Homeಮುಖಪುಟವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

ವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

- Advertisement -
- Advertisement -

ಇದೊಂದು ದುರಂತ ಚಿತ್ರ. ಈಗಾಗಲೇ ಟ್ರಕ್‌ ಒಂದು ಮೂಟೆಗಳಿಂದ ಅರ್ಧ ತುಂಬಿದೆ. ಅದರ ಮೇಲೆ ಒಂದಷ್ಟು ಜನ ಹತ್ತಿ ನಿಂತಿದ್ದಾರೆ. ಇನ್ನು ಜನ ಹತ್ತುತ್ತಿದ್ದಾರೆ. ಯುವಕನೊಬ್ಬ ಟ್ರಕ್‌ನ ಅರ್ಧಭಾಗದಲ್ಲಿ ನಿಂತು ಒಂದು ಕೈಯಲ್ಲಿ ಟ್ರಕ್‌ಗೆ ಕಟ್ಟಿರುವ ಹಗ್ಗ ಹಿಡಿದುಕೊಂಡು ಇನ್ನೊಂದು ಕೈಯಿಂದ ಮಗುವೊಂದನ್ನು ಎತ್ತಿ ಟ್ರಕ್‌ ಮೇಲಿಡುತ್ತಿರುವ ಚಿತ್ರ ಎಂತವರ ಮನಸ್ಸನು ಕದಲಿಸುಬಿಡುತ್ತದೆ. ನಿನ್ನೆ ಇಂಟರ್ನೆಟ್‌ ತುಂಬೆಲ್ಲಾ ಈ ಚಿತ್ರ ಹರಿದಾಡಿದ್ದು ವಲಸೆ ಕಾರ್ಮಿಕರ ಬವಣೆಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿತ್ತು.

ಈ ಚಿತ್ರವು ಕೆಲಸವಿಲ್ಲದೇ, ಊಟವಿಲ್ಲದೇ ವಾಪಸ್‌ ತಮ್ಮೂರಿಗೆ ಹೊರಟ ವಲಸೆ ಕಾರ್ಮಿಕರ ಕರಾಳ ಸ್ಥಿತಿಯನ್ನು ನೆನಪಿಸುತ್ತದೆ. ಈ ಚಿತ್ರವನ್ನು ಚತ್ತೀಸ್‌ಘಡದಲ್ಲಿ ತೆಗೆಯಲಾಗಿದೆ. ಅದರ ವಿಡಿಯೋ ನೋಡಿದ್ದಲ್ಲಿ ಮತ್ತಷ್ಟು ದುರಂತ ನಮಗೆ ಕಾಣುತ್ತದೆ.

ಸುಮಾರು 20 ಸೆಕೆಂಡುಗಳ ಕ್ಲಿಪ್‌ನಲ್ಲಿ, ಆ ವ್ಯಕ್ತಿ ಮಗುವನ್ನು ಟ್ರಕ್‌ನಲ್ಲಿರುವ ಮತ್ತೊಬ್ಬ ಕಾರ್ಮಿಕನಿಗೆ ಹಸ್ತಾಂತರಿಸುತ್ತಾನೆ. ಆನಂತರ ಆತನು ಟ್ರಕ್‌ ಏರುತ್ತಾನೆ. ಅದೇ ಸಂದರ್ಭದಲ್ಲಿ ಹಲವಾರು ಮಹಿಳೆಯರು ಸಹ ಟ್ರಕ್‌ ಏರುತ್ತಾರೆ. ಸೀರೆ ತೊಟ್ಟಿರುವ ಮಹಿಳೆಯೊಬ್ಬಳು ಟ್ರಕ್‌ ಏರಲು ಹರಸಾಹಸಪಡುತ್ತಾಳೆ. ಕೊನೆಯಲ್ಲಿ ಆರು ತಿಂಗಳಿಗೂ ಕಡಿಮೆ ವಯಸ್ಸಿನ ಪುಟ್ಟ ಮಗುವನ್ನು ಸಹ ಒಂದೇ ಕೈಯಲ್ಲಿ ಎತ್ತಿ ಟ್ರಕ್‌ನಲ್ಲಿಡುವ ದುರಂತ ದೃಶ್ಯ ಮನಕಲಕುತ್ತದೆ.

