Homeಚಳವಳಿಅಗಲಿದ ಮಲೆನಾಡಿನ ಮೌನಿ ಹೋರಾಟಗಾರ ಹೂವಪ್ಪ....

ಅಗಲಿದ ಮಲೆನಾಡಿನ ಮೌನಿ ಹೋರಾಟಗಾರ ಹೂವಪ್ಪ….

- Advertisement -
- Advertisement -

ಪ್ರಭುತ್ವದ ಮುಳ್ಳು-ಕಂಟೆಗಳಿಗೆ ಎದುರಾಗಿ ಸೆಣೆಸಿದ ಹೂವಿನಂತಹ ಹೃದಯದ ಹೂವಪ್ಪ ವಕೀಲರು ನಿನ್ನೆ ನಿಧನ ಹೊಂದಿದ್ದಾರೆ. ಕೊರೋನಾದಿಂದ ಚೇತರಿಸಿಕೊಂಡ ಅವರು ನಂತರ ಹೃದಯ ಸಂಬಂಧಿ ಕಾಯಿಲೆಗೆ ಪ್ರಾಣ ಬಿಟ್ಟಿದ್ದಾರೆ.

‘ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ, ತುಂಗಾ ಉಳಿಸಿ ಚಳುವಳಿ ಮತ್ತು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಬಾಬಾ ಬುಡನ್‌ಗಿರಿ ಹೋರಾಟದಲ್ಲಿ ಹೂವಪ್ಪ ತುಂಬ ಕ್ರಿಯಾಶೀಲರಾಗಿದ್ದರು. ಹೋರಾಟಗಾರರ ಮೇಲೆ ಪ್ರಭುತ್ವ ಹಾಕುತ್ತಿದ್ದ ನಕಲಿ ಕೇಸುಗಳ ವಿರುದ್ಧ ಒಬ್ಬ ವಕೀಲರಾಗಿ ಅವರು ತುಂಬ ಕೆಲಸ ಮಾಡಿದ್ದಾರೆ’ ಎನ್ನುತ್ತಾರೆ ಅವರನ್ನು ಬಹು ವರ್ಷಗಳಿಂದ ಬಲ್ಲ ಹೋರಾಟದ ಒಡನಾಡಿ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್..

ಅತ್ಯಂತ ಸಂಭಾವಿತರಾಗಿದ್ದ ಹೂವಪ್ಪ ಯಾರಿಗೂ ಎಂದಿಗೂ ಕೇಡು ಬಗೆಯಲಿಲ್ಲ. ಸದಾ ನಗುಮೊಗದಲ್ಲೇ ವಿರೋಧಿಗಳನ್ನು ಮಾತನಾಡಿಸುತ್ತಿದ್ದ ಮನುಷ್ಯ. ಆದರೂ ಕೊರೋನಾ ಅವರನ್ನು ನುಂಗಿಕೊಂಡು ಬಿಟ್ಟಿದೆ. ಅದಕ್ಕೆ ಇನ್ನೆಷ್ಟು ಸಾವುಗಳು ಬೇಕೋ? ಹೊಣೆಗೇಡಿ ಸರ್ಕಾರಗಳು ತಂದಿಟ್ಟ ಆಪತ್ತಿಗೆ ಹೋರಾಟದ ಗೆಳೆಯ ಹೂವಪ್ಪ ಕೂಡ ಬಲಿಯಾಗಿ ಬಿಟ್ಟ ಎನ್ನುವುದನ್ನು ಅತ್ಯಂತ ರೋಷದಿಂದಲೇ ಹೇಳುತ್ತಿದ್ದೇನೆ. ಕಳೆದ 25 ವರ್ಷ ಜನಪರ ಕ್ರಾಂತಿಕಾರಿ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದ ಗೆಳೆಯ ಹೂವಪ್ಪ. ದೊಡ್ಡ ಜನಪ್ರಿಯತೆ ಇದ್ದಾಗಿಯೂ ಯಾವುದೇ ರೀತಿಯ ರಾಜಕಾರಣದ ಆಮಿಷಕ್ಕೂ ಬಲಿಯಾಗದೆ ಪ್ರಾಮಾಣಿಕ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಪ್ರಾಮಾಣಿಕ ಹೋರಾಟಗಾರ ಅನ್ನೋ ಮಾತಿಗೆ ಮುಕುಟ ಪ್ರಾಯವೇ ಆಗಿದ್ದರು ಹೂವಪ್ಪ. ಬಡ ವಕೀಲನಾಗಿ ಸದಾ ಬಡವರ ಪರ ದುಡಿಯುವ ವ್ಯಕ್ತಿಯಾಗಿದ್ದರು. ಚಿಕ್ಕಮಗಳೂರು ಸುತ್ತ ಮುತ್ತ ಚಳುವಳಿಯ ಕಾರ್ಯಕರ್ತರು ಪೋಲಿಸ್ ಏನ್ಕೌಂಟರ್‌ಗಳಿಗೆ ಒಳಗಾದಾಗ ತನ್ನ ಜೊತೆಗಿನ ಸಂಗಾತಿಗಳನ್ನು ಕರೆದಕೊಂಡು ಹೋಗಿ ಸುಳ್ಳು ಏನ್ಕೌಂಟರ್‌ಗೆ ಸಂಬಂಧಿಸಿ ಸತ್ಯ ಶೋಧನೆ ಬಯಲಿಗೆಳೆಯಲು ಪ್ರಯತ್ನಿಸಿದ್ದರು. ಆಮೂಲಕ ಚಿಕ್ಕಮಗಳೂರಿನ ಈ ಪುಟ್ಟ ಲಾಯರ್, ಜನಪರ ಕ್ರಾಂತಿಕಾತಿ ಲಾಯರ್ ಎಂದೇ ಖ್ಯಾತಿ ಹೊಂದಿದ್ದರು’ ಎಂದು ಅವರನ್ನು ಹತ್ತಿರದಿಂದ ಬಲ್ಲ ದೇಶಾದ್ರಿ ಹೊಸ್ಮನೆ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

