Homeಮುಖಪುಟವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

ವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

- Advertisement -
- Advertisement -

ಇದೊಂದು ದುರಂತ ಚಿತ್ರ. ಈಗಾಗಲೇ ಟ್ರಕ್‌ ಒಂದು ಮೂಟೆಗಳಿಂದ ಅರ್ಧ ತುಂಬಿದೆ. ಅದರ ಮೇಲೆ ಒಂದಷ್ಟು ಜನ ಹತ್ತಿ ನಿಂತಿದ್ದಾರೆ. ಇನ್ನು ಜನ ಹತ್ತುತ್ತಿದ್ದಾರೆ. ಯುವಕನೊಬ್ಬ ಟ್ರಕ್‌ನ ಅರ್ಧಭಾಗದಲ್ಲಿ ನಿಂತು ಒಂದು ಕೈಯಲ್ಲಿ ಟ್ರಕ್‌ಗೆ ಕಟ್ಟಿರುವ ಹಗ್ಗ ಹಿಡಿದುಕೊಂಡು ಇನ್ನೊಂದು ಕೈಯಿಂದ ಮಗುವೊಂದನ್ನು ಎತ್ತಿ ಟ್ರಕ್‌ ಮೇಲಿಡುತ್ತಿರುವ ಚಿತ್ರ ಎಂತವರ ಮನಸ್ಸನು ಕದಲಿಸುಬಿಡುತ್ತದೆ. ನಿನ್ನೆ ಇಂಟರ್ನೆಟ್‌ ತುಂಬೆಲ್ಲಾ ಈ ಚಿತ್ರ ಹರಿದಾಡಿದ್ದು ವಲಸೆ ಕಾರ್ಮಿಕರ ಬವಣೆಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿತ್ತು.

ಈ ಚಿತ್ರವು ಕೆಲಸವಿಲ್ಲದೇ, ಊಟವಿಲ್ಲದೇ ವಾಪಸ್‌ ತಮ್ಮೂರಿಗೆ ಹೊರಟ ವಲಸೆ ಕಾರ್ಮಿಕರ ಕರಾಳ ಸ್ಥಿತಿಯನ್ನು ನೆನಪಿಸುತ್ತದೆ. ಈ ಚಿತ್ರವನ್ನು ಚತ್ತೀಸ್‌ಘಡದಲ್ಲಿ ತೆಗೆಯಲಾಗಿದೆ. ಅದರ ವಿಡಿಯೋ ನೋಡಿದ್ದಲ್ಲಿ ಮತ್ತಷ್ಟು ದುರಂತ ನಮಗೆ ಕಾಣುತ್ತದೆ.

ಸುಮಾರು 20 ಸೆಕೆಂಡುಗಳ ಕ್ಲಿಪ್‌ನಲ್ಲಿ, ಆ ವ್ಯಕ್ತಿ ಮಗುವನ್ನು ಟ್ರಕ್‌ನಲ್ಲಿರುವ ಮತ್ತೊಬ್ಬ ಕಾರ್ಮಿಕನಿಗೆ ಹಸ್ತಾಂತರಿಸುತ್ತಾನೆ. ಆನಂತರ ಆತನು ಟ್ರಕ್‌ ಏರುತ್ತಾನೆ. ಅದೇ ಸಂದರ್ಭದಲ್ಲಿ ಹಲವಾರು ಮಹಿಳೆಯರು ಸಹ ಟ್ರಕ್‌ ಏರುತ್ತಾರೆ. ಸೀರೆ ತೊಟ್ಟಿರುವ ಮಹಿಳೆಯೊಬ್ಬಳು ಟ್ರಕ್‌ ಏರಲು ಹರಸಾಹಸಪಡುತ್ತಾಳೆ. ಕೊನೆಯಲ್ಲಿ ಆರು ತಿಂಗಳಿಗೂ ಕಡಿಮೆ ವಯಸ್ಸಿನ ಪುಟ್ಟ ಮಗುವನ್ನು ಸಹ ಒಂದೇ ಕೈಯಲ್ಲಿ ಎತ್ತಿ ಟ್ರಕ್‌ನಲ್ಲಿಡುವ ದುರಂತ ದೃಶ್ಯ ಮನಕಲಕುತ್ತದೆ.

