Homeಮುಖಪುಟಆಸ್ಕರ್‌, ಆಸ್ಕರಣ್ಣನಾಗಿಯೇ ಉಳಿದಿದ್ದರು: ಪುರುಷೋತ್ತಮ ಬಿಳಿಮಲೆ

ಆಸ್ಕರ್‌, ಆಸ್ಕರಣ್ಣನಾಗಿಯೇ ಉಳಿದಿದ್ದರು: ಪುರುಷೋತ್ತಮ ಬಿಳಿಮಲೆ

ಆಸ್ಕರ್‌ ಫೆರ್ನಾಂಡಿಸ್‌ ರಾಜೀವ್‌ ಗಾಂಧಿ ಕಾಲದಿಂದಲೂ ಗಾಂಧೀ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದರು. ಆದರೆ ಈ ಸಂಬಂಧವನ್ನು ಅವರೆಂದೂ ದುರುಪಯೋಗಪಡಿಸಿಕೊಂಡವರಲ್ಲ.

- Advertisement -
- Advertisement -

ಕಾಲನ ಗರ್ಭ ಸೇರಿದ ಆಸ್ಕರ್‌

80 ವರ್ಷದ ಆಸ್ಕರ್‌ ಫೆರ್ನಾಂಡಿಸ್‌ ( ಮಾರ್ಚ್‌ 27, 1941) ಇನ್ನಿಲ್ಲವೆಂಬ ಸುದ್ದಿ ತಲುಪಿದಾಗ ಕಾಲನ ಚಕ್ರಗಳು ಹಿಂದಕ್ಕೆ ಸರಿಯತೊಡಗಿದುವು. ದೇವರಾಜು ಅರಸು ಕಾಲದಲ್ಲಿ ಕರಾವಳಿಯ ಹಿಂದುಳಿದ ವರ್ಗದಿಂದ ಮೇಲೆದ್ದು ಬಂದ ಶ್ರೀಗಳಾದ ಜನಾರ್ದನ ಪೂಜಾರಿ, ಆಸ್ಕರ್‌ ಫೆರ್ನಾಂಡಿಸ್‌ ಮತ್ತು ವೀರಪ್ಪ ಮೊಯಿಲಿ ತಮ್ಮ ರಾಜಕೀಯ ಏಳುಬೀಳುಗಳ ನಡುವೆಯೂ ಕೊನೆಯವರೆಗೆ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾಗಿಯೇ ಉಳಿದರು.

ಈ ತ್ರಿಮೂರ್ತಿಗಳಲ್ಲಿ ಆಸ್ಕರ್‌ ಫೆರ್ನಾಂಡಿಸ್‌ ರಾಜೀವ್‌ ಗಾಂಧಿ ಕಾಲದಿಂದಲೂ ಗಾಂಧೀ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದರು. ಆದರೆ ಈ ಸಂಬಂಧವನ್ನು ಅವರೆಂದೂ ದುರುಪಯೋಗಪಡಿಸಿಕೊಂಡವರಲ್ಲ. ಜೊತೆಗೆ ಆಸ್ಕರ್‌ ಎಂದೂ ಮಹತ್ವಾಕಾಂಕ್ಷಿಯೂ ಆಗಿರಲಿಲ್ಲ. ಪಾಲಿಗೆ ಬಂದದ್ದು ಪಂಚಾಮೃತ ಎಂದು ಭಾವಿಸುತ್ತಿದ್ದ ಅವರು ಕೇಂದ್ರದಲ್ಲಿ ರಸ್ತೆ ಸಾರಿಗೆ, ಹೆದ್ದಾರಿ, ಕಾರ್ಮಿಕ ಮತ್ತು ಉದ್ಯೋಗ, ಯೋಜನಾ ಅನುಷ್ಠಾನ, ಯುವಜನ ಹಾಗೂ ಕ್ರೀಡಾ ಸಚಿವರಾಗಿ ಕೆಲಸ ನಿರ್ವಹಿಸಿದ್ದಾರೆ. ಮಂತ್ರಿಯಾದಾಗ ಅವರು ಹಿಗ್ಗಿದವರಲ್ಲ, ಆಗದಿದ್ದಾಗ ಅವರು ಕುಗ್ಗಿದವರಲ್ಲ. ಆಸ್ಕರ್‌, ಆಸ್ಕರಣ್ಣ ನಾಗಿಯೇ ಉಳಿದಿದ್ದರು.

