Homeಚಳವಳಿಹೋರಾಟವನ್ನು ಬೆಚ್ಚಗಿರಿಸುತ್ತಿರುವ 'ಟ್ರ್ಯಾಲಿ' ಎಂಬ ರೈತರ ಬದುಕಿನ ಬಂಡಿ!

ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಹೊಲದಲ್ಲಿ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಈ ಟ್ರ್ಯಾಕ್ಟರ್‌ಗಳು, ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ ಎನ್ನುತ್ತಾರೆ ರೈತರು

- Advertisement -
- Advertisement -

ಐತಿಹಾಸಿಕ ರೈತ ಹೋರಾಟದಲ್ಲಿ ರೈತರ ಜೀವನದ ಬಹುಭಾಗವನ್ನು ಆವರಿಸಿರುವುದು ಟ್ರ್ಯಾಲಿಗಳಾಗಿದೆ. ಕೃಷಿ ಕ್ಷೇತ್ರದಲ್ಲಿ ಉಳುಮೆ ಮಾಡುವ, ಬೆಳೆಯನ್ನು ಮಾರುಕಟ್ಟೆಗೆ ಕೊಂಡೊಯ್ಯುವ ಪಾತ್ರ ವಹಿಸುತ್ತಿದ್ದ ಈ ಟ್ರ್ಯಾಕ್ಟರ್‌ಗಳು ಈಗ ಹೋರಾಟನಿರತ ರೈತರ ವಾಸ್ತವ್ಯದ ಟ್ರ್ಯಾಲಿಗಳಾಗಿ ಮಾರ್ಪಾಡಾಗಿವೆ. ದೊಡ್ಡ ಹೋರಾಟಕ್ಕೆ ಸಾಕ್ಷಿಯಾಗಿರುವ ಸಿಂಘು ಗಡಿ, ಟಿಕ್ರಿ ಬಾರ್ಡರ್‌, ದಾರುಹೇರಾ ಬಾರ್ಡರ್‌ಗಳಲ್ಲಿ ಈ ಟ್ರ್ಯಾಲಿಗಳ ಪಾತ್ರ ಅತಿ ಮಹತ್ವದ್ದು. ಶಹಜಾನ್‌ಪುರ್‌, ಗಾಜಿಯಾಪುರ್ ಮತ್ತು ಚಿಲ್ಲಾ (ನೊಯಿಡಾ ಗೇಟ್)ಗಳಲ್ಲಿ ಟ್ರ್ಯಾಲಿ ಮತ್ತ ಟೆಂಟ್‌ ಎರಡರ ಬಳಕೆಯು ಹೆಚ್ಚಾಗಿದೆ.

ಪ್ರತಿಭಟನಾ ಸ್ಥಳಗಳಲ್ಲಿ ರೈತರು ಮತ್ತು ಪ್ರತಿಭಟನಾಕಾರರ ಬೆಂಬಲಿಗರ ಮನೆಗಳಾಗಿ ಮಾರ್ಪಾಡಾಗಿರುವ ಟ್ರ್ಯಾಲಿಗಳ ಒಳ ವಿನ್ಯಾಸವನ್ನು ತಮಗೆ ಅನುಕೂಲವಾಗುವಂತೆ ಬದಲಿಸಿಕೊಂಡಿದ್ದಾರೆ. ಚಳಿ, ಅತಿಯಾದ ಗಾಳಿ ಮತ್ತು ಮಳೆಗೆ ಜಗ್ಗದಂತಹ ಟ್ರ್ಯಾಲಿಗಳ ಮರುನಿರ್ಮಾಣ ಕೂಡ ಕೊಂಚ ಕಷ್ಟದ ಕೆಲಸವೆ. ಆದರೂ ಉತ್ತಮ ಟ್ರ್ಯಾಲಿಗಳನ್ನು ರೈತರು ಕಟ್ಟಿದ್ದಾರೆ.

ಇದನ್ನೂ ಓದಿ: ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು

ಟ್ರ್ಯಾಲಿಗಳಲ್ಲಿ ವಾಸಿಸುವವರಿಗೆ ಬೇಕಾದ ವಿದ್ಯುತ್‌ ದೀಪಗಳ ವ್ಯವಸ್ಥೆ, ಚಾರ್ಜಿಂಗ್‌ ವ್ಯವಸ್ಥೆ, ಮಲಗಲು ಸ್ಥಳ, ಹೊದಿಕೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಹೊರಗಡೆಯಿಂದ ಗಾಳಿ ಒಳಗೆ ಹೋಗದಂತೆ ತಡೆಯಲು ದಪ್ಪದ ಟಾರ್ಪಾಲ್‌ಗಳನ್ನು ಜೋಡಿಸಿದ್ದಾರೆ. ಇನ್ನು ಟ್ರ್ಯಾಲಿ ಹತ್ತಲು ಮತ್ತು ಇಳಿಯಲು ಉಪಯೋಗವಾಗುವಂತೆ ಮರದ ಮೆಟ್ಟಿಲುಗಳನ್ನು ಮಾಡಿ ಅದನ್ನು ಟ್ರ್ಯಾಕ್ಟರ್‌ಗಳಿಗೆ ಜೋಡಿಸಲಾಗಿದೆ.

