Homeಮುಖಪುಟವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

ವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

- Advertisement -
- Advertisement -

ಇದೊಂದು ದುರಂತ ಚಿತ್ರ. ಈಗಾಗಲೇ ಟ್ರಕ್‌ ಒಂದು ಮೂಟೆಗಳಿಂದ ಅರ್ಧ ತುಂಬಿದೆ. ಅದರ ಮೇಲೆ ಒಂದಷ್ಟು ಜನ ಹತ್ತಿ ನಿಂತಿದ್ದಾರೆ. ಇನ್ನು ಜನ ಹತ್ತುತ್ತಿದ್ದಾರೆ. ಯುವಕನೊಬ್ಬ ಟ್ರಕ್‌ನ ಅರ್ಧಭಾಗದಲ್ಲಿ ನಿಂತು ಒಂದು ಕೈಯಲ್ಲಿ ಟ್ರಕ್‌ಗೆ ಕಟ್ಟಿರುವ ಹಗ್ಗ ಹಿಡಿದುಕೊಂಡು ಇನ್ನೊಂದು ಕೈಯಿಂದ ಮಗುವೊಂದನ್ನು ಎತ್ತಿ ಟ್ರಕ್‌ ಮೇಲಿಡುತ್ತಿರುವ ಚಿತ್ರ ಎಂತವರ ಮನಸ್ಸನು ಕದಲಿಸುಬಿಡುತ್ತದೆ. ನಿನ್ನೆ ಇಂಟರ್ನೆಟ್‌ ತುಂಬೆಲ್ಲಾ ಈ ಚಿತ್ರ ಹರಿದಾಡಿದ್ದು ವಲಸೆ ಕಾರ್ಮಿಕರ ಬವಣೆಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿತ್ತು.

ಈ ಚಿತ್ರವು ಕೆಲಸವಿಲ್ಲದೇ, ಊಟವಿಲ್ಲದೇ ವಾಪಸ್‌ ತಮ್ಮೂರಿಗೆ ಹೊರಟ ವಲಸೆ ಕಾರ್ಮಿಕರ ಕರಾಳ ಸ್ಥಿತಿಯನ್ನು ನೆನಪಿಸುತ್ತದೆ. ಈ ಚಿತ್ರವನ್ನು ಚತ್ತೀಸ್‌ಘಡದಲ್ಲಿ ತೆಗೆಯಲಾಗಿದೆ. ಅದರ ವಿಡಿಯೋ ನೋಡಿದ್ದಲ್ಲಿ ಮತ್ತಷ್ಟು ದುರಂತ ನಮಗೆ ಕಾಣುತ್ತದೆ.

ಸುಮಾರು 20 ಸೆಕೆಂಡುಗಳ ಕ್ಲಿಪ್‌ನಲ್ಲಿ, ಆ ವ್ಯಕ್ತಿ ಮಗುವನ್ನು ಟ್ರಕ್‌ನಲ್ಲಿರುವ ಮತ್ತೊಬ್ಬ ಕಾರ್ಮಿಕನಿಗೆ ಹಸ್ತಾಂತರಿಸುತ್ತಾನೆ. ಆನಂತರ ಆತನು ಟ್ರಕ್‌ ಏರುತ್ತಾನೆ. ಅದೇ ಸಂದರ್ಭದಲ್ಲಿ ಹಲವಾರು ಮಹಿಳೆಯರು ಸಹ ಟ್ರಕ್‌ ಏರುತ್ತಾರೆ. ಸೀರೆ ತೊಟ್ಟಿರುವ ಮಹಿಳೆಯೊಬ್ಬಳು ಟ್ರಕ್‌ ಏರಲು ಹರಸಾಹಸಪಡುತ್ತಾಳೆ. ಕೊನೆಯಲ್ಲಿ ಆರು ತಿಂಗಳಿಗೂ ಕಡಿಮೆ ವಯಸ್ಸಿನ ಪುಟ್ಟ ಮಗುವನ್ನು ಸಹ ಒಂದೇ ಕೈಯಲ್ಲಿ ಎತ್ತಿ ಟ್ರಕ್‌ನಲ್ಲಿಡುವ ದುರಂತ ದೃಶ್ಯ ಮನಕಲಕುತ್ತದೆ.

