Homeಚಳವಳಿಅಗಲಿದ ಮಲೆನಾಡಿನ ಮೌನಿ ಹೋರಾಟಗಾರ ಹೂವಪ್ಪ....

ಅಗಲಿದ ಮಲೆನಾಡಿನ ಮೌನಿ ಹೋರಾಟಗಾರ ಹೂವಪ್ಪ….

- Advertisement -
- Advertisement -

ಪ್ರಭುತ್ವದ ಮುಳ್ಳು-ಕಂಟೆಗಳಿಗೆ ಎದುರಾಗಿ ಸೆಣೆಸಿದ ಹೂವಿನಂತಹ ಹೃದಯದ ಹೂವಪ್ಪ ವಕೀಲರು ನಿನ್ನೆ ನಿಧನ ಹೊಂದಿದ್ದಾರೆ. ಕೊರೋನಾದಿಂದ ಚೇತರಿಸಿಕೊಂಡ ಅವರು ನಂತರ ಹೃದಯ ಸಂಬಂಧಿ ಕಾಯಿಲೆಗೆ ಪ್ರಾಣ ಬಿಟ್ಟಿದ್ದಾರೆ.

‘ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ, ತುಂಗಾ ಉಳಿಸಿ ಚಳುವಳಿ ಮತ್ತು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಬಾಬಾ ಬುಡನ್‌ಗಿರಿ ಹೋರಾಟದಲ್ಲಿ ಹೂವಪ್ಪ ತುಂಬ ಕ್ರಿಯಾಶೀಲರಾಗಿದ್ದರು. ಹೋರಾಟಗಾರರ ಮೇಲೆ ಪ್ರಭುತ್ವ ಹಾಕುತ್ತಿದ್ದ ನಕಲಿ ಕೇಸುಗಳ ವಿರುದ್ಧ ಒಬ್ಬ ವಕೀಲರಾಗಿ ಅವರು ತುಂಬ ಕೆಲಸ ಮಾಡಿದ್ದಾರೆ’ ಎನ್ನುತ್ತಾರೆ ಅವರನ್ನು ಬಹು ವರ್ಷಗಳಿಂದ ಬಲ್ಲ ಹೋರಾಟದ ಒಡನಾಡಿ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್..

ಅತ್ಯಂತ ಸಂಭಾವಿತರಾಗಿದ್ದ ಹೂವಪ್ಪ ಯಾರಿಗೂ ಎಂದಿಗೂ ಕೇಡು ಬಗೆಯಲಿಲ್ಲ. ಸದಾ ನಗುಮೊಗದಲ್ಲೇ ವಿರೋಧಿಗಳನ್ನು ಮಾತನಾಡಿಸುತ್ತಿದ್ದ ಮನುಷ್ಯ. ಆದರೂ ಕೊರೋನಾ ಅವರನ್ನು ನುಂಗಿಕೊಂಡು ಬಿಟ್ಟಿದೆ. ಅದಕ್ಕೆ ಇನ್ನೆಷ್ಟು ಸಾವುಗಳು ಬೇಕೋ? ಹೊಣೆಗೇಡಿ ಸರ್ಕಾರಗಳು ತಂದಿಟ್ಟ ಆಪತ್ತಿಗೆ ಹೋರಾಟದ ಗೆಳೆಯ ಹೂವಪ್ಪ ಕೂಡ ಬಲಿಯಾಗಿ ಬಿಟ್ಟ ಎನ್ನುವುದನ್ನು ಅತ್ಯಂತ ರೋಷದಿಂದಲೇ ಹೇಳುತ್ತಿದ್ದೇನೆ. ಕಳೆದ 25 ವರ್ಷ ಜನಪರ ಕ್ರಾಂತಿಕಾರಿ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದ ಗೆಳೆಯ ಹೂವಪ್ಪ. ದೊಡ್ಡ ಜನಪ್ರಿಯತೆ ಇದ್ದಾಗಿಯೂ ಯಾವುದೇ ರೀತಿಯ ರಾಜಕಾರಣದ ಆಮಿಷಕ್ಕೂ ಬಲಿಯಾಗದೆ ಪ್ರಾಮಾಣಿಕ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಪ್ರಾಮಾಣಿಕ ಹೋರಾಟಗಾರ ಅನ್ನೋ ಮಾತಿಗೆ ಮುಕುಟ ಪ್ರಾಯವೇ ಆಗಿದ್ದರು ಹೂವಪ್ಪ. ಬಡ ವಕೀಲನಾಗಿ ಸದಾ ಬಡವರ ಪರ ದುಡಿಯುವ ವ್ಯಕ್ತಿಯಾಗಿದ್ದರು. ಚಿಕ್ಕಮಗಳೂರು ಸುತ್ತ ಮುತ್ತ ಚಳುವಳಿಯ ಕಾರ್ಯಕರ್ತರು ಪೋಲಿಸ್ ಏನ್ಕೌಂಟರ್‌ಗಳಿಗೆ ಒಳಗಾದಾಗ ತನ್ನ ಜೊತೆಗಿನ ಸಂಗಾತಿಗಳನ್ನು ಕರೆದಕೊಂಡು ಹೋಗಿ ಸುಳ್ಳು ಏನ್ಕೌಂಟರ್‌ಗೆ ಸಂಬಂಧಿಸಿ ಸತ್ಯ ಶೋಧನೆ ಬಯಲಿಗೆಳೆಯಲು ಪ್ರಯತ್ನಿಸಿದ್ದರು. ಆಮೂಲಕ ಚಿಕ್ಕಮಗಳೂರಿನ ಈ ಪುಟ್ಟ ಲಾಯರ್, ಜನಪರ ಕ್ರಾಂತಿಕಾತಿ ಲಾಯರ್ ಎಂದೇ ಖ್ಯಾತಿ ಹೊಂದಿದ್ದರು’ ಎಂದು ಅವರನ್ನು ಹತ್ತಿರದಿಂದ ಬಲ್ಲ ದೇಶಾದ್ರಿ ಹೊಸ್ಮನೆ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

