Homeಮುಖಪುಟಆಸ್ಕರ್‌, ಆಸ್ಕರಣ್ಣನಾಗಿಯೇ ಉಳಿದಿದ್ದರು: ಪುರುಷೋತ್ತಮ ಬಿಳಿಮಲೆ

ಆಸ್ಕರ್‌, ಆಸ್ಕರಣ್ಣನಾಗಿಯೇ ಉಳಿದಿದ್ದರು: ಪುರುಷೋತ್ತಮ ಬಿಳಿಮಲೆ

ಆಸ್ಕರ್‌ ಫೆರ್ನಾಂಡಿಸ್‌ ರಾಜೀವ್‌ ಗಾಂಧಿ ಕಾಲದಿಂದಲೂ ಗಾಂಧೀ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದರು. ಆದರೆ ಈ ಸಂಬಂಧವನ್ನು ಅವರೆಂದೂ ದುರುಪಯೋಗಪಡಿಸಿಕೊಂಡವರಲ್ಲ.

- Advertisement -
- Advertisement -

ಕಾಲನ ಗರ್ಭ ಸೇರಿದ ಆಸ್ಕರ್‌

80 ವರ್ಷದ ಆಸ್ಕರ್‌ ಫೆರ್ನಾಂಡಿಸ್‌ ( ಮಾರ್ಚ್‌ 27, 1941) ಇನ್ನಿಲ್ಲವೆಂಬ ಸುದ್ದಿ ತಲುಪಿದಾಗ ಕಾಲನ ಚಕ್ರಗಳು ಹಿಂದಕ್ಕೆ ಸರಿಯತೊಡಗಿದುವು. ದೇವರಾಜು ಅರಸು ಕಾಲದಲ್ಲಿ ಕರಾವಳಿಯ ಹಿಂದುಳಿದ ವರ್ಗದಿಂದ ಮೇಲೆದ್ದು ಬಂದ ಶ್ರೀಗಳಾದ ಜನಾರ್ದನ ಪೂಜಾರಿ, ಆಸ್ಕರ್‌ ಫೆರ್ನಾಂಡಿಸ್‌ ಮತ್ತು ವೀರಪ್ಪ ಮೊಯಿಲಿ ತಮ್ಮ ರಾಜಕೀಯ ಏಳುಬೀಳುಗಳ ನಡುವೆಯೂ ಕೊನೆಯವರೆಗೆ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾಗಿಯೇ ಉಳಿದರು.

ಈ ತ್ರಿಮೂರ್ತಿಗಳಲ್ಲಿ ಆಸ್ಕರ್‌ ಫೆರ್ನಾಂಡಿಸ್‌ ರಾಜೀವ್‌ ಗಾಂಧಿ ಕಾಲದಿಂದಲೂ ಗಾಂಧೀ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದರು. ಆದರೆ ಈ ಸಂಬಂಧವನ್ನು ಅವರೆಂದೂ ದುರುಪಯೋಗಪಡಿಸಿಕೊಂಡವರಲ್ಲ. ಜೊತೆಗೆ ಆಸ್ಕರ್‌ ಎಂದೂ ಮಹತ್ವಾಕಾಂಕ್ಷಿಯೂ ಆಗಿರಲಿಲ್ಲ. ಪಾಲಿಗೆ ಬಂದದ್ದು ಪಂಚಾಮೃತ ಎಂದು ಭಾವಿಸುತ್ತಿದ್ದ ಅವರು ಕೇಂದ್ರದಲ್ಲಿ ರಸ್ತೆ ಸಾರಿಗೆ, ಹೆದ್ದಾರಿ, ಕಾರ್ಮಿಕ ಮತ್ತು ಉದ್ಯೋಗ, ಯೋಜನಾ ಅನುಷ್ಠಾನ, ಯುವಜನ ಹಾಗೂ ಕ್ರೀಡಾ ಸಚಿವರಾಗಿ ಕೆಲಸ ನಿರ್ವಹಿಸಿದ್ದಾರೆ. ಮಂತ್ರಿಯಾದಾಗ ಅವರು ಹಿಗ್ಗಿದವರಲ್ಲ, ಆಗದಿದ್ದಾಗ ಅವರು ಕುಗ್ಗಿದವರಲ್ಲ. ಆಸ್ಕರ್‌, ಆಸ್ಕರಣ್ಣ ನಾಗಿಯೇ ಉಳಿದಿದ್ದರು.

