Homeಮುಖಪುಟಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

ಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

- Advertisement -
- Advertisement -

ಸುಖಪಡಲು ಎಲ್ಲ ಸವಲತ್ತುಗಳೂ ಚಾಚಿಕೊಂಡು ಬಂದಾಗ ಫಲಾನುಭವಿಯೇ ಪೈಸಲ್ ಎಂಬಂತೆ ನಮ್ಮ ಮಹದೇವ ಪ್ರಕಾಶ್ ಕೊರೊನಾಕ್ಕೆ ಬಲಿಯಾದರು!

ಹಿರಿಯ ಮತ್ತು ಗೌರವಾನ್ವಿತ ಪತ್ರಕರ್ತರಾಗಿದ್ದ ಮಹದೇವ ಪ್ರಕಾಶ್ ಈ ನಾಡು ಕಂಡ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿಯಾಗಿದ್ದ ವಿರೇಂದ್ರಪಾಟೀಲರು ಆರಂಭಿಸಿದ್ದ ಲೋಕವಾಣಿ ಎಂಬ ಪತ್ರಿಕೆಯಲ್ಲಿದ್ದಾಗ ಪ್ರಾಮಾಣಿಕ ಅಭಿವ್ಯಕ್ತಿಗೆ ಹೆಸರಾಗಿದ್ದರು. ಆದರೂ ಲಂಕೇಶ್ ಬದುಕಿರುವವರೆಗೆ ಪತ್ರಿಕೆ ಆಫೀಸಿಗೆ ಬರಲಾಗಿರಲಿಲ್ಲ. ಲಂಕೇಶ್ ಏನಾದರೂ ಬೈದರೆ ಎಂಬ ಅಳುಕಿತ್ತು. ಈ ಅಳುಕು ಸಕಾರಣವಾಗಿತ್ತು.

ಲಂಕೇಶ್ ತೀರಿಕೊಂಡ ನಂತರ ಅವರ ಮಗಳು ಗೌರಿ ಸಂಪಾದಕಿಯಾದ ಮೇಲೆ ಮಹದೇವ ಪ್ರಕಾಶ್ ಪ್ರಭುದ್ಧ ಸಲಹೆಗಾರರಾಗಿ ಬಂದು ಸೇರಿಕೊಂಡರು. ಆಗ ಗೌರಿ, ಮಹದೇವ ಪ್ರಕಾಶ್ ಹೇಳಿದಂಗೆ ಎಂಬ ಉಪಮೆಯಿಂದ ಮಾತು ಆರಂಭಿಸುತ್ತಿದ್ದರು. ಮಹದೇವ ಪ್ರಕಾಶ್ ಬರವಣಿಗೆ ಕೂಡ ತಣ್ಣನೆ ಶೈಲಿಯ ಸಂಯುಕ್ತ ಕರ್ನಾಟಕದ ಲೇಖನದಂತಿದ್ದವು. ಆದ್ದರಿಂದ ಗೌರಿಯ ತಾತ್ಸಾರಕ್ಕೆ ಒಳಗಾದರು.

ನಂತರ ಈ ಭಾನುವಾರ ಎಂಬ ವಾರಪತ್ರಿಕೆ ನಡೆಸತೊಡಗಿದರು. ಇದೂ ಕೂಡ ಸುಧಾರಿತ ವೈಕುಂಟರಾಜುರವರ ವಾರಪತ್ರಿಕೆಯಂತಿತ್ತು. ಜನ ಕೊಂಡು ಓದದಿದ್ದರೂ, ಪತ್ರಿಕೆ ನಡೆಸುವ ಕುಶಲಕಲೆ ಮಹದೇವ ಪ್ರಕಾಶರಿಗಿತ್ತು. ಸಿದ್ದರಾಮಯ್ಯನವರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಲೇಖನ ಬರತೊಡಗಿದವು. ಮಹದೇವ ಪ್ರಕಾಶ್ ಬರೆದ ಮೇಲೆ ಅದರಲ್ಲಿ ಸತ್ಯಾಂಶಗಳಿರುತ್ತವೆ ಎಂದು ಕೆಲವರು ಓದುತ್ತಿದ್ದರು. ಮುಖ್ಯವಾಗಿ ಯಡಿಯೂರಪ್ಪನವರ ಕಡೆಯವರ ನಡುವೆ ಪತ್ರಿಕೆ ಹೆಚ್ಚು ಚರ್ಚೆಯಾಗುತ್ತಿತ್ತು. ಅದೇ ಸಮಯದಲ್ಲಿ ಮಹದೇವ ಪ್ರಕಾಶ್ ಟಿವಿಯೊಳಗೆ ರಾಜಕೀಯ ವಿಶ್ಲೇಷಕರಾಗಿ ಬಂದು ಕುಳಿತರು. ಅಲ್ಲಿ ಬಂದು ಕುಳಿತ ಮೇಲೆ ನಿರಂತರವಾಗಿ ಮಾತನಾಡಬೇಕಾಗುತ್ತದೆ. ಆದ್ದರಿಂದ ಪೂರ್ವಾಗ್ರಹಗಳಿದ್ದರೆ ಸಾಕು, ಸುಳ್ಳುಗಳು ತಾನಾಗಿಯೇ ಹರಿದು ಬರುತ್ತವೆ.