‘ನಾಡಿನ ದಲಿತ, ಆದಿವಾಸಿ, ಅಲ್ಪಸಂಖ್ಯಾತ ಹಾಗು ದಮನಿತರ ಮೇಲಿನ ಅನ್ಯಾಯಗಳ ವಿರುದ್ಧ ಅವರು ನಿಂತಿದ್ದರು. ಅದಕ್ಕಾಗಿ ರಾಜ್ಯದ ಹಲವೆಡೆಗಳಲ್ಲಿ ಓಡಾಡಿದ್ದರು. ಸರ್ಕಾರದ ಪಡೆಗಳು ಹೋರಾಟನಿರತ ಜನರ ಮೇಲೆ ನಡೆಸಿದ್ದ ಎನ್ ಕೌಂಟರ್ ಹೆಸರಿನ ಕಗ್ಗೊಲೆಗಳನ್ನು ಜನರೆದುರು ಸತ್ಯಶೋಧನೆಗಳ ಮೂಲಕ ಬಯಲುಗೊಳಿಸುವ ಕಾರ್ಯ ಮಾಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆಗಳ ಬಗ್ಗೆ ದನಿಯೆತ್ತುತ್ತಾ ಬಂದವರಾಗಿದ್ದರು. ನಾಡಿನಲ್ಲಿ ನಡೆದ ಹಲವಾರು ಅಕ್ರಮ, ದೌರ್ಜನ್ಯಗಳ ವಿರುದ್ಧ ಸತ್ಯಶೋಧನಾ ತಂಡಗಳಲ್ಲಿ ಸಕ್ರಿಯರಾಗಿ ಪಾಲ್ಗೊಂಡಿದ್ದರು’ ಎಂದು ‘ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ, ತುಂಗಾ ಉಳಿಸಿ ಚಳುವಳಿಗಳಲ್ಲಿ ಸಕ್ರಿಯರಾಗಿದ್ದ ನಂದಕುಮಾರ್ ಕೆ.ಎಸ್. ತಮ್ಮ ಫೇಸ್‌ಬುಕ್‌ನಲ್ಲಿ ಬರೆದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಕಳಸೇಶ್ವರ ಇನಾಮು ಭೂಮಿ, ಮೀಸಲು ಅರಣ್ಯ, ರಕ್ಷಿತಾರಣ್ಯ ಹೆಸರಿನಲ್ಲಿ ಆದಿವಾಸಿ ಮತ್ತಿತರ ಜನಸಾಮಾನ್ಯರ ಎತ್ತಂಗಡಿಗಳನ್ನು, ಅಪಾಯಕಾರಿ ಪರಿಸರ ವಿನಾಶಗಳನ್ನು, ಭಾರಿ ಕಾರ್ಪೋರೇಟುಗಳ ಕೊಳ್ಳೆಗಳನ್ನು ವಿರೋಧಿಸಿ ನಡೆಯುತ್ತಿದ್ದ ಜನರ ಹೋರಾಟದ ಭಾಗವಾಗಿ ಸಕ್ರಿಯರಾಗಿ ಕೆಲಸ ಮಾಡಿದ್ದರು ಹೂವಪ್ಪ.