1975-76ರ ಅವಧಿಯಲ್ಲಿ ಉಡುಪಿಯ ಮುನ್ಸಿಪಲ್‌ ಕೌನ್ಸಿಲ್‌ನ ಸದಸ್ಯರಾಗಿದ್ದ ಅವರು 1980ರಲ್ಲಿ ಮೊದಲ ಬಾರಿಗೆ ವಿ.ಎಸ್‌ ಆಚಾರ್ಯರನ್ನು ಸೋಲಿಸಿ, ಉಡುಪಿ ಕ್ಷೇತ್ರದಿಂದ ಏಳನೇ ಲೋಕ ಸಭೆ ಪ್ರವೇಶಿಸಿದ ಅವರು ಮುಂದೆ, 1984 ರಲ್ಲಿ ಕೆ ಎಸ್‌ ಹೆಗ್ಡೆ , 1989 ರಲ್ಲಿ ಎಂ ಸಂಜೀವ, 1991ರಲ್ಲಿ ರುಕ್ಮಯ್ಯ ಪೂಜಾರಿಯರನ್ನು ಮತ್ತು 1996ರಲ್ಲಿ ಜಯರಾಮ ಶೆಟ್ಟರನ್ನು ಸೋಲಿಸಿ ಲೋಕ ಸಭೆಗೆ ಆಯ್ಕೆಯಾದರು.

1980ರಲ್ಲಿ ಮೊದಲ ಸಲ ಆಸ್ಕರ್‌ ಗೆದ್ದಾಗ ಅವರ ಗೆಲುವಿನ ಅಂತರ ಒಂದೂವರೆ ಲಕ್ಷವಾಗಿದ್ದರೆ, 196ರಲ್ಲಿ ಅವರ ಗೆಲುವಿನ ಅಂತರ ಕೇವಲ ಎರಡು ಸಾವಿರವಾಗಿತ್ತು. ಆ ಹೊತ್ತಿಗೆ ದೆಹಲಿ ಕೇಂದ್ರಿತ ರಾಜಕಾರಣದಲ್ಲಿ ಮುಳುಗಿದ್ದ ಆಸ್ಕರ್‌ ಅವರಿಗೆ ತನ್ನ ಕಾಲ ಕೆಳಗಿನ ನೆಲ ಕುಸಿಯುವುದು ಗೊತ್ತಾಗಲೇ ಇಲ್ಲ. ಅವರು ತನಗೆ ಮತ ಹಾಕಿದವರಿಗಿಂತ ಹೆಚ್ಚಗಿ ದೆಹಲಿ ಜನಗಳಿಗೇ ಹತ್ತಿರವಾಗುತ್ತಾ ಹೋದರು. ಕಾಂಗ್ರೆಸ್‌ ನ ಕೇಂದ್ರ ಕಚೇರಿಯಲ್ಲಿಯೇ ಅವರು 24 ಗಂಟೆಗಳ ಕಾಲ ದುಡಿಯತೊಡಗಿದರು. ಪರಿಣಾಮವಾಗಿ, 1998ರ ಲೋಕ ಸಭಾ ಚುನಾವಣೆಯಲ್ಲಿ ಅವರು ಸುಮಾರು 42 ಸಾವಿರ ಮತಗಳಿಂದ ಸೋತರು. ಸೋತರೂ ಮತ್ತೆ ರಾಜ್ಯ ಸಭೆಗೆ ಪ್ರವೇಶ ಪಡೆದರು.

