Homeಚಳವಳಿಅಗಲಿದ ಮಲೆನಾಡಿನ ಮೌನಿ ಹೋರಾಟಗಾರ ಹೂವಪ್ಪ....

ಅಗಲಿದ ಮಲೆನಾಡಿನ ಮೌನಿ ಹೋರಾಟಗಾರ ಹೂವಪ್ಪ….

- Advertisement -
- Advertisement -

ಪ್ರಭುತ್ವದ ಮುಳ್ಳು-ಕಂಟೆಗಳಿಗೆ ಎದುರಾಗಿ ಸೆಣೆಸಿದ ಹೂವಿನಂತಹ ಹೃದಯದ ಹೂವಪ್ಪ ವಕೀಲರು ನಿನ್ನೆ ನಿಧನ ಹೊಂದಿದ್ದಾರೆ. ಕೊರೋನಾದಿಂದ ಚೇತರಿಸಿಕೊಂಡ ಅವರು ನಂತರ ಹೃದಯ ಸಂಬಂಧಿ ಕಾಯಿಲೆಗೆ ಪ್ರಾಣ ಬಿಟ್ಟಿದ್ದಾರೆ.

‘ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ, ತುಂಗಾ ಉಳಿಸಿ ಚಳುವಳಿ ಮತ್ತು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಬಾಬಾ ಬುಡನ್‌ಗಿರಿ ಹೋರಾಟದಲ್ಲಿ ಹೂವಪ್ಪ ತುಂಬ ಕ್ರಿಯಾಶೀಲರಾಗಿದ್ದರು. ಹೋರಾಟಗಾರರ ಮೇಲೆ ಪ್ರಭುತ್ವ ಹಾಕುತ್ತಿದ್ದ ನಕಲಿ ಕೇಸುಗಳ ವಿರುದ್ಧ ಒಬ್ಬ ವಕೀಲರಾಗಿ ಅವರು ತುಂಬ ಕೆಲಸ ಮಾಡಿದ್ದಾರೆ’ ಎನ್ನುತ್ತಾರೆ ಅವರನ್ನು ಬಹು ವರ್ಷಗಳಿಂದ ಬಲ್ಲ ಹೋರಾಟದ ಒಡನಾಡಿ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್..

ಅತ್ಯಂತ ಸಂಭಾವಿತರಾಗಿದ್ದ ಹೂವಪ್ಪ ಯಾರಿಗೂ ಎಂದಿಗೂ ಕೇಡು ಬಗೆಯಲಿಲ್ಲ. ಸದಾ ನಗುಮೊಗದಲ್ಲೇ ವಿರೋಧಿಗಳನ್ನು ಮಾತನಾಡಿಸುತ್ತಿದ್ದ ಮನುಷ್ಯ. ಆದರೂ ಕೊರೋನಾ ಅವರನ್ನು ನುಂಗಿಕೊಂಡು ಬಿಟ್ಟಿದೆ. ಅದಕ್ಕೆ ಇನ್ನೆಷ್ಟು ಸಾವುಗಳು ಬೇಕೋ? ಹೊಣೆಗೇಡಿ ಸರ್ಕಾರಗಳು ತಂದಿಟ್ಟ ಆಪತ್ತಿಗೆ ಹೋರಾಟದ ಗೆಳೆಯ ಹೂವಪ್ಪ ಕೂಡ ಬಲಿಯಾಗಿ ಬಿಟ್ಟ ಎನ್ನುವುದನ್ನು ಅತ್ಯಂತ ರೋಷದಿಂದಲೇ ಹೇಳುತ್ತಿದ್ದೇನೆ. ಕಳೆದ 25 ವರ್ಷ ಜನಪರ ಕ್ರಾಂತಿಕಾರಿ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದ ಗೆಳೆಯ ಹೂವಪ್ಪ. ದೊಡ್ಡ ಜನಪ್ರಿಯತೆ ಇದ್ದಾಗಿಯೂ ಯಾವುದೇ ರೀತಿಯ ರಾಜಕಾರಣದ ಆಮಿಷಕ್ಕೂ ಬಲಿಯಾಗದೆ ಪ್ರಾಮಾಣಿಕ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಪ್ರಾಮಾಣಿಕ ಹೋರಾಟಗಾರ ಅನ್ನೋ ಮಾತಿಗೆ ಮುಕುಟ ಪ್ರಾಯವೇ ಆಗಿದ್ದರು ಹೂವಪ್ಪ. ಬಡ ವಕೀಲನಾಗಿ ಸದಾ ಬಡವರ ಪರ ದುಡಿಯುವ ವ್ಯಕ್ತಿಯಾಗಿದ್ದರು. ಚಿಕ್ಕಮಗಳೂರು ಸುತ್ತ ಮುತ್ತ ಚಳುವಳಿಯ ಕಾರ್ಯಕರ್ತರು ಪೋಲಿಸ್ ಏನ್ಕೌಂಟರ್‌ಗಳಿಗೆ ಒಳಗಾದಾಗ ತನ್ನ ಜೊತೆಗಿನ ಸಂಗಾತಿಗಳನ್ನು ಕರೆದಕೊಂಡು ಹೋಗಿ ಸುಳ್ಳು ಏನ್ಕೌಂಟರ್‌ಗೆ ಸಂಬಂಧಿಸಿ ಸತ್ಯ ಶೋಧನೆ ಬಯಲಿಗೆಳೆಯಲು ಪ್ರಯತ್ನಿಸಿದ್ದರು. ಆಮೂಲಕ ಚಿಕ್ಕಮಗಳೂರಿನ ಈ ಪುಟ್ಟ ಲಾಯರ್, ಜನಪರ ಕ್ರಾಂತಿಕಾತಿ ಲಾಯರ್ ಎಂದೇ ಖ್ಯಾತಿ ಹೊಂದಿದ್ದರು’ ಎಂದು ಅವರನ್ನು ಹತ್ತಿರದಿಂದ ಬಲ್ಲ ದೇಶಾದ್ರಿ ಹೊಸ್ಮನೆ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

