Homeಚಳವಳಿಅಗಲಿದ ಮಲೆನಾಡಿನ ಮೌನಿ ಹೋರಾಟಗಾರ ಹೂವಪ್ಪ....

ಅಗಲಿದ ಮಲೆನಾಡಿನ ಮೌನಿ ಹೋರಾಟಗಾರ ಹೂವಪ್ಪ….

- Advertisement -
- Advertisement -

ಪ್ರಭುತ್ವದ ಮುಳ್ಳು-ಕಂಟೆಗಳಿಗೆ ಎದುರಾಗಿ ಸೆಣೆಸಿದ ಹೂವಿನಂತಹ ಹೃದಯದ ಹೂವಪ್ಪ ವಕೀಲರು ನಿನ್ನೆ ನಿಧನ ಹೊಂದಿದ್ದಾರೆ. ಕೊರೋನಾದಿಂದ ಚೇತರಿಸಿಕೊಂಡ ಅವರು ನಂತರ ಹೃದಯ ಸಂಬಂಧಿ ಕಾಯಿಲೆಗೆ ಪ್ರಾಣ ಬಿಟ್ಟಿದ್ದಾರೆ.

‘ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ, ತುಂಗಾ ಉಳಿಸಿ ಚಳುವಳಿ ಮತ್ತು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಬಾಬಾ ಬುಡನ್‌ಗಿರಿ ಹೋರಾಟದಲ್ಲಿ ಹೂವಪ್ಪ ತುಂಬ ಕ್ರಿಯಾಶೀಲರಾಗಿದ್ದರು. ಹೋರಾಟಗಾರರ ಮೇಲೆ ಪ್ರಭುತ್ವ ಹಾಕುತ್ತಿದ್ದ ನಕಲಿ ಕೇಸುಗಳ ವಿರುದ್ಧ ಒಬ್ಬ ವಕೀಲರಾಗಿ ಅವರು ತುಂಬ ಕೆಲಸ ಮಾಡಿದ್ದಾರೆ’ ಎನ್ನುತ್ತಾರೆ ಅವರನ್ನು ಬಹು ವರ್ಷಗಳಿಂದ ಬಲ್ಲ ಹೋರಾಟದ ಒಡನಾಡಿ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್..

ಅತ್ಯಂತ ಸಂಭಾವಿತರಾಗಿದ್ದ ಹೂವಪ್ಪ ಯಾರಿಗೂ ಎಂದಿಗೂ ಕೇಡು ಬಗೆಯಲಿಲ್ಲ. ಸದಾ ನಗುಮೊಗದಲ್ಲೇ ವಿರೋಧಿಗಳನ್ನು ಮಾತನಾಡಿಸುತ್ತಿದ್ದ ಮನುಷ್ಯ. ಆದರೂ ಕೊರೋನಾ ಅವರನ್ನು ನುಂಗಿಕೊಂಡು ಬಿಟ್ಟಿದೆ. ಅದಕ್ಕೆ ಇನ್ನೆಷ್ಟು ಸಾವುಗಳು ಬೇಕೋ? ಹೊಣೆಗೇಡಿ ಸರ್ಕಾರಗಳು ತಂದಿಟ್ಟ ಆಪತ್ತಿಗೆ ಹೋರಾಟದ ಗೆಳೆಯ ಹೂವಪ್ಪ ಕೂಡ ಬಲಿಯಾಗಿ ಬಿಟ್ಟ ಎನ್ನುವುದನ್ನು ಅತ್ಯಂತ ರೋಷದಿಂದಲೇ ಹೇಳುತ್ತಿದ್ದೇನೆ. ಕಳೆದ 25 ವರ್ಷ ಜನಪರ ಕ್ರಾಂತಿಕಾರಿ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದ ಗೆಳೆಯ ಹೂವಪ್ಪ. ದೊಡ್ಡ ಜನಪ್ರಿಯತೆ ಇದ್ದಾಗಿಯೂ ಯಾವುದೇ ರೀತಿಯ ರಾಜಕಾರಣದ ಆಮಿಷಕ್ಕೂ ಬಲಿಯಾಗದೆ ಪ್ರಾಮಾಣಿಕ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಪ್ರಾಮಾಣಿಕ ಹೋರಾಟಗಾರ ಅನ್ನೋ ಮಾತಿಗೆ ಮುಕುಟ ಪ್ರಾಯವೇ ಆಗಿದ್ದರು ಹೂವಪ್ಪ. ಬಡ ವಕೀಲನಾಗಿ ಸದಾ ಬಡವರ ಪರ ದುಡಿಯುವ ವ್ಯಕ್ತಿಯಾಗಿದ್ದರು. ಚಿಕ್ಕಮಗಳೂರು ಸುತ್ತ ಮುತ್ತ ಚಳುವಳಿಯ ಕಾರ್ಯಕರ್ತರು ಪೋಲಿಸ್ ಏನ್ಕೌಂಟರ್‌ಗಳಿಗೆ ಒಳಗಾದಾಗ ತನ್ನ ಜೊತೆಗಿನ ಸಂಗಾತಿಗಳನ್ನು ಕರೆದಕೊಂಡು ಹೋಗಿ ಸುಳ್ಳು ಏನ್ಕೌಂಟರ್‌ಗೆ ಸಂಬಂಧಿಸಿ ಸತ್ಯ ಶೋಧನೆ ಬಯಲಿಗೆಳೆಯಲು ಪ್ರಯತ್ನಿಸಿದ್ದರು. ಆಮೂಲಕ ಚಿಕ್ಕಮಗಳೂರಿನ ಈ ಪುಟ್ಟ ಲಾಯರ್, ಜನಪರ ಕ್ರಾಂತಿಕಾತಿ ಲಾಯರ್ ಎಂದೇ ಖ್ಯಾತಿ ಹೊಂದಿದ್ದರು’ ಎಂದು ಅವರನ್ನು ಹತ್ತಿರದಿಂದ ಬಲ್ಲ ದೇಶಾದ್ರಿ ಹೊಸ್ಮನೆ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

