Homeಮುಖಪುಟಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

ಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

- Advertisement -
- Advertisement -

ಸುಖಪಡಲು ಎಲ್ಲ ಸವಲತ್ತುಗಳೂ ಚಾಚಿಕೊಂಡು ಬಂದಾಗ ಫಲಾನುಭವಿಯೇ ಪೈಸಲ್ ಎಂಬಂತೆ ನಮ್ಮ ಮಹದೇವ ಪ್ರಕಾಶ್ ಕೊರೊನಾಕ್ಕೆ ಬಲಿಯಾದರು!

ಹಿರಿಯ ಮತ್ತು ಗೌರವಾನ್ವಿತ ಪತ್ರಕರ್ತರಾಗಿದ್ದ ಮಹದೇವ ಪ್ರಕಾಶ್ ಈ ನಾಡು ಕಂಡ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿಯಾಗಿದ್ದ ವಿರೇಂದ್ರಪಾಟೀಲರು ಆರಂಭಿಸಿದ್ದ ಲೋಕವಾಣಿ ಎಂಬ ಪತ್ರಿಕೆಯಲ್ಲಿದ್ದಾಗ ಪ್ರಾಮಾಣಿಕ ಅಭಿವ್ಯಕ್ತಿಗೆ ಹೆಸರಾಗಿದ್ದರು. ಆದರೂ ಲಂಕೇಶ್ ಬದುಕಿರುವವರೆಗೆ ಪತ್ರಿಕೆ ಆಫೀಸಿಗೆ ಬರಲಾಗಿರಲಿಲ್ಲ. ಲಂಕೇಶ್ ಏನಾದರೂ ಬೈದರೆ ಎಂಬ ಅಳುಕಿತ್ತು. ಈ ಅಳುಕು ಸಕಾರಣವಾಗಿತ್ತು.

ಲಂಕೇಶ್ ತೀರಿಕೊಂಡ ನಂತರ ಅವರ ಮಗಳು ಗೌರಿ ಸಂಪಾದಕಿಯಾದ ಮೇಲೆ ಮಹದೇವ ಪ್ರಕಾಶ್ ಪ್ರಭುದ್ಧ ಸಲಹೆಗಾರರಾಗಿ ಬಂದು ಸೇರಿಕೊಂಡರು. ಆಗ ಗೌರಿ, ಮಹದೇವ ಪ್ರಕಾಶ್ ಹೇಳಿದಂಗೆ ಎಂಬ ಉಪಮೆಯಿಂದ ಮಾತು ಆರಂಭಿಸುತ್ತಿದ್ದರು. ಮಹದೇವ ಪ್ರಕಾಶ್ ಬರವಣಿಗೆ ಕೂಡ ತಣ್ಣನೆ ಶೈಲಿಯ ಸಂಯುಕ್ತ ಕರ್ನಾಟಕದ ಲೇಖನದಂತಿದ್ದವು. ಆದ್ದರಿಂದ ಗೌರಿಯ ತಾತ್ಸಾರಕ್ಕೆ ಒಳಗಾದರು.