1975-76ರ ಅವಧಿಯಲ್ಲಿ ಉಡುಪಿಯ ಮುನ್ಸಿಪಲ್‌ ಕೌನ್ಸಿಲ್‌ನ ಸದಸ್ಯರಾಗಿದ್ದ ಅವರು 1980ರಲ್ಲಿ ಮೊದಲ ಬಾರಿಗೆ ವಿ.ಎಸ್‌ ಆಚಾರ್ಯರನ್ನು ಸೋಲಿಸಿ, ಉಡುಪಿ ಕ್ಷೇತ್ರದಿಂದ ಏಳನೇ ಲೋಕ ಸಭೆ ಪ್ರವೇಶಿಸಿದ ಅವರು ಮುಂದೆ, 1984 ರಲ್ಲಿ ಕೆ ಎಸ್‌ ಹೆಗ್ಡೆ , 1989 ರಲ್ಲಿ ಎಂ ಸಂಜೀವ, 1991ರಲ್ಲಿ ರುಕ್ಮಯ್ಯ ಪೂಜಾರಿಯರನ್ನು ಮತ್ತು 1996ರಲ್ಲಿ ಜಯರಾಮ ಶೆಟ್ಟರನ್ನು ಸೋಲಿಸಿ ಲೋಕ ಸಭೆಗೆ ಆಯ್ಕೆಯಾದರು.

1980ರಲ್ಲಿ ಮೊದಲ ಸಲ ಆಸ್ಕರ್‌ ಗೆದ್ದಾಗ ಅವರ ಗೆಲುವಿನ ಅಂತರ ಒಂದೂವರೆ ಲಕ್ಷವಾಗಿದ್ದರೆ, 196ರಲ್ಲಿ ಅವರ ಗೆಲುವಿನ ಅಂತರ ಕೇವಲ ಎರಡು ಸಾವಿರವಾಗಿತ್ತು. ಆ ಹೊತ್ತಿಗೆ ದೆಹಲಿ ಕೇಂದ್ರಿತ ರಾಜಕಾರಣದಲ್ಲಿ ಮುಳುಗಿದ್ದ ಆಸ್ಕರ್‌ ಅವರಿಗೆ ತನ್ನ ಕಾಲ ಕೆಳಗಿನ ನೆಲ ಕುಸಿಯುವುದು ಗೊತ್ತಾಗಲೇ ಇಲ್ಲ. ಅವರು ತನಗೆ ಮತ ಹಾಕಿದವರಿಗಿಂತ ಹೆಚ್ಚಗಿ ದೆಹಲಿ ಜನಗಳಿಗೇ ಹತ್ತಿರವಾಗುತ್ತಾ ಹೋದರು. ಕಾಂಗ್ರೆಸ್‌ ನ ಕೇಂದ್ರ ಕಚೇರಿಯಲ್ಲಿಯೇ ಅವರು 24 ಗಂಟೆಗಳ ಕಾಲ ದುಡಿಯತೊಡಗಿದರು. ಪರಿಣಾಮವಾಗಿ, 1998ರ ಲೋಕ ಸಭಾ ಚುನಾವಣೆಯಲ್ಲಿ ಅವರು ಸುಮಾರು 42 ಸಾವಿರ ಮತಗಳಿಂದ ಸೋತರು. ಸೋತರೂ ಮತ್ತೆ ರಾಜ್ಯ ಸಭೆಗೆ ಪ್ರವೇಶ ಪಡೆದರು.

