Homeಮುಖಪುಟಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

ಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

- Advertisement -
- Advertisement -

ಸುಖಪಡಲು ಎಲ್ಲ ಸವಲತ್ತುಗಳೂ ಚಾಚಿಕೊಂಡು ಬಂದಾಗ ಫಲಾನುಭವಿಯೇ ಪೈಸಲ್ ಎಂಬಂತೆ ನಮ್ಮ ಮಹದೇವ ಪ್ರಕಾಶ್ ಕೊರೊನಾಕ್ಕೆ ಬಲಿಯಾದರು!

ಹಿರಿಯ ಮತ್ತು ಗೌರವಾನ್ವಿತ ಪತ್ರಕರ್ತರಾಗಿದ್ದ ಮಹದೇವ ಪ್ರಕಾಶ್ ಈ ನಾಡು ಕಂಡ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿಯಾಗಿದ್ದ ವಿರೇಂದ್ರಪಾಟೀಲರು ಆರಂಭಿಸಿದ್ದ ಲೋಕವಾಣಿ ಎಂಬ ಪತ್ರಿಕೆಯಲ್ಲಿದ್ದಾಗ ಪ್ರಾಮಾಣಿಕ ಅಭಿವ್ಯಕ್ತಿಗೆ ಹೆಸರಾಗಿದ್ದರು. ಆದರೂ ಲಂಕೇಶ್ ಬದುಕಿರುವವರೆಗೆ ಪತ್ರಿಕೆ ಆಫೀಸಿಗೆ ಬರಲಾಗಿರಲಿಲ್ಲ. ಲಂಕೇಶ್ ಏನಾದರೂ ಬೈದರೆ ಎಂಬ ಅಳುಕಿತ್ತು. ಈ ಅಳುಕು ಸಕಾರಣವಾಗಿತ್ತು.

ಲಂಕೇಶ್ ತೀರಿಕೊಂಡ ನಂತರ ಅವರ ಮಗಳು ಗೌರಿ ಸಂಪಾದಕಿಯಾದ ಮೇಲೆ ಮಹದೇವ ಪ್ರಕಾಶ್ ಪ್ರಭುದ್ಧ ಸಲಹೆಗಾರರಾಗಿ ಬಂದು ಸೇರಿಕೊಂಡರು. ಆಗ ಗೌರಿ, ಮಹದೇವ ಪ್ರಕಾಶ್ ಹೇಳಿದಂಗೆ ಎಂಬ ಉಪಮೆಯಿಂದ ಮಾತು ಆರಂಭಿಸುತ್ತಿದ್ದರು. ಮಹದೇವ ಪ್ರಕಾಶ್ ಬರವಣಿಗೆ ಕೂಡ ತಣ್ಣನೆ ಶೈಲಿಯ ಸಂಯುಕ್ತ ಕರ್ನಾಟಕದ ಲೇಖನದಂತಿದ್ದವು. ಆದ್ದರಿಂದ ಗೌರಿಯ ತಾತ್ಸಾರಕ್ಕೆ ಒಳಗಾದರು.

