Homeಚಳವಳಿಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

ಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

- Advertisement -
- Advertisement -

ಸಂಕ್ರಮಣಕ್ಕೆ ಮೂರು ದಿನದ ಮೊದಲು ಸಾಹಿತ್ಯ ಸಂಕ್ರಮಣ ಸರ್ಕಸ್ ಡೇರೆಯ ಊರುಗೋಲು ಕುಸಿದಿದೆ. ಈ ಸರ್ಕಸ್ ಡೇರೆಯಲ್ಲಿ ಹಲವು ವೇಷಗಳು ಪಾತ್ರಗಳಾಗಿ ಜೀವತಳೆದು ಕನ್ನಡ ಸಾಹಿತ್ಯ ಲೋಕದೊಳಗೆ ಲವಲವಿಕೆ ಸೃಷ್ಟಿಸಿದ್ದವು. ಕಾವ್ಯ, ನಾಟಕ, ಲಘುಧಾಟಿಯ ಸ್ವಗತಗಳು, ಹೋರಾಟದ ಹೆಜ್ಜೆಗಳು, ಆಗೀಗ ಕಚಗುಳಿ ಕೊಡುವ ಮೊನಚು ಮಾತಿನ ವ್ಯಂಗ್ಯ… ರಾಜಕೀಯ ಬದ್ಧತೆಯ ಸ್ಪಷ್ಟ ಕಲ್ಪನೆ ಸಂಕ್ರಮಣ ಸಾಹಿತ್ಯ ಪತ್ರಿಕೆಯ ಸೆಳೆತಗಳಾಗಿದ್ದವು. ಇದೆಲ್ಲದರ ಕೇಂದ್ರವೃತ್ತದ ಊರುಗೋಲು ಚಂಪಾ ಆಗಿದ್ದರು. ಭಾಷೆಯ ಸೊಗಸು ಆಡುವುದರಲ್ಲಷ್ಟೆ ಅಲ್ಲ ಬರೆಯುವುದರಲ್ಲೂ ಇದೆ ಎಂಬುದನ್ನ ಸಾಬೀತುಪಡಿಸಿದವರು.

ದೇಶ-ವಿದೇಶ ಸುತ್ತಿ ಬಂದರೂ, ಬೆಂಗಳೂರು ವಾಸದಲ್ಲಿದ್ದರು ಅವರ ಬಾಯೊಳಗೆ, ಬರಹದೊಳಗೆ ಹಾವೇರಿ ಹತ್ತಿಮತ್ತೂರಿನ ತಿರುಳ್ನುಡಿಯ ತೀಕ್ಷಣತೆಯನ್ನೇ ಉಳಿಸಿಕೊಂಡಿದ್ದರು. ಭಾಷೆಯನ್ನ ಕಾವ್ಯದ ಹಾಗೆ ಆಡುತ್ತಿದ್ದ ಚಂಪಾ ಅವರು ತಮ್ಮ ನಾಟಕ-ಕಾವ್ಯಗಳಲ್ಲಿ ಭಾಷೆಯ ವ್ಯಂಗ್ಯ, ದ್ವನಿ-ಕಾಕುಗಳನ್ನು ಸೊಗಸಾಗಿ ಹೆಣೆಯುತ್ತಿದ್ದರು. ಇಂದಿಗೂ ಅವರ ನಾಟಕಗಳ ದೊಡ್ಡ ಶಕ್ತಿ ಭಾಷೆಯೇ ಆಗಿದೆ. ಬೇರೆ ನಾಟಕಕಾರರು ಜಾನಪದ-ಪುರಾಣ-ಮಹಾಕಾವ್ಯಗಳೊಳಗೆ ಹೊಕ್ಕು ತಮ್ಮ ಅಭಿವ್ಯಕ್ತಿಗೆ ಪಾತ್ರಗಳನ್ನು, ಸನ್ನಿವೇಶ, ಸಂಗತಿ-ಸಂದರ್ಭಗಳನ್ನು ಹೆಕ್ಕಿ ತಂದರೆ ಚಂಪಾ ಮಾತ್ರ ಭಾಷೆಯೊಳಗೆ ಪಾತ್ರ-ನಾಟಕೀಯತೆಯನ್ನು ಹುಡುಕುತ್ತಿದ್ದರು. ಗೋಕರ್ಣದ ಗೌಡಶ್ಯಾನಿ ನಾಟಕವೊಂದನ್ನು ಹೊರತುಪಡಿಸಿ ಉಳಿದೆಲ್ಲ ನಾಟಕಗಳ ಸಂವೇದನೆ ಇರೋದೆ ಚಂಪಾ ಅವರ ಕ್ರಿಯಾಶೀಲತೆಗೆ ಕೈಗನ್ನಡಿ.

