Homeಚಳವಳಿಹೋರಾಟವನ್ನು ಬೆಚ್ಚಗಿರಿಸುತ್ತಿರುವ 'ಟ್ರ್ಯಾಲಿ' ಎಂಬ ರೈತರ ಬದುಕಿನ ಬಂಡಿ!

ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಹೊಲದಲ್ಲಿ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಈ ಟ್ರ್ಯಾಕ್ಟರ್‌ಗಳು, ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ ಎನ್ನುತ್ತಾರೆ ರೈತರು

- Advertisement -
- Advertisement -

ಐತಿಹಾಸಿಕ ರೈತ ಹೋರಾಟದಲ್ಲಿ ರೈತರ ಜೀವನದ ಬಹುಭಾಗವನ್ನು ಆವರಿಸಿರುವುದು ಟ್ರ್ಯಾಲಿಗಳಾಗಿದೆ. ಕೃಷಿ ಕ್ಷೇತ್ರದಲ್ಲಿ ಉಳುಮೆ ಮಾಡುವ, ಬೆಳೆಯನ್ನು ಮಾರುಕಟ್ಟೆಗೆ ಕೊಂಡೊಯ್ಯುವ ಪಾತ್ರ ವಹಿಸುತ್ತಿದ್ದ ಈ ಟ್ರ್ಯಾಕ್ಟರ್‌ಗಳು ಈಗ ಹೋರಾಟನಿರತ ರೈತರ ವಾಸ್ತವ್ಯದ ಟ್ರ್ಯಾಲಿಗಳಾಗಿ ಮಾರ್ಪಾಡಾಗಿವೆ. ದೊಡ್ಡ ಹೋರಾಟಕ್ಕೆ ಸಾಕ್ಷಿಯಾಗಿರುವ ಸಿಂಘು ಗಡಿ, ಟಿಕ್ರಿ ಬಾರ್ಡರ್‌, ದಾರುಹೇರಾ ಬಾರ್ಡರ್‌ಗಳಲ್ಲಿ ಈ ಟ್ರ್ಯಾಲಿಗಳ ಪಾತ್ರ ಅತಿ ಮಹತ್ವದ್ದು. ಶಹಜಾನ್‌ಪುರ್‌, ಗಾಜಿಯಾಪುರ್ ಮತ್ತು ಚಿಲ್ಲಾ (ನೊಯಿಡಾ ಗೇಟ್)ಗಳಲ್ಲಿ ಟ್ರ್ಯಾಲಿ ಮತ್ತ ಟೆಂಟ್‌ ಎರಡರ ಬಳಕೆಯು ಹೆಚ್ಚಾಗಿದೆ.

ಪ್ರತಿಭಟನಾ ಸ್ಥಳಗಳಲ್ಲಿ ರೈತರು ಮತ್ತು ಪ್ರತಿಭಟನಾಕಾರರ ಬೆಂಬಲಿಗರ ಮನೆಗಳಾಗಿ ಮಾರ್ಪಾಡಾಗಿರುವ ಟ್ರ್ಯಾಲಿಗಳ ಒಳ ವಿನ್ಯಾಸವನ್ನು ತಮಗೆ ಅನುಕೂಲವಾಗುವಂತೆ ಬದಲಿಸಿಕೊಂಡಿದ್ದಾರೆ. ಚಳಿ, ಅತಿಯಾದ ಗಾಳಿ ಮತ್ತು ಮಳೆಗೆ ಜಗ್ಗದಂತಹ ಟ್ರ್ಯಾಲಿಗಳ ಮರುನಿರ್ಮಾಣ ಕೂಡ ಕೊಂಚ ಕಷ್ಟದ ಕೆಲಸವೆ. ಆದರೂ ಉತ್ತಮ ಟ್ರ್ಯಾಲಿಗಳನ್ನು ರೈತರು ಕಟ್ಟಿದ್ದಾರೆ.

ಇದನ್ನೂ ಓದಿ: ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು

ಟ್ರ್ಯಾಲಿಗಳಲ್ಲಿ ವಾಸಿಸುವವರಿಗೆ ಬೇಕಾದ ವಿದ್ಯುತ್‌ ದೀಪಗಳ ವ್ಯವಸ್ಥೆ, ಚಾರ್ಜಿಂಗ್‌ ವ್ಯವಸ್ಥೆ, ಮಲಗಲು ಸ್ಥಳ, ಹೊದಿಕೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಹೊರಗಡೆಯಿಂದ ಗಾಳಿ ಒಳಗೆ ಹೋಗದಂತೆ ತಡೆಯಲು ದಪ್ಪದ ಟಾರ್ಪಾಲ್‌ಗಳನ್ನು ಜೋಡಿಸಿದ್ದಾರೆ. ಇನ್ನು ಟ್ರ್ಯಾಲಿ ಹತ್ತಲು ಮತ್ತು ಇಳಿಯಲು ಉಪಯೋಗವಾಗುವಂತೆ ಮರದ ಮೆಟ್ಟಿಲುಗಳನ್ನು ಮಾಡಿ ಅದನ್ನು ಟ್ರ್ಯಾಕ್ಟರ್‌ಗಳಿಗೆ ಜೋಡಿಸಲಾಗಿದೆ.