‘ನಾಡಿನ ದಲಿತ, ಆದಿವಾಸಿ, ಅಲ್ಪಸಂಖ್ಯಾತ ಹಾಗು ದಮನಿತರ ಮೇಲಿನ ಅನ್ಯಾಯಗಳ ವಿರುದ್ಧ ಅವರು ನಿಂತಿದ್ದರು. ಅದಕ್ಕಾಗಿ ರಾಜ್ಯದ ಹಲವೆಡೆಗಳಲ್ಲಿ ಓಡಾಡಿದ್ದರು. ಸರ್ಕಾರದ ಪಡೆಗಳು ಹೋರಾಟನಿರತ ಜನರ ಮೇಲೆ ನಡೆಸಿದ್ದ ಎನ್ ಕೌಂಟರ್ ಹೆಸರಿನ ಕಗ್ಗೊಲೆಗಳನ್ನು ಜನರೆದುರು ಸತ್ಯಶೋಧನೆಗಳ ಮೂಲಕ ಬಯಲುಗೊಳಿಸುವ ಕಾರ್ಯ ಮಾಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆಗಳ ಬಗ್ಗೆ ದನಿಯೆತ್ತುತ್ತಾ ಬಂದವರಾಗಿದ್ದರು. ನಾಡಿನಲ್ಲಿ ನಡೆದ ಹಲವಾರು ಅಕ್ರಮ, ದೌರ್ಜನ್ಯಗಳ ವಿರುದ್ಧ ಸತ್ಯಶೋಧನಾ ತಂಡಗಳಲ್ಲಿ ಸಕ್ರಿಯರಾಗಿ ಪಾಲ್ಗೊಂಡಿದ್ದರು’ ಎಂದು ‘ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ, ತುಂಗಾ ಉಳಿಸಿ ಚಳುವಳಿಗಳಲ್ಲಿ ಸಕ್ರಿಯರಾಗಿದ್ದ ನಂದಕುಮಾರ್ ಕೆ.ಎಸ್. ತಮ್ಮ ಫೇಸ್‌ಬುಕ್‌ನಲ್ಲಿ ಬರೆದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಕಳಸೇಶ್ವರ ಇನಾಮು ಭೂಮಿ, ಮೀಸಲು ಅರಣ್ಯ, ರಕ್ಷಿತಾರಣ್ಯ ಹೆಸರಿನಲ್ಲಿ ಆದಿವಾಸಿ ಮತ್ತಿತರ ಜನಸಾಮಾನ್ಯರ ಎತ್ತಂಗಡಿಗಳನ್ನು, ಅಪಾಯಕಾರಿ ಪರಿಸರ ವಿನಾಶಗಳನ್ನು, ಭಾರಿ ಕಾರ್ಪೋರೇಟುಗಳ ಕೊಳ್ಳೆಗಳನ್ನು ವಿರೋಧಿಸಿ ನಡೆಯುತ್ತಿದ್ದ ಜನರ ಹೋರಾಟದ ಭಾಗವಾಗಿ ಸಕ್ರಿಯರಾಗಿ ಕೆಲಸ ಮಾಡಿದ್ದರು ಹೂವಪ್ಪ.