ನಂತರ ಈ ಭಾನುವಾರ ಎಂಬ ವಾರಪತ್ರಿಕೆ ನಡೆಸತೊಡಗಿದರು. ಇದೂ ಕೂಡ ಸುಧಾರಿತ ವೈಕುಂಟರಾಜುರವರ ವಾರಪತ್ರಿಕೆಯಂತಿತ್ತು. ಜನ ಕೊಂಡು ಓದದಿದ್ದರೂ, ಪತ್ರಿಕೆ ನಡೆಸುವ ಕುಶಲಕಲೆ ಮಹದೇವ ಪ್ರಕಾಶರಿಗಿತ್ತು. ಸಿದ್ದರಾಮಯ್ಯನವರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಲೇಖನ ಬರತೊಡಗಿದವು. ಮಹದೇವ ಪ್ರಕಾಶ್ ಬರೆದ ಮೇಲೆ ಅದರಲ್ಲಿ ಸತ್ಯಾಂಶಗಳಿರುತ್ತವೆ ಎಂದು ಕೆಲವರು ಓದುತ್ತಿದ್ದರು. ಮುಖ್ಯವಾಗಿ ಯಡಿಯೂರಪ್ಪನವರ ಕಡೆಯವರ ನಡುವೆ ಪತ್ರಿಕೆ ಹೆಚ್ಚು ಚರ್ಚೆಯಾಗುತ್ತಿತ್ತು. ಅದೇ ಸಮಯದಲ್ಲಿ ಮಹದೇವ ಪ್ರಕಾಶ್ ಟಿವಿಯೊಳಗೆ ರಾಜಕೀಯ ವಿಶ್ಲೇಷಕರಾಗಿ ಬಂದು ಕುಳಿತರು. ಅಲ್ಲಿ ಬಂದು ಕುಳಿತ ಮೇಲೆ ನಿರಂತರವಾಗಿ ಮಾತನಾಡಬೇಕಾಗುತ್ತದೆ. ಆದ್ದರಿಂದ ಪೂರ್ವಾಗ್ರಹಗಳಿದ್ದರೆ ಸಾಕು, ಸುಳ್ಳುಗಳು ತಾನಾಗಿಯೇ ಹರಿದು ಬರುತ್ತವೆ.

ಒಮ್ಮೆ ಅವರು ಟಿವಿಯಲ್ಲಿ ಮಾತಾನಾಡುತ್ತ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಯತೀಂದ್ರನನ್ನು ನಿಲ್ಲಿಸಿದ್ದನ್ನು ಪ್ರಶ್ನೆ ಮಾಡುತ್ತ ಶಾಂತವೇರಿ ಗೋಪಾಲಗೌಡರು ತಾವು ಅನಾರೋಗ್ಯಕ್ಕೆ ತುತ್ತಾದಾಗ ತಮ್ಮ ಮಗಳನ್ನು ಅಭ್ಯರ್ಥಿಯನ್ನಾಗಿ ಮಾಡುವುದರ ಬದಲು ಬೆಸ್ತ ಜನಾಂಗದ ಕೊಣಂದೂರು ಲಿಂಗಪ್ಪನವರನ್ನು ಅಭ್ಯರ್ಥಿಯನ್ನಾಗಿ ಮಾಡಿದರು. ಅಂತಹ ತ್ಯಾಗಮಯಿ ರಾಜಕಾರಣಿ ಎಲ್ಲಿ, ಈ ಸಿದ್ದರಾಮಯ್ಯನೆಲ್ಲಿ ಎಂದರು. ಆಗ ನಾನು ಗೌರಿ ಎದುರು ಕುಳಿತಿದ್ದೆ. ಅವರು ಹೇಳಿದ ಸುಳ್ಳನ್ನು ಗೌರಿಗೆ ಹೇಳಿದೆ. ಫೋನ್ ಮಾಡಲು ನಂಬರ್ ಕೊಟ್ಟಳು. ತುಸು ಹೊತ್ತಾದ ನಂತರ ಮಹದೇವ ಪ್ರಕಾಶ್‌ಗೆ ಫೋನ್ ಮಾಡಿ:

ಏನ್ ಸಾರ್ ಈ ತರ ಸುಳ್ಳು ಹೇಳ್ತಾ ಇದ್ದೀರಿ ಎಂದೆ.

ನಾನ್ಯಾವ ಸುಳ್ಳು ಹೇಳಿದೆ ಅಂದ್ರು.

