದೇವೆ. ಹೆಚ್ಚಿನ ಕಡೆ ತಂಡದ ಸದಸ್ಯರು ಸಸಿಗಳನ್ನು ನೆಟ್ಟು ಸಂರಕ್ಷಿಸುತ್ತಿದ್ದಾರೆ ಎಂದು ತಂಡದ ಸದಸ್ಯರು ತಿಳಿಸಿದ್ದಾರೆ.

ಗೀವ್ ತಂಡಕ್ಕೆ ಯಾರು ಬೇಕಾದರೂ ಹಣ್ಣಿನ ಸಸಿಗಳನ್ನು ದೇಣಿಗೆ ನೀಡಬಹುದು. ಆ ಸಸಿಗಳನ್ನು ಜೋಪಾನವಾಗಿ ಬೆಳೆಸುವ ಜವಬ್ದಾರಿ ತಂಡದ್ದು. ಇದರ ಹೊರತಾಗಿ GIVE ತಂಡ ಯಾವುದೇ ಆರ್ಥಿಕ ಸಹಾಯವನ್ನು ಸ್ವೀಕರಿಸುವುದಿಲ್ಲ‌ ಎಂದು ತಂಡದ ಸ್ವಯಂಸೇವಕರಾದ ಸಂತೋಷ್ ಹೇಳುತ್ತಾರೆ.

ಸದ್ಯ GIVE ತಂಡದ ಸದಸ್ಯರು ಬೆಂಗಳೂರು ನಗರದ ಆನೇಕಲ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಭಾಗದ ಅಪಾರ್ಟ್ ಮೆಂಟ್ ಗಳಲ್ಲಿ ಮತ್ತು ಅಪಾರ್ಟ್ ಮೆಂಟ್ ಸುತ್ತಮುತ್ತ ಹಣ್ಣಿನ ಗಿಡಗಳು ಮತ್ತು ಕಾಳಿನ ಗಿಡಗಳನ್ನು ಬೆಳೆಸುವಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಯಾರೇ ನಾಗರಿಕರು ಗಿಡ ಮರಗಳನ್ನು ಬೆಳೆಸಿ ಪಕ್ಷಿಗಳಿಗೆ ನೈಸರ್ಗಿಕ ಆಹಾರ ಒದಗಿಸಲು ಮುಂದಾದರೆ ಅವರಿಗೆ ಸಹಾಯ ಮಾಡಲು GIVE ತಂಡ ಸಿದ್ಧವಿದೆ ಎಂದು ಸದಸ್ಯರು ಹೇಳುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...