Homeಚಳವಳಿಅಗಲಿದ ಮಲೆನಾಡಿನ ಮೌನಿ ಹೋರಾಟಗಾರ ಹೂವಪ್ಪ....

ಅಗಲಿದ ಮಲೆನಾಡಿನ ಮೌನಿ ಹೋರಾಟಗಾರ ಹೂವಪ್ಪ….

- Advertisement -
- Advertisement -

ಪ್ರಭುತ್ವದ ಮುಳ್ಳು-ಕಂಟೆಗಳಿಗೆ ಎದುರಾಗಿ ಸೆಣೆಸಿದ ಹೂವಿನಂತಹ ಹೃದಯದ ಹೂವಪ್ಪ ವಕೀಲರು ನಿನ್ನೆ ನಿಧನ ಹೊಂದಿದ್ದಾರೆ. ಕೊರೋನಾದಿಂದ ಚೇತರಿಸಿಕೊಂಡ ಅವರು ನಂತರ ಹೃದಯ ಸಂಬಂಧಿ ಕಾಯಿಲೆಗೆ ಪ್ರಾಣ ಬಿಟ್ಟಿದ್ದಾರೆ.

‘ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ, ತುಂಗಾ ಉಳಿಸಿ ಚಳುವಳಿ ಮತ್ತು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಬಾಬಾ ಬುಡನ್‌ಗಿರಿ ಹೋರಾಟದಲ್ಲಿ ಹೂವಪ್ಪ ತುಂಬ ಕ್ರಿಯಾಶೀಲರಾಗಿದ್ದರು. ಹೋರಾಟಗಾರರ ಮೇಲೆ ಪ್ರಭುತ್ವ ಹಾಕುತ್ತಿದ್ದ ನಕಲಿ ಕೇಸುಗಳ ವಿರುದ್ಧ ಒಬ್ಬ ವಕೀಲರಾಗಿ ಅವರು ತುಂಬ ಕೆಲಸ ಮಾಡಿದ್ದಾರೆ’ ಎನ್ನುತ್ತಾರೆ ಅವರನ್ನು ಬಹು ವರ್ಷಗಳಿಂದ ಬಲ್ಲ ಹೋರಾಟದ ಒಡನಾಡಿ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್..

ಅತ್ಯಂತ ಸಂಭಾವಿತರಾಗಿದ್ದ ಹೂವಪ್ಪ ಯಾರಿಗೂ ಎಂದಿಗೂ ಕೇಡು ಬಗೆಯಲಿಲ್ಲ. ಸದಾ ನಗುಮೊಗದಲ್ಲೇ ವಿರೋಧಿಗಳನ್ನು ಮಾತನಾಡಿಸುತ್ತಿದ್ದ ಮನುಷ್ಯ. ಆದರೂ ಕೊರೋನಾ ಅವರನ್ನು ನುಂಗಿಕೊಂಡು ಬಿಟ್ಟಿದೆ. ಅದಕ್ಕೆ ಇನ್ನೆಷ್ಟು ಸಾವುಗಳು ಬೇಕೋ? ಹೊಣೆಗೇಡಿ ಸರ್ಕಾರಗಳು ತಂದಿಟ್ಟ ಆಪತ್ತಿಗೆ ಹೋರಾಟದ ಗೆಳೆಯ ಹೂವಪ್ಪ ಕೂಡ ಬಲಿಯಾಗಿ ಬಿಟ್ಟ ಎನ್ನುವುದನ್ನು ಅತ್ಯಂತ ರೋಷದಿಂದಲೇ ಹೇಳುತ್ತಿದ್ದೇನೆ. ಕಳೆದ 25 ವರ್ಷ ಜನಪರ ಕ್ರಾಂತಿಕಾರಿ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದ ಗೆಳೆಯ ಹೂವಪ್ಪ. ದೊಡ್ಡ ಜನಪ್ರಿಯತೆ ಇದ್ದಾಗಿಯೂ ಯಾವುದೇ ರೀತಿಯ ರಾಜಕಾರಣದ ಆಮಿಷಕ್ಕೂ ಬಲಿಯಾಗದೆ ಪ್ರಾಮಾಣಿಕ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಪ್ರಾಮಾಣಿಕ ಹೋರಾಟಗಾರ ಅನ್ನೋ ಮಾತಿಗೆ ಮುಕುಟ ಪ್ರಾಯವೇ ಆಗಿದ್ದರು ಹೂವಪ್ಪ. ಬಡ ವಕೀಲನಾಗಿ ಸದಾ ಬಡವರ ಪರ ದುಡಿಯುವ ವ್ಯಕ್ತಿಯಾಗಿದ್ದರು. ಚಿಕ್ಕಮಗಳೂರು ಸುತ್ತ ಮುತ್ತ ಚಳುವಳಿಯ ಕಾರ್ಯಕರ್ತರು ಪೋಲಿಸ್ ಏನ್ಕೌಂಟರ್‌ಗಳಿಗೆ ಒಳಗಾದಾಗ ತನ್ನ ಜೊತೆಗಿನ ಸಂಗಾತಿಗಳನ್ನು ಕರೆದಕೊಂಡು ಹೋಗಿ ಸುಳ್ಳು ಏನ್ಕೌಂಟರ್‌ಗೆ ಸಂಬಂಧಿಸಿ ಸತ್ಯ ಶೋಧನೆ ಬಯಲಿಗೆಳೆಯಲು ಪ್ರಯತ್ನಿಸಿದ್ದರು. ಆಮೂಲಕ ಚಿಕ್ಕಮಗಳೂರಿನ ಈ ಪುಟ್ಟ ಲಾಯರ್, ಜನಪರ ಕ್ರಾಂತಿಕಾತಿ ಲಾಯರ್ ಎಂದೇ ಖ್ಯಾತಿ ಹೊಂದಿದ್ದರು’ ಎಂದು ಅವರನ್ನು ಹತ್ತಿರದಿಂದ ಬಲ್ಲ ದೇಶಾದ್ರಿ ಹೊಸ್ಮನೆ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

