Homeಮುಖಪುಟಆಸ್ಕರ್‌, ಆಸ್ಕರಣ್ಣನಾಗಿಯೇ ಉಳಿದಿದ್ದರು: ಪುರುಷೋತ್ತಮ ಬಿಳಿಮಲೆ

ಆಸ್ಕರ್‌, ಆಸ್ಕರಣ್ಣನಾಗಿಯೇ ಉಳಿದಿದ್ದರು: ಪುರುಷೋತ್ತಮ ಬಿಳಿಮಲೆ

ಆಸ್ಕರ್‌ ಫೆರ್ನಾಂಡಿಸ್‌ ರಾಜೀವ್‌ ಗಾಂಧಿ ಕಾಲದಿಂದಲೂ ಗಾಂಧೀ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದರು. ಆದರೆ ಈ ಸಂಬಂಧವನ್ನು ಅವರೆಂದೂ ದುರುಪಯೋಗಪಡಿಸಿಕೊಂಡವರಲ್ಲ.

- Advertisement -
- Advertisement -

ಕಾಲನ ಗರ್ಭ ಸೇರಿದ ಆಸ್ಕರ್‌

80 ವರ್ಷದ ಆಸ್ಕರ್‌ ಫೆರ್ನಾಂಡಿಸ್‌ ( ಮಾರ್ಚ್‌ 27, 1941) ಇನ್ನಿಲ್ಲವೆಂಬ ಸುದ್ದಿ ತಲುಪಿದಾಗ ಕಾಲನ ಚಕ್ರಗಳು ಹಿಂದಕ್ಕೆ ಸರಿಯತೊಡಗಿದುವು. ದೇವರಾಜು ಅರಸು ಕಾಲದಲ್ಲಿ ಕರಾವಳಿಯ ಹಿಂದುಳಿದ ವರ್ಗದಿಂದ ಮೇಲೆದ್ದು ಬಂದ ಶ್ರೀಗಳಾದ ಜನಾರ್ದನ ಪೂಜಾರಿ, ಆಸ್ಕರ್‌ ಫೆರ್ನಾಂಡಿಸ್‌ ಮತ್ತು ವೀರಪ್ಪ ಮೊಯಿಲಿ ತಮ್ಮ ರಾಜಕೀಯ ಏಳುಬೀಳುಗಳ ನಡುವೆಯೂ ಕೊನೆಯವರೆಗೆ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾಗಿಯೇ ಉಳಿದರು.

ಈ ತ್ರಿಮೂರ್ತಿಗಳಲ್ಲಿ ಆಸ್ಕರ್‌ ಫೆರ್ನಾಂಡಿಸ್‌ ರಾಜೀವ್‌ ಗಾಂಧಿ ಕಾಲದಿಂದಲೂ ಗಾಂಧೀ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದರು. ಆದರೆ ಈ ಸಂಬಂಧವನ್ನು ಅವರೆಂದೂ ದುರುಪಯೋಗಪಡಿಸಿಕೊಂಡವರಲ್ಲ. ಜೊತೆಗೆ ಆಸ್ಕರ್‌ ಎಂದೂ ಮಹತ್ವಾಕಾಂಕ್ಷಿಯೂ ಆಗಿರಲಿಲ್ಲ. ಪಾಲಿಗೆ ಬಂದದ್ದು ಪಂಚಾಮೃತ ಎಂದು ಭಾವಿಸುತ್ತಿದ್ದ ಅವರು ಕೇಂದ್ರದಲ್ಲಿ ರಸ್ತೆ ಸಾರಿಗೆ, ಹೆದ್ದಾರಿ, ಕಾರ್ಮಿಕ ಮತ್ತು ಉದ್ಯೋಗ, ಯೋಜನಾ ಅನುಷ್ಠಾನ, ಯುವಜನ ಹಾಗೂ ಕ್ರೀಡಾ ಸಚಿವರಾಗಿ ಕೆಲಸ ನಿರ್ವಹಿಸಿದ್ದಾರೆ. ಮಂತ್ರಿಯಾದಾಗ ಅವರು ಹಿಗ್ಗಿದವರಲ್ಲ, ಆಗದಿದ್ದಾಗ ಅವರು ಕುಗ್ಗಿದವರಲ್ಲ. ಆಸ್ಕರ್‌, ಆಸ್ಕರಣ್ಣ ನಾಗಿಯೇ ಉಳಿದಿದ್ದರು.