ಒಮ್ಮೆ ಅವರು ಟಿವಿಯಲ್ಲಿ ಮಾತಾನಾಡುತ್ತ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಯತೀಂದ್ರನನ್ನು ನಿಲ್ಲಿಸಿದ್ದನ್ನು ಪ್ರಶ್ನೆ ಮಾಡುತ್ತ ಶಾಂತವೇರಿ ಗೋಪಾಲಗೌಡರು ತಾವು ಅನಾರೋಗ್ಯಕ್ಕೆ ತುತ್ತಾದಾಗ ತಮ್ಮ ಮಗಳನ್ನು ಅಭ್ಯರ್ಥಿಯನ್ನಾಗಿ ಮಾಡುವುದರ ಬದಲು ಬೆಸ್ತ ಜನಾಂಗದ ಕೊಣಂದೂರು ಲಿಂಗಪ್ಪನವರನ್ನು ಅಭ್ಯರ್ಥಿಯನ್ನಾಗಿ ಮಾಡಿದರು. ಅಂತಹ ತ್ಯಾಗಮಯಿ ರಾಜಕಾರಣಿ ಎಲ್ಲಿ, ಈ ಸಿದ್ದರಾಮಯ್ಯನೆಲ್ಲಿ ಎಂದರು. ಆಗ ನಾನು ಗೌರಿ ಎದುರು ಕುಳಿತಿದ್ದೆ. ಅವರು ಹೇಳಿದ ಸುಳ್ಳನ್ನು ಗೌರಿಗೆ ಹೇಳಿದೆ. ಫೋನ್ ಮಾಡಲು ನಂಬರ್ ಕೊಟ್ಟಳು. ತುಸು ಹೊತ್ತಾದ ನಂತರ ಮಹದೇವ ಪ್ರಕಾಶ್‌ಗೆ ಫೋನ್ ಮಾಡಿ:

ಏನ್ ಸಾರ್ ಈ ತರ ಸುಳ್ಳು ಹೇಳ್ತಾ ಇದ್ದೀರಿ ಎಂದೆ.

ನಾನ್ಯಾವ ಸುಳ್ಳು ಹೇಳಿದೆ ಅಂದ್ರು.

ನೋಡಿ ಗೋಪಾಲಗೌಡ್ರು ಅನಾರೋಗ್ಯದಲ್ಲಿದ್ದು, ತೀರ್ಥಹಳ್ಳಿ ಕ್ಷೇತ್ರ ಬಿಟ್ಟುಕೊಟ್ಟಾಗ, ಅವರ ಮಗಳಿಗೆ ಐದಾರು ವರ್ಷ ಇರಬಹುದು. ಇನ್ನು ಕೊಣಂದೂರು ಲಿಂಗಪ್ಪ ಬೆಸ್ತರ ಪೈಕಿ ಅಲ್ಲ, ಬೋವಿ ಪೈಕಿ. ನಿಮ್ಮಂಥವರು ಟಿವಿ ಒಳಗಡೆ ಕುಂತುಗಂಡು ಚೆಡ್ಡಿಗಳ ತರ ಸುಳ್ಳು ಹೇಳಬಾರ್ದು ಎಂದೆ.

ಚಂದ್ರೇಗೌಡ್ರೆ ತಪ್ಪಿದ್ರೆ ಹೇಳಿ ತಿದ್ದಿಕೊಳ್ಳೋಣ ಆದ್ರೆ ಚೆಡ್ಡಿಗಳು ಅನ್ನಬೇಡಿ ಎಂದರು.

