Homeಮುಖಪುಟಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

ಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

- Advertisement -
- Advertisement -

ಸುಖಪಡಲು ಎಲ್ಲ ಸವಲತ್ತುಗಳೂ ಚಾಚಿಕೊಂಡು ಬಂದಾಗ ಫಲಾನುಭವಿಯೇ ಪೈಸಲ್ ಎಂಬಂತೆ ನಮ್ಮ ಮಹದೇವ ಪ್ರಕಾಶ್ ಕೊರೊನಾಕ್ಕೆ ಬಲಿಯಾದರು!

ಹಿರಿಯ ಮತ್ತು ಗೌರವಾನ್ವಿತ ಪತ್ರಕರ್ತರಾಗಿದ್ದ ಮಹದೇವ ಪ್ರಕಾಶ್ ಈ ನಾಡು ಕಂಡ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿಯಾಗಿದ್ದ ವಿರೇಂದ್ರಪಾಟೀಲರು ಆರಂಭಿಸಿದ್ದ ಲೋಕವಾಣಿ ಎಂಬ ಪತ್ರಿಕೆಯಲ್ಲಿದ್ದಾಗ ಪ್ರಾಮಾಣಿಕ ಅಭಿವ್ಯಕ್ತಿಗೆ ಹೆಸರಾಗಿದ್ದರು. ಆದರೂ ಲಂಕೇಶ್ ಬದುಕಿರುವವರೆಗೆ ಪತ್ರಿಕೆ ಆಫೀಸಿಗೆ ಬರಲಾಗಿರಲಿಲ್ಲ. ಲಂಕೇಶ್ ಏನಾದರೂ ಬೈದರೆ ಎಂಬ ಅಳುಕಿತ್ತು. ಈ ಅಳುಕು ಸಕಾರಣವಾಗಿತ್ತು.

ಲಂಕೇಶ್ ತೀರಿಕೊಂಡ ನಂತರ ಅವರ ಮಗಳು ಗೌರಿ ಸಂಪಾದಕಿಯಾದ ಮೇಲೆ ಮಹದೇವ ಪ್ರಕಾಶ್ ಪ್ರಭುದ್ಧ ಸಲಹೆಗಾರರಾಗಿ ಬಂದು ಸೇರಿಕೊಂಡರು. ಆಗ ಗೌರಿ, ಮಹದೇವ ಪ್ರಕಾಶ್ ಹೇಳಿದಂಗೆ ಎಂಬ ಉಪಮೆಯಿಂದ ಮಾತು ಆರಂಭಿಸುತ್ತಿದ್ದರು. ಮಹದೇವ ಪ್ರಕಾಶ್ ಬರವಣಿಗೆ ಕೂಡ ತಣ್ಣನೆ ಶೈಲಿಯ ಸಂಯುಕ್ತ ಕರ್ನಾಟಕದ ಲೇಖನದಂತಿದ್ದವು. ಆದ್ದರಿಂದ ಗೌರಿಯ ತಾತ್ಸಾರಕ್ಕೆ ಒಳಗಾದರು.

