Homeಚಳವಳಿಹೋರಾಟವನ್ನು ಬೆಚ್ಚಗಿರಿಸುತ್ತಿರುವ 'ಟ್ರ್ಯಾಲಿ' ಎಂಬ ರೈತರ ಬದುಕಿನ ಬಂಡಿ!

ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಹೊಲದಲ್ಲಿ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಈ ಟ್ರ್ಯಾಕ್ಟರ್‌ಗಳು, ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ ಎನ್ನುತ್ತಾರೆ ರೈತರು

- Advertisement -
- Advertisement -

ಐತಿಹಾಸಿಕ ರೈತ ಹೋರಾಟದಲ್ಲಿ ರೈತರ ಜೀವನದ ಬಹುಭಾಗವನ್ನು ಆವರಿಸಿರುವುದು ಟ್ರ್ಯಾಲಿಗಳಾಗಿದೆ. ಕೃಷಿ ಕ್ಷೇತ್ರದಲ್ಲಿ ಉಳುಮೆ ಮಾಡುವ, ಬೆಳೆಯನ್ನು ಮಾರುಕಟ್ಟೆಗೆ ಕೊಂಡೊಯ್ಯುವ ಪಾತ್ರ ವಹಿಸುತ್ತಿದ್ದ ಈ ಟ್ರ್ಯಾಕ್ಟರ್‌ಗಳು ಈಗ ಹೋರಾಟನಿರತ ರೈತರ ವಾಸ್ತವ್ಯದ ಟ್ರ್ಯಾಲಿಗಳಾಗಿ ಮಾರ್ಪಾಡಾಗಿವೆ. ದೊಡ್ಡ ಹೋರಾಟಕ್ಕೆ ಸಾಕ್ಷಿಯಾಗಿರುವ ಸಿಂಘು ಗಡಿ, ಟಿಕ್ರಿ ಬಾರ್ಡರ್‌, ದಾರುಹೇರಾ ಬಾರ್ಡರ್‌ಗಳಲ್ಲಿ ಈ ಟ್ರ್ಯಾಲಿಗಳ ಪಾತ್ರ ಅತಿ ಮಹತ್ವದ್ದು. ಶಹಜಾನ್‌ಪುರ್‌, ಗಾಜಿಯಾಪುರ್ ಮತ್ತು ಚಿಲ್ಲಾ (ನೊಯಿಡಾ ಗೇಟ್)ಗಳಲ್ಲಿ ಟ್ರ್ಯಾಲಿ ಮತ್ತ ಟೆಂಟ್‌ ಎರಡರ ಬಳಕೆಯು ಹೆಚ್ಚಾಗಿದೆ.

ಪ್ರತಿಭಟನಾ ಸ್ಥಳಗಳಲ್ಲಿ ರೈತರು ಮತ್ತು ಪ್ರತಿಭಟನಾಕಾರರ ಬೆಂಬಲಿಗರ ಮನೆಗಳಾಗಿ ಮಾರ್ಪಾಡಾಗಿರುವ ಟ್ರ್ಯಾಲಿಗಳ ಒಳ ವಿನ್ಯಾಸವನ್ನು ತಮಗೆ ಅನುಕೂಲವಾಗುವಂತೆ ಬದಲಿಸಿಕೊಂಡಿದ್ದಾರೆ. ಚಳಿ, ಅತಿಯಾದ ಗಾಳಿ ಮತ್ತು ಮಳೆಗೆ ಜಗ್ಗದಂತಹ ಟ್ರ್ಯಾಲಿಗಳ ಮರುನಿರ್ಮಾಣ ಕೂಡ ಕೊಂಚ ಕಷ್ಟದ ಕೆಲಸವೆ. ಆದರೂ ಉತ್ತಮ ಟ್ರ್ಯಾಲಿಗಳನ್ನು ರೈತರು ಕಟ್ಟಿದ್ದಾರೆ.

ಇದನ್ನೂ ಓದಿ: ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು

ಟ್ರ್ಯಾಲಿಗಳಲ್ಲಿ ವಾಸಿಸುವವರಿಗೆ ಬೇಕಾದ ವಿದ್ಯುತ್‌ ದೀಪಗಳ ವ್ಯವಸ್ಥೆ, ಚಾರ್ಜಿಂಗ್‌ ವ್ಯವಸ್ಥೆ, ಮಲಗಲು ಸ್ಥಳ, ಹೊದಿಕೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಹೊರಗಡೆಯಿಂದ ಗಾಳಿ ಒಳಗೆ ಹೋಗದಂತೆ ತಡೆಯಲು ದಪ್ಪದ ಟಾರ್ಪಾಲ್‌ಗಳನ್ನು ಜೋಡಿಸಿದ್ದಾರೆ. ಇನ್ನು ಟ್ರ್ಯಾಲಿ ಹತ್ತಲು ಮತ್ತು ಇಳಿಯಲು ಉಪಯೋಗವಾಗುವಂತೆ ಮರದ ಮೆಟ್ಟಿಲುಗಳನ್ನು ಮಾಡಿ ಅದನ್ನು ಟ್ರ್ಯಾಕ್ಟರ್‌ಗಳಿಗೆ ಜೋಡಿಸಲಾಗಿದೆ.