ನಂತರ ಈ ಭಾನುವಾರ ಎಂಬ ವಾರಪತ್ರಿಕೆ ನಡೆಸತೊಡಗಿದರು. ಇದೂ ಕೂಡ ಸುಧಾರಿತ ವೈಕುಂಟರಾಜುರವರ ವಾರಪತ್ರಿಕೆಯಂತಿತ್ತು. ಜನ ಕೊಂಡು ಓದದಿದ್ದರೂ, ಪತ್ರಿಕೆ ನಡೆಸುವ ಕುಶಲಕಲೆ ಮಹದೇವ ಪ್ರಕಾಶರಿಗಿತ್ತು. ಸಿದ್ದರಾಮಯ್ಯನವರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಲೇಖನ ಬರತೊಡಗಿದವು. ಮಹದೇವ ಪ್ರಕಾಶ್ ಬರೆದ ಮೇಲೆ ಅದರಲ್ಲಿ ಸತ್ಯಾಂಶಗಳಿರುತ್ತವೆ ಎಂದು ಕೆಲವರು ಓದುತ್ತಿದ್ದರು. ಮುಖ್ಯವಾಗಿ ಯಡಿಯೂರಪ್ಪನವರ ಕಡೆಯವರ ನಡುವೆ ಪತ್ರಿಕೆ ಹೆಚ್ಚು ಚರ್ಚೆಯಾಗುತ್ತಿತ್ತು. ಅದೇ ಸಮಯದಲ್ಲಿ ಮಹದೇವ ಪ್ರಕಾಶ್ ಟಿವಿಯೊಳಗೆ ರಾಜಕೀಯ ವಿಶ್ಲೇಷಕರಾಗಿ ಬಂದು ಕುಳಿತರು. ಅಲ್ಲಿ ಬಂದು ಕುಳಿತ ಮೇಲೆ ನಿರಂತರವಾಗಿ ಮಾತನಾಡಬೇಕಾಗುತ್ತದೆ. ಆದ್ದರಿಂದ ಪೂರ್ವಾಗ್ರಹಗಳಿದ್ದರೆ ಸಾಕು, ಸುಳ್ಳುಗಳು ತಾನಾಗಿಯೇ ಹರಿದು ಬರುತ್ತವೆ.

ಒಮ್ಮೆ ಅವರು ಟಿವಿಯಲ್ಲಿ ಮಾತಾನಾಡುತ್ತ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಯತೀಂದ್ರನನ್ನು ನಿಲ್ಲಿಸಿದ್ದನ್ನು ಪ್ರಶ್ನೆ ಮಾಡುತ್ತ ಶಾಂತವೇರಿ ಗೋಪಾಲಗೌಡರು ತಾವು ಅನಾರೋಗ್ಯಕ್ಕೆ ತುತ್ತಾದಾಗ ತಮ್ಮ ಮಗಳನ್ನು ಅಭ್ಯರ್ಥಿಯನ್ನಾಗಿ ಮಾಡುವುದರ ಬದಲು ಬೆಸ್ತ ಜನಾಂಗದ ಕೊಣಂದೂರು ಲಿಂಗಪ್ಪನವರನ್ನು ಅಭ್ಯರ್ಥಿಯನ್ನಾಗಿ ಮಾಡಿದರು. ಅಂತಹ ತ್ಯಾಗಮಯಿ ರಾಜಕಾರಣಿ ಎಲ್ಲಿ, ಈ ಸಿದ್ದರಾಮಯ್ಯನೆಲ್ಲಿ ಎಂದರು. ಆಗ ನಾನು ಗೌರಿ ಎದುರು ಕುಳಿತಿದ್ದೆ. ಅವರು ಹೇಳಿದ ಸುಳ್ಳನ್ನು ಗೌರಿಗೆ ಹೇಳಿದೆ. ಫೋನ್ ಮಾಡಲು ನಂಬರ್ ಕೊಟ್ಟಳು. ತುಸು ಹೊತ್ತಾದ ನಂತರ ಮಹದೇವ ಪ್ರಕಾಶ್‌ಗೆ ಫೋನ್ ಮಾಡಿ:

ಏನ್ ಸಾರ್ ಈ ತರ ಸುಳ್ಳು ಹೇಳ್ತಾ ಇದ್ದೀರಿ ಎಂದೆ.

ನಾನ್ಯಾವ ಸುಳ್ಳು ಹೇಳಿದೆ ಅಂದ್ರು.