ಅವರೆಲ್ಲರೂ ಜಾರ್ಖಂಡ್‌ ರಾಜ್ಯದ ವಲಸೆ ಕಾರ್ಮಿಕರಾಗಿದ್ದು ತೆಲಂಗಾಣದಲ್ಲಿ ಕೆಲಸ ಮಾಡುತ್ತಿದ್ದವರು. ಲಾಕ್‌ಡೌನ್‌ ಕಾರಣಕ್ಕೆ ಕೆಲಸ ಕಳೆದುಕೊಂಡ ಅವರು ತಮ್ಮ ಸ್ವಂತ ಊರು ತಲುಪಲು ಹೆಣಗಾಡಿದ್ದಾರೆ. ತೆಲಂಗಾಣದಿಂದ ಕಾಲ್ನಡಿಗೆಯಲ್ಲಿ ಹೊರಟ ಅವರು ಚತ್ತೀಸ್‌ಘಡದಲ್ಲಿದ್ದಾಗ ಈ ಟ್ರಕ್‌ ಸಿಕ್ಕಿದೆ. ಈ ಕುರಿತು ಅವರು ಹೇಳಿದಿಷ್ಟು.. “ನಾವು ಏನು ಮಾಡಲು ಸಾಧ್ಯವಿಲ್ಲ … ನಾವು ಅಸಹಾಯಕರಾಗಿದ್ದೇವೆ. ನಾವು ಜಾರ್ಖಂಡ್‌ಗೆ ಹೋಗಬೇಕಾಗಿದೆ. ಬೇರೆ ದಾರಿಯಿಲ್ಲ” ಎಂದು ವೃದ್ಧೆಯೊಬ್ಬರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ಪ್ರಾರಂಭಿಸಿದ ವಿಶೇಷ ರೈಲುಗಳ ಬಗ್ಗೆ ಅವರಲ್ಲಿ ಕೇಳಿದಾಗ, “ಆ ಬಗ್ಗೆ ಯಾವುದೇ ಮಾಹಿತಿ ನಮಗೆ ಸಿಗಲಿಲ್ಲ” ಎಂದಿದ್ದಾರೆ.

ಈ ಗೊಂದಲವನ್ನು ಗಮನಿಸುತ್ತಾ ಟ್ರಕ್ ಹತ್ತಿರ ನಿಂತಿದ್ದ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರು “ಬೇರೆ ಯಾವುದೇ ಸಾರಿಗೆ ಮಾರ್ಗಗಳಿಲ್ಲ. ನಾನು ಸಾರಿಗೆ ಇಲಾಖೆಯಿಂದ ಬಂದಿದ್ದೇನೆ ಆದರೆ ನಾನು ಬಸ್‌ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಆಡಳಿತವು ಅವರಿಗೆ ವಿಶೇಷ ಬಸ್ಸುಗಳನ್ನು ಒದಗಿಸಬೇಕಿದೆ” ಎಂದಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ಲಾಕ್‌ಡೌನ್‌ ಘೋಷಿಸಿದಾಗಿನಿಂದ ವಲಸಿಗರು ತಮ್ಮ ಹಳ್ಳಿಗಳಿಗೆ ಹಿಂತಿರುಗಲು ದೊಡ್ಡ ನಗರಗಳನ್ನು ತೊರೆಯುತ್ತಿದ್ದಾರೆ. ಅವರಲ್ಲಿ ಹಲವರು ನೂರಾರು-ಸಾವಿರಾರು ಕಿಲೋಮೀಟರ್ ನಡೆದು ಹೋಗಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪ್ರಯಾಣವನ್ನು ಪೂರ್ಣಗೊಳಿಸುವ ಮೊದಲೇ ಸಾವನ್ನಪ್ಪಿದ್ದಾರೆ.

ಕಳೆದ ವಾರ, 20 ಜನರ ಗುಂಪಿನಲ್ಲಿ 16 ವಲಸಿಗರು ಮಹಾರಾಷ್ಟ್ರದಲ್ಲಿ ಸರಕು ರೈಲು ಹಳಿಗಳ ಮೇಲೆ ಮಲಗಿದ್ದಾಗ ರೈಲು ಹರಿದು ಮೃತಪಟ್ಟಿದ್ದಾರೆ. ಭಾನುವಾರ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸಿಗರು ಸಾವನ್ನಪ್ಪಿದ್ದಾರೆ.

ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪುವಂತೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಇದು ಕಾರ್ಮಿಕರ ಬವಣೆಯನ್ನು ಹೆಚ್ಚಿಸಿದ್ದು, ಎಲ್ಲೆಲ್ಲಿಯೂ ಅವರ ನೋವಿನ ಚಿತ್ರಗಳು ಹರಿದಾಡುತ್ತಿವೆ.

ಕೃಪೆ: ಎನ್‌ಡಿಟಿವಿ


ಇದನ್ನೂ ಓದಿ:  ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...