Homeಮುಖಪುಟಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

ಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

- Advertisement -
- Advertisement -

ಸುಖಪಡಲು ಎಲ್ಲ ಸವಲತ್ತುಗಳೂ ಚಾಚಿಕೊಂಡು ಬಂದಾಗ ಫಲಾನುಭವಿಯೇ ಪೈಸಲ್ ಎಂಬಂತೆ ನಮ್ಮ ಮಹದೇವ ಪ್ರಕಾಶ್ ಕೊರೊನಾಕ್ಕೆ ಬಲಿಯಾದರು!

ಹಿರಿಯ ಮತ್ತು ಗೌರವಾನ್ವಿತ ಪತ್ರಕರ್ತರಾಗಿದ್ದ ಮಹದೇವ ಪ್ರಕಾಶ್ ಈ ನಾಡು ಕಂಡ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿಯಾಗಿದ್ದ ವಿರೇಂದ್ರಪಾಟೀಲರು ಆರಂಭಿಸಿದ್ದ ಲೋಕವಾಣಿ ಎಂಬ ಪತ್ರಿಕೆಯಲ್ಲಿದ್ದಾಗ ಪ್ರಾಮಾಣಿಕ ಅಭಿವ್ಯಕ್ತಿಗೆ ಹೆಸರಾಗಿದ್ದರು. ಆದರೂ ಲಂಕೇಶ್ ಬದುಕಿರುವವರೆಗೆ ಪತ್ರಿಕೆ ಆಫೀಸಿಗೆ ಬರಲಾಗಿರಲಿಲ್ಲ. ಲಂಕೇಶ್ ಏನಾದರೂ ಬೈದರೆ ಎಂಬ ಅಳುಕಿತ್ತು. ಈ ಅಳುಕು ಸಕಾರಣವಾಗಿತ್ತು.

ಲಂಕೇಶ್ ತೀರಿಕೊಂಡ ನಂತರ ಅವರ ಮಗಳು ಗೌರಿ ಸಂಪಾದಕಿಯಾದ ಮೇಲೆ ಮಹದೇವ ಪ್ರಕಾಶ್ ಪ್ರಭುದ್ಧ ಸಲಹೆಗಾರರಾಗಿ ಬಂದು ಸೇರಿಕೊಂಡರು. ಆಗ ಗೌರಿ, ಮಹದೇವ ಪ್ರಕಾಶ್ ಹೇಳಿದಂಗೆ ಎಂಬ ಉಪಮೆಯಿಂದ ಮಾತು ಆರಂಭಿಸುತ್ತಿದ್ದರು. ಮಹದೇವ ಪ್ರಕಾಶ್ ಬರವಣಿಗೆ ಕೂಡ ತಣ್ಣನೆ ಶೈಲಿಯ ಸಂಯುಕ್ತ ಕರ್ನಾಟಕದ ಲೇಖನದಂತಿದ್ದವು. ಆದ್ದರಿಂದ ಗೌರಿಯ ತಾತ್ಸಾರಕ್ಕೆ ಒಳಗಾದರು.

