Homeಮುಖಪುಟಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

ಶ್ರದ್ಧಾಂಜಲಿ; ಮರೆಯಾದ ಮಹದೇವ ಪ್ರಕಾಶ್

- Advertisement -
- Advertisement -

ಸುಖಪಡಲು ಎಲ್ಲ ಸವಲತ್ತುಗಳೂ ಚಾಚಿಕೊಂಡು ಬಂದಾಗ ಫಲಾನುಭವಿಯೇ ಪೈಸಲ್ ಎಂಬಂತೆ ನಮ್ಮ ಮಹದೇವ ಪ್ರಕಾಶ್ ಕೊರೊನಾಕ್ಕೆ ಬಲಿಯಾದರು!

ಹಿರಿಯ ಮತ್ತು ಗೌರವಾನ್ವಿತ ಪತ್ರಕರ್ತರಾಗಿದ್ದ ಮಹದೇವ ಪ್ರಕಾಶ್ ಈ ನಾಡು ಕಂಡ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿಯಾಗಿದ್ದ ವಿರೇಂದ್ರಪಾಟೀಲರು ಆರಂಭಿಸಿದ್ದ ಲೋಕವಾಣಿ ಎಂಬ ಪತ್ರಿಕೆಯಲ್ಲಿದ್ದಾಗ ಪ್ರಾಮಾಣಿಕ ಅಭಿವ್ಯಕ್ತಿಗೆ ಹೆಸರಾಗಿದ್ದರು. ಆದರೂ ಲಂಕೇಶ್ ಬದುಕಿರುವವರೆಗೆ ಪತ್ರಿಕೆ ಆಫೀಸಿಗೆ ಬರಲಾಗಿರಲಿಲ್ಲ. ಲಂಕೇಶ್ ಏನಾದರೂ ಬೈದರೆ ಎಂಬ ಅಳುಕಿತ್ತು. ಈ ಅಳುಕು ಸಕಾರಣವಾಗಿತ್ತು.

ಲಂಕೇಶ್ ತೀರಿಕೊಂಡ ನಂತರ ಅವರ ಮಗಳು ಗೌರಿ ಸಂಪಾದಕಿಯಾದ ಮೇಲೆ ಮಹದೇವ ಪ್ರಕಾಶ್ ಪ್ರಭುದ್ಧ ಸಲಹೆಗಾರರಾಗಿ ಬಂದು ಸೇರಿಕೊಂಡರು. ಆಗ ಗೌರಿ, ಮಹದೇವ ಪ್ರಕಾಶ್ ಹೇಳಿದಂಗೆ ಎಂಬ ಉಪಮೆಯಿಂದ ಮಾತು ಆರಂಭಿಸುತ್ತಿದ್ದರು. ಮಹದೇವ ಪ್ರಕಾಶ್ ಬರವಣಿಗೆ ಕೂಡ ತಣ್ಣನೆ ಶೈಲಿಯ ಸಂಯುಕ್ತ ಕರ್ನಾಟಕದ ಲೇಖನದಂತಿದ್ದವು. ಆದ್ದರಿಂದ ಗೌರಿಯ ತಾತ್ಸಾರಕ್ಕೆ ಒಳಗಾದರು.

