Homeಮುಖಪುಟವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

ವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

- Advertisement -
- Advertisement -

ಇದೊಂದು ದುರಂತ ಚಿತ್ರ. ಈಗಾಗಲೇ ಟ್ರಕ್‌ ಒಂದು ಮೂಟೆಗಳಿಂದ ಅರ್ಧ ತುಂಬಿದೆ. ಅದರ ಮೇಲೆ ಒಂದಷ್ಟು ಜನ ಹತ್ತಿ ನಿಂತಿದ್ದಾರೆ. ಇನ್ನು ಜನ ಹತ್ತುತ್ತಿದ್ದಾರೆ. ಯುವಕನೊಬ್ಬ ಟ್ರಕ್‌ನ ಅರ್ಧಭಾಗದಲ್ಲಿ ನಿಂತು ಒಂದು ಕೈಯಲ್ಲಿ ಟ್ರಕ್‌ಗೆ ಕಟ್ಟಿರುವ ಹಗ್ಗ ಹಿಡಿದುಕೊಂಡು ಇನ್ನೊಂದು ಕೈಯಿಂದ ಮಗುವೊಂದನ್ನು ಎತ್ತಿ ಟ್ರಕ್‌ ಮೇಲಿಡುತ್ತಿರುವ ಚಿತ್ರ ಎಂತವರ ಮನಸ್ಸನು ಕದಲಿಸುಬಿಡುತ್ತದೆ. ನಿನ್ನೆ ಇಂಟರ್ನೆಟ್‌ ತುಂಬೆಲ್ಲಾ ಈ ಚಿತ್ರ ಹರಿದಾಡಿದ್ದು ವಲಸೆ ಕಾರ್ಮಿಕರ ಬವಣೆಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿತ್ತು.

ಈ ಚಿತ್ರವು ಕೆಲಸವಿಲ್ಲದೇ, ಊಟವಿಲ್ಲದೇ ವಾಪಸ್‌ ತಮ್ಮೂರಿಗೆ ಹೊರಟ ವಲಸೆ ಕಾರ್ಮಿಕರ ಕರಾಳ ಸ್ಥಿತಿಯನ್ನು ನೆನಪಿಸುತ್ತದೆ. ಈ ಚಿತ್ರವನ್ನು ಚತ್ತೀಸ್‌ಘಡದಲ್ಲಿ ತೆಗೆಯಲಾಗಿದೆ. ಅದರ ವಿಡಿಯೋ ನೋಡಿದ್ದಲ್ಲಿ ಮತ್ತಷ್ಟು ದುರಂತ ನಮಗೆ ಕಾಣುತ್ತದೆ.

ಸುಮಾರು 20 ಸೆಕೆಂಡುಗಳ ಕ್ಲಿಪ್‌ನಲ್ಲಿ, ಆ ವ್ಯಕ್ತಿ ಮಗುವನ್ನು ಟ್ರಕ್‌ನಲ್ಲಿರುವ ಮತ್ತೊಬ್ಬ ಕಾರ್ಮಿಕನಿಗೆ ಹಸ್ತಾಂತರಿಸುತ್ತಾನೆ. ಆನಂತರ ಆತನು ಟ್ರಕ್‌ ಏರುತ್ತಾನೆ. ಅದೇ ಸಂದರ್ಭದಲ್ಲಿ ಹಲವಾರು ಮಹಿಳೆಯರು ಸಹ ಟ್ರಕ್‌ ಏರುತ್ತಾರೆ. ಸೀರೆ ತೊಟ್ಟಿರುವ ಮಹಿಳೆಯೊಬ್ಬಳು ಟ್ರಕ್‌ ಏರಲು ಹರಸಾಹಸಪಡುತ್ತಾಳೆ. ಕೊನೆಯಲ್ಲಿ ಆರು ತಿಂಗಳಿಗೂ ಕಡಿಮೆ ವಯಸ್ಸಿನ ಪುಟ್ಟ ಮಗುವನ್ನು ಸಹ ಒಂದೇ ಕೈಯಲ್ಲಿ ಎತ್ತಿ ಟ್ರಕ್‌ನಲ್ಲಿಡುವ ದುರಂತ ದೃಶ್ಯ ಮನಕಲಕುತ್ತದೆ.

