Homeಚಳವಳಿಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

ಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

- Advertisement -
- Advertisement -

ಸಂಕ್ರಮಣಕ್ಕೆ ಮೂರು ದಿನದ ಮೊದಲು ಸಾಹಿತ್ಯ ಸಂಕ್ರಮಣ ಸರ್ಕಸ್ ಡೇರೆಯ ಊರುಗೋಲು ಕುಸಿದಿದೆ. ಈ ಸರ್ಕಸ್ ಡೇರೆಯಲ್ಲಿ ಹಲವು ವೇಷಗಳು ಪಾತ್ರಗಳಾಗಿ ಜೀವತಳೆದು ಕನ್ನಡ ಸಾಹಿತ್ಯ ಲೋಕದೊಳಗೆ ಲವಲವಿಕೆ ಸೃಷ್ಟಿಸಿದ್ದವು. ಕಾವ್ಯ, ನಾಟಕ, ಲಘುಧಾಟಿಯ ಸ್ವಗತಗಳು, ಹೋರಾಟದ ಹೆಜ್ಜೆಗಳು, ಆಗೀಗ ಕಚಗುಳಿ ಕೊಡುವ ಮೊನಚು ಮಾತಿನ ವ್ಯಂಗ್ಯ… ರಾಜಕೀಯ ಬದ್ಧತೆಯ ಸ್ಪಷ್ಟ ಕಲ್ಪನೆ ಸಂಕ್ರಮಣ ಸಾಹಿತ್ಯ ಪತ್ರಿಕೆಯ ಸೆಳೆತಗಳಾಗಿದ್ದವು. ಇದೆಲ್ಲದರ ಕೇಂದ್ರವೃತ್ತದ ಊರುಗೋಲು ಚಂಪಾ ಆಗಿದ್ದರು. ಭಾಷೆಯ ಸೊಗಸು ಆಡುವುದರಲ್ಲಷ್ಟೆ ಅಲ್ಲ ಬರೆಯುವುದರಲ್ಲೂ ಇದೆ ಎಂಬುದನ್ನ ಸಾಬೀತುಪಡಿಸಿದವರು.

ದೇಶ-ವಿದೇಶ ಸುತ್ತಿ ಬಂದರೂ, ಬೆಂಗಳೂರು ವಾಸದಲ್ಲಿದ್ದರು ಅವರ ಬಾಯೊಳಗೆ, ಬರಹದೊಳಗೆ ಹಾವೇರಿ ಹತ್ತಿಮತ್ತೂರಿನ ತಿರುಳ್ನುಡಿಯ ತೀಕ್ಷಣತೆಯನ್ನೇ ಉಳಿಸಿಕೊಂಡಿದ್ದರು. ಭಾಷೆಯನ್ನ ಕಾವ್ಯದ ಹಾಗೆ ಆಡುತ್ತಿದ್ದ ಚಂಪಾ ಅವರು ತಮ್ಮ ನಾಟಕ-ಕಾವ್ಯಗಳಲ್ಲಿ ಭಾಷೆಯ ವ್ಯಂಗ್ಯ, ದ್ವನಿ-ಕಾಕುಗಳನ್ನು ಸೊಗಸಾಗಿ ಹೆಣೆಯುತ್ತಿದ್ದರು. ಇಂದಿಗೂ ಅವರ ನಾಟಕಗಳ ದೊಡ್ಡ ಶಕ್ತಿ ಭಾಷೆಯೇ ಆಗಿದೆ. ಬೇರೆ ನಾಟಕಕಾರರು ಜಾನಪದ-ಪುರಾಣ-ಮಹಾಕಾವ್ಯಗಳೊಳಗೆ ಹೊಕ್ಕು ತಮ್ಮ ಅಭಿವ್ಯಕ್ತಿಗೆ ಪಾತ್ರಗಳನ್ನು, ಸನ್ನಿವೇಶ, ಸಂಗತಿ-ಸಂದರ್ಭಗಳನ್ನು ಹೆಕ್ಕಿ ತಂದರೆ ಚಂಪಾ ಮಾತ್ರ ಭಾಷೆಯೊಳಗೆ ಪಾತ್ರ-ನಾಟಕೀಯತೆಯನ್ನು ಹುಡುಕುತ್ತಿದ್ದರು. ಗೋಕರ್ಣದ ಗೌಡಶ್ಯಾನಿ ನಾಟಕವೊಂದನ್ನು ಹೊರತುಪಡಿಸಿ ಉಳಿದೆಲ್ಲ ನಾಟಕಗಳ ಸಂವೇದನೆ ಇರೋದೆ ಚಂಪಾ ಅವರ ಕ್ರಿಯಾಶೀಲತೆಗೆ ಕೈಗನ್ನಡಿ.

