Homeಮುಖಪುಟಆಸ್ಕರ್‌, ಆಸ್ಕರಣ್ಣನಾಗಿಯೇ ಉಳಿದಿದ್ದರು: ಪುರುಷೋತ್ತಮ ಬಿಳಿಮಲೆ

ಆಸ್ಕರ್‌, ಆಸ್ಕರಣ್ಣನಾಗಿಯೇ ಉಳಿದಿದ್ದರು: ಪುರುಷೋತ್ತಮ ಬಿಳಿಮಲೆ

ಆಸ್ಕರ್‌ ಫೆರ್ನಾಂಡಿಸ್‌ ರಾಜೀವ್‌ ಗಾಂಧಿ ಕಾಲದಿಂದಲೂ ಗಾಂಧೀ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದರು. ಆದರೆ ಈ ಸಂಬಂಧವನ್ನು ಅವರೆಂದೂ ದುರುಪಯೋಗಪಡಿಸಿಕೊಂಡವರಲ್ಲ.

- Advertisement -
- Advertisement -

ಕಾಲನ ಗರ್ಭ ಸೇರಿದ ಆಸ್ಕರ್‌

80 ವರ್ಷದ ಆಸ್ಕರ್‌ ಫೆರ್ನಾಂಡಿಸ್‌ ( ಮಾರ್ಚ್‌ 27, 1941) ಇನ್ನಿಲ್ಲವೆಂಬ ಸುದ್ದಿ ತಲುಪಿದಾಗ ಕಾಲನ ಚಕ್ರಗಳು ಹಿಂದಕ್ಕೆ ಸರಿಯತೊಡಗಿದುವು. ದೇವರಾಜು ಅರಸು ಕಾಲದಲ್ಲಿ ಕರಾವಳಿಯ ಹಿಂದುಳಿದ ವರ್ಗದಿಂದ ಮೇಲೆದ್ದು ಬಂದ ಶ್ರೀಗಳಾದ ಜನಾರ್ದನ ಪೂಜಾರಿ, ಆಸ್ಕರ್‌ ಫೆರ್ನಾಂಡಿಸ್‌ ಮತ್ತು ವೀರಪ್ಪ ಮೊಯಿಲಿ ತಮ್ಮ ರಾಜಕೀಯ ಏಳುಬೀಳುಗಳ ನಡುವೆಯೂ ಕೊನೆಯವರೆಗೆ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾಗಿಯೇ ಉಳಿದರು.

ಈ ತ್ರಿಮೂರ್ತಿಗಳಲ್ಲಿ ಆಸ್ಕರ್‌ ಫೆರ್ನಾಂಡಿಸ್‌ ರಾಜೀವ್‌ ಗಾಂಧಿ ಕಾಲದಿಂದಲೂ ಗಾಂಧೀ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದರು. ಆದರೆ ಈ ಸಂಬಂಧವನ್ನು ಅವರೆಂದೂ ದುರುಪಯೋಗಪಡಿಸಿಕೊಂಡವರಲ್ಲ. ಜೊತೆಗೆ ಆಸ್ಕರ್‌ ಎಂದೂ ಮಹತ್ವಾಕಾಂಕ್ಷಿಯೂ ಆಗಿರಲಿಲ್ಲ. ಪಾಲಿಗೆ ಬಂದದ್ದು ಪಂಚಾಮೃತ ಎಂದು ಭಾವಿಸುತ್ತಿದ್ದ ಅವರು ಕೇಂದ್ರದಲ್ಲಿ ರಸ್ತೆ ಸಾರಿಗೆ, ಹೆದ್ದಾರಿ, ಕಾರ್ಮಿಕ ಮತ್ತು ಉದ್ಯೋಗ, ಯೋಜನಾ ಅನುಷ್ಠಾನ, ಯುವಜನ ಹಾಗೂ ಕ್ರೀಡಾ ಸಚಿವರಾಗಿ ಕೆಲಸ ನಿರ್ವಹಿಸಿದ್ದಾರೆ. ಮಂತ್ರಿಯಾದಾಗ ಅವರು ಹಿಗ್ಗಿದವರಲ್ಲ, ಆಗದಿದ್ದಾಗ ಅವರು ಕುಗ್ಗಿದವರಲ್ಲ. ಆಸ್ಕರ್‌, ಆಸ್ಕರಣ್ಣ ನಾಗಿಯೇ ಉಳಿದಿದ್ದರು.