ನಂತರ ಈ ಭಾನುವಾರ ಎಂಬ ವಾರಪತ್ರಿಕೆ ನಡೆಸತೊಡಗಿದರು. ಇದೂ ಕೂಡ ಸುಧಾರಿತ ವೈಕುಂಟರಾಜುರವರ ವಾರಪತ್ರಿಕೆಯಂತಿತ್ತು. ಜನ ಕೊಂಡು ಓದದಿದ್ದರೂ, ಪತ್ರಿಕೆ ನಡೆಸುವ ಕುಶಲಕಲೆ ಮಹದೇವ ಪ್ರಕಾಶರಿಗಿತ್ತು. ಸಿದ್ದರಾಮಯ್ಯನವರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಲೇಖನ ಬರತೊಡಗಿದವು. ಮಹದೇವ ಪ್ರಕಾಶ್ ಬರೆದ ಮೇಲೆ ಅದರಲ್ಲಿ ಸತ್ಯಾಂಶಗಳಿರುತ್ತವೆ ಎಂದು ಕೆಲವರು ಓದುತ್ತಿದ್ದರು. ಮುಖ್ಯವಾಗಿ ಯಡಿಯೂರಪ್ಪನವರ ಕಡೆಯವರ ನಡುವೆ ಪತ್ರಿಕೆ ಹೆಚ್ಚು ಚರ್ಚೆಯಾಗುತ್ತಿತ್ತು. ಅದೇ ಸಮಯದಲ್ಲಿ ಮಹದೇವ ಪ್ರಕಾಶ್ ಟಿವಿಯೊಳಗೆ ರಾಜಕೀಯ ವಿಶ್ಲೇಷಕರಾಗಿ ಬಂದು ಕುಳಿತರು. ಅಲ್ಲಿ ಬಂದು ಕುಳಿತ ಮೇಲೆ ನಿರಂತರವಾಗಿ ಮಾತನಾಡಬೇಕಾಗುತ್ತದೆ. ಆದ್ದರಿಂದ ಪೂರ್ವಾಗ್ರಹಗಳಿದ್ದರೆ ಸಾಕು, ಸುಳ್ಳುಗಳು ತಾನಾಗಿಯೇ ಹರಿದು ಬರುತ್ತವೆ.

ಒಮ್ಮೆ ಅವರು ಟಿವಿಯಲ್ಲಿ ಮಾತಾನಾಡುತ್ತ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಯತೀಂದ್ರನನ್ನು ನಿಲ್ಲಿಸಿದ್ದನ್ನು ಪ್ರಶ್ನೆ ಮಾಡುತ್ತ ಶಾಂತವೇರಿ ಗೋಪಾಲಗೌಡರು ತಾವು ಅನಾರೋಗ್ಯಕ್ಕೆ ತುತ್ತಾದಾಗ ತಮ್ಮ ಮಗಳನ್ನು ಅಭ್ಯರ್ಥಿಯನ್ನಾಗಿ ಮಾಡುವುದರ ಬದಲು ಬೆಸ್ತ ಜನಾಂಗದ ಕೊಣಂದೂರು ಲಿಂಗಪ್ಪನವರನ್ನು ಅಭ್ಯರ್ಥಿಯನ್ನಾಗಿ ಮಾಡಿದರು. ಅಂತಹ ತ್ಯಾಗಮಯಿ ರಾಜಕಾರಣಿ ಎಲ್ಲಿ, ಈ ಸಿದ್ದರಾಮಯ್ಯನೆಲ್ಲಿ ಎಂದರು. ಆಗ ನಾನು ಗೌರಿ ಎದುರು ಕುಳಿತಿದ್ದೆ. ಅವರು ಹೇಳಿದ ಸುಳ್ಳನ್ನು ಗೌರಿಗೆ ಹೇಳಿದೆ. ಫೋನ್ ಮಾಡಲು ನಂಬರ್ ಕೊಟ್ಟಳು. ತುಸು ಹೊತ್ತಾದ ನಂತರ ಮಹದೇವ ಪ್ರಕಾಶ್‌ಗೆ ಫೋನ್ ಮಾಡಿ:

ಏನ್ ಸಾರ್ ಈ ತರ ಸುಳ್ಳು ಹೇಳ್ತಾ ಇದ್ದೀರಿ ಎಂದೆ.

ನಾನ್ಯಾವ ಸುಳ್ಳು ಹೇಳಿದೆ ಅಂದ್ರು.

