Homeಮುಖಪುಟವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

ವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

- Advertisement -
- Advertisement -

ಇದೊಂದು ದುರಂತ ಚಿತ್ರ. ಈಗಾಗಲೇ ಟ್ರಕ್‌ ಒಂದು ಮೂಟೆಗಳಿಂದ ಅರ್ಧ ತುಂಬಿದೆ. ಅದರ ಮೇಲೆ ಒಂದಷ್ಟು ಜನ ಹತ್ತಿ ನಿಂತಿದ್ದಾರೆ. ಇನ್ನು ಜನ ಹತ್ತುತ್ತಿದ್ದಾರೆ. ಯುವಕನೊಬ್ಬ ಟ್ರಕ್‌ನ ಅರ್ಧಭಾಗದಲ್ಲಿ ನಿಂತು ಒಂದು ಕೈಯಲ್ಲಿ ಟ್ರಕ್‌ಗೆ ಕಟ್ಟಿರುವ ಹಗ್ಗ ಹಿಡಿದುಕೊಂಡು ಇನ್ನೊಂದು ಕೈಯಿಂದ ಮಗುವೊಂದನ್ನು ಎತ್ತಿ ಟ್ರಕ್‌ ಮೇಲಿಡುತ್ತಿರುವ ಚಿತ್ರ ಎಂತವರ ಮನಸ್ಸನು ಕದಲಿಸುಬಿಡುತ್ತದೆ. ನಿನ್ನೆ ಇಂಟರ್ನೆಟ್‌ ತುಂಬೆಲ್ಲಾ ಈ ಚಿತ್ರ ಹರಿದಾಡಿದ್ದು ವಲಸೆ ಕಾರ್ಮಿಕರ ಬವಣೆಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿತ್ತು.

ಈ ಚಿತ್ರವು ಕೆಲಸವಿಲ್ಲದೇ, ಊಟವಿಲ್ಲದೇ ವಾಪಸ್‌ ತಮ್ಮೂರಿಗೆ ಹೊರಟ ವಲಸೆ ಕಾರ್ಮಿಕರ ಕರಾಳ ಸ್ಥಿತಿಯನ್ನು ನೆನಪಿಸುತ್ತದೆ. ಈ ಚಿತ್ರವನ್ನು ಚತ್ತೀಸ್‌ಘಡದಲ್ಲಿ ತೆಗೆಯಲಾಗಿದೆ. ಅದರ ವಿಡಿಯೋ ನೋಡಿದ್ದಲ್ಲಿ ಮತ್ತಷ್ಟು ದುರಂತ ನಮಗೆ ಕಾಣುತ್ತದೆ.

ಸುಮಾರು 20 ಸೆಕೆಂಡುಗಳ ಕ್ಲಿಪ್‌ನಲ್ಲಿ, ಆ ವ್ಯಕ್ತಿ ಮಗುವನ್ನು ಟ್ರಕ್‌ನಲ್ಲಿರುವ ಮತ್ತೊಬ್ಬ ಕಾರ್ಮಿಕನಿಗೆ ಹಸ್ತಾಂತರಿಸುತ್ತಾನೆ. ಆನಂತರ ಆತನು ಟ್ರಕ್‌ ಏರುತ್ತಾನೆ. ಅದೇ ಸಂದರ್ಭದಲ್ಲಿ ಹಲವಾರು ಮಹಿಳೆಯರು ಸಹ ಟ್ರಕ್‌ ಏರುತ್ತಾರೆ. ಸೀರೆ ತೊಟ್ಟಿರುವ ಮಹಿಳೆಯೊಬ್ಬಳು ಟ್ರಕ್‌ ಏರಲು ಹರಸಾಹಸಪಡುತ್ತಾಳೆ. ಕೊನೆಯಲ್ಲಿ ಆರು ತಿಂಗಳಿಗೂ ಕಡಿಮೆ ವಯಸ್ಸಿನ ಪುಟ್ಟ ಮಗುವನ್ನು ಸಹ ಒಂದೇ ಕೈಯಲ್ಲಿ ಎತ್ತಿ ಟ್ರಕ್‌ನಲ್ಲಿಡುವ ದುರಂತ ದೃಶ್ಯ ಮನಕಲಕುತ್ತದೆ.