1975-76ರ ಅವಧಿಯಲ್ಲಿ ಉಡುಪಿಯ ಮುನ್ಸಿಪಲ್‌ ಕೌನ್ಸಿಲ್‌ನ ಸದಸ್ಯರಾಗಿದ್ದ ಅವರು 1980ರಲ್ಲಿ ಮೊದಲ ಬಾರಿಗೆ ವಿ.ಎಸ್‌ ಆಚಾರ್ಯರನ್ನು ಸೋಲಿಸಿ, ಉಡುಪಿ ಕ್ಷೇತ್ರದಿಂದ ಏಳನೇ ಲೋಕ ಸಭೆ ಪ್ರವೇಶಿಸಿದ ಅವರು ಮುಂದೆ, 1984 ರಲ್ಲಿ ಕೆ ಎಸ್‌ ಹೆಗ್ಡೆ , 1989 ರಲ್ಲಿ ಎಂ ಸಂಜೀವ, 1991ರಲ್ಲಿ ರುಕ್ಮಯ್ಯ ಪೂಜಾರಿಯರನ್ನು ಮತ್ತು 1996ರಲ್ಲಿ ಜಯರಾಮ ಶೆಟ್ಟರನ್ನು ಸೋಲಿಸಿ ಲೋಕ ಸಭೆಗೆ ಆಯ್ಕೆಯಾದರು.

1980ರಲ್ಲಿ ಮೊದಲ ಸಲ ಆಸ್ಕರ್‌ ಗೆದ್ದಾಗ ಅವರ ಗೆಲುವಿನ ಅಂತರ ಒಂದೂವರೆ ಲಕ್ಷವಾಗಿದ್ದರೆ, 196ರಲ್ಲಿ ಅವರ ಗೆಲುವಿನ ಅಂತರ ಕೇವಲ ಎರಡು ಸಾವಿರವಾಗಿತ್ತು. ಆ ಹೊತ್ತಿಗೆ ದೆಹಲಿ ಕೇಂದ್ರಿತ ರಾಜಕಾರಣದಲ್ಲಿ ಮುಳುಗಿದ್ದ ಆಸ್ಕರ್‌ ಅವರಿಗೆ ತನ್ನ ಕಾಲ ಕೆಳಗಿನ ನೆಲ ಕುಸಿಯುವುದು ಗೊತ್ತಾಗಲೇ ಇಲ್ಲ. ಅವರು ತನಗೆ ಮತ ಹಾಕಿದವರಿಗಿಂತ ಹೆಚ್ಚಗಿ ದೆಹಲಿ ಜನಗಳಿಗೇ ಹತ್ತಿರವಾಗುತ್ತಾ ಹೋದರು. ಕಾಂಗ್ರೆಸ್‌ ನ ಕೇಂದ್ರ ಕಚೇರಿಯಲ್ಲಿಯೇ ಅವರು 24 ಗಂಟೆಗಳ ಕಾಲ ದುಡಿಯತೊಡಗಿದರು. ಪರಿಣಾಮವಾಗಿ, 1998ರ ಲೋಕ ಸಭಾ ಚುನಾವಣೆಯಲ್ಲಿ ಅವರು ಸುಮಾರು 42 ಸಾವಿರ ಮತಗಳಿಂದ ಸೋತರು. ಸೋತರೂ ಮತ್ತೆ ರಾಜ್ಯ ಸಭೆಗೆ ಪ್ರವೇಶ ಪಡೆದರು.