80-90ರ ದಶಕದಲ್ಲಿ ಆಗಿನ್ನೂ ಯುವಕರಾಗಿದ್ದ ಆಸ್ಕರ್‌ ಫೆರ್ನಾಂಡಿಸ್‌ ಮತ್ತು ವೀರಪ್ಪ ಮೊಯಿಲಿಯವರು ತಮಗೊದಗಿದ ಅವಕಾಶಗಳನ್ನು ಉಪಯೋಗಿಸಿಕೊಂಡು ಉಡುಪಿ ಮಂಗಳೂರುಗಳಲ್ಲಿ ಹೆಚ್ಚು ಕೆಲಸ ಮಾಡಿದ್ದರೆ, ಕರಾವಳಿ ಇವತ್ತು ಈ ಮಟ್ಟಿನ ಕೋಮುವಾದಕ್ಕೆ ಬಲಿಯಾಗುತ್ತಿರಲಿಲ್ಲ. ಭೂ ಸುಧಾರಣೆಯ ಆನಂತರ ಹುಟ್ಟಿಕೊಂಡ ಹೊಸ ತಲೆಮಾರಿನ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಈ ನಾಯಕರು ವಿಫಲರಾಗಿದ್ದರು. ಕಾರಣ ತಮ್ಮದೇ ಜನಗಳಿಂದ ದೂರವಾಗುತ್ತಲೇ ಹೋದರು. ಪೂಜಾರಿಯವರು ಮತ್ತು ಮೊಯಿಲಿಯವರು ಸೋತರು, ಆಸ್ಕರ್‌ ಇದೀಗ ಕೊನೆಯುಸಿರು ಎಳೆದರು.

ಮೃದು ಮಾತಿನ ಆಸ್ಕರ್‌ ಅಂದರೆ ದೆಹಲಿಯಲ್ಲಿ ಎಲ್ಲರಿಗೂ ಇಷ್ಟ. ಯೋಗ ಮತ್ತು ಕಥಕ್‌ ಅವರ ಪ್ರೀತಿಯ ಹವ್ಯಾಸಗಳು. ಹೆಂಡತಿ ಬ್ಲೋಸಮ್‌ ರನ್ನು ಹತ್ತಿರ ಕುಳಿತುಕೊಳ್ಳಿಸದೇ ಇದ್ದರೆ ಅವರು ಭಾಷಣ ಮಾಡುತ್ತಲೇ ಇರಲಿಲ್ಲ. ಕಚೇರಿಗೆ ಯಾರು ಹೋದರೂ ಕರೆದು ಮಾತಾಡಿಸುವ ಸೌಜನ್ಯ, ನಮ್ಮಂಥ ರಾಜಕೀಯೇತರ ಜನರು ಹೋದರೆ ಹತ್ತಿರ ಕುಳ್ಳಿರಿಸಿಕೊಂಡು ಹೆಗಲ ಮೇಲೆ ಕೈ ಹಾಕಿ ಹರಟುವ ಪ್ರೀತಿ ಮೊದಲಾದ ಗುಣಗಳಿಂದಾಗಿ ಆಸ್ಕರ್‌ ಅಜಾತ ಶತ್ರುವಾಗಿಯೇ ಉಳಿದರು.