ನೋಡಿ ಗೋಪಾಲಗೌಡ್ರು ಅನಾರೋಗ್ಯದಲ್ಲಿದ್ದು, ತೀರ್ಥಹಳ್ಳಿ ಕ್ಷೇತ್ರ ಬಿಟ್ಟುಕೊಟ್ಟಾಗ, ಅವರ ಮಗಳಿಗೆ ಐದಾರು ವರ್ಷ ಇರಬಹುದು. ಇನ್ನು ಕೊಣಂದೂರು ಲಿಂಗಪ್ಪ ಬೆಸ್ತರ ಪೈಕಿ ಅಲ್ಲ, ಬೋವಿ ಪೈಕಿ. ನಿಮ್ಮಂಥವರು ಟಿವಿ ಒಳಗಡೆ ಕುಂತುಗಂಡು ಚೆಡ್ಡಿಗಳ ತರ ಸುಳ್ಳು ಹೇಳಬಾರ್ದು ಎಂದೆ.

ಚಂದ್ರೇಗೌಡ್ರೆ ತಪ್ಪಿದ್ರೆ ಹೇಳಿ ತಿದ್ದಿಕೊಳ್ಳೋಣ ಆದ್ರೆ ಚೆಡ್ಡಿಗಳು ಅನ್ನಬೇಡಿ ಎಂದರು.

ನೀವು ಇದುವರಿಗೂ ಹೇಳಿರೋ ಸುಳ್ಳುಗಳ ಲೆಕ್ಕಹಾಕಿದ್ರೆ ಚೆಡ್ಡಿಗಳು ಮಾತ್ರ ಇಷ್ಟು ಸುಳ್ಳೇಳಕ್ಕೆ ಸಾಧ್ಯ. ಮುಂದಿನ ವಾರ ಹೈಕಮಾಂಡು ಬಂದು ಸಿದ್ದರಾಮಯ್ಯನ್ನ ಇಳಸತ್ತೆ ಅಂತ ಮೂರು ತಿಂಗಳಿಂದ ಹೇಳ್ತ ಇದ್ದೀರಿ ಎಂದು ಆ ಕಡೆಯ ಯಾವ ವಿವರವನ್ನ ಕೇಳಿಸಿಕೊಳ್ಳದೆ ದಾಳಿ ಮಾಡಿದೆ. ಗೌರಿ ನಗುತ್ತ ಹೋಗ್ಲಿ ಬುಡ್ರಿ ಎಂದಳು. ಆಗ ಮನಸ್ಸಿಗೆ ಎಂತದೊ ಸಮಾಧಾನವಾಯ್ತು!

ಮಹದೇವ ಪ್ರಕಾಶರ ಟಿವಿ ವಿಶ್ಲೇಷಣೆ ಮತ್ತು ಭಾನುವಾರ ಪತ್ರಿಕೆ ಸತತವಾಗಿ ಸಿದ್ದರಾಮಯ್ಯನ ಸರಕಾರವನ್ನು ಟೀಕಿಸಿದ್ದು ಫಲ ಕೊಟ್ಟಿತ್ತು. ಯೆಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡರು. ಎಂದಿನಂತೆ ಯಡಿಯೂರಪ್ಪ ಯಾರ್‍ಯಾರಿಗೆ ಆಶ್ವಾಸನೆ ಕೊಟ್ಟಿದ್ದರೋ ಏನೋ ಸಲಹೆಗಾರನಾಗಿ ಮಹದೇವ ಪ್ರಕಾಶರ ಅಲ್ಪ ಅವಧಿ ಮುಗಿಯಿತು.

ತೀರಿಕೊಂಡವರ ಬಗ್ಗೆ ಹಗುರವಾಗಿ ಮಾತನಾಡಬಾರದಂತೆ. ಆದರೂ ಒಂದು ಕಾಲದ ಗೌರವಾನ್ವಿತ ವ್ಯಕ್ತಿಯಾಗಿದ್ದ ಮಹದೇವರು ಹೀಗಾಗುವ ಅಗತ್ಯವಿರಲಿಲ್ಲ ಎಂಬುದು ಹಗುರವಾದ ಮಾತಲ್ಲ.


ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...