ಕೆಲವು ಟ್ರ್ಯಾಲಿಗಳಲ್ಲಿ ಹಾಸಿಗೆ ಹಾಸುವ ಜಾಗದಲ್ಲಿ ಮೊದಲು ಭತ್ತದ ಹುಲ್ಲು ಹಾಕಲಾಗಿದೆ. ಹುಲ್ಲಿನ ಮೇಲೆ ಟಾರ್ಪಾಲ್‌ ಅದರ ಮೇಲೆ ಹಾಸಿಗೆ ನಂತರ ಅದರ ಮೇಲೆ ಬೆಡ್‌ಶೀಟ್‌ಗಳನ್ನು ಹಾಕಲಾಗುತ್ತದೆ. “ಇದು ಬೆಚ್ಚಗಿನ ಅನುಭವ ನೀಡುತ್ತದೆ, ಹಾಗಾಗಿ ಹಾಸಿದ್ದೇವೆ” ಎಂದು ರೈತರು ಹೇಳುತ್ತಾರೆ. ಮಕ್ಕಳು, ಮಹಿಳೆಯರ ಸುರಕ್ಷತೆಗೂ ಹೆಚ್ಚು ಆದ್ಯತೆ ನೀಡಬೇಕಾಗಿರುವುದರಿಂದ ಟ್ರ್ಯಾಲಿಗಳನ್ನು ಮತ್ತಷ್ಟು ಗಟ್ಟಿಯಾಗಿ ನಿರ್ಮಿಸಿರುತ್ತಾರೆ.

ಟ್ರ್ಯಾಲಿಗಳನ್ನು ನಿರ್ಮಿಸಿರುವ ಟ್ರ್ಯಾಕ್ಟರ್‌ಗಳು ನಮ್ಮ ಭಾಗದ ಟ್ರ್ಯಾಕ್ಟರ್‌ಗಳ ರೀತಿಯಲ್ಲಿ ಟೊಳ್ಳಾಗಿರದೆ, ಗಟ್ಟಿ ಮುಟ್ಟಾಗಿ ಇರುತ್ತವೆ. ಲಾರಿಗಳ ರೀತಿಯಲ್ಲಿ ಇಲ್ಲಿನ ಟ್ರ್ಯಾಕ್ಟರ್‌ಗಳಿವೆ. ತಮ್ಮ ಮನೆಯ ಸದಸ್ಯನಂತೆ ಟ್ರ್ಯಾಕ್ಟರ್‌ಗಳನ್ನು ನೋಡಿಕೊಳ್ಳುವುದಾಗಿ ಇಲ್ಲಿನ ಜನ ಹೇಳುತ್ತಾರೆ. ದೇವರಿಗೆ ಪೂಜೆ ಮಾಡುವಂತೆ ದಿನ ಟ್ರ್ಯಾಕ್ಟರ್‌ಗಳಿಗೂ ಇಲ್ಲಿನ ರೈತರು ಪೂಜೆ ಸಲ್ಲಿಸುತ್ತಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಹೊಲದಲ್ಲಿ ನಮ್ಮ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಟ್ರ್ಯಾಕ್ಟರ್‌ಗಳು, ಈ ನಮ್ಮ ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ. ಇಲ್ಲೂ ನಮ್ಮ ಜೊತೆಗೆ ಪ್ರತಿಭಟನೆಯಲ್ಲಿ ನಮ್ಮ ಮನೆಗಳಾಗಿ ತಮ್ಮ ಕಾರ್ಯನಿವರ್ಹಿಸುತ್ತಿವೆ ಎಂದು ರೈತರು ಮನದುಂಬಿ ಹೇಳುತ್ತಾರೆ.

ಜನವರಿ 7 ರ ಟ್ರ್ಯಾಕ್ಟರ್‌ ಮಾರ್ಚ್‌ ಪೂವಾಭ್ಯಾಸದಲ್ಲೂ ಸಾಥ್‌ ನೀಡಿರುವ ಇವುಗಳು ಮುಂದೆ ಜನವರಿ 26 ರ ಗಣರಾಜ್ಯೋತ್ಸವದಂದು ನಡೆಯಲಿರುವ ಐತಿಹಾಸಿಕ ಟ್ರ್ಯಾಕ್ಟರ್‌ ರ್‍ಯಾಲಿಯಲ್ಲೂ ನಮ್ಮ ಶಕ್ತಿ ಪ್ರದರ್ಶನಕ್ಕೆ ಸಾಥ್‌ ನೀಡಲಿವೆ. ಪಂಜಾಬ್‌, ಹರಿಯಾಣ, ರಾಜಸ್ಥಾನ, ಕೇರಳದಿಂದಲೂ ಈಗಾಗಲೇ ಸಾವಿರಾರು ಟ್ರ್ಯಾಕ್ಟರ್‌ಗಳು ದೆಹಲಿಯತ್ತ ಬರುತ್ತಿವೆ. ಇವು ನಮ್ಮ ಟ್ರ್ಯಾಕ್ಟರ್‌, ಟ್ರ್ಯಾಲಿ ಮಾತ್ರವಲ್ಲ ನಮ್ಮ ಜೀವನದ ಸಾಥಿ (ಗೆಳೆಯ) ಎಂದು ರೈತರು ಹೆಮ್ಮೆಯಿಂದ ಹೇಳುತ್ತಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. As the Supreme court of India stayed the three agriculture laws and constituted a committee to resolve the issue, the so called leaders of farmers should a obey the supreme order

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...