Homeಮುಖಪುಟವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

ವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

- Advertisement -
- Advertisement -

ಇದೊಂದು ದುರಂತ ಚಿತ್ರ. ಈಗಾಗಲೇ ಟ್ರಕ್‌ ಒಂದು ಮೂಟೆಗಳಿಂದ ಅರ್ಧ ತುಂಬಿದೆ. ಅದರ ಮೇಲೆ ಒಂದಷ್ಟು ಜನ ಹತ್ತಿ ನಿಂತಿದ್ದಾರೆ. ಇನ್ನು ಜನ ಹತ್ತುತ್ತಿದ್ದಾರೆ. ಯುವಕನೊಬ್ಬ ಟ್ರಕ್‌ನ ಅರ್ಧಭಾಗದಲ್ಲಿ ನಿಂತು ಒಂದು ಕೈಯಲ್ಲಿ ಟ್ರಕ್‌ಗೆ ಕಟ್ಟಿರುವ ಹಗ್ಗ ಹಿಡಿದುಕೊಂಡು ಇನ್ನೊಂದು ಕೈಯಿಂದ ಮಗುವೊಂದನ್ನು ಎತ್ತಿ ಟ್ರಕ್‌ ಮೇಲಿಡುತ್ತಿರುವ ಚಿತ್ರ ಎಂತವರ ಮನಸ್ಸನು ಕದಲಿಸುಬಿಡುತ್ತದೆ. ನಿನ್ನೆ ಇಂಟರ್ನೆಟ್‌ ತುಂಬೆಲ್ಲಾ ಈ ಚಿತ್ರ ಹರಿದಾಡಿದ್ದು ವಲಸೆ ಕಾರ್ಮಿಕರ ಬವಣೆಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿತ್ತು.

ಈ ಚಿತ್ರವು ಕೆಲಸವಿಲ್ಲದೇ, ಊಟವಿಲ್ಲದೇ ವಾಪಸ್‌ ತಮ್ಮೂರಿಗೆ ಹೊರಟ ವಲಸೆ ಕಾರ್ಮಿಕರ ಕರಾಳ ಸ್ಥಿತಿಯನ್ನು ನೆನಪಿಸುತ್ತದೆ. ಈ ಚಿತ್ರವನ್ನು ಚತ್ತೀಸ್‌ಘಡದಲ್ಲಿ ತೆಗೆಯಲಾಗಿದೆ. ಅದರ ವಿಡಿಯೋ ನೋಡಿದ್ದಲ್ಲಿ ಮತ್ತಷ್ಟು ದುರಂತ ನಮಗೆ ಕಾಣುತ್ತದೆ.

ಸುಮಾರು 20 ಸೆಕೆಂಡುಗಳ ಕ್ಲಿಪ್‌ನಲ್ಲಿ, ಆ ವ್ಯಕ್ತಿ ಮಗುವನ್ನು ಟ್ರಕ್‌ನಲ್ಲಿರುವ ಮತ್ತೊಬ್ಬ ಕಾರ್ಮಿಕನಿಗೆ ಹಸ್ತಾಂತರಿಸುತ್ತಾನೆ. ಆನಂತರ ಆತನು ಟ್ರಕ್‌ ಏರುತ್ತಾನೆ. ಅದೇ ಸಂದರ್ಭದಲ್ಲಿ ಹಲವಾರು ಮಹಿಳೆಯರು ಸಹ ಟ್ರಕ್‌ ಏರುತ್ತಾರೆ. ಸೀರೆ ತೊಟ್ಟಿರುವ ಮಹಿಳೆಯೊಬ್ಬಳು ಟ್ರಕ್‌ ಏರಲು ಹರಸಾಹಸಪಡುತ್ತಾಳೆ. ಕೊನೆಯಲ್ಲಿ ಆರು ತಿಂಗಳಿಗೂ ಕಡಿಮೆ ವಯಸ್ಸಿನ ಪುಟ್ಟ ಮಗುವನ್ನು ಸಹ ಒಂದೇ ಕೈಯಲ್ಲಿ ಎತ್ತಿ ಟ್ರಕ್‌ನಲ್ಲಿಡುವ ದುರಂತ ದೃಶ್ಯ ಮನಕಲಕುತ್ತದೆ.