80-90ರ ದಶಕದಲ್ಲಿ ಆಗಿನ್ನೂ ಯುವಕರಾಗಿದ್ದ ಆಸ್ಕರ್‌ ಫೆರ್ನಾಂಡಿಸ್‌ ಮತ್ತು ವೀರಪ್ಪ ಮೊಯಿಲಿಯವರು ತಮಗೊದಗಿದ ಅವಕಾಶಗಳನ್ನು ಉಪಯೋಗಿಸಿಕೊಂಡು ಉಡುಪಿ ಮಂಗಳೂರುಗಳಲ್ಲಿ ಹೆಚ್ಚು ಕೆಲಸ ಮಾಡಿದ್ದರೆ, ಕರಾವಳಿ ಇವತ್ತು ಈ ಮಟ್ಟಿನ ಕೋಮುವಾದಕ್ಕೆ ಬಲಿಯಾಗುತ್ತಿರಲಿಲ್ಲ. ಭೂ ಸುಧಾರಣೆಯ ಆನಂತರ ಹುಟ್ಟಿಕೊಂಡ ಹೊಸ ತಲೆಮಾರಿನ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಈ ನಾಯಕರು ವಿಫಲರಾಗಿದ್ದರು. ಕಾರಣ ತಮ್ಮದೇ ಜನಗಳಿಂದ ದೂರವಾಗುತ್ತಲೇ ಹೋದರು. ಪೂಜಾರಿಯವರು ಮತ್ತು ಮೊಯಿಲಿಯವರು ಸೋತರು, ಆಸ್ಕರ್‌ ಇದೀಗ ಕೊನೆಯುಸಿರು ಎಳೆದರು.

ಮೃದು ಮಾತಿನ ಆಸ್ಕರ್‌ ಅಂದರೆ ದೆಹಲಿಯಲ್ಲಿ ಎಲ್ಲರಿಗೂ ಇಷ್ಟ. ಯೋಗ ಮತ್ತು ಕಥಕ್‌ ಅವರ ಪ್ರೀತಿಯ ಹವ್ಯಾಸಗಳು. ಹೆಂಡತಿ ಬ್ಲೋಸಮ್‌ ರನ್ನು ಹತ್ತಿರ ಕುಳಿತುಕೊಳ್ಳಿಸದೇ ಇದ್ದರೆ ಅವರು ಭಾಷಣ ಮಾಡುತ್ತಲೇ ಇರಲಿಲ್ಲ. ಕಚೇರಿಗೆ ಯಾರು ಹೋದರೂ ಕರೆದು ಮಾತಾಡಿಸುವ ಸೌಜನ್ಯ, ನಮ್ಮಂಥ ರಾಜಕೀಯೇತರ ಜನರು ಹೋದರೆ ಹತ್ತಿರ ಕುಳ್ಳಿರಿಸಿಕೊಂಡು ಹೆಗಲ ಮೇಲೆ ಕೈ ಹಾಕಿ ಹರಟುವ ಪ್ರೀತಿ ಮೊದಲಾದ ಗುಣಗಳಿಂದಾಗಿ ಆಸ್ಕರ್‌ ಅಜಾತ ಶತ್ರುವಾಗಿಯೇ ಉಳಿದರು.