ಬಡ ದಲಿತ ಕುಟುಂಬದಲ್ಲಿ ಹುಟ್ಟಿ ಹೇಳಲಾಗದ ಹತ್ತು ಹಲವು ಪ್ರತ್ಯಕ್ಷ ಹಾಗೂ ಪರೋಕ್ಷ ದೌರ್ಜನ್ಯ, ಅಪಮಾನ ಸಹಿಸಿ ಹೋರಾಡುತ್ತಾ ಬಹಳ ಕಷ್ಟದಿಂದ ಶಿಕ್ಷಿತರಾಗಿ ವಕೀಲರಾದವರು ಹೂವಪ್ಪ.

ಹೂವಪ್ಪ ದುಡಿಯುವ ಜನರ ಸಂಗಾತಿಯಾಗಿದ್ದರು. ದಲಿತ ದಮನಿತರ ನೋವಿನ ದನಿಯಾಗಿದ್ದರು, ಸಮಾಜ ಬದಲಾವಣೆಯ ಕ್ರಾಂತಿಕಾರಿ ಪ್ರಜಾತಾಂತ್ರಿಕ ಆಶೋತ್ತರಗಳನ್ನು ಹೃದಯದಲ್ಲಿಟ್ಟು ಕೊಂಡ ಸಹೃದಯ ಹೋರಾಟಗಾರರಾಗಿದ್ದರು. ಜಾತಿ ವಿನಾಶದ ಕಾರ್ಯಕರ್ತರಾಗಿದ್ದ ಹೂವಪ್ಪ. ವರ್ಗ, ಜಾತಿ, ಲಿಂಗ, ವರ್ಣಭೇಧಗಳ ವಿರುದ್ಧವಿದ್ದ ಮಾನವೀಯ ಕಳಕಳಿಯವರಾಗಿದ್ದರು.

ದುಡಿಯುವ ಜನತೆ ತನ್ನ ಒಂದು ದನಿಯನ್ನು ಕಳೆದುಕೊಂಡಿದೆ. ದಲಿತ, ಆದಿವಾಸಿ, ಅಲ್ಪ ಸಂಖ್ಯಾತ, ದಮನಿತರು ತಮ್ಮ ಹೋರಾಟದ ಸಂಗಾತಿಯನ್ನು ಕಳೆದುಕೊಂಡಿದ್ದಾರೆ.
ಅವರ ಬಾಳ ಸಂಗಾತಿ, ಪುಟ್ಟ ಮಗಳು ಹಾಗೂ ಕುಟುಂಬ ವರ್ಗದವರ ದುಃಖದಲ್ಲಿ ಪಾಲ್ಗೊಳ್ಳುತ್ತಾ ಭೌತಿಕವಾಗಿ ಅಗಲಿದ ಹೂವಪ್ಪರಿಗೆ ಶ್ರದ್ದಾಂಜಲಿ ಸಲ್ಲಿಸೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಜನಪರ ಹೋರಾಟಗಾರ, ವಕೀಲ ಹೂವಪ್ಪ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಮ್ರೇಡ್ ಹೂವಪ್ಪ ಅವರ ಜನಪರ ಕಾಳಜಿಯ ಬಗ್ಗೆ ಈಗ ತಾನೆ ಗೊತ್ತಾಗಿದೆ.
    *ಹೋರಾಟದ ಒಡನಾಡಿ ಹೂವಪ್ಪ* ಅವರಿಗೆ ಹೃದಯ ಪೂರ್ವಕ ಶ್ರದ್ಧಾಂಜಲಿ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...