Homeಮುಖಪುಟಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

ಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

- Advertisement -
- Advertisement -

ಸುಖಪಡಲು ಎಲ್ಲ ಸವಲತ್ತುಗಳೂ ಚಾಚಿಕೊಂಡು ಬಂದಾಗ ಫಲಾನುಭವಿಯೇ ಪೈಸಲ್ ಎಂಬಂತೆ ನಮ್ಮ ಮಹದೇವ ಪ್ರಕಾಶ್ ಕೊರೊನಾಕ್ಕೆ ಬಲಿಯಾದರು!

ಹಿರಿಯ ಮತ್ತು ಗೌರವಾನ್ವಿತ ಪತ್ರಕರ್ತರಾಗಿದ್ದ ಮಹದೇವ ಪ್ರಕಾಶ್ ಈ ನಾಡು ಕಂಡ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿಯಾಗಿದ್ದ ವಿರೇಂದ್ರಪಾಟೀಲರು ಆರಂಭಿಸಿದ್ದ ಲೋಕವಾಣಿ ಎಂಬ ಪತ್ರಿಕೆಯಲ್ಲಿದ್ದಾಗ ಪ್ರಾಮಾಣಿಕ ಅಭಿವ್ಯಕ್ತಿಗೆ ಹೆಸರಾಗಿದ್ದರು. ಆದರೂ ಲಂಕೇಶ್ ಬದುಕಿರುವವರೆಗೆ ಪತ್ರಿಕೆ ಆಫೀಸಿಗೆ ಬರಲಾಗಿರಲಿಲ್ಲ. ಲಂಕೇಶ್ ಏನಾದರೂ ಬೈದರೆ ಎಂಬ ಅಳುಕಿತ್ತು. ಈ ಅಳುಕು ಸಕಾರಣವಾಗಿತ್ತು.

ಲಂಕೇಶ್ ತೀರಿಕೊಂಡ ನಂತರ ಅವರ ಮಗಳು ಗೌರಿ ಸಂಪಾದಕಿಯಾದ ಮೇಲೆ ಮಹದೇವ ಪ್ರಕಾಶ್ ಪ್ರಭುದ್ಧ ಸಲಹೆಗಾರರಾಗಿ ಬಂದು ಸೇರಿಕೊಂಡರು. ಆಗ ಗೌರಿ, ಮಹದೇವ ಪ್ರಕಾಶ್ ಹೇಳಿದಂಗೆ ಎಂಬ ಉಪಮೆಯಿಂದ ಮಾತು ಆರಂಭಿಸುತ್ತಿದ್ದರು. ಮಹದೇವ ಪ್ರಕಾಶ್ ಬರವಣಿಗೆ ಕೂಡ ತಣ್ಣನೆ ಶೈಲಿಯ ಸಂಯುಕ್ತ ಕರ್ನಾಟಕದ ಲೇಖನದಂತಿದ್ದವು. ಆದ್ದರಿಂದ ಗೌರಿಯ ತಾತ್ಸಾರಕ್ಕೆ ಒಳಗಾದರು.

