Homeಚಳವಳಿಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

ಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

- Advertisement -
- Advertisement -

ಸಂಕ್ರಮಣಕ್ಕೆ ಮೂರು ದಿನದ ಮೊದಲು ಸಾಹಿತ್ಯ ಸಂಕ್ರಮಣ ಸರ್ಕಸ್ ಡೇರೆಯ ಊರುಗೋಲು ಕುಸಿದಿದೆ. ಈ ಸರ್ಕಸ್ ಡೇರೆಯಲ್ಲಿ ಹಲವು ವೇಷಗಳು ಪಾತ್ರಗಳಾಗಿ ಜೀವತಳೆದು ಕನ್ನಡ ಸಾಹಿತ್ಯ ಲೋಕದೊಳಗೆ ಲವಲವಿಕೆ ಸೃಷ್ಟಿಸಿದ್ದವು. ಕಾವ್ಯ, ನಾಟಕ, ಲಘುಧಾಟಿಯ ಸ್ವಗತಗಳು, ಹೋರಾಟದ ಹೆಜ್ಜೆಗಳು, ಆಗೀಗ ಕಚಗುಳಿ ಕೊಡುವ ಮೊನಚು ಮಾತಿನ ವ್ಯಂಗ್ಯ… ರಾಜಕೀಯ ಬದ್ಧತೆಯ ಸ್ಪಷ್ಟ ಕಲ್ಪನೆ ಸಂಕ್ರಮಣ ಸಾಹಿತ್ಯ ಪತ್ರಿಕೆಯ ಸೆಳೆತಗಳಾಗಿದ್ದವು. ಇದೆಲ್ಲದರ ಕೇಂದ್ರವೃತ್ತದ ಊರುಗೋಲು ಚಂಪಾ ಆಗಿದ್ದರು. ಭಾಷೆಯ ಸೊಗಸು ಆಡುವುದರಲ್ಲಷ್ಟೆ ಅಲ್ಲ ಬರೆಯುವುದರಲ್ಲೂ ಇದೆ ಎಂಬುದನ್ನ ಸಾಬೀತುಪಡಿಸಿದವರು.

ದೇಶ-ವಿದೇಶ ಸುತ್ತಿ ಬಂದರೂ, ಬೆಂಗಳೂರು ವಾಸದಲ್ಲಿದ್ದರು ಅವರ ಬಾಯೊಳಗೆ, ಬರಹದೊಳಗೆ ಹಾವೇರಿ ಹತ್ತಿಮತ್ತೂರಿನ ತಿರುಳ್ನುಡಿಯ ತೀಕ್ಷಣತೆಯನ್ನೇ ಉಳಿಸಿಕೊಂಡಿದ್ದರು. ಭಾಷೆಯನ್ನ ಕಾವ್ಯದ ಹಾಗೆ ಆಡುತ್ತಿದ್ದ ಚಂಪಾ ಅವರು ತಮ್ಮ ನಾಟಕ-ಕಾವ್ಯಗಳಲ್ಲಿ ಭಾಷೆಯ ವ್ಯಂಗ್ಯ, ದ್ವನಿ-ಕಾಕುಗಳನ್ನು ಸೊಗಸಾಗಿ ಹೆಣೆಯುತ್ತಿದ್ದರು. ಇಂದಿಗೂ ಅವರ ನಾಟಕಗಳ ದೊಡ್ಡ ಶಕ್ತಿ ಭಾಷೆಯೇ ಆಗಿದೆ. ಬೇರೆ ನಾಟಕಕಾರರು ಜಾನಪದ-ಪುರಾಣ-ಮಹಾಕಾವ್ಯಗಳೊಳಗೆ ಹೊಕ್ಕು ತಮ್ಮ ಅಭಿವ್ಯಕ್ತಿಗೆ ಪಾತ್ರಗಳನ್ನು, ಸನ್ನಿವೇಶ, ಸಂಗತಿ-ಸಂದರ್ಭಗಳನ್ನು ಹೆಕ್ಕಿ ತಂದರೆ ಚಂಪಾ ಮಾತ್ರ ಭಾಷೆಯೊಳಗೆ ಪಾತ್ರ-ನಾಟಕೀಯತೆಯನ್ನು ಹುಡುಕುತ್ತಿದ್ದರು. ಗೋಕರ್ಣದ ಗೌಡಶ್ಯಾನಿ ನಾಟಕವೊಂದನ್ನು ಹೊರತುಪಡಿಸಿ ಉಳಿದೆಲ್ಲ ನಾಟಕಗಳ ಸಂವೇದನೆ ಇರೋದೆ ಚಂಪಾ ಅವರ ಕ್ರಿಯಾಶೀಲತೆಗೆ ಕೈಗನ್ನಡಿ.