ನೋಡಿ ಗೋಪಾಲಗೌಡ್ರು ಅನಾರೋಗ್ಯದಲ್ಲಿದ್ದು, ತೀರ್ಥಹಳ್ಳಿ ಕ್ಷೇತ್ರ ಬಿಟ್ಟುಕೊಟ್ಟಾಗ, ಅವರ ಮಗಳಿಗೆ ಐದಾರು ವರ್ಷ ಇರಬಹುದು. ಇನ್ನು ಕೊಣಂದೂರು ಲಿಂಗಪ್ಪ ಬೆಸ್ತರ ಪೈಕಿ ಅಲ್ಲ, ಬೋವಿ ಪೈಕಿ. ನಿಮ್ಮಂಥವರು ಟಿವಿ ಒಳಗಡೆ ಕುಂತುಗಂಡು ಚೆಡ್ಡಿಗಳ ತರ ಸುಳ್ಳು ಹೇಳಬಾರ್ದು ಎಂದೆ.

ಚಂದ್ರೇಗೌಡ್ರೆ ತಪ್ಪಿದ್ರೆ ಹೇಳಿ ತಿದ್ದಿಕೊಳ್ಳೋಣ ಆದ್ರೆ ಚೆಡ್ಡಿಗಳು ಅನ್ನಬೇಡಿ ಎಂದರು.

ನೀವು ಇದುವರಿಗೂ ಹೇಳಿರೋ ಸುಳ್ಳುಗಳ ಲೆಕ್ಕಹಾಕಿದ್ರೆ ಚೆಡ್ಡಿಗಳು ಮಾತ್ರ ಇಷ್ಟು ಸುಳ್ಳೇಳಕ್ಕೆ ಸಾಧ್ಯ. ಮುಂದಿನ ವಾರ ಹೈಕಮಾಂಡು ಬಂದು ಸಿದ್ದರಾಮಯ್ಯನ್ನ ಇಳಸತ್ತೆ ಅಂತ ಮೂರು ತಿಂಗಳಿಂದ ಹೇಳ್ತ ಇದ್ದೀರಿ ಎಂದು ಆ ಕಡೆಯ ಯಾವ ವಿವರವನ್ನ ಕೇಳಿಸಿಕೊಳ್ಳದೆ ದಾಳಿ ಮಾಡಿದೆ. ಗೌರಿ ನಗುತ್ತ ಹೋಗ್ಲಿ ಬುಡ್ರಿ ಎಂದಳು. ಆಗ ಮನಸ್ಸಿಗೆ ಎಂತದೊ ಸಮಾಧಾನವಾಯ್ತು!

ಮಹದೇವ ಪ್ರಕಾಶರ ಟಿವಿ ವಿಶ್ಲೇಷಣೆ ಮತ್ತು ಭಾನುವಾರ ಪತ್ರಿಕೆ ಸತತವಾಗಿ ಸಿದ್ದರಾಮಯ್ಯನ ಸರಕಾರವನ್ನು ಟೀಕಿಸಿದ್ದು ಫಲ ಕೊಟ್ಟಿತ್ತು. ಯೆಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡರು. ಎಂದಿನಂತೆ ಯಡಿಯೂರಪ್ಪ ಯಾರ್‍ಯಾರಿಗೆ ಆಶ್ವಾಸನೆ ಕೊಟ್ಟಿದ್ದರೋ ಏನೋ ಸಲಹೆಗಾರನಾಗಿ ಮಹದೇವ ಪ್ರಕಾಶರ ಅಲ್ಪ ಅವಧಿ ಮುಗಿಯಿತು.

ತೀರಿಕೊಂಡವರ ಬಗ್ಗೆ ಹಗುರವಾಗಿ ಮಾತನಾಡಬಾರದಂತೆ. ಆದರೂ ಒಂದು ಕಾಲದ ಗೌರವಾನ್ವಿತ ವ್ಯಕ್ತಿಯಾಗಿದ್ದ ಮಹದೇವರು ಹೀಗಾಗುವ ಅಗತ್ಯವಿರಲಿಲ್ಲ ಎಂಬುದು ಹಗುರವಾದ ಮಾತಲ್ಲ.


ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...