1975-76ರ ಅವಧಿಯಲ್ಲಿ ಉಡುಪಿಯ ಮುನ್ಸಿಪಲ್‌ ಕೌನ್ಸಿಲ್‌ನ ಸದಸ್ಯರಾಗಿದ್ದ ಅವರು 1980ರಲ್ಲಿ ಮೊದಲ ಬಾರಿಗೆ ವಿ.ಎಸ್‌ ಆಚಾರ್ಯರನ್ನು ಸೋಲಿಸಿ, ಉಡುಪಿ ಕ್ಷೇತ್ರದಿಂದ ಏಳನೇ ಲೋಕ ಸಭೆ ಪ್ರವೇಶಿಸಿದ ಅವರು ಮುಂದೆ, 1984 ರಲ್ಲಿ ಕೆ ಎಸ್‌ ಹೆಗ್ಡೆ , 1989 ರಲ್ಲಿ ಎಂ ಸಂಜೀವ, 1991ರಲ್ಲಿ ರುಕ್ಮಯ್ಯ ಪೂಜಾರಿಯರನ್ನು ಮತ್ತು 1996ರಲ್ಲಿ ಜಯರಾಮ ಶೆಟ್ಟರನ್ನು ಸೋಲಿಸಿ ಲೋಕ ಸಭೆಗೆ ಆಯ್ಕೆಯಾದರು.

1980ರಲ್ಲಿ ಮೊದಲ ಸಲ ಆಸ್ಕರ್‌ ಗೆದ್ದಾಗ ಅವರ ಗೆಲುವಿನ ಅಂತರ ಒಂದೂವರೆ ಲಕ್ಷವಾಗಿದ್ದರೆ, 196ರಲ್ಲಿ ಅವರ ಗೆಲುವಿನ ಅಂತರ ಕೇವಲ ಎರಡು ಸಾವಿರವಾಗಿತ್ತು. ಆ ಹೊತ್ತಿಗೆ ದೆಹಲಿ ಕೇಂದ್ರಿತ ರಾಜಕಾರಣದಲ್ಲಿ ಮುಳುಗಿದ್ದ ಆಸ್ಕರ್‌ ಅವರಿಗೆ ತನ್ನ ಕಾಲ ಕೆಳಗಿನ ನೆಲ ಕುಸಿಯುವುದು ಗೊತ್ತಾಗಲೇ ಇಲ್ಲ. ಅವರು ತನಗೆ ಮತ ಹಾಕಿದವರಿಗಿಂತ ಹೆಚ್ಚಗಿ ದೆಹಲಿ ಜನಗಳಿಗೇ ಹತ್ತಿರವಾಗುತ್ತಾ ಹೋದರು. ಕಾಂಗ್ರೆಸ್‌ ನ ಕೇಂದ್ರ ಕಚೇರಿಯಲ್ಲಿಯೇ ಅವರು 24 ಗಂಟೆಗಳ ಕಾಲ ದುಡಿಯತೊಡಗಿದರು. ಪರಿಣಾಮವಾಗಿ, 1998ರ ಲೋಕ ಸಭಾ ಚುನಾವಣೆಯಲ್ಲಿ ಅವರು ಸುಮಾರು 42 ಸಾವಿರ ಮತಗಳಿಂದ ಸೋತರು. ಸೋತರೂ ಮತ್ತೆ ರಾಜ್ಯ ಸಭೆಗೆ ಪ್ರವೇಶ ಪಡೆದರು.

