Homeಮುಖಪುಟಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

ಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

- Advertisement -
- Advertisement -

ಸುಖಪಡಲು ಎಲ್ಲ ಸವಲತ್ತುಗಳೂ ಚಾಚಿಕೊಂಡು ಬಂದಾಗ ಫಲಾನುಭವಿಯೇ ಪೈಸಲ್ ಎಂಬಂತೆ ನಮ್ಮ ಮಹದೇವ ಪ್ರಕಾಶ್ ಕೊರೊನಾಕ್ಕೆ ಬಲಿಯಾದರು!

ಹಿರಿಯ ಮತ್ತು ಗೌರವಾನ್ವಿತ ಪತ್ರಕರ್ತರಾಗಿದ್ದ ಮಹದೇವ ಪ್ರಕಾಶ್ ಈ ನಾಡು ಕಂಡ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿಯಾಗಿದ್ದ ವಿರೇಂದ್ರಪಾಟೀಲರು ಆರಂಭಿಸಿದ್ದ ಲೋಕವಾಣಿ ಎಂಬ ಪತ್ರಿಕೆಯಲ್ಲಿದ್ದಾಗ ಪ್ರಾಮಾಣಿಕ ಅಭಿವ್ಯಕ್ತಿಗೆ ಹೆಸರಾಗಿದ್ದರು. ಆದರೂ ಲಂಕೇಶ್ ಬದುಕಿರುವವರೆಗೆ ಪತ್ರಿಕೆ ಆಫೀಸಿಗೆ ಬರಲಾಗಿರಲಿಲ್ಲ. ಲಂಕೇಶ್ ಏನಾದರೂ ಬೈದರೆ ಎಂಬ ಅಳುಕಿತ್ತು. ಈ ಅಳುಕು ಸಕಾರಣವಾಗಿತ್ತು.

ಲಂಕೇಶ್ ತೀರಿಕೊಂಡ ನಂತರ ಅವರ ಮಗಳು ಗೌರಿ ಸಂಪಾದಕಿಯಾದ ಮೇಲೆ ಮಹದೇವ ಪ್ರಕಾಶ್ ಪ್ರಭುದ್ಧ ಸಲಹೆಗಾರರಾಗಿ ಬಂದು ಸೇರಿಕೊಂಡರು. ಆಗ ಗೌರಿ, ಮಹದೇವ ಪ್ರಕಾಶ್ ಹೇಳಿದಂಗೆ ಎಂಬ ಉಪಮೆಯಿಂದ ಮಾತು ಆರಂಭಿಸುತ್ತಿದ್ದರು. ಮಹದೇವ ಪ್ರಕಾಶ್ ಬರವಣಿಗೆ ಕೂಡ ತಣ್ಣನೆ ಶೈಲಿಯ ಸಂಯುಕ್ತ ಕರ್ನಾಟಕದ ಲೇಖನದಂತಿದ್ದವು. ಆದ್ದರಿಂದ ಗೌರಿಯ ತಾತ್ಸಾರಕ್ಕೆ ಒಳಗಾದರು.

