Homeಮುಖಪುಟವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

ವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

- Advertisement -
- Advertisement -

ಇದೊಂದು ದುರಂತ ಚಿತ್ರ. ಈಗಾಗಲೇ ಟ್ರಕ್‌ ಒಂದು ಮೂಟೆಗಳಿಂದ ಅರ್ಧ ತುಂಬಿದೆ. ಅದರ ಮೇಲೆ ಒಂದಷ್ಟು ಜನ ಹತ್ತಿ ನಿಂತಿದ್ದಾರೆ. ಇನ್ನು ಜನ ಹತ್ತುತ್ತಿದ್ದಾರೆ. ಯುವಕನೊಬ್ಬ ಟ್ರಕ್‌ನ ಅರ್ಧಭಾಗದಲ್ಲಿ ನಿಂತು ಒಂದು ಕೈಯಲ್ಲಿ ಟ್ರಕ್‌ಗೆ ಕಟ್ಟಿರುವ ಹಗ್ಗ ಹಿಡಿದುಕೊಂಡು ಇನ್ನೊಂದು ಕೈಯಿಂದ ಮಗುವೊಂದನ್ನು ಎತ್ತಿ ಟ್ರಕ್‌ ಮೇಲಿಡುತ್ತಿರುವ ಚಿತ್ರ ಎಂತವರ ಮನಸ್ಸನು ಕದಲಿಸುಬಿಡುತ್ತದೆ. ನಿನ್ನೆ ಇಂಟರ್ನೆಟ್‌ ತುಂಬೆಲ್ಲಾ ಈ ಚಿತ್ರ ಹರಿದಾಡಿದ್ದು ವಲಸೆ ಕಾರ್ಮಿಕರ ಬವಣೆಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿತ್ತು.

ಈ ಚಿತ್ರವು ಕೆಲಸವಿಲ್ಲದೇ, ಊಟವಿಲ್ಲದೇ ವಾಪಸ್‌ ತಮ್ಮೂರಿಗೆ ಹೊರಟ ವಲಸೆ ಕಾರ್ಮಿಕರ ಕರಾಳ ಸ್ಥಿತಿಯನ್ನು ನೆನಪಿಸುತ್ತದೆ. ಈ ಚಿತ್ರವನ್ನು ಚತ್ತೀಸ್‌ಘಡದಲ್ಲಿ ತೆಗೆಯಲಾಗಿದೆ. ಅದರ ವಿಡಿಯೋ ನೋಡಿದ್ದಲ್ಲಿ ಮತ್ತಷ್ಟು ದುರಂತ ನಮಗೆ ಕಾಣುತ್ತದೆ.

ಸುಮಾರು 20 ಸೆಕೆಂಡುಗಳ ಕ್ಲಿಪ್‌ನಲ್ಲಿ, ಆ ವ್ಯಕ್ತಿ ಮಗುವನ್ನು ಟ್ರಕ್‌ನಲ್ಲಿರುವ ಮತ್ತೊಬ್ಬ ಕಾರ್ಮಿಕನಿಗೆ ಹಸ್ತಾಂತರಿಸುತ್ತಾನೆ. ಆನಂತರ ಆತನು ಟ್ರಕ್‌ ಏರುತ್ತಾನೆ. ಅದೇ ಸಂದರ್ಭದಲ್ಲಿ ಹಲವಾರು ಮಹಿಳೆಯರು ಸಹ ಟ್ರಕ್‌ ಏರುತ್ತಾರೆ. ಸೀರೆ ತೊಟ್ಟಿರುವ ಮಹಿಳೆಯೊಬ್ಬಳು ಟ್ರಕ್‌ ಏರಲು ಹರಸಾಹಸಪಡುತ್ತಾಳೆ. ಕೊನೆಯಲ್ಲಿ ಆರು ತಿಂಗಳಿಗೂ ಕಡಿಮೆ ವಯಸ್ಸಿನ ಪುಟ್ಟ ಮಗುವನ್ನು ಸಹ ಒಂದೇ ಕೈಯಲ್ಲಿ ಎತ್ತಿ ಟ್ರಕ್‌ನಲ್ಲಿಡುವ ದುರಂತ ದೃಶ್ಯ ಮನಕಲಕುತ್ತದೆ.

