Homeಚಳವಳಿಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

ಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

- Advertisement -
- Advertisement -

ಸಂಕ್ರಮಣಕ್ಕೆ ಮೂರು ದಿನದ ಮೊದಲು ಸಾಹಿತ್ಯ ಸಂಕ್ರಮಣ ಸರ್ಕಸ್ ಡೇರೆಯ ಊರುಗೋಲು ಕುಸಿದಿದೆ. ಈ ಸರ್ಕಸ್ ಡೇರೆಯಲ್ಲಿ ಹಲವು ವೇಷಗಳು ಪಾತ್ರಗಳಾಗಿ ಜೀವತಳೆದು ಕನ್ನಡ ಸಾಹಿತ್ಯ ಲೋಕದೊಳಗೆ ಲವಲವಿಕೆ ಸೃಷ್ಟಿಸಿದ್ದವು. ಕಾವ್ಯ, ನಾಟಕ, ಲಘುಧಾಟಿಯ ಸ್ವಗತಗಳು, ಹೋರಾಟದ ಹೆಜ್ಜೆಗಳು, ಆಗೀಗ ಕಚಗುಳಿ ಕೊಡುವ ಮೊನಚು ಮಾತಿನ ವ್ಯಂಗ್ಯ… ರಾಜಕೀಯ ಬದ್ಧತೆಯ ಸ್ಪಷ್ಟ ಕಲ್ಪನೆ ಸಂಕ್ರಮಣ ಸಾಹಿತ್ಯ ಪತ್ರಿಕೆಯ ಸೆಳೆತಗಳಾಗಿದ್ದವು. ಇದೆಲ್ಲದರ ಕೇಂದ್ರವೃತ್ತದ ಊರುಗೋಲು ಚಂಪಾ ಆಗಿದ್ದರು. ಭಾಷೆಯ ಸೊಗಸು ಆಡುವುದರಲ್ಲಷ್ಟೆ ಅಲ್ಲ ಬರೆಯುವುದರಲ್ಲೂ ಇದೆ ಎಂಬುದನ್ನ ಸಾಬೀತುಪಡಿಸಿದವರು.

ದೇಶ-ವಿದೇಶ ಸುತ್ತಿ ಬಂದರೂ, ಬೆಂಗಳೂರು ವಾಸದಲ್ಲಿದ್ದರು ಅವರ ಬಾಯೊಳಗೆ, ಬರಹದೊಳಗೆ ಹಾವೇರಿ ಹತ್ತಿಮತ್ತೂರಿನ ತಿರುಳ್ನುಡಿಯ ತೀಕ್ಷಣತೆಯನ್ನೇ ಉಳಿಸಿಕೊಂಡಿದ್ದರು. ಭಾಷೆಯನ್ನ ಕಾವ್ಯದ ಹಾಗೆ ಆಡುತ್ತಿದ್ದ ಚಂಪಾ ಅವರು ತಮ್ಮ ನಾಟಕ-ಕಾವ್ಯಗಳಲ್ಲಿ ಭಾಷೆಯ ವ್ಯಂಗ್ಯ, ದ್ವನಿ-ಕಾಕುಗಳನ್ನು ಸೊಗಸಾಗಿ ಹೆಣೆಯುತ್ತಿದ್ದರು. ಇಂದಿಗೂ ಅವರ ನಾಟಕಗಳ ದೊಡ್ಡ ಶಕ್ತಿ ಭಾಷೆಯೇ ಆಗಿದೆ. ಬೇರೆ ನಾಟಕಕಾರರು ಜಾನಪದ-ಪುರಾಣ-ಮಹಾಕಾವ್ಯಗಳೊಳಗೆ ಹೊಕ್ಕು ತಮ್ಮ ಅಭಿವ್ಯಕ್ತಿಗೆ ಪಾತ್ರಗಳನ್ನು, ಸನ್ನಿವೇಶ, ಸಂಗತಿ-ಸಂದರ್ಭಗಳನ್ನು ಹೆಕ್ಕಿ ತಂದರೆ ಚಂಪಾ ಮಾತ್ರ ಭಾಷೆಯೊಳಗೆ ಪಾತ್ರ-ನಾಟಕೀಯತೆಯನ್ನು ಹುಡುಕುತ್ತಿದ್ದರು. ಗೋಕರ್ಣದ ಗೌಡಶ್ಯಾನಿ ನಾಟಕವೊಂದನ್ನು ಹೊರತುಪಡಿಸಿ ಉಳಿದೆಲ್ಲ ನಾಟಕಗಳ ಸಂವೇದನೆ ಇರೋದೆ ಚಂಪಾ ಅವರ ಕ್ರಿಯಾಶೀಲತೆಗೆ ಕೈಗನ್ನಡಿ.

