Homeಚಳವಳಿಹೋರಾಟವನ್ನು ಬೆಚ್ಚಗಿರಿಸುತ್ತಿರುವ 'ಟ್ರ್ಯಾಲಿ' ಎಂಬ ರೈತರ ಬದುಕಿನ ಬಂಡಿ!

ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಹೊಲದಲ್ಲಿ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಈ ಟ್ರ್ಯಾಕ್ಟರ್‌ಗಳು, ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ ಎನ್ನುತ್ತಾರೆ ರೈತರು

- Advertisement -
- Advertisement -

ಐತಿಹಾಸಿಕ ರೈತ ಹೋರಾಟದಲ್ಲಿ ರೈತರ ಜೀವನದ ಬಹುಭಾಗವನ್ನು ಆವರಿಸಿರುವುದು ಟ್ರ್ಯಾಲಿಗಳಾಗಿದೆ. ಕೃಷಿ ಕ್ಷೇತ್ರದಲ್ಲಿ ಉಳುಮೆ ಮಾಡುವ, ಬೆಳೆಯನ್ನು ಮಾರುಕಟ್ಟೆಗೆ ಕೊಂಡೊಯ್ಯುವ ಪಾತ್ರ ವಹಿಸುತ್ತಿದ್ದ ಈ ಟ್ರ್ಯಾಕ್ಟರ್‌ಗಳು ಈಗ ಹೋರಾಟನಿರತ ರೈತರ ವಾಸ್ತವ್ಯದ ಟ್ರ್ಯಾಲಿಗಳಾಗಿ ಮಾರ್ಪಾಡಾಗಿವೆ. ದೊಡ್ಡ ಹೋರಾಟಕ್ಕೆ ಸಾಕ್ಷಿಯಾಗಿರುವ ಸಿಂಘು ಗಡಿ, ಟಿಕ್ರಿ ಬಾರ್ಡರ್‌, ದಾರುಹೇರಾ ಬಾರ್ಡರ್‌ಗಳಲ್ಲಿ ಈ ಟ್ರ್ಯಾಲಿಗಳ ಪಾತ್ರ ಅತಿ ಮಹತ್ವದ್ದು. ಶಹಜಾನ್‌ಪುರ್‌, ಗಾಜಿಯಾಪುರ್ ಮತ್ತು ಚಿಲ್ಲಾ (ನೊಯಿಡಾ ಗೇಟ್)ಗಳಲ್ಲಿ ಟ್ರ್ಯಾಲಿ ಮತ್ತ ಟೆಂಟ್‌ ಎರಡರ ಬಳಕೆಯು ಹೆಚ್ಚಾಗಿದೆ.

ಪ್ರತಿಭಟನಾ ಸ್ಥಳಗಳಲ್ಲಿ ರೈತರು ಮತ್ತು ಪ್ರತಿಭಟನಾಕಾರರ ಬೆಂಬಲಿಗರ ಮನೆಗಳಾಗಿ ಮಾರ್ಪಾಡಾಗಿರುವ ಟ್ರ್ಯಾಲಿಗಳ ಒಳ ವಿನ್ಯಾಸವನ್ನು ತಮಗೆ ಅನುಕೂಲವಾಗುವಂತೆ ಬದಲಿಸಿಕೊಂಡಿದ್ದಾರೆ. ಚಳಿ, ಅತಿಯಾದ ಗಾಳಿ ಮತ್ತು ಮಳೆಗೆ ಜಗ್ಗದಂತಹ ಟ್ರ್ಯಾಲಿಗಳ ಮರುನಿರ್ಮಾಣ ಕೂಡ ಕೊಂಚ ಕಷ್ಟದ ಕೆಲಸವೆ. ಆದರೂ ಉತ್ತಮ ಟ್ರ್ಯಾಲಿಗಳನ್ನು ರೈತರು ಕಟ್ಟಿದ್ದಾರೆ.

ಇದನ್ನೂ ಓದಿ: ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು

ಟ್ರ್ಯಾಲಿಗಳಲ್ಲಿ ವಾಸಿಸುವವರಿಗೆ ಬೇಕಾದ ವಿದ್ಯುತ್‌ ದೀಪಗಳ ವ್ಯವಸ್ಥೆ, ಚಾರ್ಜಿಂಗ್‌ ವ್ಯವಸ್ಥೆ, ಮಲಗಲು ಸ್ಥಳ, ಹೊದಿಕೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಹೊರಗಡೆಯಿಂದ ಗಾಳಿ ಒಳಗೆ ಹೋಗದಂತೆ ತಡೆಯಲು ದಪ್ಪದ ಟಾರ್ಪಾಲ್‌ಗಳನ್ನು ಜೋಡಿಸಿದ್ದಾರೆ. ಇನ್ನು ಟ್ರ್ಯಾಲಿ ಹತ್ತಲು ಮತ್ತು ಇಳಿಯಲು ಉಪಯೋಗವಾಗುವಂತೆ ಮರದ ಮೆಟ್ಟಿಲುಗಳನ್ನು ಮಾಡಿ ಅದನ್ನು ಟ್ರ್ಯಾಕ್ಟರ್‌ಗಳಿಗೆ ಜೋಡಿಸಲಾಗಿದೆ.