‘ಸರ್ ನಾಟಕಕಾರರಾಗಿ ನಿಮ್ಮ ಭಾಷೆ ಮತ್ತು ಅದರೊಳಗಿನ ನಾಟಕೀಯತೆ ನನಗೆ ಇಷ್ಟ’ ಎಂದೊಮ್ಮೆ ಅವರಿಗೆ ಹೇಳಿದಾಗ ನಗುತ್ತಲೇ…. ‘ನೀವು ನಾಟಕದವರು ಭಾಳ ಡಿಸ್ಟನ್ಸ್ ಮಾಡತಿರೆಪಾ… ಕೊರಿಯಾಗಿ ಉಳಿಸೀರಿ’ ಅಂತ ತಮ್ಮ ಯಾವತ್ತಿನ ಧಾಟಿಯೊಳಗ ಹೇಳಿದಾಗ ಯಾಕೋ ರಂಗಭೂಮಿಯವರ ಮ್ಯಾಲ ಅತೃಪ್ತರಾಗಿದಾರೆ ಅನಿಸಿತ್ತು. ಅವರ ಕುಂಟಕುಂಟ ಕುರುವತ್ತಿ ನಾಟಕವು ಕರ್ನಾಟಕ ರಂಗಭೂಮಿಯಲ್ಲಿ ಸಾವಿರಾರು ಪ್ರಯೋಗ ಕಂಡಿದೆ. ಅಪ್ಪ, ಕೊಡೆ, ಗುರ್ತಿನವರು, ಟಿಂಗರ ಬುಡ್ಡಣ್ಣ ನಾಟಕಗಳು ವಿಶಿಷ್ಟ ಶೈಲಿಯ ವಿನ್ಯಾಸ ಹೊಂದಿರುವ ನಾಟಕಗಳು. ಆದರೂ ಅವರು ತಮಗೆ ತಾವೇ ಕೊರಿ ಅಂದುಕೊಂಡದ್ದು ನನಗೆ ಯಾವತ್ತು ಕಾಡುತ್ತಿತ್ತು. ಫನ್ ಮಾಡುತ್ತಲೇ ಮಾತಿಗಾರಂಭಿಸಿ ಕಟ್ಟಕಡೆಯದ್ದೊಂದು ಕಡಕ್ ಫನ್ ಜೊತೆಗೆ ಮಾತು ಮುಗಿಸುತ್ತಿದ್ದ ಚಂಪಾ ಇಂದು ಎನ್ನುವುದನ್ನು ಗ್ರಹಿಸುತ್ತಿದ್ದ ರೀತಿ ಭಿನ್ನವಾಗಿರುತ್ತಿತ್ತು.

ನನಗೆ ಯಾವತ್ತೂ ನಿಮ್ಮ ನೆನಪೇ ಭಾಷೆ. ಆ ಭಾಷೆಯ ಬಂಧುಗಳು ನಾವು. ಅದಕ್ಕೂ ಮಿಗಿಲು ನಿಮ್ಮ ಬಂಡಾಯ ಪ್ರವೃತ್ತಿ ನನ್ನಂಥ ಅನೇಕರಿಗೆ ಮಾದರಿ. ನೀವೇ ಬರೆದಿದ್ದೀರಿ ಸರ್
ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
ಇದ್ದವರ ನೆನಪಿನ ಗುದ್ದಿನಲ್ಲಿ
ಗುದ್ದಲಿಯಾಗುತ್ತಾರೆ.

ನಿಮಗೆ ಬುದ್ದ ಬಸವ ಬಾಬಾಸಾಹೇಬ ನಮನಗಳು ಸರ್…

  • ಮಹಾದೇವ ಹಡಪದ ನಟುವರ

(ರಂಗಕರ್ಮಿಗಳು, ಆಟ-ಮಾಟ ಸಾಂಸ್ಕೃತಿಕ ಪಥ ಎಂಬ ನಾಟಕ ತಂಡವನ್ನು ಹುಟ್ಟು ಹಾಕಿ ಸಕ್ರಿಯವಾಗಿದ್ದಾರೆ.)


ಇದನ್ನೂ ಓದಿ; ನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...