ನೀವು ಇದುವರಿಗೂ ಹೇಳಿರೋ ಸುಳ್ಳುಗಳ ಲೆಕ್ಕಹಾಕಿದ್ರೆ ಚೆಡ್ಡಿಗಳು ಮಾತ್ರ ಇಷ್ಟು ಸುಳ್ಳೇಳಕ್ಕೆ ಸಾಧ್ಯ. ಮುಂದಿನ ವಾರ ಹೈಕಮಾಂಡು ಬಂದು ಸಿದ್ದರಾಮಯ್ಯನ್ನ ಇಳಸತ್ತೆ ಅಂತ ಮೂರು ತಿಂಗಳಿಂದ ಹೇಳ್ತ ಇದ್ದೀರಿ ಎಂದು ಆ ಕಡೆಯ ಯಾವ ವಿವರವನ್ನ ಕೇಳಿಸಿಕೊಳ್ಳದೆ ದಾಳಿ ಮಾಡಿದೆ. ಗೌರಿ ನಗುತ್ತ ಹೋಗ್ಲಿ ಬುಡ್ರಿ ಎಂದಳು. ಆಗ ಮನಸ್ಸಿಗೆ ಎಂತದೊ ಸಮಾಧಾನವಾಯ್ತು!

ಮಹದೇವ ಪ್ರಕಾಶರ ಟಿವಿ ವಿಶ್ಲೇಷಣೆ ಮತ್ತು ಭಾನುವಾರ ಪತ್ರಿಕೆ ಸತತವಾಗಿ ಸಿದ್ದರಾಮಯ್ಯನ ಸರಕಾರವನ್ನು ಟೀಕಿಸಿದ್ದು ಫಲ ಕೊಟ್ಟಿತ್ತು. ಯೆಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡರು. ಎಂದಿನಂತೆ ಯಡಿಯೂರಪ್ಪ ಯಾರ್‍ಯಾರಿಗೆ ಆಶ್ವಾಸನೆ ಕೊಟ್ಟಿದ್ದರೋ ಏನೋ ಸಲಹೆಗಾರನಾಗಿ ಮಹದೇವ ಪ್ರಕಾಶರ ಅಲ್ಪ ಅವಧಿ ಮುಗಿಯಿತು.

ತೀರಿಕೊಂಡವರ ಬಗ್ಗೆ ಹಗುರವಾಗಿ ಮಾತನಾಡಬಾರದಂತೆ. ಆದರೂ ಒಂದು ಕಾಲದ ಗೌರವಾನ್ವಿತ ವ್ಯಕ್ತಿಯಾಗಿದ್ದ ಮಹದೇವರು ಹೀಗಾಗುವ ಅಗತ್ಯವಿರಲಿಲ್ಲ ಎಂಬುದು ಹಗುರವಾದ ಮಾತಲ್ಲ.


ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. "ಈ...

ಅರಾವಳಿ ಬೆಟ್ಟ, ಶ್ರೇಣಿಗಳ ಮರು ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಹೊಸ ವ್ಯಾಖ್ಯಾನ ಕುರಿತು ನವೆಂಬರ್ 20ರಂದು ನಿವೃತ್ತ ಸಿಜೆಐ ಬಿ. ಆರ್ ಗವಾಯಿ ನೇತೃತ್ವದ ಪೀಠ ನೀಡಿದ ತೀರ್ಪಿನ ಅನುಷ್ಠಾನವನ್ನು ಮೂವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ವಿಶೇಷ...

ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ಗಾಂಜಾ ವ್ಯಸನಿಗಳಿಂದ ಹಲ್ಲೆ; ಡಿಎಂಕೆಯನ್ನು ಟೀಕಿಸಿದ ಬಿಜೆಪಿ 

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರು ಹಲ್ಲೆ ನಡೆಸಿದ್ದು, ವಲಸೆ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಅಪ್ರಾಪ್ತ ವಯಸ್ಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ಆಘಾತಕಾರಿ...

ಬಿಜೆಪಿ ಶಾಸಕ ಶರಣು ಸಲಗರ್ ಮೇಲೆ ಎಫ್ಐಆರ್: ಚುನಾವಣೆ ವೇಳೆ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ

ಬೀದರ್: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸಲು ವಿಫಲವಾದ ಆರೋಪದ ಮೇಲೆ 99 ಲಕ್ಷ ರೂ.ಗಳ ಚೆಕ್ ಅಮಾನ್ಯವಾದ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್...

ಗಾಜಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್: 80 ದಿನಗಳಲ್ಲಿ 969 ಬಾರಿ ಕದನ ವಿರಾಮ ಉಲ್ಲಂಘನೆ: 418ಜನರ ಹತ್ಯೆ

80 ದಿನಗಳ ಅವಧಿಯಲ್ಲಿ ಇಸ್ರೇಲ್ 969 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, 418 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,141 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಭಾನುವಾರ ಬಿಡುಗಡೆ...

BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು...

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ...

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...