‘ನಾಡಿನ ದಲಿತ, ಆದಿವಾಸಿ, ಅಲ್ಪಸಂಖ್ಯಾತ ಹಾಗು ದಮನಿತರ ಮೇಲಿನ ಅನ್ಯಾಯಗಳ ವಿರುದ್ಧ ಅವರು ನಿಂತಿದ್ದರು. ಅದಕ್ಕಾಗಿ ರಾಜ್ಯದ ಹಲವೆಡೆಗಳಲ್ಲಿ ಓಡಾಡಿದ್ದರು. ಸರ್ಕಾರದ ಪಡೆಗಳು ಹೋರಾಟನಿರತ ಜನರ ಮೇಲೆ ನಡೆಸಿದ್ದ ಎನ್ ಕೌಂಟರ್ ಹೆಸರಿನ ಕಗ್ಗೊಲೆಗಳನ್ನು ಜನರೆದುರು ಸತ್ಯಶೋಧನೆಗಳ ಮೂಲಕ ಬಯಲುಗೊಳಿಸುವ ಕಾರ್ಯ ಮಾಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆಗಳ ಬಗ್ಗೆ ದನಿಯೆತ್ತುತ್ತಾ ಬಂದವರಾಗಿದ್ದರು. ನಾಡಿನಲ್ಲಿ ನಡೆದ ಹಲವಾರು ಅಕ್ರಮ, ದೌರ್ಜನ್ಯಗಳ ವಿರುದ್ಧ ಸತ್ಯಶೋಧನಾ ತಂಡಗಳಲ್ಲಿ ಸಕ್ರಿಯರಾಗಿ ಪಾಲ್ಗೊಂಡಿದ್ದರು’ ಎಂದು ‘ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ, ತುಂಗಾ ಉಳಿಸಿ ಚಳುವಳಿಗಳಲ್ಲಿ ಸಕ್ರಿಯರಾಗಿದ್ದ ನಂದಕುಮಾರ್ ಕೆ.ಎಸ್. ತಮ್ಮ ಫೇಸ್‌ಬುಕ್‌ನಲ್ಲಿ ಬರೆದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಕಳಸೇಶ್ವರ ಇನಾಮು ಭೂಮಿ, ಮೀಸಲು ಅರಣ್ಯ, ರಕ್ಷಿತಾರಣ್ಯ ಹೆಸರಿನಲ್ಲಿ ಆದಿವಾಸಿ ಮತ್ತಿತರ ಜನಸಾಮಾನ್ಯರ ಎತ್ತಂಗಡಿಗಳನ್ನು, ಅಪಾಯಕಾರಿ ಪರಿಸರ ವಿನಾಶಗಳನ್ನು, ಭಾರಿ ಕಾರ್ಪೋರೇಟುಗಳ ಕೊಳ್ಳೆಗಳನ್ನು ವಿರೋಧಿಸಿ ನಡೆಯುತ್ತಿದ್ದ ಜನರ ಹೋರಾಟದ ಭಾಗವಾಗಿ ಸಕ್ರಿಯರಾಗಿ ಕೆಲಸ ಮಾಡಿದ್ದರು ಹೂವಪ್ಪ.