ಅವರೆಲ್ಲರೂ ಜಾರ್ಖಂಡ್‌ ರಾಜ್ಯದ ವಲಸೆ ಕಾರ್ಮಿಕರಾಗಿದ್ದು ತೆಲಂಗಾಣದಲ್ಲಿ ಕೆಲಸ ಮಾಡುತ್ತಿದ್ದವರು. ಲಾಕ್‌ಡೌನ್‌ ಕಾರಣಕ್ಕೆ ಕೆಲಸ ಕಳೆದುಕೊಂಡ ಅವರು ತಮ್ಮ ಸ್ವಂತ ಊರು ತಲುಪಲು ಹೆಣಗಾಡಿದ್ದಾರೆ. ತೆಲಂಗಾಣದಿಂದ ಕಾಲ್ನಡಿಗೆಯಲ್ಲಿ ಹೊರಟ ಅವರು ಚತ್ತೀಸ್‌ಘಡದಲ್ಲಿದ್ದಾಗ ಈ ಟ್ರಕ್‌ ಸಿಕ್ಕಿದೆ. ಈ ಕುರಿತು ಅವರು ಹೇಳಿದಿಷ್ಟು.. “ನಾವು ಏನು ಮಾಡಲು ಸಾಧ್ಯವಿಲ್ಲ … ನಾವು ಅಸಹಾಯಕರಾಗಿದ್ದೇವೆ. ನಾವು ಜಾರ್ಖಂಡ್‌ಗೆ ಹೋಗಬೇಕಾಗಿದೆ. ಬೇರೆ ದಾರಿಯಿಲ್ಲ” ಎಂದು ವೃದ್ಧೆಯೊಬ್ಬರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ಪ್ರಾರಂಭಿಸಿದ ವಿಶೇಷ ರೈಲುಗಳ ಬಗ್ಗೆ ಅವರಲ್ಲಿ ಕೇಳಿದಾಗ, “ಆ ಬಗ್ಗೆ ಯಾವುದೇ ಮಾಹಿತಿ ನಮಗೆ ಸಿಗಲಿಲ್ಲ” ಎಂದಿದ್ದಾರೆ.

ಈ ಗೊಂದಲವನ್ನು ಗಮನಿಸುತ್ತಾ ಟ್ರಕ್ ಹತ್ತಿರ ನಿಂತಿದ್ದ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರು “ಬೇರೆ ಯಾವುದೇ ಸಾರಿಗೆ ಮಾರ್ಗಗಳಿಲ್ಲ. ನಾನು ಸಾರಿಗೆ ಇಲಾಖೆಯಿಂದ ಬಂದಿದ್ದೇನೆ ಆದರೆ ನಾನು ಬಸ್‌ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಆಡಳಿತವು ಅವರಿಗೆ ವಿಶೇಷ ಬಸ್ಸುಗಳನ್ನು ಒದಗಿಸಬೇಕಿದೆ” ಎಂದಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ಲಾಕ್‌ಡೌನ್‌ ಘೋಷಿಸಿದಾಗಿನಿಂದ ವಲಸಿಗರು ತಮ್ಮ ಹಳ್ಳಿಗಳಿಗೆ ಹಿಂತಿರುಗಲು ದೊಡ್ಡ ನಗರಗಳನ್ನು ತೊರೆಯುತ್ತಿದ್ದಾರೆ. ಅವರಲ್ಲಿ ಹಲವರು ನೂರಾರು-ಸಾವಿರಾರು ಕಿಲೋಮೀಟರ್ ನಡೆದು ಹೋಗಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪ್ರಯಾಣವನ್ನು ಪೂರ್ಣಗೊಳಿಸುವ ಮೊದಲೇ ಸಾವನ್ನಪ್ಪಿದ್ದಾರೆ.

ಕಳೆದ ವಾರ, 20 ಜನರ ಗುಂಪಿನಲ್ಲಿ 16 ವಲಸಿಗರು ಮಹಾರಾಷ್ಟ್ರದಲ್ಲಿ ಸರಕು ರೈಲು ಹಳಿಗಳ ಮೇಲೆ ಮಲಗಿದ್ದಾಗ ರೈಲು ಹರಿದು ಮೃತಪಟ್ಟಿದ್ದಾರೆ. ಭಾನುವಾರ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸಿಗರು ಸಾವನ್ನಪ್ಪಿದ್ದಾರೆ.

ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪುವಂತೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಇದು ಕಾರ್ಮಿಕರ ಬವಣೆಯನ್ನು ಹೆಚ್ಚಿಸಿದ್ದು, ಎಲ್ಲೆಲ್ಲಿಯೂ ಅವರ ನೋವಿನ ಚಿತ್ರಗಳು ಹರಿದಾಡುತ್ತಿವೆ.

ಕೃಪೆ: ಎನ್‌ಡಿಟಿವಿ


ಇದನ್ನೂ ಓದಿ:  ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...