ಬಡ ದಲಿತ ಕುಟುಂಬದಲ್ಲಿ ಹುಟ್ಟಿ ಹೇಳಲಾಗದ ಹತ್ತು ಹಲವು ಪ್ರತ್ಯಕ್ಷ ಹಾಗೂ ಪರೋಕ್ಷ ದೌರ್ಜನ್ಯ, ಅಪಮಾನ ಸಹಿಸಿ ಹೋರಾಡುತ್ತಾ ಬಹಳ ಕಷ್ಟದಿಂದ ಶಿಕ್ಷಿತರಾಗಿ ವಕೀಲರಾದವರು ಹೂವಪ್ಪ.

ಹೂವಪ್ಪ ದುಡಿಯುವ ಜನರ ಸಂಗಾತಿಯಾಗಿದ್ದರು. ದಲಿತ ದಮನಿತರ ನೋವಿನ ದನಿಯಾಗಿದ್ದರು, ಸಮಾಜ ಬದಲಾವಣೆಯ ಕ್ರಾಂತಿಕಾರಿ ಪ್ರಜಾತಾಂತ್ರಿಕ ಆಶೋತ್ತರಗಳನ್ನು ಹೃದಯದಲ್ಲಿಟ್ಟು ಕೊಂಡ ಸಹೃದಯ ಹೋರಾಟಗಾರರಾಗಿದ್ದರು. ಜಾತಿ ವಿನಾಶದ ಕಾರ್ಯಕರ್ತರಾಗಿದ್ದ ಹೂವಪ್ಪ. ವರ್ಗ, ಜಾತಿ, ಲಿಂಗ, ವರ್ಣಭೇಧಗಳ ವಿರುದ್ಧವಿದ್ದ ಮಾನವೀಯ ಕಳಕಳಿಯವರಾಗಿದ್ದರು.

ದುಡಿಯುವ ಜನತೆ ತನ್ನ ಒಂದು ದನಿಯನ್ನು ಕಳೆದುಕೊಂಡಿದೆ. ದಲಿತ, ಆದಿವಾಸಿ, ಅಲ್ಪ ಸಂಖ್ಯಾತ, ದಮನಿತರು ತಮ್ಮ ಹೋರಾಟದ ಸಂಗಾತಿಯನ್ನು ಕಳೆದುಕೊಂಡಿದ್ದಾರೆ.
ಅವರ ಬಾಳ ಸಂಗಾತಿ, ಪುಟ್ಟ ಮಗಳು ಹಾಗೂ ಕುಟುಂಬ ವರ್ಗದವರ ದುಃಖದಲ್ಲಿ ಪಾಲ್ಗೊಳ್ಳುತ್ತಾ ಭೌತಿಕವಾಗಿ ಅಗಲಿದ ಹೂವಪ್ಪರಿಗೆ ಶ್ರದ್ದಾಂಜಲಿ ಸಲ್ಲಿಸೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಜನಪರ ಹೋರಾಟಗಾರ, ವಕೀಲ ಹೂವಪ್ಪ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಮ್ರೇಡ್ ಹೂವಪ್ಪ ಅವರ ಜನಪರ ಕಾಳಜಿಯ ಬಗ್ಗೆ ಈಗ ತಾನೆ ಗೊತ್ತಾಗಿದೆ.
    *ಹೋರಾಟದ ಒಡನಾಡಿ ಹೂವಪ್ಪ* ಅವರಿಗೆ ಹೃದಯ ಪೂರ್ವಕ ಶ್ರದ್ಧಾಂಜಲಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...