ಬಡ ದಲಿತ ಕುಟುಂಬದಲ್ಲಿ ಹುಟ್ಟಿ ಹೇಳಲಾಗದ ಹತ್ತು ಹಲವು ಪ್ರತ್ಯಕ್ಷ ಹಾಗೂ ಪರೋಕ್ಷ ದೌರ್ಜನ್ಯ, ಅಪಮಾನ ಸಹಿಸಿ ಹೋರಾಡುತ್ತಾ ಬಹಳ ಕಷ್ಟದಿಂದ ಶಿಕ್ಷಿತರಾಗಿ ವಕೀಲರಾದವರು ಹೂವಪ್ಪ.

ಹೂವಪ್ಪ ದುಡಿಯುವ ಜನರ ಸಂಗಾತಿಯಾಗಿದ್ದರು. ದಲಿತ ದಮನಿತರ ನೋವಿನ ದನಿಯಾಗಿದ್ದರು, ಸಮಾಜ ಬದಲಾವಣೆಯ ಕ್ರಾಂತಿಕಾರಿ ಪ್ರಜಾತಾಂತ್ರಿಕ ಆಶೋತ್ತರಗಳನ್ನು ಹೃದಯದಲ್ಲಿಟ್ಟು ಕೊಂಡ ಸಹೃದಯ ಹೋರಾಟಗಾರರಾಗಿದ್ದರು. ಜಾತಿ ವಿನಾಶದ ಕಾರ್ಯಕರ್ತರಾಗಿದ್ದ ಹೂವಪ್ಪ. ವರ್ಗ, ಜಾತಿ, ಲಿಂಗ, ವರ್ಣಭೇಧಗಳ ವಿರುದ್ಧವಿದ್ದ ಮಾನವೀಯ ಕಳಕಳಿಯವರಾಗಿದ್ದರು.

ದುಡಿಯುವ ಜನತೆ ತನ್ನ ಒಂದು ದನಿಯನ್ನು ಕಳೆದುಕೊಂಡಿದೆ. ದಲಿತ, ಆದಿವಾಸಿ, ಅಲ್ಪ ಸಂಖ್ಯಾತ, ದಮನಿತರು ತಮ್ಮ ಹೋರಾಟದ ಸಂಗಾತಿಯನ್ನು ಕಳೆದುಕೊಂಡಿದ್ದಾರೆ.
ಅವರ ಬಾಳ ಸಂಗಾತಿ, ಪುಟ್ಟ ಮಗಳು ಹಾಗೂ ಕುಟುಂಬ ವರ್ಗದವರ ದುಃಖದಲ್ಲಿ ಪಾಲ್ಗೊಳ್ಳುತ್ತಾ ಭೌತಿಕವಾಗಿ ಅಗಲಿದ ಹೂವಪ್ಪರಿಗೆ ಶ್ರದ್ದಾಂಜಲಿ ಸಲ್ಲಿಸೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಜನಪರ ಹೋರಾಟಗಾರ, ವಕೀಲ ಹೂವಪ್ಪ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಮ್ರೇಡ್ ಹೂವಪ್ಪ ಅವರ ಜನಪರ ಕಾಳಜಿಯ ಬಗ್ಗೆ ಈಗ ತಾನೆ ಗೊತ್ತಾಗಿದೆ.
    *ಹೋರಾಟದ ಒಡನಾಡಿ ಹೂವಪ್ಪ* ಅವರಿಗೆ ಹೃದಯ ಪೂರ್ವಕ ಶ್ರದ್ಧಾಂಜಲಿ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...