‘ಸರ್ ನಾಟಕಕಾರರಾಗಿ ನಿಮ್ಮ ಭಾಷೆ ಮತ್ತು ಅದರೊಳಗಿನ ನಾಟಕೀಯತೆ ನನಗೆ ಇಷ್ಟ’ ಎಂದೊಮ್ಮೆ ಅವರಿಗೆ ಹೇಳಿದಾಗ ನಗುತ್ತಲೇ…. ‘ನೀವು ನಾಟಕದವರು ಭಾಳ ಡಿಸ್ಟನ್ಸ್ ಮಾಡತಿರೆಪಾ… ಕೊರಿಯಾಗಿ ಉಳಿಸೀರಿ’ ಅಂತ ತಮ್ಮ ಯಾವತ್ತಿನ ಧಾಟಿಯೊಳಗ ಹೇಳಿದಾಗ ಯಾಕೋ ರಂಗಭೂಮಿಯವರ ಮ್ಯಾಲ ಅತೃಪ್ತರಾಗಿದಾರೆ ಅನಿಸಿತ್ತು. ಅವರ ಕುಂಟಕುಂಟ ಕುರುವತ್ತಿ ನಾಟಕವು ಕರ್ನಾಟಕ ರಂಗಭೂಮಿಯಲ್ಲಿ ಸಾವಿರಾರು ಪ್ರಯೋಗ ಕಂಡಿದೆ. ಅಪ್ಪ, ಕೊಡೆ, ಗುರ್ತಿನವರು, ಟಿಂಗರ ಬುಡ್ಡಣ್ಣ ನಾಟಕಗಳು ವಿಶಿಷ್ಟ ಶೈಲಿಯ ವಿನ್ಯಾಸ ಹೊಂದಿರುವ ನಾಟಕಗಳು. ಆದರೂ ಅವರು ತಮಗೆ ತಾವೇ ಕೊರಿ ಅಂದುಕೊಂಡದ್ದು ನನಗೆ ಯಾವತ್ತು ಕಾಡುತ್ತಿತ್ತು. ಫನ್ ಮಾಡುತ್ತಲೇ ಮಾತಿಗಾರಂಭಿಸಿ ಕಟ್ಟಕಡೆಯದ್ದೊಂದು ಕಡಕ್ ಫನ್ ಜೊತೆಗೆ ಮಾತು ಮುಗಿಸುತ್ತಿದ್ದ ಚಂಪಾ ಇಂದು ಎನ್ನುವುದನ್ನು ಗ್ರಹಿಸುತ್ತಿದ್ದ ರೀತಿ ಭಿನ್ನವಾಗಿರುತ್ತಿತ್ತು.

ನನಗೆ ಯಾವತ್ತೂ ನಿಮ್ಮ ನೆನಪೇ ಭಾಷೆ. ಆ ಭಾಷೆಯ ಬಂಧುಗಳು ನಾವು. ಅದಕ್ಕೂ ಮಿಗಿಲು ನಿಮ್ಮ ಬಂಡಾಯ ಪ್ರವೃತ್ತಿ ನನ್ನಂಥ ಅನೇಕರಿಗೆ ಮಾದರಿ. ನೀವೇ ಬರೆದಿದ್ದೀರಿ ಸರ್
ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
ಇದ್ದವರ ನೆನಪಿನ ಗುದ್ದಿನಲ್ಲಿ
ಗುದ್ದಲಿಯಾಗುತ್ತಾರೆ.

ನಿಮಗೆ ಬುದ್ದ ಬಸವ ಬಾಬಾಸಾಹೇಬ ನಮನಗಳು ಸರ್…

  • ಮಹಾದೇವ ಹಡಪದ ನಟುವರ

(ರಂಗಕರ್ಮಿಗಳು, ಆಟ-ಮಾಟ ಸಾಂಸ್ಕೃತಿಕ ಪಥ ಎಂಬ ನಾಟಕ ತಂಡವನ್ನು ಹುಟ್ಟು ಹಾಕಿ ಸಕ್ರಿಯವಾಗಿದ್ದಾರೆ.)


ಇದನ್ನೂ ಓದಿ; ನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....