2004-2008ರ ಅವಧಿಯಲ್ಲಿ ನಾನು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷನಾಗಿ ಸಂಘಕ್ಕೊಂದು ಸಾಂಸ್ಕೃತಿಕ ಸಮುಚ್ಚಯ ಕಟ್ಟುತ್ತಿದ್ದಾಗ, ಆಸ್ಕರ್‌, ಮೊಯಿಲಿ ಮತ್ತು ಅನಂತ ಕುಮಾರ್‌ ನಮ್ಮ ಸಹಾಯಕ್ಕೆ ನಿಂತಿದ್ದರು. ಕಟ್ಟಡದ ಉದ್ಘಾಟನೆಯ ಸಂದರ್ಭದಲ್ಲಿ ಗೆಳೆಯ ವಸಂತ ಶೆಟ್ಟಿ ಬೆಳ್ಳಾರೆಯವರು ಆಸ್ಕರ್‌ ಮತ್ತು ಮೊಯಿಲಿಯವರನ್ನು ಸೇರಿಸಿ ಯಕ್ಷಗಾನವನ್ನು ಮಾಡುವ ಯೋಜನೆ ರೂಪಿಸಿದರು. ಮಂಗಳೂರಿನಿಂದ ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿಯವರು ಸಹಾಯ ಹಸ್ತ ಚಾಚಿದರು. ವಿದ್ಯಾ ಕೋಳ್ಯೂರು ತರಬೇತಿ ನೀಡಿದರು. ಕೃಷ್ಣ ಭಟ್ಟರು ಎಲ್ಲ ವ್ಯವಸ್ಥೆ ಮಾಡಿದರು. ಆಸ್ಕರ್‌ ಅವರದು ʼ ಅತ್ಯುನ್ನತಿಯೊಳ್‌ ಅಮರಸಿಂಧೂದ್ಭವನಾದ ಭೀಷ್ಮಾಚಾರ್ಯ, ಮೊಯಿಲಿಯವರದು ʼ ಸೂತ ಪುತ್ರ ಕರ್ಣʼ, ನಂದು ʼನೀತಿವಂತ ವಿದುರʼ ಇತ್ಯಾದಿ. ಒಂದು ಹಂತದಲ್ಲಿ ಭೀಷ್ಮಚಾರ್ಯ ಅವರು ಇದಿರಾದಾಗ ನಾನು ( ವಿದುರ) ಹೇಳಿದೆ-
ʼ ಅಚಾರ್ಯರೇ, ನಿಮಗೆ ಹಸ್ತಿನಾಪುರದ ಪಟ್ಟವನ್ನು ಕಾಯುವುದೇ ಕೆಲಸವಾಯಿತಲ್ಲ? ನೀವು ಪಟ್ಟವೇರುವುದು ಯಾವಾಗ?

ತುಂಬಿದ ಸಭೆ ಚಪ್ಪಳೆ ತಟ್ಟಿತು, ಭೀಷ್ಮರು ಮುಗುಳ್ನಕ್ಕರು.

ಮರುದಿನ ದೇಶದಾದ್ಯಂತ ʼ ನೇತಾ ಬನ್‌ ಗಯಾ ಅಭಿನೇತಾʼ ಅಂತ ಸುದ್ದಿಯಾಯಿತು.
ರಾಜಕೀಯದ ಪಟ್ಟುಗಳು ಕ್ಷಿಪ್ರವಾಗಿ ಬದಲಾಗುತ್ತಿರುವಾಗ ಆಸ್ಕರ್‌ ಮರೆಯಾದದ್ದು ಸಾಂಕೇತಿಕವೂ ಹೌದು .

ಪೋತು ಬಲೆ ಆಸ್ಕರಣ್ಣ!

(ಚಿತ್ರದಲ್ಲಿ ಎಡಬದಿಗೆ ಕರ್ಣನಾಗಿ ಮೊಯಿಲಿ, ಮಧ್ಯೆ ಭೀಷ್ಮನಾಗಿ ಆಸ್ಕರ್‌ ಮತ್ತು ಬಲಬದಿಯಲ್ಲಿ ವಿದುರನಾಗಿ ನಾನು, ಫೋಟೋ: ದಿನೇಶ್‌ ಶೆಣೈ)
  • ಪುರುಷೋತ್ತಮ ಬಿಳಿಮಲೆ

ಇದನ್ನೂ ಓದಿ: ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ (80) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...