ನೋಡಿ ಗೋಪಾಲಗೌಡ್ರು ಅನಾರೋಗ್ಯದಲ್ಲಿದ್ದು, ತೀರ್ಥಹಳ್ಳಿ ಕ್ಷೇತ್ರ ಬಿಟ್ಟುಕೊಟ್ಟಾಗ, ಅವರ ಮಗಳಿಗೆ ಐದಾರು ವರ್ಷ ಇರಬಹುದು. ಇನ್ನು ಕೊಣಂದೂರು ಲಿಂಗಪ್ಪ ಬೆಸ್ತರ ಪೈಕಿ ಅಲ್ಲ, ಬೋವಿ ಪೈಕಿ. ನಿಮ್ಮಂಥವರು ಟಿವಿ ಒಳಗಡೆ ಕುಂತುಗಂಡು ಚೆಡ್ಡಿಗಳ ತರ ಸುಳ್ಳು ಹೇಳಬಾರ್ದು ಎಂದೆ.

ಚಂದ್ರೇಗೌಡ್ರೆ ತಪ್ಪಿದ್ರೆ ಹೇಳಿ ತಿದ್ದಿಕೊಳ್ಳೋಣ ಆದ್ರೆ ಚೆಡ್ಡಿಗಳು ಅನ್ನಬೇಡಿ ಎಂದರು.

ನೀವು ಇದುವರಿಗೂ ಹೇಳಿರೋ ಸುಳ್ಳುಗಳ ಲೆಕ್ಕಹಾಕಿದ್ರೆ ಚೆಡ್ಡಿಗಳು ಮಾತ್ರ ಇಷ್ಟು ಸುಳ್ಳೇಳಕ್ಕೆ ಸಾಧ್ಯ. ಮುಂದಿನ ವಾರ ಹೈಕಮಾಂಡು ಬಂದು ಸಿದ್ದರಾಮಯ್ಯನ್ನ ಇಳಸತ್ತೆ ಅಂತ ಮೂರು ತಿಂಗಳಿಂದ ಹೇಳ್ತ ಇದ್ದೀರಿ ಎಂದು ಆ ಕಡೆಯ ಯಾವ ವಿವರವನ್ನ ಕೇಳಿಸಿಕೊಳ್ಳದೆ ದಾಳಿ ಮಾಡಿದೆ. ಗೌರಿ ನಗುತ್ತ ಹೋಗ್ಲಿ ಬುಡ್ರಿ ಎಂದಳು. ಆಗ ಮನಸ್ಸಿಗೆ ಎಂತದೊ ಸಮಾಧಾನವಾಯ್ತು!

ಮಹದೇವ ಪ್ರಕಾಶರ ಟಿವಿ ವಿಶ್ಲೇಷಣೆ ಮತ್ತು ಭಾನುವಾರ ಪತ್ರಿಕೆ ಸತತವಾಗಿ ಸಿದ್ದರಾಮಯ್ಯನ ಸರಕಾರವನ್ನು ಟೀಕಿಸಿದ್ದು ಫಲ ಕೊಟ್ಟಿತ್ತು. ಯೆಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡರು. ಎಂದಿನಂತೆ ಯಡಿಯೂರಪ್ಪ ಯಾರ್‍ಯಾರಿಗೆ ಆಶ್ವಾಸನೆ ಕೊಟ್ಟಿದ್ದರೋ ಏನೋ ಸಲಹೆಗಾರನಾಗಿ ಮಹದೇವ ಪ್ರಕಾಶರ ಅಲ್ಪ ಅವಧಿ ಮುಗಿಯಿತು.

ತೀರಿಕೊಂಡವರ ಬಗ್ಗೆ ಹಗುರವಾಗಿ ಮಾತನಾಡಬಾರದಂತೆ. ಆದರೂ ಒಂದು ಕಾಲದ ಗೌರವಾನ್ವಿತ ವ್ಯಕ್ತಿಯಾಗಿದ್ದ ಮಹದೇವರು ಹೀಗಾಗುವ ಅಗತ್ಯವಿರಲಿಲ್ಲ ಎಂಬುದು ಹಗುರವಾದ ಮಾತಲ್ಲ.


ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...