80-90ರ ದಶಕದಲ್ಲಿ ಆಗಿನ್ನೂ ಯುವಕರಾಗಿದ್ದ ಆಸ್ಕರ್‌ ಫೆರ್ನಾಂಡಿಸ್‌ ಮತ್ತು ವೀರಪ್ಪ ಮೊಯಿಲಿಯವರು ತಮಗೊದಗಿದ ಅವಕಾಶಗಳನ್ನು ಉಪಯೋಗಿಸಿಕೊಂಡು ಉಡುಪಿ ಮಂಗಳೂರುಗಳಲ್ಲಿ ಹೆಚ್ಚು ಕೆಲಸ ಮಾಡಿದ್ದರೆ, ಕರಾವಳಿ ಇವತ್ತು ಈ ಮಟ್ಟಿನ ಕೋಮುವಾದಕ್ಕೆ ಬಲಿಯಾಗುತ್ತಿರಲಿಲ್ಲ. ಭೂ ಸುಧಾರಣೆಯ ಆನಂತರ ಹುಟ್ಟಿಕೊಂಡ ಹೊಸ ತಲೆಮಾರಿನ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಈ ನಾಯಕರು ವಿಫಲರಾಗಿದ್ದರು. ಕಾರಣ ತಮ್ಮದೇ ಜನಗಳಿಂದ ದೂರವಾಗುತ್ತಲೇ ಹೋದರು. ಪೂಜಾರಿಯವರು ಮತ್ತು ಮೊಯಿಲಿಯವರು ಸೋತರು, ಆಸ್ಕರ್‌ ಇದೀಗ ಕೊನೆಯುಸಿರು ಎಳೆದರು.

ಮೃದು ಮಾತಿನ ಆಸ್ಕರ್‌ ಅಂದರೆ ದೆಹಲಿಯಲ್ಲಿ ಎಲ್ಲರಿಗೂ ಇಷ್ಟ. ಯೋಗ ಮತ್ತು ಕಥಕ್‌ ಅವರ ಪ್ರೀತಿಯ ಹವ್ಯಾಸಗಳು. ಹೆಂಡತಿ ಬ್ಲೋಸಮ್‌ ರನ್ನು ಹತ್ತಿರ ಕುಳಿತುಕೊಳ್ಳಿಸದೇ ಇದ್ದರೆ ಅವರು ಭಾಷಣ ಮಾಡುತ್ತಲೇ ಇರಲಿಲ್ಲ. ಕಚೇರಿಗೆ ಯಾರು ಹೋದರೂ ಕರೆದು ಮಾತಾಡಿಸುವ ಸೌಜನ್ಯ, ನಮ್ಮಂಥ ರಾಜಕೀಯೇತರ ಜನರು ಹೋದರೆ ಹತ್ತಿರ ಕುಳ್ಳಿರಿಸಿಕೊಂಡು ಹೆಗಲ ಮೇಲೆ ಕೈ ಹಾಕಿ ಹರಟುವ ಪ್ರೀತಿ ಮೊದಲಾದ ಗುಣಗಳಿಂದಾಗಿ ಆಸ್ಕರ್‌ ಅಜಾತ ಶತ್ರುವಾಗಿಯೇ ಉಳಿದರು.