ಅವರೆಲ್ಲರೂ ಜಾರ್ಖಂಡ್‌ ರಾಜ್ಯದ ವಲಸೆ ಕಾರ್ಮಿಕರಾಗಿದ್ದು ತೆಲಂಗಾಣದಲ್ಲಿ ಕೆಲಸ ಮಾಡುತ್ತಿದ್ದವರು. ಲಾಕ್‌ಡೌನ್‌ ಕಾರಣಕ್ಕೆ ಕೆಲಸ ಕಳೆದುಕೊಂಡ ಅವರು ತಮ್ಮ ಸ್ವಂತ ಊರು ತಲುಪಲು ಹೆಣಗಾಡಿದ್ದಾರೆ. ತೆಲಂಗಾಣದಿಂದ ಕಾಲ್ನಡಿಗೆಯಲ್ಲಿ ಹೊರಟ ಅವರು ಚತ್ತೀಸ್‌ಘಡದಲ್ಲಿದ್ದಾಗ ಈ ಟ್ರಕ್‌ ಸಿಕ್ಕಿದೆ. ಈ ಕುರಿತು ಅವರು ಹೇಳಿದಿಷ್ಟು.. “ನಾವು ಏನು ಮಾಡಲು ಸಾಧ್ಯವಿಲ್ಲ … ನಾವು ಅಸಹಾಯಕರಾಗಿದ್ದೇವೆ. ನಾವು ಜಾರ್ಖಂಡ್‌ಗೆ ಹೋಗಬೇಕಾಗಿದೆ. ಬೇರೆ ದಾರಿಯಿಲ್ಲ” ಎಂದು ವೃದ್ಧೆಯೊಬ್ಬರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ಪ್ರಾರಂಭಿಸಿದ ವಿಶೇಷ ರೈಲುಗಳ ಬಗ್ಗೆ ಅವರಲ್ಲಿ ಕೇಳಿದಾಗ, “ಆ ಬಗ್ಗೆ ಯಾವುದೇ ಮಾಹಿತಿ ನಮಗೆ ಸಿಗಲಿಲ್ಲ” ಎಂದಿದ್ದಾರೆ.

ಈ ಗೊಂದಲವನ್ನು ಗಮನಿಸುತ್ತಾ ಟ್ರಕ್ ಹತ್ತಿರ ನಿಂತಿದ್ದ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರು “ಬೇರೆ ಯಾವುದೇ ಸಾರಿಗೆ ಮಾರ್ಗಗಳಿಲ್ಲ. ನಾನು ಸಾರಿಗೆ ಇಲಾಖೆಯಿಂದ ಬಂದಿದ್ದೇನೆ ಆದರೆ ನಾನು ಬಸ್‌ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಆಡಳಿತವು ಅವರಿಗೆ ವಿಶೇಷ ಬಸ್ಸುಗಳನ್ನು ಒದಗಿಸಬೇಕಿದೆ” ಎಂದಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ಲಾಕ್‌ಡೌನ್‌ ಘೋಷಿಸಿದಾಗಿನಿಂದ ವಲಸಿಗರು ತಮ್ಮ ಹಳ್ಳಿಗಳಿಗೆ ಹಿಂತಿರುಗಲು ದೊಡ್ಡ ನಗರಗಳನ್ನು ತೊರೆಯುತ್ತಿದ್ದಾರೆ. ಅವರಲ್ಲಿ ಹಲವರು ನೂರಾರು-ಸಾವಿರಾರು ಕಿಲೋಮೀಟರ್ ನಡೆದು ಹೋಗಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪ್ರಯಾಣವನ್ನು ಪೂರ್ಣಗೊಳಿಸುವ ಮೊದಲೇ ಸಾವನ್ನಪ್ಪಿದ್ದಾರೆ.

ಕಳೆದ ವಾರ, 20 ಜನರ ಗುಂಪಿನಲ್ಲಿ 16 ವಲಸಿಗರು ಮಹಾರಾಷ್ಟ್ರದಲ್ಲಿ ಸರಕು ರೈಲು ಹಳಿಗಳ ಮೇಲೆ ಮಲಗಿದ್ದಾಗ ರೈಲು ಹರಿದು ಮೃತಪಟ್ಟಿದ್ದಾರೆ. ಭಾನುವಾರ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸಿಗರು ಸಾವನ್ನಪ್ಪಿದ್ದಾರೆ.

ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪುವಂತೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಇದು ಕಾರ್ಮಿಕರ ಬವಣೆಯನ್ನು ಹೆಚ್ಚಿಸಿದ್ದು, ಎಲ್ಲೆಲ್ಲಿಯೂ ಅವರ ನೋವಿನ ಚಿತ್ರಗಳು ಹರಿದಾಡುತ್ತಿವೆ.

ಕೃಪೆ: ಎನ್‌ಡಿಟಿವಿ


ಇದನ್ನೂ ಓದಿ:  ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...