Homeಮುಖಪುಟವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

ವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

- Advertisement -
- Advertisement -

ಇದೊಂದು ದುರಂತ ಚಿತ್ರ. ಈಗಾಗಲೇ ಟ್ರಕ್‌ ಒಂದು ಮೂಟೆಗಳಿಂದ ಅರ್ಧ ತುಂಬಿದೆ. ಅದರ ಮೇಲೆ ಒಂದಷ್ಟು ಜನ ಹತ್ತಿ ನಿಂತಿದ್ದಾರೆ. ಇನ್ನು ಜನ ಹತ್ತುತ್ತಿದ್ದಾರೆ. ಯುವಕನೊಬ್ಬ ಟ್ರಕ್‌ನ ಅರ್ಧಭಾಗದಲ್ಲಿ ನಿಂತು ಒಂದು ಕೈಯಲ್ಲಿ ಟ್ರಕ್‌ಗೆ ಕಟ್ಟಿರುವ ಹಗ್ಗ ಹಿಡಿದುಕೊಂಡು ಇನ್ನೊಂದು ಕೈಯಿಂದ ಮಗುವೊಂದನ್ನು ಎತ್ತಿ ಟ್ರಕ್‌ ಮೇಲಿಡುತ್ತಿರುವ ಚಿತ್ರ ಎಂತವರ ಮನಸ್ಸನು ಕದಲಿಸುಬಿಡುತ್ತದೆ. ನಿನ್ನೆ ಇಂಟರ್ನೆಟ್‌ ತುಂಬೆಲ್ಲಾ ಈ ಚಿತ್ರ ಹರಿದಾಡಿದ್ದು ವಲಸೆ ಕಾರ್ಮಿಕರ ಬವಣೆಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿತ್ತು.

ಈ ಚಿತ್ರವು ಕೆಲಸವಿಲ್ಲದೇ, ಊಟವಿಲ್ಲದೇ ವಾಪಸ್‌ ತಮ್ಮೂರಿಗೆ ಹೊರಟ ವಲಸೆ ಕಾರ್ಮಿಕರ ಕರಾಳ ಸ್ಥಿತಿಯನ್ನು ನೆನಪಿಸುತ್ತದೆ. ಈ ಚಿತ್ರವನ್ನು ಚತ್ತೀಸ್‌ಘಡದಲ್ಲಿ ತೆಗೆಯಲಾಗಿದೆ. ಅದರ ವಿಡಿಯೋ ನೋಡಿದ್ದಲ್ಲಿ ಮತ್ತಷ್ಟು ದುರಂತ ನಮಗೆ ಕಾಣುತ್ತದೆ.

ಸುಮಾರು 20 ಸೆಕೆಂಡುಗಳ ಕ್ಲಿಪ್‌ನಲ್ಲಿ, ಆ ವ್ಯಕ್ತಿ ಮಗುವನ್ನು ಟ್ರಕ್‌ನಲ್ಲಿರುವ ಮತ್ತೊಬ್ಬ ಕಾರ್ಮಿಕನಿಗೆ ಹಸ್ತಾಂತರಿಸುತ್ತಾನೆ. ಆನಂತರ ಆತನು ಟ್ರಕ್‌ ಏರುತ್ತಾನೆ. ಅದೇ ಸಂದರ್ಭದಲ್ಲಿ ಹಲವಾರು ಮಹಿಳೆಯರು ಸಹ ಟ್ರಕ್‌ ಏರುತ್ತಾರೆ. ಸೀರೆ ತೊಟ್ಟಿರುವ ಮಹಿಳೆಯೊಬ್ಬಳು ಟ್ರಕ್‌ ಏರಲು ಹರಸಾಹಸಪಡುತ್ತಾಳೆ. ಕೊನೆಯಲ್ಲಿ ಆರು ತಿಂಗಳಿಗೂ ಕಡಿಮೆ ವಯಸ್ಸಿನ ಪುಟ್ಟ ಮಗುವನ್ನು ಸಹ ಒಂದೇ ಕೈಯಲ್ಲಿ ಎತ್ತಿ ಟ್ರಕ್‌ನಲ್ಲಿಡುವ ದುರಂತ ದೃಶ್ಯ ಮನಕಲಕುತ್ತದೆ.