ಅವರೆಲ್ಲರೂ ಜಾರ್ಖಂಡ್‌ ರಾಜ್ಯದ ವಲಸೆ ಕಾರ್ಮಿಕರಾಗಿದ್ದು ತೆಲಂಗಾಣದಲ್ಲಿ ಕೆಲಸ ಮಾಡುತ್ತಿದ್ದವರು. ಲಾಕ್‌ಡೌನ್‌ ಕಾರಣಕ್ಕೆ ಕೆಲಸ ಕಳೆದುಕೊಂಡ ಅವರು ತಮ್ಮ ಸ್ವಂತ ಊರು ತಲುಪಲು ಹೆಣಗಾಡಿದ್ದಾರೆ. ತೆಲಂಗಾಣದಿಂದ ಕಾಲ್ನಡಿಗೆಯಲ್ಲಿ ಹೊರಟ ಅವರು ಚತ್ತೀಸ್‌ಘಡದಲ್ಲಿದ್ದಾಗ ಈ ಟ್ರಕ್‌ ಸಿಕ್ಕಿದೆ. ಈ ಕುರಿತು ಅವರು ಹೇಳಿದಿಷ್ಟು.. “ನಾವು ಏನು ಮಾಡಲು ಸಾಧ್ಯವಿಲ್ಲ … ನಾವು ಅಸಹಾಯಕರಾಗಿದ್ದೇವೆ. ನಾವು ಜಾರ್ಖಂಡ್‌ಗೆ ಹೋಗಬೇಕಾಗಿದೆ. ಬೇರೆ ದಾರಿಯಿಲ್ಲ” ಎಂದು ವೃದ್ಧೆಯೊಬ್ಬರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ಪ್ರಾರಂಭಿಸಿದ ವಿಶೇಷ ರೈಲುಗಳ ಬಗ್ಗೆ ಅವರಲ್ಲಿ ಕೇಳಿದಾಗ, “ಆ ಬಗ್ಗೆ ಯಾವುದೇ ಮಾಹಿತಿ ನಮಗೆ ಸಿಗಲಿಲ್ಲ” ಎಂದಿದ್ದಾರೆ.

ಈ ಗೊಂದಲವನ್ನು ಗಮನಿಸುತ್ತಾ ಟ್ರಕ್ ಹತ್ತಿರ ನಿಂತಿದ್ದ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರು “ಬೇರೆ ಯಾವುದೇ ಸಾರಿಗೆ ಮಾರ್ಗಗಳಿಲ್ಲ. ನಾನು ಸಾರಿಗೆ ಇಲಾಖೆಯಿಂದ ಬಂದಿದ್ದೇನೆ ಆದರೆ ನಾನು ಬಸ್‌ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಆಡಳಿತವು ಅವರಿಗೆ ವಿಶೇಷ ಬಸ್ಸುಗಳನ್ನು ಒದಗಿಸಬೇಕಿದೆ” ಎಂದಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ಲಾಕ್‌ಡೌನ್‌ ಘೋಷಿಸಿದಾಗಿನಿಂದ ವಲಸಿಗರು ತಮ್ಮ ಹಳ್ಳಿಗಳಿಗೆ ಹಿಂತಿರುಗಲು ದೊಡ್ಡ ನಗರಗಳನ್ನು ತೊರೆಯುತ್ತಿದ್ದಾರೆ. ಅವರಲ್ಲಿ ಹಲವರು ನೂರಾರು-ಸಾವಿರಾರು ಕಿಲೋಮೀಟರ್ ನಡೆದು ಹೋಗಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪ್ರಯಾಣವನ್ನು ಪೂರ್ಣಗೊಳಿಸುವ ಮೊದಲೇ ಸಾವನ್ನಪ್ಪಿದ್ದಾರೆ.

ಕಳೆದ ವಾರ, 20 ಜನರ ಗುಂಪಿನಲ್ಲಿ 16 ವಲಸಿಗರು ಮಹಾರಾಷ್ಟ್ರದಲ್ಲಿ ಸರಕು ರೈಲು ಹಳಿಗಳ ಮೇಲೆ ಮಲಗಿದ್ದಾಗ ರೈಲು ಹರಿದು ಮೃತಪಟ್ಟಿದ್ದಾರೆ. ಭಾನುವಾರ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸಿಗರು ಸಾವನ್ನಪ್ಪಿದ್ದಾರೆ.

ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪುವಂತೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಇದು ಕಾರ್ಮಿಕರ ಬವಣೆಯನ್ನು ಹೆಚ್ಚಿಸಿದ್ದು, ಎಲ್ಲೆಲ್ಲಿಯೂ ಅವರ ನೋವಿನ ಚಿತ್ರಗಳು ಹರಿದಾಡುತ್ತಿವೆ.

ಕೃಪೆ: ಎನ್‌ಡಿಟಿವಿ


ಇದನ್ನೂ ಓದಿ:  ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...