ಕೆಲವು ಟ್ರ್ಯಾಲಿಗಳಲ್ಲಿ ಹಾಸಿಗೆ ಹಾಸುವ ಜಾಗದಲ್ಲಿ ಮೊದಲು ಭತ್ತದ ಹುಲ್ಲು ಹಾಕಲಾಗಿದೆ. ಹುಲ್ಲಿನ ಮೇಲೆ ಟಾರ್ಪಾಲ್‌ ಅದರ ಮೇಲೆ ಹಾಸಿಗೆ ನಂತರ ಅದರ ಮೇಲೆ ಬೆಡ್‌ಶೀಟ್‌ಗಳನ್ನು ಹಾಕಲಾಗುತ್ತದೆ. “ಇದು ಬೆಚ್ಚಗಿನ ಅನುಭವ ನೀಡುತ್ತದೆ, ಹಾಗಾಗಿ ಹಾಸಿದ್ದೇವೆ” ಎಂದು ರೈತರು ಹೇಳುತ್ತಾರೆ. ಮಕ್ಕಳು, ಮಹಿಳೆಯರ ಸುರಕ್ಷತೆಗೂ ಹೆಚ್ಚು ಆದ್ಯತೆ ನೀಡಬೇಕಾಗಿರುವುದರಿಂದ ಟ್ರ್ಯಾಲಿಗಳನ್ನು ಮತ್ತಷ್ಟು ಗಟ್ಟಿಯಾಗಿ ನಿರ್ಮಿಸಿರುತ್ತಾರೆ.

ಟ್ರ್ಯಾಲಿಗಳನ್ನು ನಿರ್ಮಿಸಿರುವ ಟ್ರ್ಯಾಕ್ಟರ್‌ಗಳು ನಮ್ಮ ಭಾಗದ ಟ್ರ್ಯಾಕ್ಟರ್‌ಗಳ ರೀತಿಯಲ್ಲಿ ಟೊಳ್ಳಾಗಿರದೆ, ಗಟ್ಟಿ ಮುಟ್ಟಾಗಿ ಇರುತ್ತವೆ. ಲಾರಿಗಳ ರೀತಿಯಲ್ಲಿ ಇಲ್ಲಿನ ಟ್ರ್ಯಾಕ್ಟರ್‌ಗಳಿವೆ. ತಮ್ಮ ಮನೆಯ ಸದಸ್ಯನಂತೆ ಟ್ರ್ಯಾಕ್ಟರ್‌ಗಳನ್ನು ನೋಡಿಕೊಳ್ಳುವುದಾಗಿ ಇಲ್ಲಿನ ಜನ ಹೇಳುತ್ತಾರೆ. ದೇವರಿಗೆ ಪೂಜೆ ಮಾಡುವಂತೆ ದಿನ ಟ್ರ್ಯಾಕ್ಟರ್‌ಗಳಿಗೂ ಇಲ್ಲಿನ ರೈತರು ಪೂಜೆ ಸಲ್ಲಿಸುತ್ತಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಹೊಲದಲ್ಲಿ ನಮ್ಮ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಟ್ರ್ಯಾಕ್ಟರ್‌ಗಳು, ಈ ನಮ್ಮ ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ. ಇಲ್ಲೂ ನಮ್ಮ ಜೊತೆಗೆ ಪ್ರತಿಭಟನೆಯಲ್ಲಿ ನಮ್ಮ ಮನೆಗಳಾಗಿ ತಮ್ಮ ಕಾರ್ಯನಿವರ್ಹಿಸುತ್ತಿವೆ ಎಂದು ರೈತರು ಮನದುಂಬಿ ಹೇಳುತ್ತಾರೆ.

ಜನವರಿ 7 ರ ಟ್ರ್ಯಾಕ್ಟರ್‌ ಮಾರ್ಚ್‌ ಪೂವಾಭ್ಯಾಸದಲ್ಲೂ ಸಾಥ್‌ ನೀಡಿರುವ ಇವುಗಳು ಮುಂದೆ ಜನವರಿ 26 ರ ಗಣರಾಜ್ಯೋತ್ಸವದಂದು ನಡೆಯಲಿರುವ ಐತಿಹಾಸಿಕ ಟ್ರ್ಯಾಕ್ಟರ್‌ ರ್‍ಯಾಲಿಯಲ್ಲೂ ನಮ್ಮ ಶಕ್ತಿ ಪ್ರದರ್ಶನಕ್ಕೆ ಸಾಥ್‌ ನೀಡಲಿವೆ. ಪಂಜಾಬ್‌, ಹರಿಯಾಣ, ರಾಜಸ್ಥಾನ, ಕೇರಳದಿಂದಲೂ ಈಗಾಗಲೇ ಸಾವಿರಾರು ಟ್ರ್ಯಾಕ್ಟರ್‌ಗಳು ದೆಹಲಿಯತ್ತ ಬರುತ್ತಿವೆ. ಇವು ನಮ್ಮ ಟ್ರ್ಯಾಕ್ಟರ್‌, ಟ್ರ್ಯಾಲಿ ಮಾತ್ರವಲ್ಲ ನಮ್ಮ ಜೀವನದ ಸಾಥಿ (ಗೆಳೆಯ) ಎಂದು ರೈತರು ಹೆಮ್ಮೆಯಿಂದ ಹೇಳುತ್ತಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. As the Supreme court of India stayed the three agriculture laws and constituted a committee to resolve the issue, the so called leaders of farmers should a obey the supreme order

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...