80-90ರ ದಶಕದಲ್ಲಿ ಆಗಿನ್ನೂ ಯುವಕರಾಗಿದ್ದ ಆಸ್ಕರ್‌ ಫೆರ್ನಾಂಡಿಸ್‌ ಮತ್ತು ವೀರಪ್ಪ ಮೊಯಿಲಿಯವರು ತಮಗೊದಗಿದ ಅವಕಾಶಗಳನ್ನು ಉಪಯೋಗಿಸಿಕೊಂಡು ಉಡುಪಿ ಮಂಗಳೂರುಗಳಲ್ಲಿ ಹೆಚ್ಚು ಕೆಲಸ ಮಾಡಿದ್ದರೆ, ಕರಾವಳಿ ಇವತ್ತು ಈ ಮಟ್ಟಿನ ಕೋಮುವಾದಕ್ಕೆ ಬಲಿಯಾಗುತ್ತಿರಲಿಲ್ಲ. ಭೂ ಸುಧಾರಣೆಯ ಆನಂತರ ಹುಟ್ಟಿಕೊಂಡ ಹೊಸ ತಲೆಮಾರಿನ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಈ ನಾಯಕರು ವಿಫಲರಾಗಿದ್ದರು. ಕಾರಣ ತಮ್ಮದೇ ಜನಗಳಿಂದ ದೂರವಾಗುತ್ತಲೇ ಹೋದರು. ಪೂಜಾರಿಯವರು ಮತ್ತು ಮೊಯಿಲಿಯವರು ಸೋತರು, ಆಸ್ಕರ್‌ ಇದೀಗ ಕೊನೆಯುಸಿರು ಎಳೆದರು.

ಮೃದು ಮಾತಿನ ಆಸ್ಕರ್‌ ಅಂದರೆ ದೆಹಲಿಯಲ್ಲಿ ಎಲ್ಲರಿಗೂ ಇಷ್ಟ. ಯೋಗ ಮತ್ತು ಕಥಕ್‌ ಅವರ ಪ್ರೀತಿಯ ಹವ್ಯಾಸಗಳು. ಹೆಂಡತಿ ಬ್ಲೋಸಮ್‌ ರನ್ನು ಹತ್ತಿರ ಕುಳಿತುಕೊಳ್ಳಿಸದೇ ಇದ್ದರೆ ಅವರು ಭಾಷಣ ಮಾಡುತ್ತಲೇ ಇರಲಿಲ್ಲ. ಕಚೇರಿಗೆ ಯಾರು ಹೋದರೂ ಕರೆದು ಮಾತಾಡಿಸುವ ಸೌಜನ್ಯ, ನಮ್ಮಂಥ ರಾಜಕೀಯೇತರ ಜನರು ಹೋದರೆ ಹತ್ತಿರ ಕುಳ್ಳಿರಿಸಿಕೊಂಡು ಹೆಗಲ ಮೇಲೆ ಕೈ ಹಾಕಿ ಹರಟುವ ಪ್ರೀತಿ ಮೊದಲಾದ ಗುಣಗಳಿಂದಾಗಿ ಆಸ್ಕರ್‌ ಅಜಾತ ಶತ್ರುವಾಗಿಯೇ ಉಳಿದರು.