2004-2008ರ ಅವಧಿಯಲ್ಲಿ ನಾನು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷನಾಗಿ ಸಂಘಕ್ಕೊಂದು ಸಾಂಸ್ಕೃತಿಕ ಸಮುಚ್ಚಯ ಕಟ್ಟುತ್ತಿದ್ದಾಗ, ಆಸ್ಕರ್‌, ಮೊಯಿಲಿ ಮತ್ತು ಅನಂತ ಕುಮಾರ್‌ ನಮ್ಮ ಸಹಾಯಕ್ಕೆ ನಿಂತಿದ್ದರು. ಕಟ್ಟಡದ ಉದ್ಘಾಟನೆಯ ಸಂದರ್ಭದಲ್ಲಿ ಗೆಳೆಯ ವಸಂತ ಶೆಟ್ಟಿ ಬೆಳ್ಳಾರೆಯವರು ಆಸ್ಕರ್‌ ಮತ್ತು ಮೊಯಿಲಿಯವರನ್ನು ಸೇರಿಸಿ ಯಕ್ಷಗಾನವನ್ನು ಮಾಡುವ ಯೋಜನೆ ರೂಪಿಸಿದರು. ಮಂಗಳೂರಿನಿಂದ ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿಯವರು ಸಹಾಯ ಹಸ್ತ ಚಾಚಿದರು. ವಿದ್ಯಾ ಕೋಳ್ಯೂರು ತರಬೇತಿ ನೀಡಿದರು. ಕೃಷ್ಣ ಭಟ್ಟರು ಎಲ್ಲ ವ್ಯವಸ್ಥೆ ಮಾಡಿದರು. ಆಸ್ಕರ್‌ ಅವರದು ʼ ಅತ್ಯುನ್ನತಿಯೊಳ್‌ ಅಮರಸಿಂಧೂದ್ಭವನಾದ ಭೀಷ್ಮಾಚಾರ್ಯ, ಮೊಯಿಲಿಯವರದು ʼ ಸೂತ ಪುತ್ರ ಕರ್ಣʼ, ನಂದು ʼನೀತಿವಂತ ವಿದುರʼ ಇತ್ಯಾದಿ. ಒಂದು ಹಂತದಲ್ಲಿ ಭೀಷ್ಮಚಾರ್ಯ ಅವರು ಇದಿರಾದಾಗ ನಾನು ( ವಿದುರ) ಹೇಳಿದೆ-
ʼ ಅಚಾರ್ಯರೇ, ನಿಮಗೆ ಹಸ್ತಿನಾಪುರದ ಪಟ್ಟವನ್ನು ಕಾಯುವುದೇ ಕೆಲಸವಾಯಿತಲ್ಲ? ನೀವು ಪಟ್ಟವೇರುವುದು ಯಾವಾಗ?

ತುಂಬಿದ ಸಭೆ ಚಪ್ಪಳೆ ತಟ್ಟಿತು, ಭೀಷ್ಮರು ಮುಗುಳ್ನಕ್ಕರು.

ಮರುದಿನ ದೇಶದಾದ್ಯಂತ ʼ ನೇತಾ ಬನ್‌ ಗಯಾ ಅಭಿನೇತಾʼ ಅಂತ ಸುದ್ದಿಯಾಯಿತು.
ರಾಜಕೀಯದ ಪಟ್ಟುಗಳು ಕ್ಷಿಪ್ರವಾಗಿ ಬದಲಾಗುತ್ತಿರುವಾಗ ಆಸ್ಕರ್‌ ಮರೆಯಾದದ್ದು ಸಾಂಕೇತಿಕವೂ ಹೌದು .

ಪೋತು ಬಲೆ ಆಸ್ಕರಣ್ಣ!

(ಚಿತ್ರದಲ್ಲಿ ಎಡಬದಿಗೆ ಕರ್ಣನಾಗಿ ಮೊಯಿಲಿ, ಮಧ್ಯೆ ಭೀಷ್ಮನಾಗಿ ಆಸ್ಕರ್‌ ಮತ್ತು ಬಲಬದಿಯಲ್ಲಿ ವಿದುರನಾಗಿ ನಾನು, ಫೋಟೋ: ದಿನೇಶ್‌ ಶೆಣೈ)
  • ಪುರುಷೋತ್ತಮ ಬಿಳಿಮಲೆ

ಇದನ್ನೂ ಓದಿ: ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ (80) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...