ನಂತರ ಈ ಭಾನುವಾರ ಎಂಬ ವಾರಪತ್ರಿಕೆ ನಡೆಸತೊಡಗಿದರು. ಇದೂ ಕೂಡ ಸುಧಾರಿತ ವೈಕುಂಟರಾಜುರವರ ವಾರಪತ್ರಿಕೆಯಂತಿತ್ತು. ಜನ ಕೊಂಡು ಓದದಿದ್ದರೂ, ಪತ್ರಿಕೆ ನಡೆಸುವ ಕುಶಲಕಲೆ ಮಹದೇವ ಪ್ರಕಾಶರಿಗಿತ್ತು. ಸಿದ್ದರಾಮಯ್ಯನವರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಲೇಖನ ಬರತೊಡಗಿದವು. ಮಹದೇವ ಪ್ರಕಾಶ್ ಬರೆದ ಮೇಲೆ ಅದರಲ್ಲಿ ಸತ್ಯಾಂಶಗಳಿರುತ್ತವೆ ಎಂದು ಕೆಲವರು ಓದುತ್ತಿದ್ದರು. ಮುಖ್ಯವಾಗಿ ಯಡಿಯೂರಪ್ಪನವರ ಕಡೆಯವರ ನಡುವೆ ಪತ್ರಿಕೆ ಹೆಚ್ಚು ಚರ್ಚೆಯಾಗುತ್ತಿತ್ತು. ಅದೇ ಸಮಯದಲ್ಲಿ ಮಹದೇವ ಪ್ರಕಾಶ್ ಟಿವಿಯೊಳಗೆ ರಾಜಕೀಯ ವಿಶ್ಲೇಷಕರಾಗಿ ಬಂದು ಕುಳಿತರು. ಅಲ್ಲಿ ಬಂದು ಕುಳಿತ ಮೇಲೆ ನಿರಂತರವಾಗಿ ಮಾತನಾಡಬೇಕಾಗುತ್ತದೆ. ಆದ್ದರಿಂದ ಪೂರ್ವಾಗ್ರಹಗಳಿದ್ದರೆ ಸಾಕು, ಸುಳ್ಳುಗಳು ತಾನಾಗಿಯೇ ಹರಿದು ಬರುತ್ತವೆ.

ಒಮ್ಮೆ ಅವರು ಟಿವಿಯಲ್ಲಿ ಮಾತಾನಾಡುತ್ತ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಯತೀಂದ್ರನನ್ನು ನಿಲ್ಲಿಸಿದ್ದನ್ನು ಪ್ರಶ್ನೆ ಮಾಡುತ್ತ ಶಾಂತವೇರಿ ಗೋಪಾಲಗೌಡರು ತಾವು ಅನಾರೋಗ್ಯಕ್ಕೆ ತುತ್ತಾದಾಗ ತಮ್ಮ ಮಗಳನ್ನು ಅಭ್ಯರ್ಥಿಯನ್ನಾಗಿ ಮಾಡುವುದರ ಬದಲು ಬೆಸ್ತ ಜನಾಂಗದ ಕೊಣಂದೂರು ಲಿಂಗಪ್ಪನವರನ್ನು ಅಭ್ಯರ್ಥಿಯನ್ನಾಗಿ ಮಾಡಿದರು. ಅಂತಹ ತ್ಯಾಗಮಯಿ ರಾಜಕಾರಣಿ ಎಲ್ಲಿ, ಈ ಸಿದ್ದರಾಮಯ್ಯನೆಲ್ಲಿ ಎಂದರು. ಆಗ ನಾನು ಗೌರಿ ಎದುರು ಕುಳಿತಿದ್ದೆ. ಅವರು ಹೇಳಿದ ಸುಳ್ಳನ್ನು ಗೌರಿಗೆ ಹೇಳಿದೆ. ಫೋನ್ ಮಾಡಲು ನಂಬರ್ ಕೊಟ್ಟಳು. ತುಸು ಹೊತ್ತಾದ ನಂತರ ಮಹದೇವ ಪ್ರಕಾಶ್‌ಗೆ ಫೋನ್ ಮಾಡಿ:

ಏನ್ ಸಾರ್ ಈ ತರ ಸುಳ್ಳು ಹೇಳ್ತಾ ಇದ್ದೀರಿ ಎಂದೆ.

ನಾನ್ಯಾವ ಸುಳ್ಳು ಹೇಳಿದೆ ಅಂದ್ರು.