2004-2008ರ ಅವಧಿಯಲ್ಲಿ ನಾನು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷನಾಗಿ ಸಂಘಕ್ಕೊಂದು ಸಾಂಸ್ಕೃತಿಕ ಸಮುಚ್ಚಯ ಕಟ್ಟುತ್ತಿದ್ದಾಗ, ಆಸ್ಕರ್‌, ಮೊಯಿಲಿ ಮತ್ತು ಅನಂತ ಕುಮಾರ್‌ ನಮ್ಮ ಸಹಾಯಕ್ಕೆ ನಿಂತಿದ್ದರು. ಕಟ್ಟಡದ ಉದ್ಘಾಟನೆಯ ಸಂದರ್ಭದಲ್ಲಿ ಗೆಳೆಯ ವಸಂತ ಶೆಟ್ಟಿ ಬೆಳ್ಳಾರೆಯವರು ಆಸ್ಕರ್‌ ಮತ್ತು ಮೊಯಿಲಿಯವರನ್ನು ಸೇರಿಸಿ ಯಕ್ಷಗಾನವನ್ನು ಮಾಡುವ ಯೋಜನೆ ರೂಪಿಸಿದರು. ಮಂಗಳೂರಿನಿಂದ ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿಯವರು ಸಹಾಯ ಹಸ್ತ ಚಾಚಿದರು. ವಿದ್ಯಾ ಕೋಳ್ಯೂರು ತರಬೇತಿ ನೀಡಿದರು. ಕೃಷ್ಣ ಭಟ್ಟರು ಎಲ್ಲ ವ್ಯವಸ್ಥೆ ಮಾಡಿದರು. ಆಸ್ಕರ್‌ ಅವರದು ʼ ಅತ್ಯುನ್ನತಿಯೊಳ್‌ ಅಮರಸಿಂಧೂದ್ಭವನಾದ ಭೀಷ್ಮಾಚಾರ್ಯ, ಮೊಯಿಲಿಯವರದು ʼ ಸೂತ ಪುತ್ರ ಕರ್ಣʼ, ನಂದು ʼನೀತಿವಂತ ವಿದುರʼ ಇತ್ಯಾದಿ. ಒಂದು ಹಂತದಲ್ಲಿ ಭೀಷ್ಮಚಾರ್ಯ ಅವರು ಇದಿರಾದಾಗ ನಾನು ( ವಿದುರ) ಹೇಳಿದೆ-
ʼ ಅಚಾರ್ಯರೇ, ನಿಮಗೆ ಹಸ್ತಿನಾಪುರದ ಪಟ್ಟವನ್ನು ಕಾಯುವುದೇ ಕೆಲಸವಾಯಿತಲ್ಲ? ನೀವು ಪಟ್ಟವೇರುವುದು ಯಾವಾಗ?

ತುಂಬಿದ ಸಭೆ ಚಪ್ಪಳೆ ತಟ್ಟಿತು, ಭೀಷ್ಮರು ಮುಗುಳ್ನಕ್ಕರು.

ಮರುದಿನ ದೇಶದಾದ್ಯಂತ ʼ ನೇತಾ ಬನ್‌ ಗಯಾ ಅಭಿನೇತಾʼ ಅಂತ ಸುದ್ದಿಯಾಯಿತು.
ರಾಜಕೀಯದ ಪಟ್ಟುಗಳು ಕ್ಷಿಪ್ರವಾಗಿ ಬದಲಾಗುತ್ತಿರುವಾಗ ಆಸ್ಕರ್‌ ಮರೆಯಾದದ್ದು ಸಾಂಕೇತಿಕವೂ ಹೌದು .

ಪೋತು ಬಲೆ ಆಸ್ಕರಣ್ಣ!

(ಚಿತ್ರದಲ್ಲಿ ಎಡಬದಿಗೆ ಕರ್ಣನಾಗಿ ಮೊಯಿಲಿ, ಮಧ್ಯೆ ಭೀಷ್ಮನಾಗಿ ಆಸ್ಕರ್‌ ಮತ್ತು ಬಲಬದಿಯಲ್ಲಿ ವಿದುರನಾಗಿ ನಾನು, ಫೋಟೋ: ದಿನೇಶ್‌ ಶೆಣೈ)
  • ಪುರುಷೋತ್ತಮ ಬಿಳಿಮಲೆ

ಇದನ್ನೂ ಓದಿ: ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ (80) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...