ನಂತರ ಈ ಭಾನುವಾರ ಎಂಬ ವಾರಪತ್ರಿಕೆ ನಡೆಸತೊಡಗಿದರು. ಇದೂ ಕೂಡ ಸುಧಾರಿತ ವೈಕುಂಟರಾಜುರವರ ವಾರಪತ್ರಿಕೆಯಂತಿತ್ತು. ಜನ ಕೊಂಡು ಓದದಿದ್ದರೂ, ಪತ್ರಿಕೆ ನಡೆಸುವ ಕುಶಲಕಲೆ ಮಹದೇವ ಪ್ರಕಾಶರಿಗಿತ್ತು. ಸಿದ್ದರಾಮಯ್ಯನವರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಲೇಖನ ಬರತೊಡಗಿದವು. ಮಹದೇವ ಪ್ರಕಾಶ್ ಬರೆದ ಮೇಲೆ ಅದರಲ್ಲಿ ಸತ್ಯಾಂಶಗಳಿರುತ್ತವೆ ಎಂದು ಕೆಲವರು ಓದುತ್ತಿದ್ದರು. ಮುಖ್ಯವಾಗಿ ಯಡಿಯೂರಪ್ಪನವರ ಕಡೆಯವರ ನಡುವೆ ಪತ್ರಿಕೆ ಹೆಚ್ಚು ಚರ್ಚೆಯಾಗುತ್ತಿತ್ತು. ಅದೇ ಸಮಯದಲ್ಲಿ ಮಹದೇವ ಪ್ರಕಾಶ್ ಟಿವಿಯೊಳಗೆ ರಾಜಕೀಯ ವಿಶ್ಲೇಷಕರಾಗಿ ಬಂದು ಕುಳಿತರು. ಅಲ್ಲಿ ಬಂದು ಕುಳಿತ ಮೇಲೆ ನಿರಂತರವಾಗಿ ಮಾತನಾಡಬೇಕಾಗುತ್ತದೆ. ಆದ್ದರಿಂದ ಪೂರ್ವಾಗ್ರಹಗಳಿದ್ದರೆ ಸಾಕು, ಸುಳ್ಳುಗಳು ತಾನಾಗಿಯೇ ಹರಿದು ಬರುತ್ತವೆ.

ಒಮ್ಮೆ ಅವರು ಟಿವಿಯಲ್ಲಿ ಮಾತಾನಾಡುತ್ತ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಯತೀಂದ್ರನನ್ನು ನಿಲ್ಲಿಸಿದ್ದನ್ನು ಪ್ರಶ್ನೆ ಮಾಡುತ್ತ ಶಾಂತವೇರಿ ಗೋಪಾಲಗೌಡರು ತಾವು ಅನಾರೋಗ್ಯಕ್ಕೆ ತುತ್ತಾದಾಗ ತಮ್ಮ ಮಗಳನ್ನು ಅಭ್ಯರ್ಥಿಯನ್ನಾಗಿ ಮಾಡುವುದರ ಬದಲು ಬೆಸ್ತ ಜನಾಂಗದ ಕೊಣಂದೂರು ಲಿಂಗಪ್ಪನವರನ್ನು ಅಭ್ಯರ್ಥಿಯನ್ನಾಗಿ ಮಾಡಿದರು. ಅಂತಹ ತ್ಯಾಗಮಯಿ ರಾಜಕಾರಣಿ ಎಲ್ಲಿ, ಈ ಸಿದ್ದರಾಮಯ್ಯನೆಲ್ಲಿ ಎಂದರು. ಆಗ ನಾನು ಗೌರಿ ಎದುರು ಕುಳಿತಿದ್ದೆ. ಅವರು ಹೇಳಿದ ಸುಳ್ಳನ್ನು ಗೌರಿಗೆ ಹೇಳಿದೆ. ಫೋನ್ ಮಾಡಲು ನಂಬರ್ ಕೊಟ್ಟಳು. ತುಸು ಹೊತ್ತಾದ ನಂತರ ಮಹದೇವ ಪ್ರಕಾಶ್‌ಗೆ ಫೋನ್ ಮಾಡಿ:

ಏನ್ ಸಾರ್ ಈ ತರ ಸುಳ್ಳು ಹೇಳ್ತಾ ಇದ್ದೀರಿ ಎಂದೆ.

ನಾನ್ಯಾವ ಸುಳ್ಳು ಹೇಳಿದೆ ಅಂದ್ರು.