ನಂತರ ಈ ಭಾನುವಾರ ಎಂಬ ವಾರಪತ್ರಿಕೆ ನಡೆಸತೊಡಗಿದರು. ಇದೂ ಕೂಡ ಸುಧಾರಿತ ವೈಕುಂಟರಾಜುರವರ ವಾರಪತ್ರಿಕೆಯಂತಿತ್ತು. ಜನ ಕೊಂಡು ಓದದಿದ್ದರೂ, ಪತ್ರಿಕೆ ನಡೆಸುವ ಕುಶಲಕಲೆ ಮಹದೇವ ಪ್ರಕಾಶರಿಗಿತ್ತು. ಸಿದ್ದರಾಮಯ್ಯನವರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಲೇಖನ ಬರತೊಡಗಿದವು. ಮಹದೇವ ಪ್ರಕಾಶ್ ಬರೆದ ಮೇಲೆ ಅದರಲ್ಲಿ ಸತ್ಯಾಂಶಗಳಿರುತ್ತವೆ ಎಂದು ಕೆಲವರು ಓದುತ್ತಿದ್ದರು. ಮುಖ್ಯವಾಗಿ ಯಡಿಯೂರಪ್ಪನವರ ಕಡೆಯವರ ನಡುವೆ ಪತ್ರಿಕೆ ಹೆಚ್ಚು ಚರ್ಚೆಯಾಗುತ್ತಿತ್ತು. ಅದೇ ಸಮಯದಲ್ಲಿ ಮಹದೇವ ಪ್ರಕಾಶ್ ಟಿವಿಯೊಳಗೆ ರಾಜಕೀಯ ವಿಶ್ಲೇಷಕರಾಗಿ ಬಂದು ಕುಳಿತರು. ಅಲ್ಲಿ ಬಂದು ಕುಳಿತ ಮೇಲೆ ನಿರಂತರವಾಗಿ ಮಾತನಾಡಬೇಕಾಗುತ್ತದೆ. ಆದ್ದರಿಂದ ಪೂರ್ವಾಗ್ರಹಗಳಿದ್ದರೆ ಸಾಕು, ಸುಳ್ಳುಗಳು ತಾನಾಗಿಯೇ ಹರಿದು ಬರುತ್ತವೆ.

ಒಮ್ಮೆ ಅವರು ಟಿವಿಯಲ್ಲಿ ಮಾತಾನಾಡುತ್ತ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಯತೀಂದ್ರನನ್ನು ನಿಲ್ಲಿಸಿದ್ದನ್ನು ಪ್ರಶ್ನೆ ಮಾಡುತ್ತ ಶಾಂತವೇರಿ ಗೋಪಾಲಗೌಡರು ತಾವು ಅನಾರೋಗ್ಯಕ್ಕೆ ತುತ್ತಾದಾಗ ತಮ್ಮ ಮಗಳನ್ನು ಅಭ್ಯರ್ಥಿಯನ್ನಾಗಿ ಮಾಡುವುದರ ಬದಲು ಬೆಸ್ತ ಜನಾಂಗದ ಕೊಣಂದೂರು ಲಿಂಗಪ್ಪನವರನ್ನು ಅಭ್ಯರ್ಥಿಯನ್ನಾಗಿ ಮಾಡಿದರು. ಅಂತಹ ತ್ಯಾಗಮಯಿ ರಾಜಕಾರಣಿ ಎಲ್ಲಿ, ಈ ಸಿದ್ದರಾಮಯ್ಯನೆಲ್ಲಿ ಎಂದರು. ಆಗ ನಾನು ಗೌರಿ ಎದುರು ಕುಳಿತಿದ್ದೆ. ಅವರು ಹೇಳಿದ ಸುಳ್ಳನ್ನು ಗೌರಿಗೆ ಹೇಳಿದೆ. ಫೋನ್ ಮಾಡಲು ನಂಬರ್ ಕೊಟ್ಟಳು. ತುಸು ಹೊತ್ತಾದ ನಂತರ ಮಹದೇವ ಪ್ರಕಾಶ್‌ಗೆ ಫೋನ್ ಮಾಡಿ:

ಏನ್ ಸಾರ್ ಈ ತರ ಸುಳ್ಳು ಹೇಳ್ತಾ ಇದ್ದೀರಿ ಎಂದೆ.

ನಾನ್ಯಾವ ಸುಳ್ಳು ಹೇಳಿದೆ ಅಂದ್ರು.