ನೋಡಿ ಗೋಪಾಲಗೌಡ್ರು ಅನಾರೋಗ್ಯದಲ್ಲಿದ್ದು, ತೀರ್ಥಹಳ್ಳಿ ಕ್ಷೇತ್ರ ಬಿಟ್ಟುಕೊಟ್ಟಾಗ, ಅವರ ಮಗಳಿಗೆ ಐದಾರು ವರ್ಷ ಇರಬಹುದು. ಇನ್ನು ಕೊಣಂದೂರು ಲಿಂಗಪ್ಪ ಬೆಸ್ತರ ಪೈಕಿ ಅಲ್ಲ, ಬೋವಿ ಪೈಕಿ. ನಿಮ್ಮಂಥವರು ಟಿವಿ ಒಳಗಡೆ ಕುಂತುಗಂಡು ಚೆಡ್ಡಿಗಳ ತರ ಸುಳ್ಳು ಹೇಳಬಾರ್ದು ಎಂದೆ.

ಚಂದ್ರೇಗೌಡ್ರೆ ತಪ್ಪಿದ್ರೆ ಹೇಳಿ ತಿದ್ದಿಕೊಳ್ಳೋಣ ಆದ್ರೆ ಚೆಡ್ಡಿಗಳು ಅನ್ನಬೇಡಿ ಎಂದರು.

ನೀವು ಇದುವರಿಗೂ ಹೇಳಿರೋ ಸುಳ್ಳುಗಳ ಲೆಕ್ಕಹಾಕಿದ್ರೆ ಚೆಡ್ಡಿಗಳು ಮಾತ್ರ ಇಷ್ಟು ಸುಳ್ಳೇಳಕ್ಕೆ ಸಾಧ್ಯ. ಮುಂದಿನ ವಾರ ಹೈಕಮಾಂಡು ಬಂದು ಸಿದ್ದರಾಮಯ್ಯನ್ನ ಇಳಸತ್ತೆ ಅಂತ ಮೂರು ತಿಂಗಳಿಂದ ಹೇಳ್ತ ಇದ್ದೀರಿ ಎಂದು ಆ ಕಡೆಯ ಯಾವ ವಿವರವನ್ನ ಕೇಳಿಸಿಕೊಳ್ಳದೆ ದಾಳಿ ಮಾಡಿದೆ. ಗೌರಿ ನಗುತ್ತ ಹೋಗ್ಲಿ ಬುಡ್ರಿ ಎಂದಳು. ಆಗ ಮನಸ್ಸಿಗೆ ಎಂತದೊ ಸಮಾಧಾನವಾಯ್ತು!

ಮಹದೇವ ಪ್ರಕಾಶರ ಟಿವಿ ವಿಶ್ಲೇಷಣೆ ಮತ್ತು ಭಾನುವಾರ ಪತ್ರಿಕೆ ಸತತವಾಗಿ ಸಿದ್ದರಾಮಯ್ಯನ ಸರಕಾರವನ್ನು ಟೀಕಿಸಿದ್ದು ಫಲ ಕೊಟ್ಟಿತ್ತು. ಯೆಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡರು. ಎಂದಿನಂತೆ ಯಡಿಯೂರಪ್ಪ ಯಾರ್‍ಯಾರಿಗೆ ಆಶ್ವಾಸನೆ ಕೊಟ್ಟಿದ್ದರೋ ಏನೋ ಸಲಹೆಗಾರನಾಗಿ ಮಹದೇವ ಪ್ರಕಾಶರ ಅಲ್ಪ ಅವಧಿ ಮುಗಿಯಿತು.

ತೀರಿಕೊಂಡವರ ಬಗ್ಗೆ ಹಗುರವಾಗಿ ಮಾತನಾಡಬಾರದಂತೆ. ಆದರೂ ಒಂದು ಕಾಲದ ಗೌರವಾನ್ವಿತ ವ್ಯಕ್ತಿಯಾಗಿದ್ದ ಮಹದೇವರು ಹೀಗಾಗುವ ಅಗತ್ಯವಿರಲಿಲ್ಲ ಎಂಬುದು ಹಗುರವಾದ ಮಾತಲ್ಲ.


ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...