Homeಚಳವಳಿಅಗಲಿದ ಮಲೆನಾಡಿನ ಮೌನಿ ಹೋರಾಟಗಾರ ಹೂವಪ್ಪ....

ಅಗಲಿದ ಮಲೆನಾಡಿನ ಮೌನಿ ಹೋರಾಟಗಾರ ಹೂವಪ್ಪ….

- Advertisement -
- Advertisement -

ಪ್ರಭುತ್ವದ ಮುಳ್ಳು-ಕಂಟೆಗಳಿಗೆ ಎದುರಾಗಿ ಸೆಣೆಸಿದ ಹೂವಿನಂತಹ ಹೃದಯದ ಹೂವಪ್ಪ ವಕೀಲರು ನಿನ್ನೆ ನಿಧನ ಹೊಂದಿದ್ದಾರೆ. ಕೊರೋನಾದಿಂದ ಚೇತರಿಸಿಕೊಂಡ ಅವರು ನಂತರ ಹೃದಯ ಸಂಬಂಧಿ ಕಾಯಿಲೆಗೆ ಪ್ರಾಣ ಬಿಟ್ಟಿದ್ದಾರೆ.

‘ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ, ತುಂಗಾ ಉಳಿಸಿ ಚಳುವಳಿ ಮತ್ತು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಬಾಬಾ ಬುಡನ್‌ಗಿರಿ ಹೋರಾಟದಲ್ಲಿ ಹೂವಪ್ಪ ತುಂಬ ಕ್ರಿಯಾಶೀಲರಾಗಿದ್ದರು. ಹೋರಾಟಗಾರರ ಮೇಲೆ ಪ್ರಭುತ್ವ ಹಾಕುತ್ತಿದ್ದ ನಕಲಿ ಕೇಸುಗಳ ವಿರುದ್ಧ ಒಬ್ಬ ವಕೀಲರಾಗಿ ಅವರು ತುಂಬ ಕೆಲಸ ಮಾಡಿದ್ದಾರೆ’ ಎನ್ನುತ್ತಾರೆ ಅವರನ್ನು ಬಹು ವರ್ಷಗಳಿಂದ ಬಲ್ಲ ಹೋರಾಟದ ಒಡನಾಡಿ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್..

ಅತ್ಯಂತ ಸಂಭಾವಿತರಾಗಿದ್ದ ಹೂವಪ್ಪ ಯಾರಿಗೂ ಎಂದಿಗೂ ಕೇಡು ಬಗೆಯಲಿಲ್ಲ. ಸದಾ ನಗುಮೊಗದಲ್ಲೇ ವಿರೋಧಿಗಳನ್ನು ಮಾತನಾಡಿಸುತ್ತಿದ್ದ ಮನುಷ್ಯ. ಆದರೂ ಕೊರೋನಾ ಅವರನ್ನು ನುಂಗಿಕೊಂಡು ಬಿಟ್ಟಿದೆ. ಅದಕ್ಕೆ ಇನ್ನೆಷ್ಟು ಸಾವುಗಳು ಬೇಕೋ? ಹೊಣೆಗೇಡಿ ಸರ್ಕಾರಗಳು ತಂದಿಟ್ಟ ಆಪತ್ತಿಗೆ ಹೋರಾಟದ ಗೆಳೆಯ ಹೂವಪ್ಪ ಕೂಡ ಬಲಿಯಾಗಿ ಬಿಟ್ಟ ಎನ್ನುವುದನ್ನು ಅತ್ಯಂತ ರೋಷದಿಂದಲೇ ಹೇಳುತ್ತಿದ್ದೇನೆ. ಕಳೆದ 25 ವರ್ಷ ಜನಪರ ಕ್ರಾಂತಿಕಾರಿ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದ ಗೆಳೆಯ ಹೂವಪ್ಪ. ದೊಡ್ಡ ಜನಪ್ರಿಯತೆ ಇದ್ದಾಗಿಯೂ ಯಾವುದೇ ರೀತಿಯ ರಾಜಕಾರಣದ ಆಮಿಷಕ್ಕೂ ಬಲಿಯಾಗದೆ ಪ್ರಾಮಾಣಿಕ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಪ್ರಾಮಾಣಿಕ ಹೋರಾಟಗಾರ ಅನ್ನೋ ಮಾತಿಗೆ ಮುಕುಟ ಪ್ರಾಯವೇ ಆಗಿದ್ದರು ಹೂವಪ್ಪ. ಬಡ ವಕೀಲನಾಗಿ ಸದಾ ಬಡವರ ಪರ ದುಡಿಯುವ ವ್ಯಕ್ತಿಯಾಗಿದ್ದರು. ಚಿಕ್ಕಮಗಳೂರು ಸುತ್ತ ಮುತ್ತ ಚಳುವಳಿಯ ಕಾರ್ಯಕರ್ತರು ಪೋಲಿಸ್ ಏನ್ಕೌಂಟರ್‌ಗಳಿಗೆ ಒಳಗಾದಾಗ ತನ್ನ ಜೊತೆಗಿನ ಸಂಗಾತಿಗಳನ್ನು ಕರೆದಕೊಂಡು ಹೋಗಿ ಸುಳ್ಳು ಏನ್ಕೌಂಟರ್‌ಗೆ ಸಂಬಂಧಿಸಿ ಸತ್ಯ ಶೋಧನೆ ಬಯಲಿಗೆಳೆಯಲು ಪ್ರಯತ್ನಿಸಿದ್ದರು. ಆಮೂಲಕ ಚಿಕ್ಕಮಗಳೂರಿನ ಈ ಪುಟ್ಟ ಲಾಯರ್, ಜನಪರ ಕ್ರಾಂತಿಕಾತಿ ಲಾಯರ್ ಎಂದೇ ಖ್ಯಾತಿ ಹೊಂದಿದ್ದರು’ ಎಂದು ಅವರನ್ನು ಹತ್ತಿರದಿಂದ ಬಲ್ಲ ದೇಶಾದ್ರಿ ಹೊಸ್ಮನೆ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