ಅವರೆಲ್ಲರೂ ಜಾರ್ಖಂಡ್‌ ರಾಜ್ಯದ ವಲಸೆ ಕಾರ್ಮಿಕರಾಗಿದ್ದು ತೆಲಂಗಾಣದಲ್ಲಿ ಕೆಲಸ ಮಾಡುತ್ತಿದ್ದವರು. ಲಾಕ್‌ಡೌನ್‌ ಕಾರಣಕ್ಕೆ ಕೆಲಸ ಕಳೆದುಕೊಂಡ ಅವರು ತಮ್ಮ ಸ್ವಂತ ಊರು ತಲುಪಲು ಹೆಣಗಾಡಿದ್ದಾರೆ. ತೆಲಂಗಾಣದಿಂದ ಕಾಲ್ನಡಿಗೆಯಲ್ಲಿ ಹೊರಟ ಅವರು ಚತ್ತೀಸ್‌ಘಡದಲ್ಲಿದ್ದಾಗ ಈ ಟ್ರಕ್‌ ಸಿಕ್ಕಿದೆ. ಈ ಕುರಿತು ಅವರು ಹೇಳಿದಿಷ್ಟು.. “ನಾವು ಏನು ಮಾಡಲು ಸಾಧ್ಯವಿಲ್ಲ … ನಾವು ಅಸಹಾಯಕರಾಗಿದ್ದೇವೆ. ನಾವು ಜಾರ್ಖಂಡ್‌ಗೆ ಹೋಗಬೇಕಾಗಿದೆ. ಬೇರೆ ದಾರಿಯಿಲ್ಲ” ಎಂದು ವೃದ್ಧೆಯೊಬ್ಬರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ಪ್ರಾರಂಭಿಸಿದ ವಿಶೇಷ ರೈಲುಗಳ ಬಗ್ಗೆ ಅವರಲ್ಲಿ ಕೇಳಿದಾಗ, “ಆ ಬಗ್ಗೆ ಯಾವುದೇ ಮಾಹಿತಿ ನಮಗೆ ಸಿಗಲಿಲ್ಲ” ಎಂದಿದ್ದಾರೆ.

ಈ ಗೊಂದಲವನ್ನು ಗಮನಿಸುತ್ತಾ ಟ್ರಕ್ ಹತ್ತಿರ ನಿಂತಿದ್ದ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರು “ಬೇರೆ ಯಾವುದೇ ಸಾರಿಗೆ ಮಾರ್ಗಗಳಿಲ್ಲ. ನಾನು ಸಾರಿಗೆ ಇಲಾಖೆಯಿಂದ ಬಂದಿದ್ದೇನೆ ಆದರೆ ನಾನು ಬಸ್‌ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಆಡಳಿತವು ಅವರಿಗೆ ವಿಶೇಷ ಬಸ್ಸುಗಳನ್ನು ಒದಗಿಸಬೇಕಿದೆ” ಎಂದಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ಲಾಕ್‌ಡೌನ್‌ ಘೋಷಿಸಿದಾಗಿನಿಂದ ವಲಸಿಗರು ತಮ್ಮ ಹಳ್ಳಿಗಳಿಗೆ ಹಿಂತಿರುಗಲು ದೊಡ್ಡ ನಗರಗಳನ್ನು ತೊರೆಯುತ್ತಿದ್ದಾರೆ. ಅವರಲ್ಲಿ ಹಲವರು ನೂರಾರು-ಸಾವಿರಾರು ಕಿಲೋಮೀಟರ್ ನಡೆದು ಹೋಗಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪ್ರಯಾಣವನ್ನು ಪೂರ್ಣಗೊಳಿಸುವ ಮೊದಲೇ ಸಾವನ್ನಪ್ಪಿದ್ದಾರೆ.

ಕಳೆದ ವಾರ, 20 ಜನರ ಗುಂಪಿನಲ್ಲಿ 16 ವಲಸಿಗರು ಮಹಾರಾಷ್ಟ್ರದಲ್ಲಿ ಸರಕು ರೈಲು ಹಳಿಗಳ ಮೇಲೆ ಮಲಗಿದ್ದಾಗ ರೈಲು ಹರಿದು ಮೃತಪಟ್ಟಿದ್ದಾರೆ. ಭಾನುವಾರ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸಿಗರು ಸಾವನ್ನಪ್ಪಿದ್ದಾರೆ.

ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪುವಂತೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಇದು ಕಾರ್ಮಿಕರ ಬವಣೆಯನ್ನು ಹೆಚ್ಚಿಸಿದ್ದು, ಎಲ್ಲೆಲ್ಲಿಯೂ ಅವರ ನೋವಿನ ಚಿತ್ರಗಳು ಹರಿದಾಡುತ್ತಿವೆ.

ಕೃಪೆ: ಎನ್‌ಡಿಟಿವಿ


ಇದನ್ನೂ ಓದಿ:  ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...