‘ನಾಡಿನ ದಲಿತ, ಆದಿವಾಸಿ, ಅಲ್ಪಸಂಖ್ಯಾತ ಹಾಗು ದಮನಿತರ ಮೇಲಿನ ಅನ್ಯಾಯಗಳ ವಿರುದ್ಧ ಅವರು ನಿಂತಿದ್ದರು. ಅದಕ್ಕಾಗಿ ರಾಜ್ಯದ ಹಲವೆಡೆಗಳಲ್ಲಿ ಓಡಾಡಿದ್ದರು. ಸರ್ಕಾರದ ಪಡೆಗಳು ಹೋರಾಟನಿರತ ಜನರ ಮೇಲೆ ನಡೆಸಿದ್ದ ಎನ್ ಕೌಂಟರ್ ಹೆಸರಿನ ಕಗ್ಗೊಲೆಗಳನ್ನು ಜನರೆದುರು ಸತ್ಯಶೋಧನೆಗಳ ಮೂಲಕ ಬಯಲುಗೊಳಿಸುವ ಕಾರ್ಯ ಮಾಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆಗಳ ಬಗ್ಗೆ ದನಿಯೆತ್ತುತ್ತಾ ಬಂದವರಾಗಿದ್ದರು. ನಾಡಿನಲ್ಲಿ ನಡೆದ ಹಲವಾರು ಅಕ್ರಮ, ದೌರ್ಜನ್ಯಗಳ ವಿರುದ್ಧ ಸತ್ಯಶೋಧನಾ ತಂಡಗಳಲ್ಲಿ ಸಕ್ರಿಯರಾಗಿ ಪಾಲ್ಗೊಂಡಿದ್ದರು’ ಎಂದು ‘ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ, ತುಂಗಾ ಉಳಿಸಿ ಚಳುವಳಿಗಳಲ್ಲಿ ಸಕ್ರಿಯರಾಗಿದ್ದ ನಂದಕುಮಾರ್ ಕೆ.ಎಸ್. ತಮ್ಮ ಫೇಸ್‌ಬುಕ್‌ನಲ್ಲಿ ಬರೆದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಕಳಸೇಶ್ವರ ಇನಾಮು ಭೂಮಿ, ಮೀಸಲು ಅರಣ್ಯ, ರಕ್ಷಿತಾರಣ್ಯ ಹೆಸರಿನಲ್ಲಿ ಆದಿವಾಸಿ ಮತ್ತಿತರ ಜನಸಾಮಾನ್ಯರ ಎತ್ತಂಗಡಿಗಳನ್ನು, ಅಪಾಯಕಾರಿ ಪರಿಸರ ವಿನಾಶಗಳನ್ನು, ಭಾರಿ ಕಾರ್ಪೋರೇಟುಗಳ ಕೊಳ್ಳೆಗಳನ್ನು ವಿರೋಧಿಸಿ ನಡೆಯುತ್ತಿದ್ದ ಜನರ ಹೋರಾಟದ ಭಾಗವಾಗಿ ಸಕ್ರಿಯರಾಗಿ ಕೆಲಸ ಮಾಡಿದ್ದರು ಹೂವಪ್ಪ.

