Homeಮುಖಪುಟಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

ಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

- Advertisement -
- Advertisement -

ಸುಖಪಡಲು ಎಲ್ಲ ಸವಲತ್ತುಗಳೂ ಚಾಚಿಕೊಂಡು ಬಂದಾಗ ಫಲಾನುಭವಿಯೇ ಪೈಸಲ್ ಎಂಬಂತೆ ನಮ್ಮ ಮಹದೇವ ಪ್ರಕಾಶ್ ಕೊರೊನಾಕ್ಕೆ ಬಲಿಯಾದರು!

ಹಿರಿಯ ಮತ್ತು ಗೌರವಾನ್ವಿತ ಪತ್ರಕರ್ತರಾಗಿದ್ದ ಮಹದೇವ ಪ್ರಕಾಶ್ ಈ ನಾಡು ಕಂಡ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿಯಾಗಿದ್ದ ವಿರೇಂದ್ರಪಾಟೀಲರು ಆರಂಭಿಸಿದ್ದ ಲೋಕವಾಣಿ ಎಂಬ ಪತ್ರಿಕೆಯಲ್ಲಿದ್ದಾಗ ಪ್ರಾಮಾಣಿಕ ಅಭಿವ್ಯಕ್ತಿಗೆ ಹೆಸರಾಗಿದ್ದರು. ಆದರೂ ಲಂಕೇಶ್ ಬದುಕಿರುವವರೆಗೆ ಪತ್ರಿಕೆ ಆಫೀಸಿಗೆ ಬರಲಾಗಿರಲಿಲ್ಲ. ಲಂಕೇಶ್ ಏನಾದರೂ ಬೈದರೆ ಎಂಬ ಅಳುಕಿತ್ತು. ಈ ಅಳುಕು ಸಕಾರಣವಾಗಿತ್ತು.

ಲಂಕೇಶ್ ತೀರಿಕೊಂಡ ನಂತರ ಅವರ ಮಗಳು ಗೌರಿ ಸಂಪಾದಕಿಯಾದ ಮೇಲೆ ಮಹದೇವ ಪ್ರಕಾಶ್ ಪ್ರಭುದ್ಧ ಸಲಹೆಗಾರರಾಗಿ ಬಂದು ಸೇರಿಕೊಂಡರು. ಆಗ ಗೌರಿ, ಮಹದೇವ ಪ್ರಕಾಶ್ ಹೇಳಿದಂಗೆ ಎಂಬ ಉಪಮೆಯಿಂದ ಮಾತು ಆರಂಭಿಸುತ್ತಿದ್ದರು. ಮಹದೇವ ಪ್ರಕಾಶ್ ಬರವಣಿಗೆ ಕೂಡ ತಣ್ಣನೆ ಶೈಲಿಯ ಸಂಯುಕ್ತ ಕರ್ನಾಟಕದ ಲೇಖನದಂತಿದ್ದವು. ಆದ್ದರಿಂದ ಗೌರಿಯ ತಾತ್ಸಾರಕ್ಕೆ ಒಳಗಾದರು.