‘ನಾಡಿನ ದಲಿತ, ಆದಿವಾಸಿ, ಅಲ್ಪಸಂಖ್ಯಾತ ಹಾಗು ದಮನಿತರ ಮೇಲಿನ ಅನ್ಯಾಯಗಳ ವಿರುದ್ಧ ಅವರು ನಿಂತಿದ್ದರು. ಅದಕ್ಕಾಗಿ ರಾಜ್ಯದ ಹಲವೆಡೆಗಳಲ್ಲಿ ಓಡಾಡಿದ್ದರು. ಸರ್ಕಾರದ ಪಡೆಗಳು ಹೋರಾಟನಿರತ ಜನರ ಮೇಲೆ ನಡೆಸಿದ್ದ ಎನ್ ಕೌಂಟರ್ ಹೆಸರಿನ ಕಗ್ಗೊಲೆಗಳನ್ನು ಜನರೆದುರು ಸತ್ಯಶೋಧನೆಗಳ ಮೂಲಕ ಬಯಲುಗೊಳಿಸುವ ಕಾರ್ಯ ಮಾಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆಗಳ ಬಗ್ಗೆ ದನಿಯೆತ್ತುತ್ತಾ ಬಂದವರಾಗಿದ್ದರು. ನಾಡಿನಲ್ಲಿ ನಡೆದ ಹಲವಾರು ಅಕ್ರಮ, ದೌರ್ಜನ್ಯಗಳ ವಿರುದ್ಧ ಸತ್ಯಶೋಧನಾ ತಂಡಗಳಲ್ಲಿ ಸಕ್ರಿಯರಾಗಿ ಪಾಲ್ಗೊಂಡಿದ್ದರು’ ಎಂದು ‘ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ, ತುಂಗಾ ಉಳಿಸಿ ಚಳುವಳಿಗಳಲ್ಲಿ ಸಕ್ರಿಯರಾಗಿದ್ದ ನಂದಕುಮಾರ್ ಕೆ.ಎಸ್. ತಮ್ಮ ಫೇಸ್‌ಬುಕ್‌ನಲ್ಲಿ ಬರೆದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಕಳಸೇಶ್ವರ ಇನಾಮು ಭೂಮಿ, ಮೀಸಲು ಅರಣ್ಯ, ರಕ್ಷಿತಾರಣ್ಯ ಹೆಸರಿನಲ್ಲಿ ಆದಿವಾಸಿ ಮತ್ತಿತರ ಜನಸಾಮಾನ್ಯರ ಎತ್ತಂಗಡಿಗಳನ್ನು, ಅಪಾಯಕಾರಿ ಪರಿಸರ ವಿನಾಶಗಳನ್ನು, ಭಾರಿ ಕಾರ್ಪೋರೇಟುಗಳ ಕೊಳ್ಳೆಗಳನ್ನು ವಿರೋಧಿಸಿ ನಡೆಯುತ್ತಿದ್ದ ಜನರ ಹೋರಾಟದ ಭಾಗವಾಗಿ ಸಕ್ರಿಯರಾಗಿ ಕೆಲಸ ಮಾಡಿದ್ದರು ಹೂವಪ್ಪ.