ನೋಡಿ ಗೋಪಾಲಗೌಡ್ರು ಅನಾರೋಗ್ಯದಲ್ಲಿದ್ದು, ತೀರ್ಥಹಳ್ಳಿ ಕ್ಷೇತ್ರ ಬಿಟ್ಟುಕೊಟ್ಟಾಗ, ಅವರ ಮಗಳಿಗೆ ಐದಾರು ವರ್ಷ ಇರಬಹುದು. ಇನ್ನು ಕೊಣಂದೂರು ಲಿಂಗಪ್ಪ ಬೆಸ್ತರ ಪೈಕಿ ಅಲ್ಲ, ಬೋವಿ ಪೈಕಿ. ನಿಮ್ಮಂಥವರು ಟಿವಿ ಒಳಗಡೆ ಕುಂತುಗಂಡು ಚೆಡ್ಡಿಗಳ ತರ ಸುಳ್ಳು ಹೇಳಬಾರ್ದು ಎಂದೆ.

ಚಂದ್ರೇಗೌಡ್ರೆ ತಪ್ಪಿದ್ರೆ ಹೇಳಿ ತಿದ್ದಿಕೊಳ್ಳೋಣ ಆದ್ರೆ ಚೆಡ್ಡಿಗಳು ಅನ್ನಬೇಡಿ ಎಂದರು.

ನೀವು ಇದುವರಿಗೂ ಹೇಳಿರೋ ಸುಳ್ಳುಗಳ ಲೆಕ್ಕಹಾಕಿದ್ರೆ ಚೆಡ್ಡಿಗಳು ಮಾತ್ರ ಇಷ್ಟು ಸುಳ್ಳೇಳಕ್ಕೆ ಸಾಧ್ಯ. ಮುಂದಿನ ವಾರ ಹೈಕಮಾಂಡು ಬಂದು ಸಿದ್ದರಾಮಯ್ಯನ್ನ ಇಳಸತ್ತೆ ಅಂತ ಮೂರು ತಿಂಗಳಿಂದ ಹೇಳ್ತ ಇದ್ದೀರಿ ಎಂದು ಆ ಕಡೆಯ ಯಾವ ವಿವರವನ್ನ ಕೇಳಿಸಿಕೊಳ್ಳದೆ ದಾಳಿ ಮಾಡಿದೆ. ಗೌರಿ ನಗುತ್ತ ಹೋಗ್ಲಿ ಬುಡ್ರಿ ಎಂದಳು. ಆಗ ಮನಸ್ಸಿಗೆ ಎಂತದೊ ಸಮಾಧಾನವಾಯ್ತು!

ಮಹದೇವ ಪ್ರಕಾಶರ ಟಿವಿ ವಿಶ್ಲೇಷಣೆ ಮತ್ತು ಭಾನುವಾರ ಪತ್ರಿಕೆ ಸತತವಾಗಿ ಸಿದ್ದರಾಮಯ್ಯನ ಸರಕಾರವನ್ನು ಟೀಕಿಸಿದ್ದು ಫಲ ಕೊಟ್ಟಿತ್ತು. ಯೆಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡರು. ಎಂದಿನಂತೆ ಯಡಿಯೂರಪ್ಪ ಯಾರ್‍ಯಾರಿಗೆ ಆಶ್ವಾಸನೆ ಕೊಟ್ಟಿದ್ದರೋ ಏನೋ ಸಲಹೆಗಾರನಾಗಿ ಮಹದೇವ ಪ್ರಕಾಶರ ಅಲ್ಪ ಅವಧಿ ಮುಗಿಯಿತು.

ತೀರಿಕೊಂಡವರ ಬಗ್ಗೆ ಹಗುರವಾಗಿ ಮಾತನಾಡಬಾರದಂತೆ. ಆದರೂ ಒಂದು ಕಾಲದ ಗೌರವಾನ್ವಿತ ವ್ಯಕ್ತಿಯಾಗಿದ್ದ ಮಹದೇವರು ಹೀಗಾಗುವ ಅಗತ್ಯವಿರಲಿಲ್ಲ ಎಂಬುದು ಹಗುರವಾದ ಮಾತಲ್ಲ.


ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....