ನಂತರ ಈ ಭಾನುವಾರ ಎಂಬ ವಾರಪತ್ರಿಕೆ ನಡೆಸತೊಡಗಿದರು. ಇದೂ ಕೂಡ ಸುಧಾರಿತ ವೈಕುಂಟರಾಜುರವರ ವಾರಪತ್ರಿಕೆಯಂತಿತ್ತು. ಜನ ಕೊಂಡು ಓದದಿದ್ದರೂ, ಪತ್ರಿಕೆ ನಡೆಸುವ ಕುಶಲಕಲೆ ಮಹದೇವ ಪ್ರಕಾಶರಿಗಿತ್ತು. ಸಿದ್ದರಾಮಯ್ಯನವರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಲೇಖನ ಬರತೊಡಗಿದವು. ಮಹದೇವ ಪ್ರಕಾಶ್ ಬರೆದ ಮೇಲೆ ಅದರಲ್ಲಿ ಸತ್ಯಾಂಶಗಳಿರುತ್ತವೆ ಎಂದು ಕೆಲವರು ಓದುತ್ತಿದ್ದರು. ಮುಖ್ಯವಾಗಿ ಯಡಿಯೂರಪ್ಪನವರ ಕಡೆಯವರ ನಡುವೆ ಪತ್ರಿಕೆ ಹೆಚ್ಚು ಚರ್ಚೆಯಾಗುತ್ತಿತ್ತು. ಅದೇ ಸಮಯದಲ್ಲಿ ಮಹದೇವ ಪ್ರಕಾಶ್ ಟಿವಿಯೊಳಗೆ ರಾಜಕೀಯ ವಿಶ್ಲೇಷಕರಾಗಿ ಬಂದು ಕುಳಿತರು. ಅಲ್ಲಿ ಬಂದು ಕುಳಿತ ಮೇಲೆ ನಿರಂತರವಾಗಿ ಮಾತನಾಡಬೇಕಾಗುತ್ತದೆ. ಆದ್ದರಿಂದ ಪೂರ್ವಾಗ್ರಹಗಳಿದ್ದರೆ ಸಾಕು, ಸುಳ್ಳುಗಳು ತಾನಾಗಿಯೇ ಹರಿದು ಬರುತ್ತವೆ.

ಒಮ್ಮೆ ಅವರು ಟಿವಿಯಲ್ಲಿ ಮಾತಾನಾಡುತ್ತ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಯತೀಂದ್ರನನ್ನು ನಿಲ್ಲಿಸಿದ್ದನ್ನು ಪ್ರಶ್ನೆ ಮಾಡುತ್ತ ಶಾಂತವೇರಿ ಗೋಪಾಲಗೌಡರು ತಾವು ಅನಾರೋಗ್ಯಕ್ಕೆ ತುತ್ತಾದಾಗ ತಮ್ಮ ಮಗಳನ್ನು ಅಭ್ಯರ್ಥಿಯನ್ನಾಗಿ ಮಾಡುವುದರ ಬದಲು ಬೆಸ್ತ ಜನಾಂಗದ ಕೊಣಂದೂರು ಲಿಂಗಪ್ಪನವರನ್ನು ಅಭ್ಯರ್ಥಿಯನ್ನಾಗಿ ಮಾಡಿದರು. ಅಂತಹ ತ್ಯಾಗಮಯಿ ರಾಜಕಾರಣಿ ಎಲ್ಲಿ, ಈ ಸಿದ್ದರಾಮಯ್ಯನೆಲ್ಲಿ ಎಂದರು. ಆಗ ನಾನು ಗೌರಿ ಎದುರು ಕುಳಿತಿದ್ದೆ. ಅವರು ಹೇಳಿದ ಸುಳ್ಳನ್ನು ಗೌರಿಗೆ ಹೇಳಿದೆ. ಫೋನ್ ಮಾಡಲು ನಂಬರ್ ಕೊಟ್ಟಳು. ತುಸು ಹೊತ್ತಾದ ನಂತರ ಮಹದೇವ ಪ್ರಕಾಶ್‌ಗೆ ಫೋನ್ ಮಾಡಿ:

ಏನ್ ಸಾರ್ ಈ ತರ ಸುಳ್ಳು ಹೇಳ್ತಾ ಇದ್ದೀರಿ ಎಂದೆ.

ನಾನ್ಯಾವ ಸುಳ್ಳು ಹೇಳಿದೆ ಅಂದ್ರು.