ನಂತರ ಈ ಭಾನುವಾರ ಎಂಬ ವಾರಪತ್ರಿಕೆ ನಡೆಸತೊಡಗಿದರು. ಇದೂ ಕೂಡ ಸುಧಾರಿತ ವೈಕುಂಟರಾಜುರವರ ವಾರಪತ್ರಿಕೆಯಂತಿತ್ತು. ಜನ ಕೊಂಡು ಓದದಿದ್ದರೂ, ಪತ್ರಿಕೆ ನಡೆಸುವ ಕುಶಲಕಲೆ ಮಹದೇವ ಪ್ರಕಾಶರಿಗಿತ್ತು. ಸಿದ್ದರಾಮಯ್ಯನವರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಲೇಖನ ಬರತೊಡಗಿದವು. ಮಹದೇವ ಪ್ರಕಾಶ್ ಬರೆದ ಮೇಲೆ ಅದರಲ್ಲಿ ಸತ್ಯಾಂಶಗಳಿರುತ್ತವೆ ಎಂದು ಕೆಲವರು ಓದುತ್ತಿದ್ದರು. ಮುಖ್ಯವಾಗಿ ಯಡಿಯೂರಪ್ಪನವರ ಕಡೆಯವರ ನಡುವೆ ಪತ್ರಿಕೆ ಹೆಚ್ಚು ಚರ್ಚೆಯಾಗುತ್ತಿತ್ತು. ಅದೇ ಸಮಯದಲ್ಲಿ ಮಹದೇವ ಪ್ರಕಾಶ್ ಟಿವಿಯೊಳಗೆ ರಾಜಕೀಯ ವಿಶ್ಲೇಷಕರಾಗಿ ಬಂದು ಕುಳಿತರು. ಅಲ್ಲಿ ಬಂದು ಕುಳಿತ ಮೇಲೆ ನಿರಂತರವಾಗಿ ಮಾತನಾಡಬೇಕಾಗುತ್ತದೆ. ಆದ್ದರಿಂದ ಪೂರ್ವಾಗ್ರಹಗಳಿದ್ದರೆ ಸಾಕು, ಸುಳ್ಳುಗಳು ತಾನಾಗಿಯೇ ಹರಿದು ಬರುತ್ತವೆ.

ಒಮ್ಮೆ ಅವರು ಟಿವಿಯಲ್ಲಿ ಮಾತಾನಾಡುತ್ತ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಯತೀಂದ್ರನನ್ನು ನಿಲ್ಲಿಸಿದ್ದನ್ನು ಪ್ರಶ್ನೆ ಮಾಡುತ್ತ ಶಾಂತವೇರಿ ಗೋಪಾಲಗೌಡರು ತಾವು ಅನಾರೋಗ್ಯಕ್ಕೆ ತುತ್ತಾದಾಗ ತಮ್ಮ ಮಗಳನ್ನು ಅಭ್ಯರ್ಥಿಯನ್ನಾಗಿ ಮಾಡುವುದರ ಬದಲು ಬೆಸ್ತ ಜನಾಂಗದ ಕೊಣಂದೂರು ಲಿಂಗಪ್ಪನವರನ್ನು ಅಭ್ಯರ್ಥಿಯನ್ನಾಗಿ ಮಾಡಿದರು. ಅಂತಹ ತ್ಯಾಗಮಯಿ ರಾಜಕಾರಣಿ ಎಲ್ಲಿ, ಈ ಸಿದ್ದರಾಮಯ್ಯನೆಲ್ಲಿ ಎಂದರು. ಆಗ ನಾನು ಗೌರಿ ಎದುರು ಕುಳಿತಿದ್ದೆ. ಅವರು ಹೇಳಿದ ಸುಳ್ಳನ್ನು ಗೌರಿಗೆ ಹೇಳಿದೆ. ಫೋನ್ ಮಾಡಲು ನಂಬರ್ ಕೊಟ್ಟಳು. ತುಸು ಹೊತ್ತಾದ ನಂತರ ಮಹದೇವ ಪ್ರಕಾಶ್‌ಗೆ ಫೋನ್ ಮಾಡಿ:

ಏನ್ ಸಾರ್ ಈ ತರ ಸುಳ್ಳು ಹೇಳ್ತಾ ಇದ್ದೀರಿ ಎಂದೆ.

ನಾನ್ಯಾವ ಸುಳ್ಳು ಹೇಳಿದೆ ಅಂದ್ರು.