ನೋಡಿ ಗೋಪಾಲಗೌಡ್ರು ಅನಾರೋಗ್ಯದಲ್ಲಿದ್ದು, ತೀರ್ಥಹಳ್ಳಿ ಕ್ಷೇತ್ರ ಬಿಟ್ಟುಕೊಟ್ಟಾಗ, ಅವರ ಮಗಳಿಗೆ ಐದಾರು ವರ್ಷ ಇರಬಹುದು. ಇನ್ನು ಕೊಣಂದೂರು ಲಿಂಗಪ್ಪ ಬೆಸ್ತರ ಪೈಕಿ ಅಲ್ಲ, ಬೋವಿ ಪೈಕಿ. ನಿಮ್ಮಂಥವರು ಟಿವಿ ಒಳಗಡೆ ಕುಂತುಗಂಡು ಚೆಡ್ಡಿಗಳ ತರ ಸುಳ್ಳು ಹೇಳಬಾರ್ದು ಎಂದೆ.

ಚಂದ್ರೇಗೌಡ್ರೆ ತಪ್ಪಿದ್ರೆ ಹೇಳಿ ತಿದ್ದಿಕೊಳ್ಳೋಣ ಆದ್ರೆ ಚೆಡ್ಡಿಗಳು ಅನ್ನಬೇಡಿ ಎಂದರು.

ನೀವು ಇದುವರಿಗೂ ಹೇಳಿರೋ ಸುಳ್ಳುಗಳ ಲೆಕ್ಕಹಾಕಿದ್ರೆ ಚೆಡ್ಡಿಗಳು ಮಾತ್ರ ಇಷ್ಟು ಸುಳ್ಳೇಳಕ್ಕೆ ಸಾಧ್ಯ. ಮುಂದಿನ ವಾರ ಹೈಕಮಾಂಡು ಬಂದು ಸಿದ್ದರಾಮಯ್ಯನ್ನ ಇಳಸತ್ತೆ ಅಂತ ಮೂರು ತಿಂಗಳಿಂದ ಹೇಳ್ತ ಇದ್ದೀರಿ ಎಂದು ಆ ಕಡೆಯ ಯಾವ ವಿವರವನ್ನ ಕೇಳಿಸಿಕೊಳ್ಳದೆ ದಾಳಿ ಮಾಡಿದೆ. ಗೌರಿ ನಗುತ್ತ ಹೋಗ್ಲಿ ಬುಡ್ರಿ ಎಂದಳು. ಆಗ ಮನಸ್ಸಿಗೆ ಎಂತದೊ ಸಮಾಧಾನವಾಯ್ತು!

ಮಹದೇವ ಪ್ರಕಾಶರ ಟಿವಿ ವಿಶ್ಲೇಷಣೆ ಮತ್ತು ಭಾನುವಾರ ಪತ್ರಿಕೆ ಸತತವಾಗಿ ಸಿದ್ದರಾಮಯ್ಯನ ಸರಕಾರವನ್ನು ಟೀಕಿಸಿದ್ದು ಫಲ ಕೊಟ್ಟಿತ್ತು. ಯೆಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡರು. ಎಂದಿನಂತೆ ಯಡಿಯೂರಪ್ಪ ಯಾರ್‍ಯಾರಿಗೆ ಆಶ್ವಾಸನೆ ಕೊಟ್ಟಿದ್ದರೋ ಏನೋ ಸಲಹೆಗಾರನಾಗಿ ಮಹದೇವ ಪ್ರಕಾಶರ ಅಲ್ಪ ಅವಧಿ ಮುಗಿಯಿತು.

ತೀರಿಕೊಂಡವರ ಬಗ್ಗೆ ಹಗುರವಾಗಿ ಮಾತನಾಡಬಾರದಂತೆ. ಆದರೂ ಒಂದು ಕಾಲದ ಗೌರವಾನ್ವಿತ ವ್ಯಕ್ತಿಯಾಗಿದ್ದ ಮಹದೇವರು ಹೀಗಾಗುವ ಅಗತ್ಯವಿರಲಿಲ್ಲ ಎಂಬುದು ಹಗುರವಾದ ಮಾತಲ್ಲ.


ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...