2004-2008ರ ಅವಧಿಯಲ್ಲಿ ನಾನು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷನಾಗಿ ಸಂಘಕ್ಕೊಂದು ಸಾಂಸ್ಕೃತಿಕ ಸಮುಚ್ಚಯ ಕಟ್ಟುತ್ತಿದ್ದಾಗ, ಆಸ್ಕರ್‌, ಮೊಯಿಲಿ ಮತ್ತು ಅನಂತ ಕುಮಾರ್‌ ನಮ್ಮ ಸಹಾಯಕ್ಕೆ ನಿಂತಿದ್ದರು. ಕಟ್ಟಡದ ಉದ್ಘಾಟನೆಯ ಸಂದರ್ಭದಲ್ಲಿ ಗೆಳೆಯ ವಸಂತ ಶೆಟ್ಟಿ ಬೆಳ್ಳಾರೆಯವರು ಆಸ್ಕರ್‌ ಮತ್ತು ಮೊಯಿಲಿಯವರನ್ನು ಸೇರಿಸಿ ಯಕ್ಷಗಾನವನ್ನು ಮಾಡುವ ಯೋಜನೆ ರೂಪಿಸಿದರು. ಮಂಗಳೂರಿನಿಂದ ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿಯವರು ಸಹಾಯ ಹಸ್ತ ಚಾಚಿದರು. ವಿದ್ಯಾ ಕೋಳ್ಯೂರು ತರಬೇತಿ ನೀಡಿದರು. ಕೃಷ್ಣ ಭಟ್ಟರು ಎಲ್ಲ ವ್ಯವಸ್ಥೆ ಮಾಡಿದರು. ಆಸ್ಕರ್‌ ಅವರದು ʼ ಅತ್ಯುನ್ನತಿಯೊಳ್‌ ಅಮರಸಿಂಧೂದ್ಭವನಾದ ಭೀಷ್ಮಾಚಾರ್ಯ, ಮೊಯಿಲಿಯವರದು ʼ ಸೂತ ಪುತ್ರ ಕರ್ಣʼ, ನಂದು ʼನೀತಿವಂತ ವಿದುರʼ ಇತ್ಯಾದಿ. ಒಂದು ಹಂತದಲ್ಲಿ ಭೀಷ್ಮಚಾರ್ಯ ಅವರು ಇದಿರಾದಾಗ ನಾನು ( ವಿದುರ) ಹೇಳಿದೆ-
ʼ ಅಚಾರ್ಯರೇ, ನಿಮಗೆ ಹಸ್ತಿನಾಪುರದ ಪಟ್ಟವನ್ನು ಕಾಯುವುದೇ ಕೆಲಸವಾಯಿತಲ್ಲ? ನೀವು ಪಟ್ಟವೇರುವುದು ಯಾವಾಗ?

ತುಂಬಿದ ಸಭೆ ಚಪ್ಪಳೆ ತಟ್ಟಿತು, ಭೀಷ್ಮರು ಮುಗುಳ್ನಕ್ಕರು.

ಮರುದಿನ ದೇಶದಾದ್ಯಂತ ʼ ನೇತಾ ಬನ್‌ ಗಯಾ ಅಭಿನೇತಾʼ ಅಂತ ಸುದ್ದಿಯಾಯಿತು.
ರಾಜಕೀಯದ ಪಟ್ಟುಗಳು ಕ್ಷಿಪ್ರವಾಗಿ ಬದಲಾಗುತ್ತಿರುವಾಗ ಆಸ್ಕರ್‌ ಮರೆಯಾದದ್ದು ಸಾಂಕೇತಿಕವೂ ಹೌದು .

ಪೋತು ಬಲೆ ಆಸ್ಕರಣ್ಣ!

(ಚಿತ್ರದಲ್ಲಿ ಎಡಬದಿಗೆ ಕರ್ಣನಾಗಿ ಮೊಯಿಲಿ, ಮಧ್ಯೆ ಭೀಷ್ಮನಾಗಿ ಆಸ್ಕರ್‌ ಮತ್ತು ಬಲಬದಿಯಲ್ಲಿ ವಿದುರನಾಗಿ ನಾನು, ಫೋಟೋ: ದಿನೇಶ್‌ ಶೆಣೈ)
  • ಪುರುಷೋತ್ತಮ ಬಿಳಿಮಲೆ

ಇದನ್ನೂ ಓದಿ: ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ (80) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...