ಅವರೆಲ್ಲರೂ ಜಾರ್ಖಂಡ್‌ ರಾಜ್ಯದ ವಲಸೆ ಕಾರ್ಮಿಕರಾಗಿದ್ದು ತೆಲಂಗಾಣದಲ್ಲಿ ಕೆಲಸ ಮಾಡುತ್ತಿದ್ದವರು. ಲಾಕ್‌ಡೌನ್‌ ಕಾರಣಕ್ಕೆ ಕೆಲಸ ಕಳೆದುಕೊಂಡ ಅವರು ತಮ್ಮ ಸ್ವಂತ ಊರು ತಲುಪಲು ಹೆಣಗಾಡಿದ್ದಾರೆ. ತೆಲಂಗಾಣದಿಂದ ಕಾಲ್ನಡಿಗೆಯಲ್ಲಿ ಹೊರಟ ಅವರು ಚತ್ತೀಸ್‌ಘಡದಲ್ಲಿದ್ದಾಗ ಈ ಟ್ರಕ್‌ ಸಿಕ್ಕಿದೆ. ಈ ಕುರಿತು ಅವರು ಹೇಳಿದಿಷ್ಟು.. “ನಾವು ಏನು ಮಾಡಲು ಸಾಧ್ಯವಿಲ್ಲ … ನಾವು ಅಸಹಾಯಕರಾಗಿದ್ದೇವೆ. ನಾವು ಜಾರ್ಖಂಡ್‌ಗೆ ಹೋಗಬೇಕಾಗಿದೆ. ಬೇರೆ ದಾರಿಯಿಲ್ಲ” ಎಂದು ವೃದ್ಧೆಯೊಬ್ಬರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ಪ್ರಾರಂಭಿಸಿದ ವಿಶೇಷ ರೈಲುಗಳ ಬಗ್ಗೆ ಅವರಲ್ಲಿ ಕೇಳಿದಾಗ, “ಆ ಬಗ್ಗೆ ಯಾವುದೇ ಮಾಹಿತಿ ನಮಗೆ ಸಿಗಲಿಲ್ಲ” ಎಂದಿದ್ದಾರೆ.

ಈ ಗೊಂದಲವನ್ನು ಗಮನಿಸುತ್ತಾ ಟ್ರಕ್ ಹತ್ತಿರ ನಿಂತಿದ್ದ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರು “ಬೇರೆ ಯಾವುದೇ ಸಾರಿಗೆ ಮಾರ್ಗಗಳಿಲ್ಲ. ನಾನು ಸಾರಿಗೆ ಇಲಾಖೆಯಿಂದ ಬಂದಿದ್ದೇನೆ ಆದರೆ ನಾನು ಬಸ್‌ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಆಡಳಿತವು ಅವರಿಗೆ ವಿಶೇಷ ಬಸ್ಸುಗಳನ್ನು ಒದಗಿಸಬೇಕಿದೆ” ಎಂದಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ಲಾಕ್‌ಡೌನ್‌ ಘೋಷಿಸಿದಾಗಿನಿಂದ ವಲಸಿಗರು ತಮ್ಮ ಹಳ್ಳಿಗಳಿಗೆ ಹಿಂತಿರುಗಲು ದೊಡ್ಡ ನಗರಗಳನ್ನು ತೊರೆಯುತ್ತಿದ್ದಾರೆ. ಅವರಲ್ಲಿ ಹಲವರು ನೂರಾರು-ಸಾವಿರಾರು ಕಿಲೋಮೀಟರ್ ನಡೆದು ಹೋಗಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪ್ರಯಾಣವನ್ನು ಪೂರ್ಣಗೊಳಿಸುವ ಮೊದಲೇ ಸಾವನ್ನಪ್ಪಿದ್ದಾರೆ.

ಕಳೆದ ವಾರ, 20 ಜನರ ಗುಂಪಿನಲ್ಲಿ 16 ವಲಸಿಗರು ಮಹಾರಾಷ್ಟ್ರದಲ್ಲಿ ಸರಕು ರೈಲು ಹಳಿಗಳ ಮೇಲೆ ಮಲಗಿದ್ದಾಗ ರೈಲು ಹರಿದು ಮೃತಪಟ್ಟಿದ್ದಾರೆ. ಭಾನುವಾರ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸಿಗರು ಸಾವನ್ನಪ್ಪಿದ್ದಾರೆ.

ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪುವಂತೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಇದು ಕಾರ್ಮಿಕರ ಬವಣೆಯನ್ನು ಹೆಚ್ಚಿಸಿದ್ದು, ಎಲ್ಲೆಲ್ಲಿಯೂ ಅವರ ನೋವಿನ ಚಿತ್ರಗಳು ಹರಿದಾಡುತ್ತಿವೆ.

ಕೃಪೆ: ಎನ್‌ಡಿಟಿವಿ


ಇದನ್ನೂ ಓದಿ:  ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...