‘ನಾಡಿನ ದಲಿತ, ಆದಿವಾಸಿ, ಅಲ್ಪಸಂಖ್ಯಾತ ಹಾಗು ದಮನಿತರ ಮೇಲಿನ ಅನ್ಯಾಯಗಳ ವಿರುದ್ಧ ಅವರು ನಿಂತಿದ್ದರು. ಅದಕ್ಕಾಗಿ ರಾಜ್ಯದ ಹಲವೆಡೆಗಳಲ್ಲಿ ಓಡಾಡಿದ್ದರು. ಸರ್ಕಾರದ ಪಡೆಗಳು ಹೋರಾಟನಿರತ ಜನರ ಮೇಲೆ ನಡೆಸಿದ್ದ ಎನ್ ಕೌಂಟರ್ ಹೆಸರಿನ ಕಗ್ಗೊಲೆಗಳನ್ನು ಜನರೆದುರು ಸತ್ಯಶೋಧನೆಗಳ ಮೂಲಕ ಬಯಲುಗೊಳಿಸುವ ಕಾರ್ಯ ಮಾಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆಗಳ ಬಗ್ಗೆ ದನಿಯೆತ್ತುತ್ತಾ ಬಂದವರಾಗಿದ್ದರು. ನಾಡಿನಲ್ಲಿ ನಡೆದ ಹಲವಾರು ಅಕ್ರಮ, ದೌರ್ಜನ್ಯಗಳ ವಿರುದ್ಧ ಸತ್ಯಶೋಧನಾ ತಂಡಗಳಲ್ಲಿ ಸಕ್ರಿಯರಾಗಿ ಪಾಲ್ಗೊಂಡಿದ್ದರು’ ಎಂದು ‘ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ, ತುಂಗಾ ಉಳಿಸಿ ಚಳುವಳಿಗಳಲ್ಲಿ ಸಕ್ರಿಯರಾಗಿದ್ದ ನಂದಕುಮಾರ್ ಕೆ.ಎಸ್. ತಮ್ಮ ಫೇಸ್‌ಬುಕ್‌ನಲ್ಲಿ ಬರೆದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಕಳಸೇಶ್ವರ ಇನಾಮು ಭೂಮಿ, ಮೀಸಲು ಅರಣ್ಯ, ರಕ್ಷಿತಾರಣ್ಯ ಹೆಸರಿನಲ್ಲಿ ಆದಿವಾಸಿ ಮತ್ತಿತರ ಜನಸಾಮಾನ್ಯರ ಎತ್ತಂಗಡಿಗಳನ್ನು, ಅಪಾಯಕಾರಿ ಪರಿಸರ ವಿನಾಶಗಳನ್ನು, ಭಾರಿ ಕಾರ್ಪೋರೇಟುಗಳ ಕೊಳ್ಳೆಗಳನ್ನು ವಿರೋಧಿಸಿ ನಡೆಯುತ್ತಿದ್ದ ಜನರ ಹೋರಾಟದ ಭಾಗವಾಗಿ ಸಕ್ರಿಯರಾಗಿ ಕೆಲಸ ಮಾಡಿದ್ದರು ಹೂವಪ್ಪ.

