Homeಚಳವಳಿಹೋರಾಟವನ್ನು ಬೆಚ್ಚಗಿರಿಸುತ್ತಿರುವ 'ಟ್ರ್ಯಾಲಿ' ಎಂಬ ರೈತರ ಬದುಕಿನ ಬಂಡಿ!

ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಹೊಲದಲ್ಲಿ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಈ ಟ್ರ್ಯಾಕ್ಟರ್‌ಗಳು, ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ ಎನ್ನುತ್ತಾರೆ ರೈತರು

- Advertisement -
- Advertisement -

ಐತಿಹಾಸಿಕ ರೈತ ಹೋರಾಟದಲ್ಲಿ ರೈತರ ಜೀವನದ ಬಹುಭಾಗವನ್ನು ಆವರಿಸಿರುವುದು ಟ್ರ್ಯಾಲಿಗಳಾಗಿದೆ. ಕೃಷಿ ಕ್ಷೇತ್ರದಲ್ಲಿ ಉಳುಮೆ ಮಾಡುವ, ಬೆಳೆಯನ್ನು ಮಾರುಕಟ್ಟೆಗೆ ಕೊಂಡೊಯ್ಯುವ ಪಾತ್ರ ವಹಿಸುತ್ತಿದ್ದ ಈ ಟ್ರ್ಯಾಕ್ಟರ್‌ಗಳು ಈಗ ಹೋರಾಟನಿರತ ರೈತರ ವಾಸ್ತವ್ಯದ ಟ್ರ್ಯಾಲಿಗಳಾಗಿ ಮಾರ್ಪಾಡಾಗಿವೆ. ದೊಡ್ಡ ಹೋರಾಟಕ್ಕೆ ಸಾಕ್ಷಿಯಾಗಿರುವ ಸಿಂಘು ಗಡಿ, ಟಿಕ್ರಿ ಬಾರ್ಡರ್‌, ದಾರುಹೇರಾ ಬಾರ್ಡರ್‌ಗಳಲ್ಲಿ ಈ ಟ್ರ್ಯಾಲಿಗಳ ಪಾತ್ರ ಅತಿ ಮಹತ್ವದ್ದು. ಶಹಜಾನ್‌ಪುರ್‌, ಗಾಜಿಯಾಪುರ್ ಮತ್ತು ಚಿಲ್ಲಾ (ನೊಯಿಡಾ ಗೇಟ್)ಗಳಲ್ಲಿ ಟ್ರ್ಯಾಲಿ ಮತ್ತ ಟೆಂಟ್‌ ಎರಡರ ಬಳಕೆಯು ಹೆಚ್ಚಾಗಿದೆ.

ಪ್ರತಿಭಟನಾ ಸ್ಥಳಗಳಲ್ಲಿ ರೈತರು ಮತ್ತು ಪ್ರತಿಭಟನಾಕಾರರ ಬೆಂಬಲಿಗರ ಮನೆಗಳಾಗಿ ಮಾರ್ಪಾಡಾಗಿರುವ ಟ್ರ್ಯಾಲಿಗಳ ಒಳ ವಿನ್ಯಾಸವನ್ನು ತಮಗೆ ಅನುಕೂಲವಾಗುವಂತೆ ಬದಲಿಸಿಕೊಂಡಿದ್ದಾರೆ. ಚಳಿ, ಅತಿಯಾದ ಗಾಳಿ ಮತ್ತು ಮಳೆಗೆ ಜಗ್ಗದಂತಹ ಟ್ರ್ಯಾಲಿಗಳ ಮರುನಿರ್ಮಾಣ ಕೂಡ ಕೊಂಚ ಕಷ್ಟದ ಕೆಲಸವೆ. ಆದರೂ ಉತ್ತಮ ಟ್ರ್ಯಾಲಿಗಳನ್ನು ರೈತರು ಕಟ್ಟಿದ್ದಾರೆ.

ಇದನ್ನೂ ಓದಿ: ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು

ಟ್ರ್ಯಾಲಿಗಳಲ್ಲಿ ವಾಸಿಸುವವರಿಗೆ ಬೇಕಾದ ವಿದ್ಯುತ್‌ ದೀಪಗಳ ವ್ಯವಸ್ಥೆ, ಚಾರ್ಜಿಂಗ್‌ ವ್ಯವಸ್ಥೆ, ಮಲಗಲು ಸ್ಥಳ, ಹೊದಿಕೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಹೊರಗಡೆಯಿಂದ ಗಾಳಿ ಒಳಗೆ ಹೋಗದಂತೆ ತಡೆಯಲು ದಪ್ಪದ ಟಾರ್ಪಾಲ್‌ಗಳನ್ನು ಜೋಡಿಸಿದ್ದಾರೆ. ಇನ್ನು ಟ್ರ್ಯಾಲಿ ಹತ್ತಲು ಮತ್ತು ಇಳಿಯಲು ಉಪಯೋಗವಾಗುವಂತೆ ಮರದ ಮೆಟ್ಟಿಲುಗಳನ್ನು ಮಾಡಿ ಅದನ್ನು ಟ್ರ್ಯಾಕ್ಟರ್‌ಗಳಿಗೆ ಜೋಡಿಸಲಾಗಿದೆ.

