Homeಚಳವಳಿಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

ಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

- Advertisement -
- Advertisement -

ಸಂಕ್ರಮಣಕ್ಕೆ ಮೂರು ದಿನದ ಮೊದಲು ಸಾಹಿತ್ಯ ಸಂಕ್ರಮಣ ಸರ್ಕಸ್ ಡೇರೆಯ ಊರುಗೋಲು ಕುಸಿದಿದೆ. ಈ ಸರ್ಕಸ್ ಡೇರೆಯಲ್ಲಿ ಹಲವು ವೇಷಗಳು ಪಾತ್ರಗಳಾಗಿ ಜೀವತಳೆದು ಕನ್ನಡ ಸಾಹಿತ್ಯ ಲೋಕದೊಳಗೆ ಲವಲವಿಕೆ ಸೃಷ್ಟಿಸಿದ್ದವು. ಕಾವ್ಯ, ನಾಟಕ, ಲಘುಧಾಟಿಯ ಸ್ವಗತಗಳು, ಹೋರಾಟದ ಹೆಜ್ಜೆಗಳು, ಆಗೀಗ ಕಚಗುಳಿ ಕೊಡುವ ಮೊನಚು ಮಾತಿನ ವ್ಯಂಗ್ಯ… ರಾಜಕೀಯ ಬದ್ಧತೆಯ ಸ್ಪಷ್ಟ ಕಲ್ಪನೆ ಸಂಕ್ರಮಣ ಸಾಹಿತ್ಯ ಪತ್ರಿಕೆಯ ಸೆಳೆತಗಳಾಗಿದ್ದವು. ಇದೆಲ್ಲದರ ಕೇಂದ್ರವೃತ್ತದ ಊರುಗೋಲು ಚಂಪಾ ಆಗಿದ್ದರು. ಭಾಷೆಯ ಸೊಗಸು ಆಡುವುದರಲ್ಲಷ್ಟೆ ಅಲ್ಲ ಬರೆಯುವುದರಲ್ಲೂ ಇದೆ ಎಂಬುದನ್ನ ಸಾಬೀತುಪಡಿಸಿದವರು.

ದೇಶ-ವಿದೇಶ ಸುತ್ತಿ ಬಂದರೂ, ಬೆಂಗಳೂರು ವಾಸದಲ್ಲಿದ್ದರು ಅವರ ಬಾಯೊಳಗೆ, ಬರಹದೊಳಗೆ ಹಾವೇರಿ ಹತ್ತಿಮತ್ತೂರಿನ ತಿರುಳ್ನುಡಿಯ ತೀಕ್ಷಣತೆಯನ್ನೇ ಉಳಿಸಿಕೊಂಡಿದ್ದರು. ಭಾಷೆಯನ್ನ ಕಾವ್ಯದ ಹಾಗೆ ಆಡುತ್ತಿದ್ದ ಚಂಪಾ ಅವರು ತಮ್ಮ ನಾಟಕ-ಕಾವ್ಯಗಳಲ್ಲಿ ಭಾಷೆಯ ವ್ಯಂಗ್ಯ, ದ್ವನಿ-ಕಾಕುಗಳನ್ನು ಸೊಗಸಾಗಿ ಹೆಣೆಯುತ್ತಿದ್ದರು. ಇಂದಿಗೂ ಅವರ ನಾಟಕಗಳ ದೊಡ್ಡ ಶಕ್ತಿ ಭಾಷೆಯೇ ಆಗಿದೆ. ಬೇರೆ ನಾಟಕಕಾರರು ಜಾನಪದ-ಪುರಾಣ-ಮಹಾಕಾವ್ಯಗಳೊಳಗೆ ಹೊಕ್ಕು ತಮ್ಮ ಅಭಿವ್ಯಕ್ತಿಗೆ ಪಾತ್ರಗಳನ್ನು, ಸನ್ನಿವೇಶ, ಸಂಗತಿ-ಸಂದರ್ಭಗಳನ್ನು ಹೆಕ್ಕಿ ತಂದರೆ ಚಂಪಾ ಮಾತ್ರ ಭಾಷೆಯೊಳಗೆ ಪಾತ್ರ-ನಾಟಕೀಯತೆಯನ್ನು ಹುಡುಕುತ್ತಿದ್ದರು. ಗೋಕರ್ಣದ ಗೌಡಶ್ಯಾನಿ ನಾಟಕವೊಂದನ್ನು ಹೊರತುಪಡಿಸಿ ಉಳಿದೆಲ್ಲ ನಾಟಕಗಳ ಸಂವೇದನೆ ಇರೋದೆ ಚಂಪಾ ಅವರ ಕ್ರಿಯಾಶೀಲತೆಗೆ ಕೈಗನ್ನಡಿ.