ಕೆಲವು ಟ್ರ್ಯಾಲಿಗಳಲ್ಲಿ ಹಾಸಿಗೆ ಹಾಸುವ ಜಾಗದಲ್ಲಿ ಮೊದಲು ಭತ್ತದ ಹುಲ್ಲು ಹಾಕಲಾಗಿದೆ. ಹುಲ್ಲಿನ ಮೇಲೆ ಟಾರ್ಪಾಲ್‌ ಅದರ ಮೇಲೆ ಹಾಸಿಗೆ ನಂತರ ಅದರ ಮೇಲೆ ಬೆಡ್‌ಶೀಟ್‌ಗಳನ್ನು ಹಾಕಲಾಗುತ್ತದೆ. “ಇದು ಬೆಚ್ಚಗಿನ ಅನುಭವ ನೀಡುತ್ತದೆ, ಹಾಗಾಗಿ ಹಾಸಿದ್ದೇವೆ” ಎಂದು ರೈತರು ಹೇಳುತ್ತಾರೆ. ಮಕ್ಕಳು, ಮಹಿಳೆಯರ ಸುರಕ್ಷತೆಗೂ ಹೆಚ್ಚು ಆದ್ಯತೆ ನೀಡಬೇಕಾಗಿರುವುದರಿಂದ ಟ್ರ್ಯಾಲಿಗಳನ್ನು ಮತ್ತಷ್ಟು ಗಟ್ಟಿಯಾಗಿ ನಿರ್ಮಿಸಿರುತ್ತಾರೆ.

ಟ್ರ್ಯಾಲಿಗಳನ್ನು ನಿರ್ಮಿಸಿರುವ ಟ್ರ್ಯಾಕ್ಟರ್‌ಗಳು ನಮ್ಮ ಭಾಗದ ಟ್ರ್ಯಾಕ್ಟರ್‌ಗಳ ರೀತಿಯಲ್ಲಿ ಟೊಳ್ಳಾಗಿರದೆ, ಗಟ್ಟಿ ಮುಟ್ಟಾಗಿ ಇರುತ್ತವೆ. ಲಾರಿಗಳ ರೀತಿಯಲ್ಲಿ ಇಲ್ಲಿನ ಟ್ರ್ಯಾಕ್ಟರ್‌ಗಳಿವೆ. ತಮ್ಮ ಮನೆಯ ಸದಸ್ಯನಂತೆ ಟ್ರ್ಯಾಕ್ಟರ್‌ಗಳನ್ನು ನೋಡಿಕೊಳ್ಳುವುದಾಗಿ ಇಲ್ಲಿನ ಜನ ಹೇಳುತ್ತಾರೆ. ದೇವರಿಗೆ ಪೂಜೆ ಮಾಡುವಂತೆ ದಿನ ಟ್ರ್ಯಾಕ್ಟರ್‌ಗಳಿಗೂ ಇಲ್ಲಿನ ರೈತರು ಪೂಜೆ ಸಲ್ಲಿಸುತ್ತಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಹೊಲದಲ್ಲಿ ನಮ್ಮ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಟ್ರ್ಯಾಕ್ಟರ್‌ಗಳು, ಈ ನಮ್ಮ ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ. ಇಲ್ಲೂ ನಮ್ಮ ಜೊತೆಗೆ ಪ್ರತಿಭಟನೆಯಲ್ಲಿ ನಮ್ಮ ಮನೆಗಳಾಗಿ ತಮ್ಮ ಕಾರ್ಯನಿವರ್ಹಿಸುತ್ತಿವೆ ಎಂದು ರೈತರು ಮನದುಂಬಿ ಹೇಳುತ್ತಾರೆ.

ಜನವರಿ 7 ರ ಟ್ರ್ಯಾಕ್ಟರ್‌ ಮಾರ್ಚ್‌ ಪೂವಾಭ್ಯಾಸದಲ್ಲೂ ಸಾಥ್‌ ನೀಡಿರುವ ಇವುಗಳು ಮುಂದೆ ಜನವರಿ 26 ರ ಗಣರಾಜ್ಯೋತ್ಸವದಂದು ನಡೆಯಲಿರುವ ಐತಿಹಾಸಿಕ ಟ್ರ್ಯಾಕ್ಟರ್‌ ರ್‍ಯಾಲಿಯಲ್ಲೂ ನಮ್ಮ ಶಕ್ತಿ ಪ್ರದರ್ಶನಕ್ಕೆ ಸಾಥ್‌ ನೀಡಲಿವೆ. ಪಂಜಾಬ್‌, ಹರಿಯಾಣ, ರಾಜಸ್ಥಾನ, ಕೇರಳದಿಂದಲೂ ಈಗಾಗಲೇ ಸಾವಿರಾರು ಟ್ರ್ಯಾಕ್ಟರ್‌ಗಳು ದೆಹಲಿಯತ್ತ ಬರುತ್ತಿವೆ. ಇವು ನಮ್ಮ ಟ್ರ್ಯಾಕ್ಟರ್‌, ಟ್ರ್ಯಾಲಿ ಮಾತ್ರವಲ್ಲ ನಮ್ಮ ಜೀವನದ ಸಾಥಿ (ಗೆಳೆಯ) ಎಂದು ರೈತರು ಹೆಮ್ಮೆಯಿಂದ ಹೇಳುತ್ತಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. As the Supreme court of India stayed the three agriculture laws and constituted a committee to resolve the issue, the so called leaders of farmers should a obey the supreme order

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...