ನೋಡಿ ಗೋಪಾಲಗೌಡ್ರು ಅನಾರೋಗ್ಯದಲ್ಲಿದ್ದು, ತೀರ್ಥಹಳ್ಳಿ ಕ್ಷೇತ್ರ ಬಿಟ್ಟುಕೊಟ್ಟಾಗ, ಅವರ ಮಗಳಿಗೆ ಐದಾರು ವರ್ಷ ಇರಬಹುದು. ಇನ್ನು ಕೊಣಂದೂರು ಲಿಂಗಪ್ಪ ಬೆಸ್ತರ ಪೈಕಿ ಅಲ್ಲ, ಬೋವಿ ಪೈಕಿ. ನಿಮ್ಮಂಥವರು ಟಿವಿ ಒಳಗಡೆ ಕುಂತುಗಂಡು ಚೆಡ್ಡಿಗಳ ತರ ಸುಳ್ಳು ಹೇಳಬಾರ್ದು ಎಂದೆ.

ಚಂದ್ರೇಗೌಡ್ರೆ ತಪ್ಪಿದ್ರೆ ಹೇಳಿ ತಿದ್ದಿಕೊಳ್ಳೋಣ ಆದ್ರೆ ಚೆಡ್ಡಿಗಳು ಅನ್ನಬೇಡಿ ಎಂದರು.

ನೀವು ಇದುವರಿಗೂ ಹೇಳಿರೋ ಸುಳ್ಳುಗಳ ಲೆಕ್ಕಹಾಕಿದ್ರೆ ಚೆಡ್ಡಿಗಳು ಮಾತ್ರ ಇಷ್ಟು ಸುಳ್ಳೇಳಕ್ಕೆ ಸಾಧ್ಯ. ಮುಂದಿನ ವಾರ ಹೈಕಮಾಂಡು ಬಂದು ಸಿದ್ದರಾಮಯ್ಯನ್ನ ಇಳಸತ್ತೆ ಅಂತ ಮೂರು ತಿಂಗಳಿಂದ ಹೇಳ್ತ ಇದ್ದೀರಿ ಎಂದು ಆ ಕಡೆಯ ಯಾವ ವಿವರವನ್ನ ಕೇಳಿಸಿಕೊಳ್ಳದೆ ದಾಳಿ ಮಾಡಿದೆ. ಗೌರಿ ನಗುತ್ತ ಹೋಗ್ಲಿ ಬುಡ್ರಿ ಎಂದಳು. ಆಗ ಮನಸ್ಸಿಗೆ ಎಂತದೊ ಸಮಾಧಾನವಾಯ್ತು!

ಮಹದೇವ ಪ್ರಕಾಶರ ಟಿವಿ ವಿಶ್ಲೇಷಣೆ ಮತ್ತು ಭಾನುವಾರ ಪತ್ರಿಕೆ ಸತತವಾಗಿ ಸಿದ್ದರಾಮಯ್ಯನ ಸರಕಾರವನ್ನು ಟೀಕಿಸಿದ್ದು ಫಲ ಕೊಟ್ಟಿತ್ತು. ಯೆಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡರು. ಎಂದಿನಂತೆ ಯಡಿಯೂರಪ್ಪ ಯಾರ್‍ಯಾರಿಗೆ ಆಶ್ವಾಸನೆ ಕೊಟ್ಟಿದ್ದರೋ ಏನೋ ಸಲಹೆಗಾರನಾಗಿ ಮಹದೇವ ಪ್ರಕಾಶರ ಅಲ್ಪ ಅವಧಿ ಮುಗಿಯಿತು.

ತೀರಿಕೊಂಡವರ ಬಗ್ಗೆ ಹಗುರವಾಗಿ ಮಾತನಾಡಬಾರದಂತೆ. ಆದರೂ ಒಂದು ಕಾಲದ ಗೌರವಾನ್ವಿತ ವ್ಯಕ್ತಿಯಾಗಿದ್ದ ಮಹದೇವರು ಹೀಗಾಗುವ ಅಗತ್ಯವಿರಲಿಲ್ಲ ಎಂಬುದು ಹಗುರವಾದ ಮಾತಲ್ಲ.


ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...