‘ಸರ್ ನಾಟಕಕಾರರಾಗಿ ನಿಮ್ಮ ಭಾಷೆ ಮತ್ತು ಅದರೊಳಗಿನ ನಾಟಕೀಯತೆ ನನಗೆ ಇಷ್ಟ’ ಎಂದೊಮ್ಮೆ ಅವರಿಗೆ ಹೇಳಿದಾಗ ನಗುತ್ತಲೇ…. ‘ನೀವು ನಾಟಕದವರು ಭಾಳ ಡಿಸ್ಟನ್ಸ್ ಮಾಡತಿರೆಪಾ… ಕೊರಿಯಾಗಿ ಉಳಿಸೀರಿ’ ಅಂತ ತಮ್ಮ ಯಾವತ್ತಿನ ಧಾಟಿಯೊಳಗ ಹೇಳಿದಾಗ ಯಾಕೋ ರಂಗಭೂಮಿಯವರ ಮ್ಯಾಲ ಅತೃಪ್ತರಾಗಿದಾರೆ ಅನಿಸಿತ್ತು. ಅವರ ಕುಂಟಕುಂಟ ಕುರುವತ್ತಿ ನಾಟಕವು ಕರ್ನಾಟಕ ರಂಗಭೂಮಿಯಲ್ಲಿ ಸಾವಿರಾರು ಪ್ರಯೋಗ ಕಂಡಿದೆ. ಅಪ್ಪ, ಕೊಡೆ, ಗುರ್ತಿನವರು, ಟಿಂಗರ ಬುಡ್ಡಣ್ಣ ನಾಟಕಗಳು ವಿಶಿಷ್ಟ ಶೈಲಿಯ ವಿನ್ಯಾಸ ಹೊಂದಿರುವ ನಾಟಕಗಳು. ಆದರೂ ಅವರು ತಮಗೆ ತಾವೇ ಕೊರಿ ಅಂದುಕೊಂಡದ್ದು ನನಗೆ ಯಾವತ್ತು ಕಾಡುತ್ತಿತ್ತು. ಫನ್ ಮಾಡುತ್ತಲೇ ಮಾತಿಗಾರಂಭಿಸಿ ಕಟ್ಟಕಡೆಯದ್ದೊಂದು ಕಡಕ್ ಫನ್ ಜೊತೆಗೆ ಮಾತು ಮುಗಿಸುತ್ತಿದ್ದ ಚಂಪಾ ಇಂದು ಎನ್ನುವುದನ್ನು ಗ್ರಹಿಸುತ್ತಿದ್ದ ರೀತಿ ಭಿನ್ನವಾಗಿರುತ್ತಿತ್ತು.

ನನಗೆ ಯಾವತ್ತೂ ನಿಮ್ಮ ನೆನಪೇ ಭಾಷೆ. ಆ ಭಾಷೆಯ ಬಂಧುಗಳು ನಾವು. ಅದಕ್ಕೂ ಮಿಗಿಲು ನಿಮ್ಮ ಬಂಡಾಯ ಪ್ರವೃತ್ತಿ ನನ್ನಂಥ ಅನೇಕರಿಗೆ ಮಾದರಿ. ನೀವೇ ಬರೆದಿದ್ದೀರಿ ಸರ್
ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
ಇದ್ದವರ ನೆನಪಿನ ಗುದ್ದಿನಲ್ಲಿ
ಗುದ್ದಲಿಯಾಗುತ್ತಾರೆ.

ನಿಮಗೆ ಬುದ್ದ ಬಸವ ಬಾಬಾಸಾಹೇಬ ನಮನಗಳು ಸರ್…

  • ಮಹಾದೇವ ಹಡಪದ ನಟುವರ

(ರಂಗಕರ್ಮಿಗಳು, ಆಟ-ಮಾಟ ಸಾಂಸ್ಕೃತಿಕ ಪಥ ಎಂಬ ನಾಟಕ ತಂಡವನ್ನು ಹುಟ್ಟು ಹಾಕಿ ಸಕ್ರಿಯವಾಗಿದ್ದಾರೆ.)


ಇದನ್ನೂ ಓದಿ; ನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...