ಬಡ ದಲಿತ ಕುಟುಂಬದಲ್ಲಿ ಹುಟ್ಟಿ ಹೇಳಲಾಗದ ಹತ್ತು ಹಲವು ಪ್ರತ್ಯಕ್ಷ ಹಾಗೂ ಪರೋಕ್ಷ ದೌರ್ಜನ್ಯ, ಅಪಮಾನ ಸಹಿಸಿ ಹೋರಾಡುತ್ತಾ ಬಹಳ ಕಷ್ಟದಿಂದ ಶಿಕ್ಷಿತರಾಗಿ ವಕೀಲರಾದವರು ಹೂವಪ್ಪ.

ಹೂವಪ್ಪ ದುಡಿಯುವ ಜನರ ಸಂಗಾತಿಯಾಗಿದ್ದರು. ದಲಿತ ದಮನಿತರ ನೋವಿನ ದನಿಯಾಗಿದ್ದರು, ಸಮಾಜ ಬದಲಾವಣೆಯ ಕ್ರಾಂತಿಕಾರಿ ಪ್ರಜಾತಾಂತ್ರಿಕ ಆಶೋತ್ತರಗಳನ್ನು ಹೃದಯದಲ್ಲಿಟ್ಟು ಕೊಂಡ ಸಹೃದಯ ಹೋರಾಟಗಾರರಾಗಿದ್ದರು. ಜಾತಿ ವಿನಾಶದ ಕಾರ್ಯಕರ್ತರಾಗಿದ್ದ ಹೂವಪ್ಪ. ವರ್ಗ, ಜಾತಿ, ಲಿಂಗ, ವರ್ಣಭೇಧಗಳ ವಿರುದ್ಧವಿದ್ದ ಮಾನವೀಯ ಕಳಕಳಿಯವರಾಗಿದ್ದರು.

ದುಡಿಯುವ ಜನತೆ ತನ್ನ ಒಂದು ದನಿಯನ್ನು ಕಳೆದುಕೊಂಡಿದೆ. ದಲಿತ, ಆದಿವಾಸಿ, ಅಲ್ಪ ಸಂಖ್ಯಾತ, ದಮನಿತರು ತಮ್ಮ ಹೋರಾಟದ ಸಂಗಾತಿಯನ್ನು ಕಳೆದುಕೊಂಡಿದ್ದಾರೆ.
ಅವರ ಬಾಳ ಸಂಗಾತಿ, ಪುಟ್ಟ ಮಗಳು ಹಾಗೂ ಕುಟುಂಬ ವರ್ಗದವರ ದುಃಖದಲ್ಲಿ ಪಾಲ್ಗೊಳ್ಳುತ್ತಾ ಭೌತಿಕವಾಗಿ ಅಗಲಿದ ಹೂವಪ್ಪರಿಗೆ ಶ್ರದ್ದಾಂಜಲಿ ಸಲ್ಲಿಸೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಜನಪರ ಹೋರಾಟಗಾರ, ವಕೀಲ ಹೂವಪ್ಪ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಮ್ರೇಡ್ ಹೂವಪ್ಪ ಅವರ ಜನಪರ ಕಾಳಜಿಯ ಬಗ್ಗೆ ಈಗ ತಾನೆ ಗೊತ್ತಾಗಿದೆ.
    *ಹೋರಾಟದ ಒಡನಾಡಿ ಹೂವಪ್ಪ* ಅವರಿಗೆ ಹೃದಯ ಪೂರ್ವಕ ಶ್ರದ್ಧಾಂಜಲಿ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....