ಅವರೆಲ್ಲರೂ ಜಾರ್ಖಂಡ್‌ ರಾಜ್ಯದ ವಲಸೆ ಕಾರ್ಮಿಕರಾಗಿದ್ದು ತೆಲಂಗಾಣದಲ್ಲಿ ಕೆಲಸ ಮಾಡುತ್ತಿದ್ದವರು. ಲಾಕ್‌ಡೌನ್‌ ಕಾರಣಕ್ಕೆ ಕೆಲಸ ಕಳೆದುಕೊಂಡ ಅವರು ತಮ್ಮ ಸ್ವಂತ ಊರು ತಲುಪಲು ಹೆಣಗಾಡಿದ್ದಾರೆ. ತೆಲಂಗಾಣದಿಂದ ಕಾಲ್ನಡಿಗೆಯಲ್ಲಿ ಹೊರಟ ಅವರು ಚತ್ತೀಸ್‌ಘಡದಲ್ಲಿದ್ದಾಗ ಈ ಟ್ರಕ್‌ ಸಿಕ್ಕಿದೆ. ಈ ಕುರಿತು ಅವರು ಹೇಳಿದಿಷ್ಟು.. “ನಾವು ಏನು ಮಾಡಲು ಸಾಧ್ಯವಿಲ್ಲ … ನಾವು ಅಸಹಾಯಕರಾಗಿದ್ದೇವೆ. ನಾವು ಜಾರ್ಖಂಡ್‌ಗೆ ಹೋಗಬೇಕಾಗಿದೆ. ಬೇರೆ ದಾರಿಯಿಲ್ಲ” ಎಂದು ವೃದ್ಧೆಯೊಬ್ಬರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ಪ್ರಾರಂಭಿಸಿದ ವಿಶೇಷ ರೈಲುಗಳ ಬಗ್ಗೆ ಅವರಲ್ಲಿ ಕೇಳಿದಾಗ, “ಆ ಬಗ್ಗೆ ಯಾವುದೇ ಮಾಹಿತಿ ನಮಗೆ ಸಿಗಲಿಲ್ಲ” ಎಂದಿದ್ದಾರೆ.

ಈ ಗೊಂದಲವನ್ನು ಗಮನಿಸುತ್ತಾ ಟ್ರಕ್ ಹತ್ತಿರ ನಿಂತಿದ್ದ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರು “ಬೇರೆ ಯಾವುದೇ ಸಾರಿಗೆ ಮಾರ್ಗಗಳಿಲ್ಲ. ನಾನು ಸಾರಿಗೆ ಇಲಾಖೆಯಿಂದ ಬಂದಿದ್ದೇನೆ ಆದರೆ ನಾನು ಬಸ್‌ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಆಡಳಿತವು ಅವರಿಗೆ ವಿಶೇಷ ಬಸ್ಸುಗಳನ್ನು ಒದಗಿಸಬೇಕಿದೆ” ಎಂದಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ಲಾಕ್‌ಡೌನ್‌ ಘೋಷಿಸಿದಾಗಿನಿಂದ ವಲಸಿಗರು ತಮ್ಮ ಹಳ್ಳಿಗಳಿಗೆ ಹಿಂತಿರುಗಲು ದೊಡ್ಡ ನಗರಗಳನ್ನು ತೊರೆಯುತ್ತಿದ್ದಾರೆ. ಅವರಲ್ಲಿ ಹಲವರು ನೂರಾರು-ಸಾವಿರಾರು ಕಿಲೋಮೀಟರ್ ನಡೆದು ಹೋಗಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪ್ರಯಾಣವನ್ನು ಪೂರ್ಣಗೊಳಿಸುವ ಮೊದಲೇ ಸಾವನ್ನಪ್ಪಿದ್ದಾರೆ.

ಕಳೆದ ವಾರ, 20 ಜನರ ಗುಂಪಿನಲ್ಲಿ 16 ವಲಸಿಗರು ಮಹಾರಾಷ್ಟ್ರದಲ್ಲಿ ಸರಕು ರೈಲು ಹಳಿಗಳ ಮೇಲೆ ಮಲಗಿದ್ದಾಗ ರೈಲು ಹರಿದು ಮೃತಪಟ್ಟಿದ್ದಾರೆ. ಭಾನುವಾರ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸಿಗರು ಸಾವನ್ನಪ್ಪಿದ್ದಾರೆ.

ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪುವಂತೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಇದು ಕಾರ್ಮಿಕರ ಬವಣೆಯನ್ನು ಹೆಚ್ಚಿಸಿದ್ದು, ಎಲ್ಲೆಲ್ಲಿಯೂ ಅವರ ನೋವಿನ ಚಿತ್ರಗಳು ಹರಿದಾಡುತ್ತಿವೆ.

ಕೃಪೆ: ಎನ್‌ಡಿಟಿವಿ


ಇದನ್ನೂ ಓದಿ:  ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...