ಕೆಲವು ಟ್ರ್ಯಾಲಿಗಳಲ್ಲಿ ಹಾಸಿಗೆ ಹಾಸುವ ಜಾಗದಲ್ಲಿ ಮೊದಲು ಭತ್ತದ ಹುಲ್ಲು ಹಾಕಲಾಗಿದೆ. ಹುಲ್ಲಿನ ಮೇಲೆ ಟಾರ್ಪಾಲ್‌ ಅದರ ಮೇಲೆ ಹಾಸಿಗೆ ನಂತರ ಅದರ ಮೇಲೆ ಬೆಡ್‌ಶೀಟ್‌ಗಳನ್ನು ಹಾಕಲಾಗುತ್ತದೆ. “ಇದು ಬೆಚ್ಚಗಿನ ಅನುಭವ ನೀಡುತ್ತದೆ, ಹಾಗಾಗಿ ಹಾಸಿದ್ದೇವೆ” ಎಂದು ರೈತರು ಹೇಳುತ್ತಾರೆ. ಮಕ್ಕಳು, ಮಹಿಳೆಯರ ಸುರಕ್ಷತೆಗೂ ಹೆಚ್ಚು ಆದ್ಯತೆ ನೀಡಬೇಕಾಗಿರುವುದರಿಂದ ಟ್ರ್ಯಾಲಿಗಳನ್ನು ಮತ್ತಷ್ಟು ಗಟ್ಟಿಯಾಗಿ ನಿರ್ಮಿಸಿರುತ್ತಾರೆ.

ಟ್ರ್ಯಾಲಿಗಳನ್ನು ನಿರ್ಮಿಸಿರುವ ಟ್ರ್ಯಾಕ್ಟರ್‌ಗಳು ನಮ್ಮ ಭಾಗದ ಟ್ರ್ಯಾಕ್ಟರ್‌ಗಳ ರೀತಿಯಲ್ಲಿ ಟೊಳ್ಳಾಗಿರದೆ, ಗಟ್ಟಿ ಮುಟ್ಟಾಗಿ ಇರುತ್ತವೆ. ಲಾರಿಗಳ ರೀತಿಯಲ್ಲಿ ಇಲ್ಲಿನ ಟ್ರ್ಯಾಕ್ಟರ್‌ಗಳಿವೆ. ತಮ್ಮ ಮನೆಯ ಸದಸ್ಯನಂತೆ ಟ್ರ್ಯಾಕ್ಟರ್‌ಗಳನ್ನು ನೋಡಿಕೊಳ್ಳುವುದಾಗಿ ಇಲ್ಲಿನ ಜನ ಹೇಳುತ್ತಾರೆ. ದೇವರಿಗೆ ಪೂಜೆ ಮಾಡುವಂತೆ ದಿನ ಟ್ರ್ಯಾಕ್ಟರ್‌ಗಳಿಗೂ ಇಲ್ಲಿನ ರೈತರು ಪೂಜೆ ಸಲ್ಲಿಸುತ್ತಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಹೊಲದಲ್ಲಿ ನಮ್ಮ ಕೃಷಿ ಜೀವನದ ಪ್ರಮುಖ ಅಂಗವಾಗಿದ್ದ ಟ್ರ್ಯಾಕ್ಟರ್‌ಗಳು, ಈ ನಮ್ಮ ಐತಿಹಾಸಿಕ ಹೋರಾಟದಲ್ಲಿಯೂ ನಮ್ಮ ಕೈ ಬಿಟ್ಟಿಲ್ಲ. ಇಲ್ಲೂ ನಮ್ಮ ಜೊತೆಗೆ ಪ್ರತಿಭಟನೆಯಲ್ಲಿ ನಮ್ಮ ಮನೆಗಳಾಗಿ ತಮ್ಮ ಕಾರ್ಯನಿವರ್ಹಿಸುತ್ತಿವೆ ಎಂದು ರೈತರು ಮನದುಂಬಿ ಹೇಳುತ್ತಾರೆ.

ಜನವರಿ 7 ರ ಟ್ರ್ಯಾಕ್ಟರ್‌ ಮಾರ್ಚ್‌ ಪೂವಾಭ್ಯಾಸದಲ್ಲೂ ಸಾಥ್‌ ನೀಡಿರುವ ಇವುಗಳು ಮುಂದೆ ಜನವರಿ 26 ರ ಗಣರಾಜ್ಯೋತ್ಸವದಂದು ನಡೆಯಲಿರುವ ಐತಿಹಾಸಿಕ ಟ್ರ್ಯಾಕ್ಟರ್‌ ರ್‍ಯಾಲಿಯಲ್ಲೂ ನಮ್ಮ ಶಕ್ತಿ ಪ್ರದರ್ಶನಕ್ಕೆ ಸಾಥ್‌ ನೀಡಲಿವೆ. ಪಂಜಾಬ್‌, ಹರಿಯಾಣ, ರಾಜಸ್ಥಾನ, ಕೇರಳದಿಂದಲೂ ಈಗಾಗಲೇ ಸಾವಿರಾರು ಟ್ರ್ಯಾಕ್ಟರ್‌ಗಳು ದೆಹಲಿಯತ್ತ ಬರುತ್ತಿವೆ. ಇವು ನಮ್ಮ ಟ್ರ್ಯಾಕ್ಟರ್‌, ಟ್ರ್ಯಾಲಿ ಮಾತ್ರವಲ್ಲ ನಮ್ಮ ಜೀವನದ ಸಾಥಿ (ಗೆಳೆಯ) ಎಂದು ರೈತರು ಹೆಮ್ಮೆಯಿಂದ ಹೇಳುತ್ತಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. As the Supreme court of India stayed the three agriculture laws and constituted a committee to resolve the issue, the so called leaders of farmers should a obey the supreme order

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...