ಅವರೆಲ್ಲರೂ ಜಾರ್ಖಂಡ್‌ ರಾಜ್ಯದ ವಲಸೆ ಕಾರ್ಮಿಕರಾಗಿದ್ದು ತೆಲಂಗಾಣದಲ್ಲಿ ಕೆಲಸ ಮಾಡುತ್ತಿದ್ದವರು. ಲಾಕ್‌ಡೌನ್‌ ಕಾರಣಕ್ಕೆ ಕೆಲಸ ಕಳೆದುಕೊಂಡ ಅವರು ತಮ್ಮ ಸ್ವಂತ ಊರು ತಲುಪಲು ಹೆಣಗಾಡಿದ್ದಾರೆ. ತೆಲಂಗಾಣದಿಂದ ಕಾಲ್ನಡಿಗೆಯಲ್ಲಿ ಹೊರಟ ಅವರು ಚತ್ತೀಸ್‌ಘಡದಲ್ಲಿದ್ದಾಗ ಈ ಟ್ರಕ್‌ ಸಿಕ್ಕಿದೆ. ಈ ಕುರಿತು ಅವರು ಹೇಳಿದಿಷ್ಟು.. “ನಾವು ಏನು ಮಾಡಲು ಸಾಧ್ಯವಿಲ್ಲ … ನಾವು ಅಸಹಾಯಕರಾಗಿದ್ದೇವೆ. ನಾವು ಜಾರ್ಖಂಡ್‌ಗೆ ಹೋಗಬೇಕಾಗಿದೆ. ಬೇರೆ ದಾರಿಯಿಲ್ಲ” ಎಂದು ವೃದ್ಧೆಯೊಬ್ಬರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ಪ್ರಾರಂಭಿಸಿದ ವಿಶೇಷ ರೈಲುಗಳ ಬಗ್ಗೆ ಅವರಲ್ಲಿ ಕೇಳಿದಾಗ, “ಆ ಬಗ್ಗೆ ಯಾವುದೇ ಮಾಹಿತಿ ನಮಗೆ ಸಿಗಲಿಲ್ಲ” ಎಂದಿದ್ದಾರೆ.

ಈ ಗೊಂದಲವನ್ನು ಗಮನಿಸುತ್ತಾ ಟ್ರಕ್ ಹತ್ತಿರ ನಿಂತಿದ್ದ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರು “ಬೇರೆ ಯಾವುದೇ ಸಾರಿಗೆ ಮಾರ್ಗಗಳಿಲ್ಲ. ನಾನು ಸಾರಿಗೆ ಇಲಾಖೆಯಿಂದ ಬಂದಿದ್ದೇನೆ ಆದರೆ ನಾನು ಬಸ್‌ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಆಡಳಿತವು ಅವರಿಗೆ ವಿಶೇಷ ಬಸ್ಸುಗಳನ್ನು ಒದಗಿಸಬೇಕಿದೆ” ಎಂದಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ಲಾಕ್‌ಡೌನ್‌ ಘೋಷಿಸಿದಾಗಿನಿಂದ ವಲಸಿಗರು ತಮ್ಮ ಹಳ್ಳಿಗಳಿಗೆ ಹಿಂತಿರುಗಲು ದೊಡ್ಡ ನಗರಗಳನ್ನು ತೊರೆಯುತ್ತಿದ್ದಾರೆ. ಅವರಲ್ಲಿ ಹಲವರು ನೂರಾರು-ಸಾವಿರಾರು ಕಿಲೋಮೀಟರ್ ನಡೆದು ಹೋಗಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪ್ರಯಾಣವನ್ನು ಪೂರ್ಣಗೊಳಿಸುವ ಮೊದಲೇ ಸಾವನ್ನಪ್ಪಿದ್ದಾರೆ.

ಕಳೆದ ವಾರ, 20 ಜನರ ಗುಂಪಿನಲ್ಲಿ 16 ವಲಸಿಗರು ಮಹಾರಾಷ್ಟ್ರದಲ್ಲಿ ಸರಕು ರೈಲು ಹಳಿಗಳ ಮೇಲೆ ಮಲಗಿದ್ದಾಗ ರೈಲು ಹರಿದು ಮೃತಪಟ್ಟಿದ್ದಾರೆ. ಭಾನುವಾರ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸಿಗರು ಸಾವನ್ನಪ್ಪಿದ್ದಾರೆ.

ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪುವಂತೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಇದು ಕಾರ್ಮಿಕರ ಬವಣೆಯನ್ನು ಹೆಚ್ಚಿಸಿದ್ದು, ಎಲ್ಲೆಲ್ಲಿಯೂ ಅವರ ನೋವಿನ ಚಿತ್ರಗಳು ಹರಿದಾಡುತ್ತಿವೆ.

ಕೃಪೆ: ಎನ್‌ಡಿಟಿವಿ


ಇದನ್ನೂ ಓದಿ:  ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...