‘ಸರ್ ನಾಟಕಕಾರರಾಗಿ ನಿಮ್ಮ ಭಾಷೆ ಮತ್ತು ಅದರೊಳಗಿನ ನಾಟಕೀಯತೆ ನನಗೆ ಇಷ್ಟ’ ಎಂದೊಮ್ಮೆ ಅವರಿಗೆ ಹೇಳಿದಾಗ ನಗುತ್ತಲೇ…. ‘ನೀವು ನಾಟಕದವರು ಭಾಳ ಡಿಸ್ಟನ್ಸ್ ಮಾಡತಿರೆಪಾ… ಕೊರಿಯಾಗಿ ಉಳಿಸೀರಿ’ ಅಂತ ತಮ್ಮ ಯಾವತ್ತಿನ ಧಾಟಿಯೊಳಗ ಹೇಳಿದಾಗ ಯಾಕೋ ರಂಗಭೂಮಿಯವರ ಮ್ಯಾಲ ಅತೃಪ್ತರಾಗಿದಾರೆ ಅನಿಸಿತ್ತು. ಅವರ ಕುಂಟಕುಂಟ ಕುರುವತ್ತಿ ನಾಟಕವು ಕರ್ನಾಟಕ ರಂಗಭೂಮಿಯಲ್ಲಿ ಸಾವಿರಾರು ಪ್ರಯೋಗ ಕಂಡಿದೆ. ಅಪ್ಪ, ಕೊಡೆ, ಗುರ್ತಿನವರು, ಟಿಂಗರ ಬುಡ್ಡಣ್ಣ ನಾಟಕಗಳು ವಿಶಿಷ್ಟ ಶೈಲಿಯ ವಿನ್ಯಾಸ ಹೊಂದಿರುವ ನಾಟಕಗಳು. ಆದರೂ ಅವರು ತಮಗೆ ತಾವೇ ಕೊರಿ ಅಂದುಕೊಂಡದ್ದು ನನಗೆ ಯಾವತ್ತು ಕಾಡುತ್ತಿತ್ತು. ಫನ್ ಮಾಡುತ್ತಲೇ ಮಾತಿಗಾರಂಭಿಸಿ ಕಟ್ಟಕಡೆಯದ್ದೊಂದು ಕಡಕ್ ಫನ್ ಜೊತೆಗೆ ಮಾತು ಮುಗಿಸುತ್ತಿದ್ದ ಚಂಪಾ ಇಂದು ಎನ್ನುವುದನ್ನು ಗ್ರಹಿಸುತ್ತಿದ್ದ ರೀತಿ ಭಿನ್ನವಾಗಿರುತ್ತಿತ್ತು.

ನನಗೆ ಯಾವತ್ತೂ ನಿಮ್ಮ ನೆನಪೇ ಭಾಷೆ. ಆ ಭಾಷೆಯ ಬಂಧುಗಳು ನಾವು. ಅದಕ್ಕೂ ಮಿಗಿಲು ನಿಮ್ಮ ಬಂಡಾಯ ಪ್ರವೃತ್ತಿ ನನ್ನಂಥ ಅನೇಕರಿಗೆ ಮಾದರಿ. ನೀವೇ ಬರೆದಿದ್ದೀರಿ ಸರ್
ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
ಇದ್ದವರ ನೆನಪಿನ ಗುದ್ದಿನಲ್ಲಿ
ಗುದ್ದಲಿಯಾಗುತ್ತಾರೆ.

ನಿಮಗೆ ಬುದ್ದ ಬಸವ ಬಾಬಾಸಾಹೇಬ ನಮನಗಳು ಸರ್…

  • ಮಹಾದೇವ ಹಡಪದ ನಟುವರ

(ರಂಗಕರ್ಮಿಗಳು, ಆಟ-ಮಾಟ ಸಾಂಸ್ಕೃತಿಕ ಪಥ ಎಂಬ ನಾಟಕ ತಂಡವನ್ನು ಹುಟ್ಟು ಹಾಕಿ ಸಕ್ರಿಯವಾಗಿದ್ದಾರೆ.)


ಇದನ್ನೂ ಓದಿ; ನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...