ಬಡ ದಲಿತ ಕುಟುಂಬದಲ್ಲಿ ಹುಟ್ಟಿ ಹೇಳಲಾಗದ ಹತ್ತು ಹಲವು ಪ್ರತ್ಯಕ್ಷ ಹಾಗೂ ಪರೋಕ್ಷ ದೌರ್ಜನ್ಯ, ಅಪಮಾನ ಸಹಿಸಿ ಹೋರಾಡುತ್ತಾ ಬಹಳ ಕಷ್ಟದಿಂದ ಶಿಕ್ಷಿತರಾಗಿ ವಕೀಲರಾದವರು ಹೂವಪ್ಪ.

ಹೂವಪ್ಪ ದುಡಿಯುವ ಜನರ ಸಂಗಾತಿಯಾಗಿದ್ದರು. ದಲಿತ ದಮನಿತರ ನೋವಿನ ದನಿಯಾಗಿದ್ದರು, ಸಮಾಜ ಬದಲಾವಣೆಯ ಕ್ರಾಂತಿಕಾರಿ ಪ್ರಜಾತಾಂತ್ರಿಕ ಆಶೋತ್ತರಗಳನ್ನು ಹೃದಯದಲ್ಲಿಟ್ಟು ಕೊಂಡ ಸಹೃದಯ ಹೋರಾಟಗಾರರಾಗಿದ್ದರು. ಜಾತಿ ವಿನಾಶದ ಕಾರ್ಯಕರ್ತರಾಗಿದ್ದ ಹೂವಪ್ಪ. ವರ್ಗ, ಜಾತಿ, ಲಿಂಗ, ವರ್ಣಭೇಧಗಳ ವಿರುದ್ಧವಿದ್ದ ಮಾನವೀಯ ಕಳಕಳಿಯವರಾಗಿದ್ದರು.

ದುಡಿಯುವ ಜನತೆ ತನ್ನ ಒಂದು ದನಿಯನ್ನು ಕಳೆದುಕೊಂಡಿದೆ. ದಲಿತ, ಆದಿವಾಸಿ, ಅಲ್ಪ ಸಂಖ್ಯಾತ, ದಮನಿತರು ತಮ್ಮ ಹೋರಾಟದ ಸಂಗಾತಿಯನ್ನು ಕಳೆದುಕೊಂಡಿದ್ದಾರೆ.
ಅವರ ಬಾಳ ಸಂಗಾತಿ, ಪುಟ್ಟ ಮಗಳು ಹಾಗೂ ಕುಟುಂಬ ವರ್ಗದವರ ದುಃಖದಲ್ಲಿ ಪಾಲ್ಗೊಳ್ಳುತ್ತಾ ಭೌತಿಕವಾಗಿ ಅಗಲಿದ ಹೂವಪ್ಪರಿಗೆ ಶ್ರದ್ದಾಂಜಲಿ ಸಲ್ಲಿಸೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಜನಪರ ಹೋರಾಟಗಾರ, ವಕೀಲ ಹೂವಪ್ಪ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಮ್ರೇಡ್ ಹೂವಪ್ಪ ಅವರ ಜನಪರ ಕಾಳಜಿಯ ಬಗ್ಗೆ ಈಗ ತಾನೆ ಗೊತ್ತಾಗಿದೆ.
    *ಹೋರಾಟದ ಒಡನಾಡಿ ಹೂವಪ್ಪ* ಅವರಿಗೆ ಹೃದಯ ಪೂರ್ವಕ ಶ್ರದ್ಧಾಂಜಲಿ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...