ಬಡ ದಲಿತ ಕುಟುಂಬದಲ್ಲಿ ಹುಟ್ಟಿ ಹೇಳಲಾಗದ ಹತ್ತು ಹಲವು ಪ್ರತ್ಯಕ್ಷ ಹಾಗೂ ಪರೋಕ್ಷ ದೌರ್ಜನ್ಯ, ಅಪಮಾನ ಸಹಿಸಿ ಹೋರಾಡುತ್ತಾ ಬಹಳ ಕಷ್ಟದಿಂದ ಶಿಕ್ಷಿತರಾಗಿ ವಕೀಲರಾದವರು ಹೂವಪ್ಪ.

ಹೂವಪ್ಪ ದುಡಿಯುವ ಜನರ ಸಂಗಾತಿಯಾಗಿದ್ದರು. ದಲಿತ ದಮನಿತರ ನೋವಿನ ದನಿಯಾಗಿದ್ದರು, ಸಮಾಜ ಬದಲಾವಣೆಯ ಕ್ರಾಂತಿಕಾರಿ ಪ್ರಜಾತಾಂತ್ರಿಕ ಆಶೋತ್ತರಗಳನ್ನು ಹೃದಯದಲ್ಲಿಟ್ಟು ಕೊಂಡ ಸಹೃದಯ ಹೋರಾಟಗಾರರಾಗಿದ್ದರು. ಜಾತಿ ವಿನಾಶದ ಕಾರ್ಯಕರ್ತರಾಗಿದ್ದ ಹೂವಪ್ಪ. ವರ್ಗ, ಜಾತಿ, ಲಿಂಗ, ವರ್ಣಭೇಧಗಳ ವಿರುದ್ಧವಿದ್ದ ಮಾನವೀಯ ಕಳಕಳಿಯವರಾಗಿದ್ದರು.

ದುಡಿಯುವ ಜನತೆ ತನ್ನ ಒಂದು ದನಿಯನ್ನು ಕಳೆದುಕೊಂಡಿದೆ. ದಲಿತ, ಆದಿವಾಸಿ, ಅಲ್ಪ ಸಂಖ್ಯಾತ, ದಮನಿತರು ತಮ್ಮ ಹೋರಾಟದ ಸಂಗಾತಿಯನ್ನು ಕಳೆದುಕೊಂಡಿದ್ದಾರೆ.
ಅವರ ಬಾಳ ಸಂಗಾತಿ, ಪುಟ್ಟ ಮಗಳು ಹಾಗೂ ಕುಟುಂಬ ವರ್ಗದವರ ದುಃಖದಲ್ಲಿ ಪಾಲ್ಗೊಳ್ಳುತ್ತಾ ಭೌತಿಕವಾಗಿ ಅಗಲಿದ ಹೂವಪ್ಪರಿಗೆ ಶ್ರದ್ದಾಂಜಲಿ ಸಲ್ಲಿಸೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಜನಪರ ಹೋರಾಟಗಾರ, ವಕೀಲ ಹೂವಪ್ಪ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಮ್ರೇಡ್ ಹೂವಪ್ಪ ಅವರ ಜನಪರ ಕಾಳಜಿಯ ಬಗ್ಗೆ ಈಗ ತಾನೆ ಗೊತ್ತಾಗಿದೆ.
    *ಹೋರಾಟದ ಒಡನಾಡಿ ಹೂವಪ್ಪ* ಅವರಿಗೆ ಹೃದಯ ಪೂರ್ವಕ ಶ್ರದ್ಧಾಂಜಲಿ.

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...