‘ಸರ್ ನಾಟಕಕಾರರಾಗಿ ನಿಮ್ಮ ಭಾಷೆ ಮತ್ತು ಅದರೊಳಗಿನ ನಾಟಕೀಯತೆ ನನಗೆ ಇಷ್ಟ’ ಎಂದೊಮ್ಮೆ ಅವರಿಗೆ ಹೇಳಿದಾಗ ನಗುತ್ತಲೇ…. ‘ನೀವು ನಾಟಕದವರು ಭಾಳ ಡಿಸ್ಟನ್ಸ್ ಮಾಡತಿರೆಪಾ… ಕೊರಿಯಾಗಿ ಉಳಿಸೀರಿ’ ಅಂತ ತಮ್ಮ ಯಾವತ್ತಿನ ಧಾಟಿಯೊಳಗ ಹೇಳಿದಾಗ ಯಾಕೋ ರಂಗಭೂಮಿಯವರ ಮ್ಯಾಲ ಅತೃಪ್ತರಾಗಿದಾರೆ ಅನಿಸಿತ್ತು. ಅವರ ಕುಂಟಕುಂಟ ಕುರುವತ್ತಿ ನಾಟಕವು ಕರ್ನಾಟಕ ರಂಗಭೂಮಿಯಲ್ಲಿ ಸಾವಿರಾರು ಪ್ರಯೋಗ ಕಂಡಿದೆ. ಅಪ್ಪ, ಕೊಡೆ, ಗುರ್ತಿನವರು, ಟಿಂಗರ ಬುಡ್ಡಣ್ಣ ನಾಟಕಗಳು ವಿಶಿಷ್ಟ ಶೈಲಿಯ ವಿನ್ಯಾಸ ಹೊಂದಿರುವ ನಾಟಕಗಳು. ಆದರೂ ಅವರು ತಮಗೆ ತಾವೇ ಕೊರಿ ಅಂದುಕೊಂಡದ್ದು ನನಗೆ ಯಾವತ್ತು ಕಾಡುತ್ತಿತ್ತು. ಫನ್ ಮಾಡುತ್ತಲೇ ಮಾತಿಗಾರಂಭಿಸಿ ಕಟ್ಟಕಡೆಯದ್ದೊಂದು ಕಡಕ್ ಫನ್ ಜೊತೆಗೆ ಮಾತು ಮುಗಿಸುತ್ತಿದ್ದ ಚಂಪಾ ಇಂದು ಎನ್ನುವುದನ್ನು ಗ್ರಹಿಸುತ್ತಿದ್ದ ರೀತಿ ಭಿನ್ನವಾಗಿರುತ್ತಿತ್ತು.

ನನಗೆ ಯಾವತ್ತೂ ನಿಮ್ಮ ನೆನಪೇ ಭಾಷೆ. ಆ ಭಾಷೆಯ ಬಂಧುಗಳು ನಾವು. ಅದಕ್ಕೂ ಮಿಗಿಲು ನಿಮ್ಮ ಬಂಡಾಯ ಪ್ರವೃತ್ತಿ ನನ್ನಂಥ ಅನೇಕರಿಗೆ ಮಾದರಿ. ನೀವೇ ಬರೆದಿದ್ದೀರಿ ಸರ್
ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
ಇದ್ದವರ ನೆನಪಿನ ಗುದ್ದಿನಲ್ಲಿ
ಗುದ್ದಲಿಯಾಗುತ್ತಾರೆ.

ನಿಮಗೆ ಬುದ್ದ ಬಸವ ಬಾಬಾಸಾಹೇಬ ನಮನಗಳು ಸರ್…

  • ಮಹಾದೇವ ಹಡಪದ ನಟುವರ

(ರಂಗಕರ್ಮಿಗಳು, ಆಟ-ಮಾಟ ಸಾಂಸ್ಕೃತಿಕ ಪಥ ಎಂಬ ನಾಟಕ ತಂಡವನ್ನು ಹುಟ್ಟು ಹಾಕಿ ಸಕ್ರಿಯವಾಗಿದ್ದಾರೆ.)


ಇದನ್ನೂ ಓದಿ; ನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...