ಕೆಲವು ಟ್ರ್ಯಾಲಿಗಳಲ್ಲಿ ಹಾಸಿಗೆ ಹಾಸುವ ಜಾಗದಲ್ಲಿ ಮೊದಲು ಭತ್ತದ ಹುಲ್ಲು ಹಾಕಲಾಗಿದೆ. ಹುಲ್ಲಿನ ಮೇಲೆ ಟಾರ್ಪಾಲ್‌ ಅದರ ಮೇಲೆ ಹಾಸಿಗೆ ನಂತರ ಅದರ ಮೇಲೆ ಬೆಡ್‌ಶೀಟ್‌ಗಳನ್ನು ಹಾಕಲಾಗುತ್ತದೆ. “ಇದು ಬೆಚ್ಚಗಿನ ಅನುಭವ ನೀಡುತ್ತದೆ, ಹಾಗಾಗಿ ಹಾಸಿದ್ದೇವೆ” ಎಂದು ರೈತರು ಹೇಳುತ್ತಾರೆ. ಮಕ್ಕಳು, ಮಹಿಳೆಯರ ಸುರಕ್ಷತೆಗೂ ಹೆಚ್ಚು ಆದ್ಯತೆ ನೀಡಬೇಕಾಗಿರುವುದರಿಂದ ಟ್ರ್ಯಾಲಿಗಳನ್ನು ಮತ್ತಷ್ಟು ಗಟ್ಟಿಯಾಗಿ ನಿರ್ಮಿಸಿರುತ್ತಾರೆ.

ಟ್ರ್ಯಾಲಿಗಳನ್ನು ನಿರ್ಮಿಸಿರುವ ಟ್ರ್ಯಾಕ್ಟರ್‌ಗಳು ನಮ್ಮ ಭಾಗದ ಟ್ರ್ಯಾಕ್ಟರ್‌ಗಳ ರೀತಿಯಲ್ಲಿ ಟೊಳ್ಳಾಗಿರದೆ, ಗಟ್ಟಿ ಮುಟ್ಟಾಗಿ ಇರುತ್ತವೆ. ಲಾರಿಗಳ ರೀತಿಯಲ್ಲಿ ಇಲ್ಲಿನ ಟ್ರ್ಯಾಕ್ಟರ್‌ಗಳಿವೆ. ತಮ್ಮ ಮನೆಯ ಸದಸ್ಯನಂತೆ ಟ್ರ್ಯಾಕ್ಟರ್‌ಗಳನ್ನು ನೋಡಿಕೊಳ್ಳುವುದಾಗಿ ಇಲ್ಲಿನ ಜನ ಹೇಳುತ್ತಾರೆ. ದೇವರಿಗೆ ಪೂಜೆ ಮಾಡುವಂತೆ ದಿನ ಟ್ರ್ಯಾಕ್ಟರ್‌ಗಳಿಗೂ ಇಲ್ಲಿನ ರೈತರು ಪೂಜೆ ಸಲ್ಲಿಸುತ್ತಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಹೊಲದಲ್ಲಿ ನಮ್ಮ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಟ್ರ್ಯಾಕ್ಟರ್‌ಗಳು, ಈ ನಮ್ಮ ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ. ಇಲ್ಲೂ ನಮ್ಮ ಜೊತೆಗೆ ಪ್ರತಿಭಟನೆಯಲ್ಲಿ ನಮ್ಮ ಮನೆಗಳಾಗಿ ತಮ್ಮ ಕಾರ್ಯನಿವರ್ಹಿಸುತ್ತಿವೆ ಎಂದು ರೈತರು ಮನದುಂಬಿ ಹೇಳುತ್ತಾರೆ.

ಜನವರಿ 7 ರ ಟ್ರ್ಯಾಕ್ಟರ್‌ ಮಾರ್ಚ್‌ ಪೂವಾಭ್ಯಾಸದಲ್ಲೂ ಸಾಥ್‌ ನೀಡಿರುವ ಇವುಗಳು ಮುಂದೆ ಜನವರಿ 26 ರ ಗಣರಾಜ್ಯೋತ್ಸವದಂದು ನಡೆಯಲಿರುವ ಐತಿಹಾಸಿಕ ಟ್ರ್ಯಾಕ್ಟರ್‌ ರ್‍ಯಾಲಿಯಲ್ಲೂ ನಮ್ಮ ಶಕ್ತಿ ಪ್ರದರ್ಶನಕ್ಕೆ ಸಾಥ್‌ ನೀಡಲಿವೆ. ಪಂಜಾಬ್‌, ಹರಿಯಾಣ, ರಾಜಸ್ಥಾನ, ಕೇರಳದಿಂದಲೂ ಈಗಾಗಲೇ ಸಾವಿರಾರು ಟ್ರ್ಯಾಕ್ಟರ್‌ಗಳು ದೆಹಲಿಯತ್ತ ಬರುತ್ತಿವೆ. ಇವು ನಮ್ಮ ಟ್ರ್ಯಾಕ್ಟರ್‌, ಟ್ರ್ಯಾಲಿ ಮಾತ್ರವಲ್ಲ ನಮ್ಮ ಜೀವನದ ಸಾಥಿ (ಗೆಳೆಯ) ಎಂದು ರೈತರು ಹೆಮ್ಮೆಯಿಂದ ಹೇಳುತ್ತಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. As the Supreme court of India stayed the three agriculture laws and constituted a committee to resolve the issue, the so called leaders of farmers should a obey the supreme order

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...