ನೋಡಿ ಗೋಪಾಲಗೌಡ್ರು ಅನಾರೋಗ್ಯದಲ್ಲಿದ್ದು, ತೀರ್ಥಹಳ್ಳಿ ಕ್ಷೇತ್ರ ಬಿಟ್ಟುಕೊಟ್ಟಾಗ, ಅವರ ಮಗಳಿಗೆ ಐದಾರು ವರ್ಷ ಇರಬಹುದು. ಇನ್ನು ಕೊಣಂದೂರು ಲಿಂಗಪ್ಪ ಬೆಸ್ತರ ಪೈಕಿ ಅಲ್ಲ, ಬೋವಿ ಪೈಕಿ. ನಿಮ್ಮಂಥವರು ಟಿವಿ ಒಳಗಡೆ ಕುಂತುಗಂಡು ಚೆಡ್ಡಿಗಳ ತರ ಸುಳ್ಳು ಹೇಳಬಾರ್ದು ಎಂದೆ.

ಚಂದ್ರೇಗೌಡ್ರೆ ತಪ್ಪಿದ್ರೆ ಹೇಳಿ ತಿದ್ದಿಕೊಳ್ಳೋಣ ಆದ್ರೆ ಚೆಡ್ಡಿಗಳು ಅನ್ನಬೇಡಿ ಎಂದರು.

ನೀವು ಇದುವರಿಗೂ ಹೇಳಿರೋ ಸುಳ್ಳುಗಳ ಲೆಕ್ಕಹಾಕಿದ್ರೆ ಚೆಡ್ಡಿಗಳು ಮಾತ್ರ ಇಷ್ಟು ಸುಳ್ಳೇಳಕ್ಕೆ ಸಾಧ್ಯ. ಮುಂದಿನ ವಾರ ಹೈಕಮಾಂಡು ಬಂದು ಸಿದ್ದರಾಮಯ್ಯನ್ನ ಇಳಸತ್ತೆ ಅಂತ ಮೂರು ತಿಂಗಳಿಂದ ಹೇಳ್ತ ಇದ್ದೀರಿ ಎಂದು ಆ ಕಡೆಯ ಯಾವ ವಿವರವನ್ನ ಕೇಳಿಸಿಕೊಳ್ಳದೆ ದಾಳಿ ಮಾಡಿದೆ. ಗೌರಿ ನಗುತ್ತ ಹೋಗ್ಲಿ ಬುಡ್ರಿ ಎಂದಳು. ಆಗ ಮನಸ್ಸಿಗೆ ಎಂತದೊ ಸಮಾಧಾನವಾಯ್ತು!

ಮಹದೇವ ಪ್ರಕಾಶರ ಟಿವಿ ವಿಶ್ಲೇಷಣೆ ಮತ್ತು ಭಾನುವಾರ ಪತ್ರಿಕೆ ಸತತವಾಗಿ ಸಿದ್ದರಾಮಯ್ಯನ ಸರಕಾರವನ್ನು ಟೀಕಿಸಿದ್ದು ಫಲ ಕೊಟ್ಟಿತ್ತು. ಯೆಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡರು. ಎಂದಿನಂತೆ ಯಡಿಯೂರಪ್ಪ ಯಾರ್‍ಯಾರಿಗೆ ಆಶ್ವಾಸನೆ ಕೊಟ್ಟಿದ್ದರೋ ಏನೋ ಸಲಹೆಗಾರನಾಗಿ ಮಹದೇವ ಪ್ರಕಾಶರ ಅಲ್ಪ ಅವಧಿ ಮುಗಿಯಿತು.

ತೀರಿಕೊಂಡವರ ಬಗ್ಗೆ ಹಗುರವಾಗಿ ಮಾತನಾಡಬಾರದಂತೆ. ಆದರೂ ಒಂದು ಕಾಲದ ಗೌರವಾನ್ವಿತ ವ್ಯಕ್ತಿಯಾಗಿದ್ದ ಮಹದೇವರು ಹೀಗಾಗುವ ಅಗತ್ಯವಿರಲಿಲ್ಲ ಎಂಬುದು ಹಗುರವಾದ ಮಾತಲ್ಲ.


ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...